Homeನ್ಯಾಯ ಪಥಚಿರಂಜೀವಿ ವರ್ಸಸ್ ರಾಜಶೇಖರ್. ಟಾಲಿವುಡ್‍ನಲ್ಲಿ ಮತ್ತೆ ಶುರುವಾಯ್ತಾ ಸ್ಟಾರ್‌ ವಾರ್?‌

ಚಿರಂಜೀವಿ ವರ್ಸಸ್ ರಾಜಶೇಖರ್. ಟಾಲಿವುಡ್‍ನಲ್ಲಿ ಮತ್ತೆ ಶುರುವಾಯ್ತಾ ಸ್ಟಾರ್‌ ವಾರ್?‌

- Advertisement -
- Advertisement -

ಸಿನಿಮಾರಂಗದಲ್ಲಿ ಸ್ಟಾರ್‍ವಾರ್ ಸದ್ದು ಹೊಸತೇನಲ್ಲ. ಆದರೂ ಇಂತಹ ಸ್ಟಾರ್‍ವಾರ್‍ಗಳಿಂದ ಕೊಂಚ ದೂರವೇ ಉಳಿದಿದ್ದದ್ದು ಟಾಲಿವುಡ್ ಮಾತ್ರ. ತೆಲುಗು ಚಿತ್ರರಂಗದ ಕಲಾವಿದರ ನಡುವಿನ ಸಾಮರಸ್ಯ ಬಹು ದೊಡ್ಡದು, ಏನೇ ಭಿನ್ನಾಭಿಪ್ರಾಯವಿದ್ದರೂ ಕೂಲ್‍ಆಗಿ ತಮ್ಮೊಳಗೇ ಬಗೆಹರಿಸಿಕೊಳ್ಳುತ್ತಾರೆ ಎಂಬ ಮೆಚ್ಚುಗೆ ಹರಿದಾಡುತ್ತಿತ್ತು.

ಆದರೆ ಅದೀಗ ಮೆಘಾಸ್ಟಾರ್ ಚಿರಂಜೀವಿ ಮತ್ತು ರಾಜಶೇಖರ್ ಮಾತಿನ ಚಕಮಕಿಯಿಂದ ವೇದಿಕೆಯ ಮೇಲೆಯೇ ಕಂಪಿಸುತ್ತಿದೆ. ಕಳೆದ ವಾರ ತೆಲುಗು ಇಂಡಸ್ಟ್ರಿಯ ಮೂವಿ ಆರ್ಟಿಸ್ಟ್ ಅಸೋಸಿಯೇಷನ್(ಮಾ)ನಿಂದ ಡೈರಿ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಚಿರಂಜೀವಿ “ನಾನು ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಭವನ ಉದ್ಘಾಟನೆಗೆ ಹೋಗಿದ್ದೆ. ಅಲ್ಲಿಯ ಭವನಕ್ಕೆ ಸರ್ಕಾರ ಭೂಮಿ ನೀಡಿದೆ. ಕಾರ್ಪೊರೇಟ್ ಸ್ಟೈಲ್‍ನಲ್ಲಿ ಥಿಯೇಟರ್, ರೂಮ್, ಕ್ಲಬ್, ಮೀಟಿಂಗ್ ಹಾಲ್‍ನಂತಹ ಹಲವು ಸೌಕರ್ಯಗಳನ್ನು ಹೊಂದಿದೆ” ಎಂದೆಲ್ಲಾ ಸ್ಯಾಂಡಲ್‍ವುಡ್‍ನ್ನು ಹೊಗಳಿದರು. ಅಷ್ಟೇಅಲ್ಲದೆ, ಅಂತದ್ದೇ ಸ್ಟೈಲ್‍ನಲ್ಲಿ ನಮ್ಮ “ಮಾ” ಸಂಘವನ್ನು ಕಟ್ಟೋಣ. ನಮ್ಮಲ್ಲಿ ಕೆಲವು ಸಣ್ಣ-ಪುಟ್ಟ ಸಮಸ್ಯೆಗಳಿವೆ, ಅವನ್ನೆಲ್ಲಾ ಸಮಾಧಾನದಿಂದ ಮಾತಾಡಿಕೊಂಡು ಬಗೆಹರಿಸಿಕೊಳ್ಳೋಣ, ಬಹಿರಂಗವಾಗಿ ವಾರ್‌ಗೆ ಇಳಿಯೋದು ಬೇಡ ಎಂದರು.

ಈ ಮಾತು ಕೇಳಿದ ರಾಜಶೇಖರ್ ಸ್ಟೇಜ್ ಮೇಲೆ ದೌಡಾಯಿಸಿ ಹಿರಿಯ ನಟ ಪರಚೂರಿ ಗೋಪಾಲಕೃಷ್ಣರ ಕೈಯಲ್ಲಿದ್ದ ಮೈಕ್ ಕಿತ್ತುಕೊಂಡು “ನೀವೇನೋ ಸಮಾಧಾನ ಮಾಡ್ಕಳಿ ಅಂತ ಹೇಳ್ತೀರಿ, ಹೆಂಗಪ್ಪಾ ಸಮಾಧಾನ ಮಾಡ್ಕಳದು. ‘ಮಾ’ ಉಪಾಧ್ಯಕ್ಷನಾದಾಗಿಂದ ಸಂಘಕ್ಕಾಗಿ ಸಿಕ್ಕಾಪಟ್ಟೆ ದುಡಿತಿದ್ದೀನಿ. ಉಪಾಧ್ಯಕ್ಷ ಆದಮೇಲೆ ಒಂದೇ ಒಂದು ಸಿನಿಮಾ ಮಾಡೋಕಾಗಿಲ್ಲ. ಮನೇಲಿ ಉಗಿತಿದ್ದಾರೆ. ಆದರೂ ಕಷ್ಟಪಟ್ಟು ದುಡಿತಿದ್ದೀನಿ. ‘ಮಾ’ ಒಳಗೆ ಗಲಾಟೆಗಳು ನಡೀತಿವೆ. ಏನನ್ನೂ ಬಹಿರಂಗವಾಗಿ ಮಾತನಾಡಲು ಅವಕಾಶ ಕೊಡಲ್ಲಾ. ರಿಯಲ್ ಲೈಫಲ್ಲೂ ಹೀರೋ ಆಗಿರೋ ನನ್ನ ಎಲ್ಲಾ ಸೇರಿ ನನ್ನ ತುಳಿತಿದ್ದಾರೆ” ಎಂದು ರೊಚ್ಚಿಗೆದ್ದು ಅಬ್ಬರಿಸಿದ್ದರು.

ರಾಜಶೇಖರ್ ಅಬ್ಬರಕ್ಕೆ ಬೆರಗಾದ ಚಿರಂಜೀವಿ “ನಮ್ಮ ಮಾತಿಗೆ ನೆಲೆ ಇಲ್ಲ, ನಮ್ಮ ಹಿರಿತನಕ್ಕೂ ಕಿಂಚಿತ್ತೂ ಕಿಮ್ಮತ್ತಿಲ್ಲದ ಕಡೆ ನಾವ್ಯಾಕೆ ಇರಬೇಕು? ಸಭೆಗೆ ಗೌರವ ಕೊಡದ ರಾಜಶೇಖರ್ ವಿರುದ್ಧ ಮಾ ಕ್ರಮ ಕೈಗೊಳ್ಳಬೇಕು ಎಂದು ರೋಷಾವೇಶ ವ್ಯಕ್ತಪಡಿಸಿದರು. ನೀವೇನಪ್ಪಾ ಕ್ರಮ ತಕೊಳದು ನಾನೇ ರಾಜಿನಾಮೆ ಕೊಡ್ತಿನಿ ಇಟ್ಕೊಳಿ ಅಂತ ರಾಜಶೇಖರ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟುಹೋಗಿದ್ದಾರೆ. ಏನೇ ಇರಲಿ ಶಾಂತಿದೂತರಂತೆ ಯಾವುದೇ ವಿಚಾರಕ್ಕೂ ಸ್ಟಾರ್‌ವಾರ್‌ಗೆ ಇಳಿಯದ ಟಾಲಿವುಡ್ ಮಂದಿ ಒಂದೇ ಬಾರಿಗೆ ವೇದಿಕೆ ಮೇಲೆ ವಾರ್ ಶುರು ಮಾಡಿದ್ದು ಮಾತ್ರ ಬೇಸರದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...