Homeಮುಖಪುಟಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

- Advertisement -
- Advertisement -

ಏಪ್ರಿಲ್ 3ರ ಭಾನುವಾರದಂದು ನಡೆದ ಸಮಾರಂಭದಲ್ಲಿ ದ್ವೇಷಪೂರಿತ ಭಾಷಣಗಳನ್ನು ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಬುರಾರಿಯಲ್ಲಿ ನಡೆದ ‘ಹಿಂದೂ ಮಹಾಪಂಚಾಯತ್’ನಲ್ಲಿ ಪಾಲ್ಗೊಂಡಿದ್ದ ಭಾಷಣಕಾರರು ಹಾಗೂ ಸಂಘಟಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ವಿವಾದಿತ ಹಿಂದುತ್ವ ಮುಖಂಡ ಯತಿ ನರಸಿಂಗಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರಿಂದ ಆದೇಶಕ್ಕೆ ಅಸಹಕಾರ) ಮತ್ತು 153ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಎಸಗುವುದು) ಅಡಿಯಲ್ಲಿ ಮುಖರ್ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ದಾಸನ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಸೇರಿದಂತೆ ಕೆಲವು ಭಾಷಣಕಾರರು ಎರಡು ಸಮುದಾಯಗಳ ನಡುವೆ ದ್ವೇಷದ ಭಾವನೆಗಳನ್ನು ಉತ್ತೇಜಿಸುವ ಮಾತುಗಳನ್ನು ಹೇಳಿದ್ದಾರೆ” ಎಂದು ವಾಯುವ್ಯ ದೆಹಲಿ ಉಪ ಪೊಲೀಸ್ ಆಯುಕ್ತರಾದ ಉಷಾ ರಂಗಾನಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

“ಕಾರ್ಯಕ್ರಮದ ಸ್ಥಳದಲ್ಲಿ 700-800 ಜನರು ಜಮಾಯಿಸಿದರು. ಆಯೋಜಕರ ಆಹ್ವಾನಿತರು ವೇದಿಕೆಯಿಂದ ಭಾಷಣ ಮಾಡಲು ಪ್ರಾರಂಭಿಸಿದರು. ಪೊಲೀಸರು ಸಹ ಕಾರ್ಯಕ್ರಮದ ಸ್ಥಳಕ್ಕೆ ತಲುಪಿ ಸುವ್ಯವಸ್ಥೆಯನ್ನು ಕಾಪಾಡಲು ಪ್ರಯತ್ನಿಸಿದರು” ಎಂದು ಡಿಸಿಪಿ ಹೇಳಿದ್ದಾರೆ.

ಮಹಾಪಂಚಾಯತ್ ಭಾಷಣಕಾರರು ಹೇಳಿದ್ದೇನು?

ಭಾರತಕ್ಕೆ ಮುಸ್ಲಿಂ ವ್ಯಕ್ತಿ ಪ್ರಧಾನಿಯಾದರೆ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಯತಿನರಸಿಂಗಾನಂದ  ಪ್ರಚೋದಿಸಿರುವುದು ವರದಿಯಾಗಿದೆ.

ಭಾರತಕ್ಕೆ ಮುಸ್ಲಿಂ ಪ್ರಧಾನಿ ಸಿಕ್ಕರೆ ಶೇಕಡಾ 40ರಷ್ಟು ಹಿಂದೂಗಳು ಸಾಯುತ್ತಾರೆ ಎಂದು ನರಸಿಂಹಾನಂದ ಪ್ರಚೋದಿಸಿದ್ದಾರೆ.

2021ರಲ್ಲಿ ಹರಿದ್ವಾರದ ಸಮಾವೇಶದಲ್ಲಿ ಮುಸ್ಲಿಮರ ನರಮೇಧಕ್ಕೆ ಪ್ರಚೋದಿಸಿದ್ದ ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಾಗಿತ್ತು. ಫೆಬ್ರವರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಇದಲ್ಲದೆ, ಸುದರ್ಶನ ಸುದ್ದಿ ಸಂಪಾದಕ ಚವ್ಹಾಂಕೆ, ಭಾನುವಾರ ಮಹಾಪಂಚಾಯತ್‌ನಲ್ಲಿ ಮಾತನಾಡುತ್ತಾ ಭಾರತೀಯ ಮುಸ್ಲಿಮರಿಗೆ ಭಾರತೀಯ ಹಿಂದೂಗಳಿಗೆ ನೀಡಿದಂತೆಯೇ ಸಮಾನವಾದ ಹಕ್ಕುಗಳನ್ನು ನೀಡಬಾರದು ಎಂದಿದ್ದಾರೆ.

“ಪಾಕಿಸ್ತಾನದಲ್ಲಿ ಹಿಂದೂಗಳು ಯಾವ ಹಕ್ಕುಗಳನ್ನು ಪಡೆಯುತ್ತಾರೋ ಅದೇ ಹಕ್ಕುಗಳನ್ನು ಭಾರತೀಯ ಮುಸ್ಲಿಮರು ಪಡೆಯಬೇಕು. ಅದಕ್ಕಿಂತ ಹೆಚ್ಚೇನೂ ಇಲ್ಲ” ಎಂದು ಮತೀಯ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ.

ಪೊಲೀಸ್ ಅನುಮತಿ ಇಲ್ಲದೆ ಮಹಾಪಂಚಾಯತ್!

ಶನಿವಾರ, ಏಪ್ರಿಲ್ 2ರಂದು ದಿ ಕ್ವಿಂಟ್ ವರದಿ ಮಾಡಿದ ಪ್ರಕಾರ, ಸೇವ್ ಇಂಡಿಯಾ ಫೌಂಡೇಶನ್‌ ‘ಹಿಂದೂ ಮಹಾಪಂಚಾಯತ್’ ನಡೆಸದಂತೆ ದೆಹಲಿ ಪೊಲೀಸ್, ದೆಹಲಿ ಅಭಿವೃದ್ಧಿ ಪ್ರಾಧಿಕಾರವು (ಡಿಡಿಎ) ನಿರ್ಬಂಧ ಹೇರಿತ್ತು. ಇದರ ಹೊರತಾಗಿಯೂ, ಭಾರೀ ಪೊಲೀಸ್ ನಿಯೋಜನೆಯಲ್ಲಿ ಕಾರ್ಯಕ್ರಮ ಸಮಾವೇಶಗೊಂಡಿತು.

ಸೂಕ್ತ ಅನುಮತಿ ಪಡೆಯದೆ ಮಹಾಪಂಚಾಯತ್‌ ನಡೆಸಲಾಗಿದೆ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

ಹಿಂದೂ ಮಹಾಪಂಚಾಯತ್ ಸಭೆಯನ್ನು ಆಯೋಜಿಸಲು ಅನುಮತಿ ಕೋರಿ ಮನವಿ ಪತ್ರವನ್ನು ವಾಯವ್ಯ ಜಿಲ್ಲೆಯಲ್ಲಿ ಸಂಘಟಕ ಪ್ರೀತ್ ಸಿಂಗ್ ಸಲ್ಲಿಸಿದ್ದರು. ವಾಯುವ್ಯ ಜಿಲ್ಲಾ ಪೊಲೀಸರು ಮನವಿಯನ್ನು ನಿರಾಕರಿಸಿದ್ದರು.

“ದೆಹಲಿ ಪೊಲೀಸರ ನಿರಾಕರಣೆ ಹೊರತಾಗಿಯೂ, 3.04.2022 ರಂದು, ಸಂಘಟಕ ಪ್ರೀತ್ ಸಿಂಗ್ ಅವರು ತಮ್ಮ ಬೆಂಬಲಿಗರೊಂದಿಗೆ ಬುರಾರಿ ಮೈದಾನ ಪ್ರವೇಶಿಸಿದರು. ಹಿಂದೂ ಮಹಾಪಂಚಾಯತ್ ಸಭೆಯನ್ನು ಆಯೋಜಿಸಲು ಪ್ರಾರಂಭಿಸಿದರು. ಪೊಲೀಸರು ಕಾರ್ಯಕ್ರಮದ ಸ್ಥಳಕ್ಕೆ ತಲುಪಿ ಸುವ್ಯವಸ್ಥೆಯನ್ನು ಕಾಪಾಡಲು ಪ್ರಯತ್ನಿಸಿದರು” ಎಂದು ಡಿಸಿಪಿ ಉಷಾ ರಂಗನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ನರಸಿಂಗಾನಂದ ವಿರುದ್ದ ಸಂವಿಧಾನ ಮತ್ತು ಸುಪ್ರೀಂಕೋರ್ಟ್ ನಿಂದನೆ ಪ್ರಕ್ರಿಯೆ ಆರಂಭಿಸಲು ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...