Homeನ್ಯಾಯ ಪಥಚಿರಂಜೀವಿ ವರ್ಸಸ್ ರಾಜಶೇಖರ್. ಟಾಲಿವುಡ್‍ನಲ್ಲಿ ಮತ್ತೆ ಶುರುವಾಯ್ತಾ ಸ್ಟಾರ್‌ ವಾರ್?‌

ಚಿರಂಜೀವಿ ವರ್ಸಸ್ ರಾಜಶೇಖರ್. ಟಾಲಿವುಡ್‍ನಲ್ಲಿ ಮತ್ತೆ ಶುರುವಾಯ್ತಾ ಸ್ಟಾರ್‌ ವಾರ್?‌

- Advertisement -
- Advertisement -

ಸಿನಿಮಾರಂಗದಲ್ಲಿ ಸ್ಟಾರ್‍ವಾರ್ ಸದ್ದು ಹೊಸತೇನಲ್ಲ. ಆದರೂ ಇಂತಹ ಸ್ಟಾರ್‍ವಾರ್‍ಗಳಿಂದ ಕೊಂಚ ದೂರವೇ ಉಳಿದಿದ್ದದ್ದು ಟಾಲಿವುಡ್ ಮಾತ್ರ. ತೆಲುಗು ಚಿತ್ರರಂಗದ ಕಲಾವಿದರ ನಡುವಿನ ಸಾಮರಸ್ಯ ಬಹು ದೊಡ್ಡದು, ಏನೇ ಭಿನ್ನಾಭಿಪ್ರಾಯವಿದ್ದರೂ ಕೂಲ್‍ಆಗಿ ತಮ್ಮೊಳಗೇ ಬಗೆಹರಿಸಿಕೊಳ್ಳುತ್ತಾರೆ ಎಂಬ ಮೆಚ್ಚುಗೆ ಹರಿದಾಡುತ್ತಿತ್ತು.

ಆದರೆ ಅದೀಗ ಮೆಘಾಸ್ಟಾರ್ ಚಿರಂಜೀವಿ ಮತ್ತು ರಾಜಶೇಖರ್ ಮಾತಿನ ಚಕಮಕಿಯಿಂದ ವೇದಿಕೆಯ ಮೇಲೆಯೇ ಕಂಪಿಸುತ್ತಿದೆ. ಕಳೆದ ವಾರ ತೆಲುಗು ಇಂಡಸ್ಟ್ರಿಯ ಮೂವಿ ಆರ್ಟಿಸ್ಟ್ ಅಸೋಸಿಯೇಷನ್(ಮಾ)ನಿಂದ ಡೈರಿ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಚಿರಂಜೀವಿ “ನಾನು ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಭವನ ಉದ್ಘಾಟನೆಗೆ ಹೋಗಿದ್ದೆ. ಅಲ್ಲಿಯ ಭವನಕ್ಕೆ ಸರ್ಕಾರ ಭೂಮಿ ನೀಡಿದೆ. ಕಾರ್ಪೊರೇಟ್ ಸ್ಟೈಲ್‍ನಲ್ಲಿ ಥಿಯೇಟರ್, ರೂಮ್, ಕ್ಲಬ್, ಮೀಟಿಂಗ್ ಹಾಲ್‍ನಂತಹ ಹಲವು ಸೌಕರ್ಯಗಳನ್ನು ಹೊಂದಿದೆ” ಎಂದೆಲ್ಲಾ ಸ್ಯಾಂಡಲ್‍ವುಡ್‍ನ್ನು ಹೊಗಳಿದರು. ಅಷ್ಟೇಅಲ್ಲದೆ, ಅಂತದ್ದೇ ಸ್ಟೈಲ್‍ನಲ್ಲಿ ನಮ್ಮ “ಮಾ” ಸಂಘವನ್ನು ಕಟ್ಟೋಣ. ನಮ್ಮಲ್ಲಿ ಕೆಲವು ಸಣ್ಣ-ಪುಟ್ಟ ಸಮಸ್ಯೆಗಳಿವೆ, ಅವನ್ನೆಲ್ಲಾ ಸಮಾಧಾನದಿಂದ ಮಾತಾಡಿಕೊಂಡು ಬಗೆಹರಿಸಿಕೊಳ್ಳೋಣ, ಬಹಿರಂಗವಾಗಿ ವಾರ್‌ಗೆ ಇಳಿಯೋದು ಬೇಡ ಎಂದರು.

ಈ ಮಾತು ಕೇಳಿದ ರಾಜಶೇಖರ್ ಸ್ಟೇಜ್ ಮೇಲೆ ದೌಡಾಯಿಸಿ ಹಿರಿಯ ನಟ ಪರಚೂರಿ ಗೋಪಾಲಕೃಷ್ಣರ ಕೈಯಲ್ಲಿದ್ದ ಮೈಕ್ ಕಿತ್ತುಕೊಂಡು “ನೀವೇನೋ ಸಮಾಧಾನ ಮಾಡ್ಕಳಿ ಅಂತ ಹೇಳ್ತೀರಿ, ಹೆಂಗಪ್ಪಾ ಸಮಾಧಾನ ಮಾಡ್ಕಳದು. ‘ಮಾ’ ಉಪಾಧ್ಯಕ್ಷನಾದಾಗಿಂದ ಸಂಘಕ್ಕಾಗಿ ಸಿಕ್ಕಾಪಟ್ಟೆ ದುಡಿತಿದ್ದೀನಿ. ಉಪಾಧ್ಯಕ್ಷ ಆದಮೇಲೆ ಒಂದೇ ಒಂದು ಸಿನಿಮಾ ಮಾಡೋಕಾಗಿಲ್ಲ. ಮನೇಲಿ ಉಗಿತಿದ್ದಾರೆ. ಆದರೂ ಕಷ್ಟಪಟ್ಟು ದುಡಿತಿದ್ದೀನಿ. ‘ಮಾ’ ಒಳಗೆ ಗಲಾಟೆಗಳು ನಡೀತಿವೆ. ಏನನ್ನೂ ಬಹಿರಂಗವಾಗಿ ಮಾತನಾಡಲು ಅವಕಾಶ ಕೊಡಲ್ಲಾ. ರಿಯಲ್ ಲೈಫಲ್ಲೂ ಹೀರೋ ಆಗಿರೋ ನನ್ನ ಎಲ್ಲಾ ಸೇರಿ ನನ್ನ ತುಳಿತಿದ್ದಾರೆ” ಎಂದು ರೊಚ್ಚಿಗೆದ್ದು ಅಬ್ಬರಿಸಿದ್ದರು.

ರಾಜಶೇಖರ್ ಅಬ್ಬರಕ್ಕೆ ಬೆರಗಾದ ಚಿರಂಜೀವಿ “ನಮ್ಮ ಮಾತಿಗೆ ನೆಲೆ ಇಲ್ಲ, ನಮ್ಮ ಹಿರಿತನಕ್ಕೂ ಕಿಂಚಿತ್ತೂ ಕಿಮ್ಮತ್ತಿಲ್ಲದ ಕಡೆ ನಾವ್ಯಾಕೆ ಇರಬೇಕು? ಸಭೆಗೆ ಗೌರವ ಕೊಡದ ರಾಜಶೇಖರ್ ವಿರುದ್ಧ ಮಾ ಕ್ರಮ ಕೈಗೊಳ್ಳಬೇಕು ಎಂದು ರೋಷಾವೇಶ ವ್ಯಕ್ತಪಡಿಸಿದರು. ನೀವೇನಪ್ಪಾ ಕ್ರಮ ತಕೊಳದು ನಾನೇ ರಾಜಿನಾಮೆ ಕೊಡ್ತಿನಿ ಇಟ್ಕೊಳಿ ಅಂತ ರಾಜಶೇಖರ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟುಹೋಗಿದ್ದಾರೆ. ಏನೇ ಇರಲಿ ಶಾಂತಿದೂತರಂತೆ ಯಾವುದೇ ವಿಚಾರಕ್ಕೂ ಸ್ಟಾರ್‌ವಾರ್‌ಗೆ ಇಳಿಯದ ಟಾಲಿವುಡ್ ಮಂದಿ ಒಂದೇ ಬಾರಿಗೆ ವೇದಿಕೆ ಮೇಲೆ ವಾರ್ ಶುರು ಮಾಡಿದ್ದು ಮಾತ್ರ ಬೇಸರದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...