Homeಮುಖಪುಟಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

- Advertisement -
- Advertisement -

ಏಪ್ರಿಲ್ 3ರ ಭಾನುವಾರದಂದು ನಡೆದ ಸಮಾರಂಭದಲ್ಲಿ ದ್ವೇಷಪೂರಿತ ಭಾಷಣಗಳನ್ನು ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಬುರಾರಿಯಲ್ಲಿ ನಡೆದ ‘ಹಿಂದೂ ಮಹಾಪಂಚಾಯತ್’ನಲ್ಲಿ ಪಾಲ್ಗೊಂಡಿದ್ದ ಭಾಷಣಕಾರರು ಹಾಗೂ ಸಂಘಟಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ವಿವಾದಿತ ಹಿಂದುತ್ವ ಮುಖಂಡ ಯತಿ ನರಸಿಂಗಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರಿಂದ ಆದೇಶಕ್ಕೆ ಅಸಹಕಾರ) ಮತ್ತು 153ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಎಸಗುವುದು) ಅಡಿಯಲ್ಲಿ ಮುಖರ್ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ದಾಸನ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಸೇರಿದಂತೆ ಕೆಲವು ಭಾಷಣಕಾರರು ಎರಡು ಸಮುದಾಯಗಳ ನಡುವೆ ದ್ವೇಷದ ಭಾವನೆಗಳನ್ನು ಉತ್ತೇಜಿಸುವ ಮಾತುಗಳನ್ನು ಹೇಳಿದ್ದಾರೆ” ಎಂದು ವಾಯುವ್ಯ ದೆಹಲಿ ಉಪ ಪೊಲೀಸ್ ಆಯುಕ್ತರಾದ ಉಷಾ ರಂಗಾನಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

“ಕಾರ್ಯಕ್ರಮದ ಸ್ಥಳದಲ್ಲಿ 700-800 ಜನರು ಜಮಾಯಿಸಿದರು. ಆಯೋಜಕರ ಆಹ್ವಾನಿತರು ವೇದಿಕೆಯಿಂದ ಭಾಷಣ ಮಾಡಲು ಪ್ರಾರಂಭಿಸಿದರು. ಪೊಲೀಸರು ಸಹ ಕಾರ್ಯಕ್ರಮದ ಸ್ಥಳಕ್ಕೆ ತಲುಪಿ ಸುವ್ಯವಸ್ಥೆಯನ್ನು ಕಾಪಾಡಲು ಪ್ರಯತ್ನಿಸಿದರು” ಎಂದು ಡಿಸಿಪಿ ಹೇಳಿದ್ದಾರೆ.

ಮಹಾಪಂಚಾಯತ್ ಭಾಷಣಕಾರರು ಹೇಳಿದ್ದೇನು?

ಭಾರತಕ್ಕೆ ಮುಸ್ಲಿಂ ವ್ಯಕ್ತಿ ಪ್ರಧಾನಿಯಾದರೆ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಯತಿನರಸಿಂಗಾನಂದ  ಪ್ರಚೋದಿಸಿರುವುದು ವರದಿಯಾಗಿದೆ.

ಭಾರತಕ್ಕೆ ಮುಸ್ಲಿಂ ಪ್ರಧಾನಿ ಸಿಕ್ಕರೆ ಶೇಕಡಾ 40ರಷ್ಟು ಹಿಂದೂಗಳು ಸಾಯುತ್ತಾರೆ ಎಂದು ನರಸಿಂಹಾನಂದ ಪ್ರಚೋದಿಸಿದ್ದಾರೆ.

2021ರಲ್ಲಿ ಹರಿದ್ವಾರದ ಸಮಾವೇಶದಲ್ಲಿ ಮುಸ್ಲಿಮರ ನರಮೇಧಕ್ಕೆ ಪ್ರಚೋದಿಸಿದ್ದ ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಾಗಿತ್ತು. ಫೆಬ್ರವರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಇದಲ್ಲದೆ, ಸುದರ್ಶನ ಸುದ್ದಿ ಸಂಪಾದಕ ಚವ್ಹಾಂಕೆ, ಭಾನುವಾರ ಮಹಾಪಂಚಾಯತ್‌ನಲ್ಲಿ ಮಾತನಾಡುತ್ತಾ ಭಾರತೀಯ ಮುಸ್ಲಿಮರಿಗೆ ಭಾರತೀಯ ಹಿಂದೂಗಳಿಗೆ ನೀಡಿದಂತೆಯೇ ಸಮಾನವಾದ ಹಕ್ಕುಗಳನ್ನು ನೀಡಬಾರದು ಎಂದಿದ್ದಾರೆ.

“ಪಾಕಿಸ್ತಾನದಲ್ಲಿ ಹಿಂದೂಗಳು ಯಾವ ಹಕ್ಕುಗಳನ್ನು ಪಡೆಯುತ್ತಾರೋ ಅದೇ ಹಕ್ಕುಗಳನ್ನು ಭಾರತೀಯ ಮುಸ್ಲಿಮರು ಪಡೆಯಬೇಕು. ಅದಕ್ಕಿಂತ ಹೆಚ್ಚೇನೂ ಇಲ್ಲ” ಎಂದು ಮತೀಯ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ.

ಪೊಲೀಸ್ ಅನುಮತಿ ಇಲ್ಲದೆ ಮಹಾಪಂಚಾಯತ್!

ಶನಿವಾರ, ಏಪ್ರಿಲ್ 2ರಂದು ದಿ ಕ್ವಿಂಟ್ ವರದಿ ಮಾಡಿದ ಪ್ರಕಾರ, ಸೇವ್ ಇಂಡಿಯಾ ಫೌಂಡೇಶನ್‌ ‘ಹಿಂದೂ ಮಹಾಪಂಚಾಯತ್’ ನಡೆಸದಂತೆ ದೆಹಲಿ ಪೊಲೀಸ್, ದೆಹಲಿ ಅಭಿವೃದ್ಧಿ ಪ್ರಾಧಿಕಾರವು (ಡಿಡಿಎ) ನಿರ್ಬಂಧ ಹೇರಿತ್ತು. ಇದರ ಹೊರತಾಗಿಯೂ, ಭಾರೀ ಪೊಲೀಸ್ ನಿಯೋಜನೆಯಲ್ಲಿ ಕಾರ್ಯಕ್ರಮ ಸಮಾವೇಶಗೊಂಡಿತು.

ಸೂಕ್ತ ಅನುಮತಿ ಪಡೆಯದೆ ಮಹಾಪಂಚಾಯತ್‌ ನಡೆಸಲಾಗಿದೆ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

ಹಿಂದೂ ಮಹಾಪಂಚಾಯತ್ ಸಭೆಯನ್ನು ಆಯೋಜಿಸಲು ಅನುಮತಿ ಕೋರಿ ಮನವಿ ಪತ್ರವನ್ನು ವಾಯವ್ಯ ಜಿಲ್ಲೆಯಲ್ಲಿ ಸಂಘಟಕ ಪ್ರೀತ್ ಸಿಂಗ್ ಸಲ್ಲಿಸಿದ್ದರು. ವಾಯುವ್ಯ ಜಿಲ್ಲಾ ಪೊಲೀಸರು ಮನವಿಯನ್ನು ನಿರಾಕರಿಸಿದ್ದರು.

“ದೆಹಲಿ ಪೊಲೀಸರ ನಿರಾಕರಣೆ ಹೊರತಾಗಿಯೂ, 3.04.2022 ರಂದು, ಸಂಘಟಕ ಪ್ರೀತ್ ಸಿಂಗ್ ಅವರು ತಮ್ಮ ಬೆಂಬಲಿಗರೊಂದಿಗೆ ಬುರಾರಿ ಮೈದಾನ ಪ್ರವೇಶಿಸಿದರು. ಹಿಂದೂ ಮಹಾಪಂಚಾಯತ್ ಸಭೆಯನ್ನು ಆಯೋಜಿಸಲು ಪ್ರಾರಂಭಿಸಿದರು. ಪೊಲೀಸರು ಕಾರ್ಯಕ್ರಮದ ಸ್ಥಳಕ್ಕೆ ತಲುಪಿ ಸುವ್ಯವಸ್ಥೆಯನ್ನು ಕಾಪಾಡಲು ಪ್ರಯತ್ನಿಸಿದರು” ಎಂದು ಡಿಸಿಪಿ ಉಷಾ ರಂಗನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ನರಸಿಂಗಾನಂದ ವಿರುದ್ದ ಸಂವಿಧಾನ ಮತ್ತು ಸುಪ್ರೀಂಕೋರ್ಟ್ ನಿಂದನೆ ಪ್ರಕ್ರಿಯೆ ಆರಂಭಿಸಲು ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...