Homeನ್ಯಾಯ ಪಥಚಿರಂಜೀವಿ ವರ್ಸಸ್ ರಾಜಶೇಖರ್. ಟಾಲಿವುಡ್‍ನಲ್ಲಿ ಮತ್ತೆ ಶುರುವಾಯ್ತಾ ಸ್ಟಾರ್‌ ವಾರ್?‌

ಚಿರಂಜೀವಿ ವರ್ಸಸ್ ರಾಜಶೇಖರ್. ಟಾಲಿವುಡ್‍ನಲ್ಲಿ ಮತ್ತೆ ಶುರುವಾಯ್ತಾ ಸ್ಟಾರ್‌ ವಾರ್?‌

- Advertisement -
- Advertisement -

ಸಿನಿಮಾರಂಗದಲ್ಲಿ ಸ್ಟಾರ್‍ವಾರ್ ಸದ್ದು ಹೊಸತೇನಲ್ಲ. ಆದರೂ ಇಂತಹ ಸ್ಟಾರ್‍ವಾರ್‍ಗಳಿಂದ ಕೊಂಚ ದೂರವೇ ಉಳಿದಿದ್ದದ್ದು ಟಾಲಿವುಡ್ ಮಾತ್ರ. ತೆಲುಗು ಚಿತ್ರರಂಗದ ಕಲಾವಿದರ ನಡುವಿನ ಸಾಮರಸ್ಯ ಬಹು ದೊಡ್ಡದು, ಏನೇ ಭಿನ್ನಾಭಿಪ್ರಾಯವಿದ್ದರೂ ಕೂಲ್‍ಆಗಿ ತಮ್ಮೊಳಗೇ ಬಗೆಹರಿಸಿಕೊಳ್ಳುತ್ತಾರೆ ಎಂಬ ಮೆಚ್ಚುಗೆ ಹರಿದಾಡುತ್ತಿತ್ತು.

ಆದರೆ ಅದೀಗ ಮೆಘಾಸ್ಟಾರ್ ಚಿರಂಜೀವಿ ಮತ್ತು ರಾಜಶೇಖರ್ ಮಾತಿನ ಚಕಮಕಿಯಿಂದ ವೇದಿಕೆಯ ಮೇಲೆಯೇ ಕಂಪಿಸುತ್ತಿದೆ. ಕಳೆದ ವಾರ ತೆಲುಗು ಇಂಡಸ್ಟ್ರಿಯ ಮೂವಿ ಆರ್ಟಿಸ್ಟ್ ಅಸೋಸಿಯೇಷನ್(ಮಾ)ನಿಂದ ಡೈರಿ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಚಿರಂಜೀವಿ “ನಾನು ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಭವನ ಉದ್ಘಾಟನೆಗೆ ಹೋಗಿದ್ದೆ. ಅಲ್ಲಿಯ ಭವನಕ್ಕೆ ಸರ್ಕಾರ ಭೂಮಿ ನೀಡಿದೆ. ಕಾರ್ಪೊರೇಟ್ ಸ್ಟೈಲ್‍ನಲ್ಲಿ ಥಿಯೇಟರ್, ರೂಮ್, ಕ್ಲಬ್, ಮೀಟಿಂಗ್ ಹಾಲ್‍ನಂತಹ ಹಲವು ಸೌಕರ್ಯಗಳನ್ನು ಹೊಂದಿದೆ” ಎಂದೆಲ್ಲಾ ಸ್ಯಾಂಡಲ್‍ವುಡ್‍ನ್ನು ಹೊಗಳಿದರು. ಅಷ್ಟೇಅಲ್ಲದೆ, ಅಂತದ್ದೇ ಸ್ಟೈಲ್‍ನಲ್ಲಿ ನಮ್ಮ “ಮಾ” ಸಂಘವನ್ನು ಕಟ್ಟೋಣ. ನಮ್ಮಲ್ಲಿ ಕೆಲವು ಸಣ್ಣ-ಪುಟ್ಟ ಸಮಸ್ಯೆಗಳಿವೆ, ಅವನ್ನೆಲ್ಲಾ ಸಮಾಧಾನದಿಂದ ಮಾತಾಡಿಕೊಂಡು ಬಗೆಹರಿಸಿಕೊಳ್ಳೋಣ, ಬಹಿರಂಗವಾಗಿ ವಾರ್‌ಗೆ ಇಳಿಯೋದು ಬೇಡ ಎಂದರು.

ಈ ಮಾತು ಕೇಳಿದ ರಾಜಶೇಖರ್ ಸ್ಟೇಜ್ ಮೇಲೆ ದೌಡಾಯಿಸಿ ಹಿರಿಯ ನಟ ಪರಚೂರಿ ಗೋಪಾಲಕೃಷ್ಣರ ಕೈಯಲ್ಲಿದ್ದ ಮೈಕ್ ಕಿತ್ತುಕೊಂಡು “ನೀವೇನೋ ಸಮಾಧಾನ ಮಾಡ್ಕಳಿ ಅಂತ ಹೇಳ್ತೀರಿ, ಹೆಂಗಪ್ಪಾ ಸಮಾಧಾನ ಮಾಡ್ಕಳದು. ‘ಮಾ’ ಉಪಾಧ್ಯಕ್ಷನಾದಾಗಿಂದ ಸಂಘಕ್ಕಾಗಿ ಸಿಕ್ಕಾಪಟ್ಟೆ ದುಡಿತಿದ್ದೀನಿ. ಉಪಾಧ್ಯಕ್ಷ ಆದಮೇಲೆ ಒಂದೇ ಒಂದು ಸಿನಿಮಾ ಮಾಡೋಕಾಗಿಲ್ಲ. ಮನೇಲಿ ಉಗಿತಿದ್ದಾರೆ. ಆದರೂ ಕಷ್ಟಪಟ್ಟು ದುಡಿತಿದ್ದೀನಿ. ‘ಮಾ’ ಒಳಗೆ ಗಲಾಟೆಗಳು ನಡೀತಿವೆ. ಏನನ್ನೂ ಬಹಿರಂಗವಾಗಿ ಮಾತನಾಡಲು ಅವಕಾಶ ಕೊಡಲ್ಲಾ. ರಿಯಲ್ ಲೈಫಲ್ಲೂ ಹೀರೋ ಆಗಿರೋ ನನ್ನ ಎಲ್ಲಾ ಸೇರಿ ನನ್ನ ತುಳಿತಿದ್ದಾರೆ” ಎಂದು ರೊಚ್ಚಿಗೆದ್ದು ಅಬ್ಬರಿಸಿದ್ದರು.

ರಾಜಶೇಖರ್ ಅಬ್ಬರಕ್ಕೆ ಬೆರಗಾದ ಚಿರಂಜೀವಿ “ನಮ್ಮ ಮಾತಿಗೆ ನೆಲೆ ಇಲ್ಲ, ನಮ್ಮ ಹಿರಿತನಕ್ಕೂ ಕಿಂಚಿತ್ತೂ ಕಿಮ್ಮತ್ತಿಲ್ಲದ ಕಡೆ ನಾವ್ಯಾಕೆ ಇರಬೇಕು? ಸಭೆಗೆ ಗೌರವ ಕೊಡದ ರಾಜಶೇಖರ್ ವಿರುದ್ಧ ಮಾ ಕ್ರಮ ಕೈಗೊಳ್ಳಬೇಕು ಎಂದು ರೋಷಾವೇಶ ವ್ಯಕ್ತಪಡಿಸಿದರು. ನೀವೇನಪ್ಪಾ ಕ್ರಮ ತಕೊಳದು ನಾನೇ ರಾಜಿನಾಮೆ ಕೊಡ್ತಿನಿ ಇಟ್ಕೊಳಿ ಅಂತ ರಾಜಶೇಖರ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟುಹೋಗಿದ್ದಾರೆ. ಏನೇ ಇರಲಿ ಶಾಂತಿದೂತರಂತೆ ಯಾವುದೇ ವಿಚಾರಕ್ಕೂ ಸ್ಟಾರ್‌ವಾರ್‌ಗೆ ಇಳಿಯದ ಟಾಲಿವುಡ್ ಮಂದಿ ಒಂದೇ ಬಾರಿಗೆ ವೇದಿಕೆ ಮೇಲೆ ವಾರ್ ಶುರು ಮಾಡಿದ್ದು ಮಾತ್ರ ಬೇಸರದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...