Homeನ್ಯಾಯ ಪಥಚಿರಂಜೀವಿ ವರ್ಸಸ್ ರಾಜಶೇಖರ್. ಟಾಲಿವುಡ್‍ನಲ್ಲಿ ಮತ್ತೆ ಶುರುವಾಯ್ತಾ ಸ್ಟಾರ್‌ ವಾರ್?‌

ಚಿರಂಜೀವಿ ವರ್ಸಸ್ ರಾಜಶೇಖರ್. ಟಾಲಿವುಡ್‍ನಲ್ಲಿ ಮತ್ತೆ ಶುರುವಾಯ್ತಾ ಸ್ಟಾರ್‌ ವಾರ್?‌

- Advertisement -
- Advertisement -

ಸಿನಿಮಾರಂಗದಲ್ಲಿ ಸ್ಟಾರ್‍ವಾರ್ ಸದ್ದು ಹೊಸತೇನಲ್ಲ. ಆದರೂ ಇಂತಹ ಸ್ಟಾರ್‍ವಾರ್‍ಗಳಿಂದ ಕೊಂಚ ದೂರವೇ ಉಳಿದಿದ್ದದ್ದು ಟಾಲಿವುಡ್ ಮಾತ್ರ. ತೆಲುಗು ಚಿತ್ರರಂಗದ ಕಲಾವಿದರ ನಡುವಿನ ಸಾಮರಸ್ಯ ಬಹು ದೊಡ್ಡದು, ಏನೇ ಭಿನ್ನಾಭಿಪ್ರಾಯವಿದ್ದರೂ ಕೂಲ್‍ಆಗಿ ತಮ್ಮೊಳಗೇ ಬಗೆಹರಿಸಿಕೊಳ್ಳುತ್ತಾರೆ ಎಂಬ ಮೆಚ್ಚುಗೆ ಹರಿದಾಡುತ್ತಿತ್ತು.

ಆದರೆ ಅದೀಗ ಮೆಘಾಸ್ಟಾರ್ ಚಿರಂಜೀವಿ ಮತ್ತು ರಾಜಶೇಖರ್ ಮಾತಿನ ಚಕಮಕಿಯಿಂದ ವೇದಿಕೆಯ ಮೇಲೆಯೇ ಕಂಪಿಸುತ್ತಿದೆ. ಕಳೆದ ವಾರ ತೆಲುಗು ಇಂಡಸ್ಟ್ರಿಯ ಮೂವಿ ಆರ್ಟಿಸ್ಟ್ ಅಸೋಸಿಯೇಷನ್(ಮಾ)ನಿಂದ ಡೈರಿ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಚಿರಂಜೀವಿ “ನಾನು ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಭವನ ಉದ್ಘಾಟನೆಗೆ ಹೋಗಿದ್ದೆ. ಅಲ್ಲಿಯ ಭವನಕ್ಕೆ ಸರ್ಕಾರ ಭೂಮಿ ನೀಡಿದೆ. ಕಾರ್ಪೊರೇಟ್ ಸ್ಟೈಲ್‍ನಲ್ಲಿ ಥಿಯೇಟರ್, ರೂಮ್, ಕ್ಲಬ್, ಮೀಟಿಂಗ್ ಹಾಲ್‍ನಂತಹ ಹಲವು ಸೌಕರ್ಯಗಳನ್ನು ಹೊಂದಿದೆ” ಎಂದೆಲ್ಲಾ ಸ್ಯಾಂಡಲ್‍ವುಡ್‍ನ್ನು ಹೊಗಳಿದರು. ಅಷ್ಟೇಅಲ್ಲದೆ, ಅಂತದ್ದೇ ಸ್ಟೈಲ್‍ನಲ್ಲಿ ನಮ್ಮ “ಮಾ” ಸಂಘವನ್ನು ಕಟ್ಟೋಣ. ನಮ್ಮಲ್ಲಿ ಕೆಲವು ಸಣ್ಣ-ಪುಟ್ಟ ಸಮಸ್ಯೆಗಳಿವೆ, ಅವನ್ನೆಲ್ಲಾ ಸಮಾಧಾನದಿಂದ ಮಾತಾಡಿಕೊಂಡು ಬಗೆಹರಿಸಿಕೊಳ್ಳೋಣ, ಬಹಿರಂಗವಾಗಿ ವಾರ್‌ಗೆ ಇಳಿಯೋದು ಬೇಡ ಎಂದರು.

ಈ ಮಾತು ಕೇಳಿದ ರಾಜಶೇಖರ್ ಸ್ಟೇಜ್ ಮೇಲೆ ದೌಡಾಯಿಸಿ ಹಿರಿಯ ನಟ ಪರಚೂರಿ ಗೋಪಾಲಕೃಷ್ಣರ ಕೈಯಲ್ಲಿದ್ದ ಮೈಕ್ ಕಿತ್ತುಕೊಂಡು “ನೀವೇನೋ ಸಮಾಧಾನ ಮಾಡ್ಕಳಿ ಅಂತ ಹೇಳ್ತೀರಿ, ಹೆಂಗಪ್ಪಾ ಸಮಾಧಾನ ಮಾಡ್ಕಳದು. ‘ಮಾ’ ಉಪಾಧ್ಯಕ್ಷನಾದಾಗಿಂದ ಸಂಘಕ್ಕಾಗಿ ಸಿಕ್ಕಾಪಟ್ಟೆ ದುಡಿತಿದ್ದೀನಿ. ಉಪಾಧ್ಯಕ್ಷ ಆದಮೇಲೆ ಒಂದೇ ಒಂದು ಸಿನಿಮಾ ಮಾಡೋಕಾಗಿಲ್ಲ. ಮನೇಲಿ ಉಗಿತಿದ್ದಾರೆ. ಆದರೂ ಕಷ್ಟಪಟ್ಟು ದುಡಿತಿದ್ದೀನಿ. ‘ಮಾ’ ಒಳಗೆ ಗಲಾಟೆಗಳು ನಡೀತಿವೆ. ಏನನ್ನೂ ಬಹಿರಂಗವಾಗಿ ಮಾತನಾಡಲು ಅವಕಾಶ ಕೊಡಲ್ಲಾ. ರಿಯಲ್ ಲೈಫಲ್ಲೂ ಹೀರೋ ಆಗಿರೋ ನನ್ನ ಎಲ್ಲಾ ಸೇರಿ ನನ್ನ ತುಳಿತಿದ್ದಾರೆ” ಎಂದು ರೊಚ್ಚಿಗೆದ್ದು ಅಬ್ಬರಿಸಿದ್ದರು.

ರಾಜಶೇಖರ್ ಅಬ್ಬರಕ್ಕೆ ಬೆರಗಾದ ಚಿರಂಜೀವಿ “ನಮ್ಮ ಮಾತಿಗೆ ನೆಲೆ ಇಲ್ಲ, ನಮ್ಮ ಹಿರಿತನಕ್ಕೂ ಕಿಂಚಿತ್ತೂ ಕಿಮ್ಮತ್ತಿಲ್ಲದ ಕಡೆ ನಾವ್ಯಾಕೆ ಇರಬೇಕು? ಸಭೆಗೆ ಗೌರವ ಕೊಡದ ರಾಜಶೇಖರ್ ವಿರುದ್ಧ ಮಾ ಕ್ರಮ ಕೈಗೊಳ್ಳಬೇಕು ಎಂದು ರೋಷಾವೇಶ ವ್ಯಕ್ತಪಡಿಸಿದರು. ನೀವೇನಪ್ಪಾ ಕ್ರಮ ತಕೊಳದು ನಾನೇ ರಾಜಿನಾಮೆ ಕೊಡ್ತಿನಿ ಇಟ್ಕೊಳಿ ಅಂತ ರಾಜಶೇಖರ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟುಹೋಗಿದ್ದಾರೆ. ಏನೇ ಇರಲಿ ಶಾಂತಿದೂತರಂತೆ ಯಾವುದೇ ವಿಚಾರಕ್ಕೂ ಸ್ಟಾರ್‌ವಾರ್‌ಗೆ ಇಳಿಯದ ಟಾಲಿವುಡ್ ಮಂದಿ ಒಂದೇ ಬಾರಿಗೆ ವೇದಿಕೆ ಮೇಲೆ ವಾರ್ ಶುರು ಮಾಡಿದ್ದು ಮಾತ್ರ ಬೇಸರದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...