Homeಮುಖಪುಟಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

- Advertisement -
- Advertisement -

ಏಪ್ರಿಲ್ 3ರ ಭಾನುವಾರದಂದು ನಡೆದ ಸಮಾರಂಭದಲ್ಲಿ ದ್ವೇಷಪೂರಿತ ಭಾಷಣಗಳನ್ನು ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಬುರಾರಿಯಲ್ಲಿ ನಡೆದ ‘ಹಿಂದೂ ಮಹಾಪಂಚಾಯತ್’ನಲ್ಲಿ ಪಾಲ್ಗೊಂಡಿದ್ದ ಭಾಷಣಕಾರರು ಹಾಗೂ ಸಂಘಟಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ವಿವಾದಿತ ಹಿಂದುತ್ವ ಮುಖಂಡ ಯತಿ ನರಸಿಂಗಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರಿಂದ ಆದೇಶಕ್ಕೆ ಅಸಹಕಾರ) ಮತ್ತು 153ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಎಸಗುವುದು) ಅಡಿಯಲ್ಲಿ ಮುಖರ್ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ದಾಸನ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಸೇರಿದಂತೆ ಕೆಲವು ಭಾಷಣಕಾರರು ಎರಡು ಸಮುದಾಯಗಳ ನಡುವೆ ದ್ವೇಷದ ಭಾವನೆಗಳನ್ನು ಉತ್ತೇಜಿಸುವ ಮಾತುಗಳನ್ನು ಹೇಳಿದ್ದಾರೆ” ಎಂದು ವಾಯುವ್ಯ ದೆಹಲಿ ಉಪ ಪೊಲೀಸ್ ಆಯುಕ್ತರಾದ ಉಷಾ ರಂಗಾನಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

“ಕಾರ್ಯಕ್ರಮದ ಸ್ಥಳದಲ್ಲಿ 700-800 ಜನರು ಜಮಾಯಿಸಿದರು. ಆಯೋಜಕರ ಆಹ್ವಾನಿತರು ವೇದಿಕೆಯಿಂದ ಭಾಷಣ ಮಾಡಲು ಪ್ರಾರಂಭಿಸಿದರು. ಪೊಲೀಸರು ಸಹ ಕಾರ್ಯಕ್ರಮದ ಸ್ಥಳಕ್ಕೆ ತಲುಪಿ ಸುವ್ಯವಸ್ಥೆಯನ್ನು ಕಾಪಾಡಲು ಪ್ರಯತ್ನಿಸಿದರು” ಎಂದು ಡಿಸಿಪಿ ಹೇಳಿದ್ದಾರೆ.

ಮಹಾಪಂಚಾಯತ್ ಭಾಷಣಕಾರರು ಹೇಳಿದ್ದೇನು?

ಭಾರತಕ್ಕೆ ಮುಸ್ಲಿಂ ವ್ಯಕ್ತಿ ಪ್ರಧಾನಿಯಾದರೆ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಯತಿನರಸಿಂಗಾನಂದ  ಪ್ರಚೋದಿಸಿರುವುದು ವರದಿಯಾಗಿದೆ.

ಭಾರತಕ್ಕೆ ಮುಸ್ಲಿಂ ಪ್ರಧಾನಿ ಸಿಕ್ಕರೆ ಶೇಕಡಾ 40ರಷ್ಟು ಹಿಂದೂಗಳು ಸಾಯುತ್ತಾರೆ ಎಂದು ನರಸಿಂಹಾನಂದ ಪ್ರಚೋದಿಸಿದ್ದಾರೆ.

2021ರಲ್ಲಿ ಹರಿದ್ವಾರದ ಸಮಾವೇಶದಲ್ಲಿ ಮುಸ್ಲಿಮರ ನರಮೇಧಕ್ಕೆ ಪ್ರಚೋದಿಸಿದ್ದ ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಾಗಿತ್ತು. ಫೆಬ್ರವರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಇದಲ್ಲದೆ, ಸುದರ್ಶನ ಸುದ್ದಿ ಸಂಪಾದಕ ಚವ್ಹಾಂಕೆ, ಭಾನುವಾರ ಮಹಾಪಂಚಾಯತ್‌ನಲ್ಲಿ ಮಾತನಾಡುತ್ತಾ ಭಾರತೀಯ ಮುಸ್ಲಿಮರಿಗೆ ಭಾರತೀಯ ಹಿಂದೂಗಳಿಗೆ ನೀಡಿದಂತೆಯೇ ಸಮಾನವಾದ ಹಕ್ಕುಗಳನ್ನು ನೀಡಬಾರದು ಎಂದಿದ್ದಾರೆ.

“ಪಾಕಿಸ್ತಾನದಲ್ಲಿ ಹಿಂದೂಗಳು ಯಾವ ಹಕ್ಕುಗಳನ್ನು ಪಡೆಯುತ್ತಾರೋ ಅದೇ ಹಕ್ಕುಗಳನ್ನು ಭಾರತೀಯ ಮುಸ್ಲಿಮರು ಪಡೆಯಬೇಕು. ಅದಕ್ಕಿಂತ ಹೆಚ್ಚೇನೂ ಇಲ್ಲ” ಎಂದು ಮತೀಯ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ.

ಪೊಲೀಸ್ ಅನುಮತಿ ಇಲ್ಲದೆ ಮಹಾಪಂಚಾಯತ್!

ಶನಿವಾರ, ಏಪ್ರಿಲ್ 2ರಂದು ದಿ ಕ್ವಿಂಟ್ ವರದಿ ಮಾಡಿದ ಪ್ರಕಾರ, ಸೇವ್ ಇಂಡಿಯಾ ಫೌಂಡೇಶನ್‌ ‘ಹಿಂದೂ ಮಹಾಪಂಚಾಯತ್’ ನಡೆಸದಂತೆ ದೆಹಲಿ ಪೊಲೀಸ್, ದೆಹಲಿ ಅಭಿವೃದ್ಧಿ ಪ್ರಾಧಿಕಾರವು (ಡಿಡಿಎ) ನಿರ್ಬಂಧ ಹೇರಿತ್ತು. ಇದರ ಹೊರತಾಗಿಯೂ, ಭಾರೀ ಪೊಲೀಸ್ ನಿಯೋಜನೆಯಲ್ಲಿ ಕಾರ್ಯಕ್ರಮ ಸಮಾವೇಶಗೊಂಡಿತು.

ಸೂಕ್ತ ಅನುಮತಿ ಪಡೆಯದೆ ಮಹಾಪಂಚಾಯತ್‌ ನಡೆಸಲಾಗಿದೆ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

ಹಿಂದೂ ಮಹಾಪಂಚಾಯತ್ ಸಭೆಯನ್ನು ಆಯೋಜಿಸಲು ಅನುಮತಿ ಕೋರಿ ಮನವಿ ಪತ್ರವನ್ನು ವಾಯವ್ಯ ಜಿಲ್ಲೆಯಲ್ಲಿ ಸಂಘಟಕ ಪ್ರೀತ್ ಸಿಂಗ್ ಸಲ್ಲಿಸಿದ್ದರು. ವಾಯುವ್ಯ ಜಿಲ್ಲಾ ಪೊಲೀಸರು ಮನವಿಯನ್ನು ನಿರಾಕರಿಸಿದ್ದರು.

“ದೆಹಲಿ ಪೊಲೀಸರ ನಿರಾಕರಣೆ ಹೊರತಾಗಿಯೂ, 3.04.2022 ರಂದು, ಸಂಘಟಕ ಪ್ರೀತ್ ಸಿಂಗ್ ಅವರು ತಮ್ಮ ಬೆಂಬಲಿಗರೊಂದಿಗೆ ಬುರಾರಿ ಮೈದಾನ ಪ್ರವೇಶಿಸಿದರು. ಹಿಂದೂ ಮಹಾಪಂಚಾಯತ್ ಸಭೆಯನ್ನು ಆಯೋಜಿಸಲು ಪ್ರಾರಂಭಿಸಿದರು. ಪೊಲೀಸರು ಕಾರ್ಯಕ್ರಮದ ಸ್ಥಳಕ್ಕೆ ತಲುಪಿ ಸುವ್ಯವಸ್ಥೆಯನ್ನು ಕಾಪಾಡಲು ಪ್ರಯತ್ನಿಸಿದರು” ಎಂದು ಡಿಸಿಪಿ ಉಷಾ ರಂಗನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ನರಸಿಂಗಾನಂದ ವಿರುದ್ದ ಸಂವಿಧಾನ ಮತ್ತು ಸುಪ್ರೀಂಕೋರ್ಟ್ ನಿಂದನೆ ಪ್ರಕ್ರಿಯೆ ಆರಂಭಿಸಲು ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...