Homeನ್ಯಾಯ ಪಥಚಿರಂಜೀವಿ ವರ್ಸಸ್ ರಾಜಶೇಖರ್. ಟಾಲಿವುಡ್‍ನಲ್ಲಿ ಮತ್ತೆ ಶುರುವಾಯ್ತಾ ಸ್ಟಾರ್‌ ವಾರ್?‌

ಚಿರಂಜೀವಿ ವರ್ಸಸ್ ರಾಜಶೇಖರ್. ಟಾಲಿವುಡ್‍ನಲ್ಲಿ ಮತ್ತೆ ಶುರುವಾಯ್ತಾ ಸ್ಟಾರ್‌ ವಾರ್?‌

- Advertisement -
- Advertisement -

ಸಿನಿಮಾರಂಗದಲ್ಲಿ ಸ್ಟಾರ್‍ವಾರ್ ಸದ್ದು ಹೊಸತೇನಲ್ಲ. ಆದರೂ ಇಂತಹ ಸ್ಟಾರ್‍ವಾರ್‍ಗಳಿಂದ ಕೊಂಚ ದೂರವೇ ಉಳಿದಿದ್ದದ್ದು ಟಾಲಿವುಡ್ ಮಾತ್ರ. ತೆಲುಗು ಚಿತ್ರರಂಗದ ಕಲಾವಿದರ ನಡುವಿನ ಸಾಮರಸ್ಯ ಬಹು ದೊಡ್ಡದು, ಏನೇ ಭಿನ್ನಾಭಿಪ್ರಾಯವಿದ್ದರೂ ಕೂಲ್‍ಆಗಿ ತಮ್ಮೊಳಗೇ ಬಗೆಹರಿಸಿಕೊಳ್ಳುತ್ತಾರೆ ಎಂಬ ಮೆಚ್ಚುಗೆ ಹರಿದಾಡುತ್ತಿತ್ತು.

ಆದರೆ ಅದೀಗ ಮೆಘಾಸ್ಟಾರ್ ಚಿರಂಜೀವಿ ಮತ್ತು ರಾಜಶೇಖರ್ ಮಾತಿನ ಚಕಮಕಿಯಿಂದ ವೇದಿಕೆಯ ಮೇಲೆಯೇ ಕಂಪಿಸುತ್ತಿದೆ. ಕಳೆದ ವಾರ ತೆಲುಗು ಇಂಡಸ್ಟ್ರಿಯ ಮೂವಿ ಆರ್ಟಿಸ್ಟ್ ಅಸೋಸಿಯೇಷನ್(ಮಾ)ನಿಂದ ಡೈರಿ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಚಿರಂಜೀವಿ “ನಾನು ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಭವನ ಉದ್ಘಾಟನೆಗೆ ಹೋಗಿದ್ದೆ. ಅಲ್ಲಿಯ ಭವನಕ್ಕೆ ಸರ್ಕಾರ ಭೂಮಿ ನೀಡಿದೆ. ಕಾರ್ಪೊರೇಟ್ ಸ್ಟೈಲ್‍ನಲ್ಲಿ ಥಿಯೇಟರ್, ರೂಮ್, ಕ್ಲಬ್, ಮೀಟಿಂಗ್ ಹಾಲ್‍ನಂತಹ ಹಲವು ಸೌಕರ್ಯಗಳನ್ನು ಹೊಂದಿದೆ” ಎಂದೆಲ್ಲಾ ಸ್ಯಾಂಡಲ್‍ವುಡ್‍ನ್ನು ಹೊಗಳಿದರು. ಅಷ್ಟೇಅಲ್ಲದೆ, ಅಂತದ್ದೇ ಸ್ಟೈಲ್‍ನಲ್ಲಿ ನಮ್ಮ “ಮಾ” ಸಂಘವನ್ನು ಕಟ್ಟೋಣ. ನಮ್ಮಲ್ಲಿ ಕೆಲವು ಸಣ್ಣ-ಪುಟ್ಟ ಸಮಸ್ಯೆಗಳಿವೆ, ಅವನ್ನೆಲ್ಲಾ ಸಮಾಧಾನದಿಂದ ಮಾತಾಡಿಕೊಂಡು ಬಗೆಹರಿಸಿಕೊಳ್ಳೋಣ, ಬಹಿರಂಗವಾಗಿ ವಾರ್‌ಗೆ ಇಳಿಯೋದು ಬೇಡ ಎಂದರು.

ಈ ಮಾತು ಕೇಳಿದ ರಾಜಶೇಖರ್ ಸ್ಟೇಜ್ ಮೇಲೆ ದೌಡಾಯಿಸಿ ಹಿರಿಯ ನಟ ಪರಚೂರಿ ಗೋಪಾಲಕೃಷ್ಣರ ಕೈಯಲ್ಲಿದ್ದ ಮೈಕ್ ಕಿತ್ತುಕೊಂಡು “ನೀವೇನೋ ಸಮಾಧಾನ ಮಾಡ್ಕಳಿ ಅಂತ ಹೇಳ್ತೀರಿ, ಹೆಂಗಪ್ಪಾ ಸಮಾಧಾನ ಮಾಡ್ಕಳದು. ‘ಮಾ’ ಉಪಾಧ್ಯಕ್ಷನಾದಾಗಿಂದ ಸಂಘಕ್ಕಾಗಿ ಸಿಕ್ಕಾಪಟ್ಟೆ ದುಡಿತಿದ್ದೀನಿ. ಉಪಾಧ್ಯಕ್ಷ ಆದಮೇಲೆ ಒಂದೇ ಒಂದು ಸಿನಿಮಾ ಮಾಡೋಕಾಗಿಲ್ಲ. ಮನೇಲಿ ಉಗಿತಿದ್ದಾರೆ. ಆದರೂ ಕಷ್ಟಪಟ್ಟು ದುಡಿತಿದ್ದೀನಿ. ‘ಮಾ’ ಒಳಗೆ ಗಲಾಟೆಗಳು ನಡೀತಿವೆ. ಏನನ್ನೂ ಬಹಿರಂಗವಾಗಿ ಮಾತನಾಡಲು ಅವಕಾಶ ಕೊಡಲ್ಲಾ. ರಿಯಲ್ ಲೈಫಲ್ಲೂ ಹೀರೋ ಆಗಿರೋ ನನ್ನ ಎಲ್ಲಾ ಸೇರಿ ನನ್ನ ತುಳಿತಿದ್ದಾರೆ” ಎಂದು ರೊಚ್ಚಿಗೆದ್ದು ಅಬ್ಬರಿಸಿದ್ದರು.

ರಾಜಶೇಖರ್ ಅಬ್ಬರಕ್ಕೆ ಬೆರಗಾದ ಚಿರಂಜೀವಿ “ನಮ್ಮ ಮಾತಿಗೆ ನೆಲೆ ಇಲ್ಲ, ನಮ್ಮ ಹಿರಿತನಕ್ಕೂ ಕಿಂಚಿತ್ತೂ ಕಿಮ್ಮತ್ತಿಲ್ಲದ ಕಡೆ ನಾವ್ಯಾಕೆ ಇರಬೇಕು? ಸಭೆಗೆ ಗೌರವ ಕೊಡದ ರಾಜಶೇಖರ್ ವಿರುದ್ಧ ಮಾ ಕ್ರಮ ಕೈಗೊಳ್ಳಬೇಕು ಎಂದು ರೋಷಾವೇಶ ವ್ಯಕ್ತಪಡಿಸಿದರು. ನೀವೇನಪ್ಪಾ ಕ್ರಮ ತಕೊಳದು ನಾನೇ ರಾಜಿನಾಮೆ ಕೊಡ್ತಿನಿ ಇಟ್ಕೊಳಿ ಅಂತ ರಾಜಶೇಖರ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟುಹೋಗಿದ್ದಾರೆ. ಏನೇ ಇರಲಿ ಶಾಂತಿದೂತರಂತೆ ಯಾವುದೇ ವಿಚಾರಕ್ಕೂ ಸ್ಟಾರ್‌ವಾರ್‌ಗೆ ಇಳಿಯದ ಟಾಲಿವುಡ್ ಮಂದಿ ಒಂದೇ ಬಾರಿಗೆ ವೇದಿಕೆ ಮೇಲೆ ವಾರ್ ಶುರು ಮಾಡಿದ್ದು ಮಾತ್ರ ಬೇಸರದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...