Homeಮುಖಪುಟಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

- Advertisement -
- Advertisement -

ಏಪ್ರಿಲ್ 3ರ ಭಾನುವಾರದಂದು ನಡೆದ ಸಮಾರಂಭದಲ್ಲಿ ದ್ವೇಷಪೂರಿತ ಭಾಷಣಗಳನ್ನು ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಬುರಾರಿಯಲ್ಲಿ ನಡೆದ ‘ಹಿಂದೂ ಮಹಾಪಂಚಾಯತ್’ನಲ್ಲಿ ಪಾಲ್ಗೊಂಡಿದ್ದ ಭಾಷಣಕಾರರು ಹಾಗೂ ಸಂಘಟಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ವಿವಾದಿತ ಹಿಂದುತ್ವ ಮುಖಂಡ ಯತಿ ನರಸಿಂಗಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರಿಂದ ಆದೇಶಕ್ಕೆ ಅಸಹಕಾರ) ಮತ್ತು 153ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಎಸಗುವುದು) ಅಡಿಯಲ್ಲಿ ಮುಖರ್ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ದಾಸನ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಸೇರಿದಂತೆ ಕೆಲವು ಭಾಷಣಕಾರರು ಎರಡು ಸಮುದಾಯಗಳ ನಡುವೆ ದ್ವೇಷದ ಭಾವನೆಗಳನ್ನು ಉತ್ತೇಜಿಸುವ ಮಾತುಗಳನ್ನು ಹೇಳಿದ್ದಾರೆ” ಎಂದು ವಾಯುವ್ಯ ದೆಹಲಿ ಉಪ ಪೊಲೀಸ್ ಆಯುಕ್ತರಾದ ಉಷಾ ರಂಗಾನಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

“ಕಾರ್ಯಕ್ರಮದ ಸ್ಥಳದಲ್ಲಿ 700-800 ಜನರು ಜಮಾಯಿಸಿದರು. ಆಯೋಜಕರ ಆಹ್ವಾನಿತರು ವೇದಿಕೆಯಿಂದ ಭಾಷಣ ಮಾಡಲು ಪ್ರಾರಂಭಿಸಿದರು. ಪೊಲೀಸರು ಸಹ ಕಾರ್ಯಕ್ರಮದ ಸ್ಥಳಕ್ಕೆ ತಲುಪಿ ಸುವ್ಯವಸ್ಥೆಯನ್ನು ಕಾಪಾಡಲು ಪ್ರಯತ್ನಿಸಿದರು” ಎಂದು ಡಿಸಿಪಿ ಹೇಳಿದ್ದಾರೆ.

ಮಹಾಪಂಚಾಯತ್ ಭಾಷಣಕಾರರು ಹೇಳಿದ್ದೇನು?

ಭಾರತಕ್ಕೆ ಮುಸ್ಲಿಂ ವ್ಯಕ್ತಿ ಪ್ರಧಾನಿಯಾದರೆ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಯತಿನರಸಿಂಗಾನಂದ  ಪ್ರಚೋದಿಸಿರುವುದು ವರದಿಯಾಗಿದೆ.

ಭಾರತಕ್ಕೆ ಮುಸ್ಲಿಂ ಪ್ರಧಾನಿ ಸಿಕ್ಕರೆ ಶೇಕಡಾ 40ರಷ್ಟು ಹಿಂದೂಗಳು ಸಾಯುತ್ತಾರೆ ಎಂದು ನರಸಿಂಹಾನಂದ ಪ್ರಚೋದಿಸಿದ್ದಾರೆ.

2021ರಲ್ಲಿ ಹರಿದ್ವಾರದ ಸಮಾವೇಶದಲ್ಲಿ ಮುಸ್ಲಿಮರ ನರಮೇಧಕ್ಕೆ ಪ್ರಚೋದಿಸಿದ್ದ ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಾಗಿತ್ತು. ಫೆಬ್ರವರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಇದಲ್ಲದೆ, ಸುದರ್ಶನ ಸುದ್ದಿ ಸಂಪಾದಕ ಚವ್ಹಾಂಕೆ, ಭಾನುವಾರ ಮಹಾಪಂಚಾಯತ್‌ನಲ್ಲಿ ಮಾತನಾಡುತ್ತಾ ಭಾರತೀಯ ಮುಸ್ಲಿಮರಿಗೆ ಭಾರತೀಯ ಹಿಂದೂಗಳಿಗೆ ನೀಡಿದಂತೆಯೇ ಸಮಾನವಾದ ಹಕ್ಕುಗಳನ್ನು ನೀಡಬಾರದು ಎಂದಿದ್ದಾರೆ.

“ಪಾಕಿಸ್ತಾನದಲ್ಲಿ ಹಿಂದೂಗಳು ಯಾವ ಹಕ್ಕುಗಳನ್ನು ಪಡೆಯುತ್ತಾರೋ ಅದೇ ಹಕ್ಕುಗಳನ್ನು ಭಾರತೀಯ ಮುಸ್ಲಿಮರು ಪಡೆಯಬೇಕು. ಅದಕ್ಕಿಂತ ಹೆಚ್ಚೇನೂ ಇಲ್ಲ” ಎಂದು ಮತೀಯ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ.

ಪೊಲೀಸ್ ಅನುಮತಿ ಇಲ್ಲದೆ ಮಹಾಪಂಚಾಯತ್!

ಶನಿವಾರ, ಏಪ್ರಿಲ್ 2ರಂದು ದಿ ಕ್ವಿಂಟ್ ವರದಿ ಮಾಡಿದ ಪ್ರಕಾರ, ಸೇವ್ ಇಂಡಿಯಾ ಫೌಂಡೇಶನ್‌ ‘ಹಿಂದೂ ಮಹಾಪಂಚಾಯತ್’ ನಡೆಸದಂತೆ ದೆಹಲಿ ಪೊಲೀಸ್, ದೆಹಲಿ ಅಭಿವೃದ್ಧಿ ಪ್ರಾಧಿಕಾರವು (ಡಿಡಿಎ) ನಿರ್ಬಂಧ ಹೇರಿತ್ತು. ಇದರ ಹೊರತಾಗಿಯೂ, ಭಾರೀ ಪೊಲೀಸ್ ನಿಯೋಜನೆಯಲ್ಲಿ ಕಾರ್ಯಕ್ರಮ ಸಮಾವೇಶಗೊಂಡಿತು.

ಸೂಕ್ತ ಅನುಮತಿ ಪಡೆಯದೆ ಮಹಾಪಂಚಾಯತ್‌ ನಡೆಸಲಾಗಿದೆ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

ಹಿಂದೂ ಮಹಾಪಂಚಾಯತ್ ಸಭೆಯನ್ನು ಆಯೋಜಿಸಲು ಅನುಮತಿ ಕೋರಿ ಮನವಿ ಪತ್ರವನ್ನು ವಾಯವ್ಯ ಜಿಲ್ಲೆಯಲ್ಲಿ ಸಂಘಟಕ ಪ್ರೀತ್ ಸಿಂಗ್ ಸಲ್ಲಿಸಿದ್ದರು. ವಾಯುವ್ಯ ಜಿಲ್ಲಾ ಪೊಲೀಸರು ಮನವಿಯನ್ನು ನಿರಾಕರಿಸಿದ್ದರು.

“ದೆಹಲಿ ಪೊಲೀಸರ ನಿರಾಕರಣೆ ಹೊರತಾಗಿಯೂ, 3.04.2022 ರಂದು, ಸಂಘಟಕ ಪ್ರೀತ್ ಸಿಂಗ್ ಅವರು ತಮ್ಮ ಬೆಂಬಲಿಗರೊಂದಿಗೆ ಬುರಾರಿ ಮೈದಾನ ಪ್ರವೇಶಿಸಿದರು. ಹಿಂದೂ ಮಹಾಪಂಚಾಯತ್ ಸಭೆಯನ್ನು ಆಯೋಜಿಸಲು ಪ್ರಾರಂಭಿಸಿದರು. ಪೊಲೀಸರು ಕಾರ್ಯಕ್ರಮದ ಸ್ಥಳಕ್ಕೆ ತಲುಪಿ ಸುವ್ಯವಸ್ಥೆಯನ್ನು ಕಾಪಾಡಲು ಪ್ರಯತ್ನಿಸಿದರು” ಎಂದು ಡಿಸಿಪಿ ಉಷಾ ರಂಗನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ನರಸಿಂಗಾನಂದ ವಿರುದ್ದ ಸಂವಿಧಾನ ಮತ್ತು ಸುಪ್ರೀಂಕೋರ್ಟ್ ನಿಂದನೆ ಪ್ರಕ್ರಿಯೆ ಆರಂಭಿಸಲು ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...