Homeನ್ಯಾಯ ಪಥಚಿರಂಜೀವಿ ವರ್ಸಸ್ ರಾಜಶೇಖರ್. ಟಾಲಿವುಡ್‍ನಲ್ಲಿ ಮತ್ತೆ ಶುರುವಾಯ್ತಾ ಸ್ಟಾರ್‌ ವಾರ್?‌

ಚಿರಂಜೀವಿ ವರ್ಸಸ್ ರಾಜಶೇಖರ್. ಟಾಲಿವುಡ್‍ನಲ್ಲಿ ಮತ್ತೆ ಶುರುವಾಯ್ತಾ ಸ್ಟಾರ್‌ ವಾರ್?‌

- Advertisement -
- Advertisement -

ಸಿನಿಮಾರಂಗದಲ್ಲಿ ಸ್ಟಾರ್‍ವಾರ್ ಸದ್ದು ಹೊಸತೇನಲ್ಲ. ಆದರೂ ಇಂತಹ ಸ್ಟಾರ್‍ವಾರ್‍ಗಳಿಂದ ಕೊಂಚ ದೂರವೇ ಉಳಿದಿದ್ದದ್ದು ಟಾಲಿವುಡ್ ಮಾತ್ರ. ತೆಲುಗು ಚಿತ್ರರಂಗದ ಕಲಾವಿದರ ನಡುವಿನ ಸಾಮರಸ್ಯ ಬಹು ದೊಡ್ಡದು, ಏನೇ ಭಿನ್ನಾಭಿಪ್ರಾಯವಿದ್ದರೂ ಕೂಲ್‍ಆಗಿ ತಮ್ಮೊಳಗೇ ಬಗೆಹರಿಸಿಕೊಳ್ಳುತ್ತಾರೆ ಎಂಬ ಮೆಚ್ಚುಗೆ ಹರಿದಾಡುತ್ತಿತ್ತು.

ಆದರೆ ಅದೀಗ ಮೆಘಾಸ್ಟಾರ್ ಚಿರಂಜೀವಿ ಮತ್ತು ರಾಜಶೇಖರ್ ಮಾತಿನ ಚಕಮಕಿಯಿಂದ ವೇದಿಕೆಯ ಮೇಲೆಯೇ ಕಂಪಿಸುತ್ತಿದೆ. ಕಳೆದ ವಾರ ತೆಲುಗು ಇಂಡಸ್ಟ್ರಿಯ ಮೂವಿ ಆರ್ಟಿಸ್ಟ್ ಅಸೋಸಿಯೇಷನ್(ಮಾ)ನಿಂದ ಡೈರಿ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಚಿರಂಜೀವಿ “ನಾನು ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಭವನ ಉದ್ಘಾಟನೆಗೆ ಹೋಗಿದ್ದೆ. ಅಲ್ಲಿಯ ಭವನಕ್ಕೆ ಸರ್ಕಾರ ಭೂಮಿ ನೀಡಿದೆ. ಕಾರ್ಪೊರೇಟ್ ಸ್ಟೈಲ್‍ನಲ್ಲಿ ಥಿಯೇಟರ್, ರೂಮ್, ಕ್ಲಬ್, ಮೀಟಿಂಗ್ ಹಾಲ್‍ನಂತಹ ಹಲವು ಸೌಕರ್ಯಗಳನ್ನು ಹೊಂದಿದೆ” ಎಂದೆಲ್ಲಾ ಸ್ಯಾಂಡಲ್‍ವುಡ್‍ನ್ನು ಹೊಗಳಿದರು. ಅಷ್ಟೇಅಲ್ಲದೆ, ಅಂತದ್ದೇ ಸ್ಟೈಲ್‍ನಲ್ಲಿ ನಮ್ಮ “ಮಾ” ಸಂಘವನ್ನು ಕಟ್ಟೋಣ. ನಮ್ಮಲ್ಲಿ ಕೆಲವು ಸಣ್ಣ-ಪುಟ್ಟ ಸಮಸ್ಯೆಗಳಿವೆ, ಅವನ್ನೆಲ್ಲಾ ಸಮಾಧಾನದಿಂದ ಮಾತಾಡಿಕೊಂಡು ಬಗೆಹರಿಸಿಕೊಳ್ಳೋಣ, ಬಹಿರಂಗವಾಗಿ ವಾರ್‌ಗೆ ಇಳಿಯೋದು ಬೇಡ ಎಂದರು.

ಈ ಮಾತು ಕೇಳಿದ ರಾಜಶೇಖರ್ ಸ್ಟೇಜ್ ಮೇಲೆ ದೌಡಾಯಿಸಿ ಹಿರಿಯ ನಟ ಪರಚೂರಿ ಗೋಪಾಲಕೃಷ್ಣರ ಕೈಯಲ್ಲಿದ್ದ ಮೈಕ್ ಕಿತ್ತುಕೊಂಡು “ನೀವೇನೋ ಸಮಾಧಾನ ಮಾಡ್ಕಳಿ ಅಂತ ಹೇಳ್ತೀರಿ, ಹೆಂಗಪ್ಪಾ ಸಮಾಧಾನ ಮಾಡ್ಕಳದು. ‘ಮಾ’ ಉಪಾಧ್ಯಕ್ಷನಾದಾಗಿಂದ ಸಂಘಕ್ಕಾಗಿ ಸಿಕ್ಕಾಪಟ್ಟೆ ದುಡಿತಿದ್ದೀನಿ. ಉಪಾಧ್ಯಕ್ಷ ಆದಮೇಲೆ ಒಂದೇ ಒಂದು ಸಿನಿಮಾ ಮಾಡೋಕಾಗಿಲ್ಲ. ಮನೇಲಿ ಉಗಿತಿದ್ದಾರೆ. ಆದರೂ ಕಷ್ಟಪಟ್ಟು ದುಡಿತಿದ್ದೀನಿ. ‘ಮಾ’ ಒಳಗೆ ಗಲಾಟೆಗಳು ನಡೀತಿವೆ. ಏನನ್ನೂ ಬಹಿರಂಗವಾಗಿ ಮಾತನಾಡಲು ಅವಕಾಶ ಕೊಡಲ್ಲಾ. ರಿಯಲ್ ಲೈಫಲ್ಲೂ ಹೀರೋ ಆಗಿರೋ ನನ್ನ ಎಲ್ಲಾ ಸೇರಿ ನನ್ನ ತುಳಿತಿದ್ದಾರೆ” ಎಂದು ರೊಚ್ಚಿಗೆದ್ದು ಅಬ್ಬರಿಸಿದ್ದರು.

ರಾಜಶೇಖರ್ ಅಬ್ಬರಕ್ಕೆ ಬೆರಗಾದ ಚಿರಂಜೀವಿ “ನಮ್ಮ ಮಾತಿಗೆ ನೆಲೆ ಇಲ್ಲ, ನಮ್ಮ ಹಿರಿತನಕ್ಕೂ ಕಿಂಚಿತ್ತೂ ಕಿಮ್ಮತ್ತಿಲ್ಲದ ಕಡೆ ನಾವ್ಯಾಕೆ ಇರಬೇಕು? ಸಭೆಗೆ ಗೌರವ ಕೊಡದ ರಾಜಶೇಖರ್ ವಿರುದ್ಧ ಮಾ ಕ್ರಮ ಕೈಗೊಳ್ಳಬೇಕು ಎಂದು ರೋಷಾವೇಶ ವ್ಯಕ್ತಪಡಿಸಿದರು. ನೀವೇನಪ್ಪಾ ಕ್ರಮ ತಕೊಳದು ನಾನೇ ರಾಜಿನಾಮೆ ಕೊಡ್ತಿನಿ ಇಟ್ಕೊಳಿ ಅಂತ ರಾಜಶೇಖರ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟುಹೋಗಿದ್ದಾರೆ. ಏನೇ ಇರಲಿ ಶಾಂತಿದೂತರಂತೆ ಯಾವುದೇ ವಿಚಾರಕ್ಕೂ ಸ್ಟಾರ್‌ವಾರ್‌ಗೆ ಇಳಿಯದ ಟಾಲಿವುಡ್ ಮಂದಿ ಒಂದೇ ಬಾರಿಗೆ ವೇದಿಕೆ ಮೇಲೆ ವಾರ್ ಶುರು ಮಾಡಿದ್ದು ಮಾತ್ರ ಬೇಸರದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...