Homeನ್ಯಾಯ ಪಥಚಿರಂಜೀವಿ ವರ್ಸಸ್ ರಾಜಶೇಖರ್. ಟಾಲಿವುಡ್‍ನಲ್ಲಿ ಮತ್ತೆ ಶುರುವಾಯ್ತಾ ಸ್ಟಾರ್‌ ವಾರ್?‌

ಚಿರಂಜೀವಿ ವರ್ಸಸ್ ರಾಜಶೇಖರ್. ಟಾಲಿವುಡ್‍ನಲ್ಲಿ ಮತ್ತೆ ಶುರುವಾಯ್ತಾ ಸ್ಟಾರ್‌ ವಾರ್?‌

- Advertisement -
- Advertisement -

ಸಿನಿಮಾರಂಗದಲ್ಲಿ ಸ್ಟಾರ್‍ವಾರ್ ಸದ್ದು ಹೊಸತೇನಲ್ಲ. ಆದರೂ ಇಂತಹ ಸ್ಟಾರ್‍ವಾರ್‍ಗಳಿಂದ ಕೊಂಚ ದೂರವೇ ಉಳಿದಿದ್ದದ್ದು ಟಾಲಿವುಡ್ ಮಾತ್ರ. ತೆಲುಗು ಚಿತ್ರರಂಗದ ಕಲಾವಿದರ ನಡುವಿನ ಸಾಮರಸ್ಯ ಬಹು ದೊಡ್ಡದು, ಏನೇ ಭಿನ್ನಾಭಿಪ್ರಾಯವಿದ್ದರೂ ಕೂಲ್‍ಆಗಿ ತಮ್ಮೊಳಗೇ ಬಗೆಹರಿಸಿಕೊಳ್ಳುತ್ತಾರೆ ಎಂಬ ಮೆಚ್ಚುಗೆ ಹರಿದಾಡುತ್ತಿತ್ತು.

ಆದರೆ ಅದೀಗ ಮೆಘಾಸ್ಟಾರ್ ಚಿರಂಜೀವಿ ಮತ್ತು ರಾಜಶೇಖರ್ ಮಾತಿನ ಚಕಮಕಿಯಿಂದ ವೇದಿಕೆಯ ಮೇಲೆಯೇ ಕಂಪಿಸುತ್ತಿದೆ. ಕಳೆದ ವಾರ ತೆಲುಗು ಇಂಡಸ್ಟ್ರಿಯ ಮೂವಿ ಆರ್ಟಿಸ್ಟ್ ಅಸೋಸಿಯೇಷನ್(ಮಾ)ನಿಂದ ಡೈರಿ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಚಿರಂಜೀವಿ “ನಾನು ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಭವನ ಉದ್ಘಾಟನೆಗೆ ಹೋಗಿದ್ದೆ. ಅಲ್ಲಿಯ ಭವನಕ್ಕೆ ಸರ್ಕಾರ ಭೂಮಿ ನೀಡಿದೆ. ಕಾರ್ಪೊರೇಟ್ ಸ್ಟೈಲ್‍ನಲ್ಲಿ ಥಿಯೇಟರ್, ರೂಮ್, ಕ್ಲಬ್, ಮೀಟಿಂಗ್ ಹಾಲ್‍ನಂತಹ ಹಲವು ಸೌಕರ್ಯಗಳನ್ನು ಹೊಂದಿದೆ” ಎಂದೆಲ್ಲಾ ಸ್ಯಾಂಡಲ್‍ವುಡ್‍ನ್ನು ಹೊಗಳಿದರು. ಅಷ್ಟೇಅಲ್ಲದೆ, ಅಂತದ್ದೇ ಸ್ಟೈಲ್‍ನಲ್ಲಿ ನಮ್ಮ “ಮಾ” ಸಂಘವನ್ನು ಕಟ್ಟೋಣ. ನಮ್ಮಲ್ಲಿ ಕೆಲವು ಸಣ್ಣ-ಪುಟ್ಟ ಸಮಸ್ಯೆಗಳಿವೆ, ಅವನ್ನೆಲ್ಲಾ ಸಮಾಧಾನದಿಂದ ಮಾತಾಡಿಕೊಂಡು ಬಗೆಹರಿಸಿಕೊಳ್ಳೋಣ, ಬಹಿರಂಗವಾಗಿ ವಾರ್‌ಗೆ ಇಳಿಯೋದು ಬೇಡ ಎಂದರು.

ಈ ಮಾತು ಕೇಳಿದ ರಾಜಶೇಖರ್ ಸ್ಟೇಜ್ ಮೇಲೆ ದೌಡಾಯಿಸಿ ಹಿರಿಯ ನಟ ಪರಚೂರಿ ಗೋಪಾಲಕೃಷ್ಣರ ಕೈಯಲ್ಲಿದ್ದ ಮೈಕ್ ಕಿತ್ತುಕೊಂಡು “ನೀವೇನೋ ಸಮಾಧಾನ ಮಾಡ್ಕಳಿ ಅಂತ ಹೇಳ್ತೀರಿ, ಹೆಂಗಪ್ಪಾ ಸಮಾಧಾನ ಮಾಡ್ಕಳದು. ‘ಮಾ’ ಉಪಾಧ್ಯಕ್ಷನಾದಾಗಿಂದ ಸಂಘಕ್ಕಾಗಿ ಸಿಕ್ಕಾಪಟ್ಟೆ ದುಡಿತಿದ್ದೀನಿ. ಉಪಾಧ್ಯಕ್ಷ ಆದಮೇಲೆ ಒಂದೇ ಒಂದು ಸಿನಿಮಾ ಮಾಡೋಕಾಗಿಲ್ಲ. ಮನೇಲಿ ಉಗಿತಿದ್ದಾರೆ. ಆದರೂ ಕಷ್ಟಪಟ್ಟು ದುಡಿತಿದ್ದೀನಿ. ‘ಮಾ’ ಒಳಗೆ ಗಲಾಟೆಗಳು ನಡೀತಿವೆ. ಏನನ್ನೂ ಬಹಿರಂಗವಾಗಿ ಮಾತನಾಡಲು ಅವಕಾಶ ಕೊಡಲ್ಲಾ. ರಿಯಲ್ ಲೈಫಲ್ಲೂ ಹೀರೋ ಆಗಿರೋ ನನ್ನ ಎಲ್ಲಾ ಸೇರಿ ನನ್ನ ತುಳಿತಿದ್ದಾರೆ” ಎಂದು ರೊಚ್ಚಿಗೆದ್ದು ಅಬ್ಬರಿಸಿದ್ದರು.

ರಾಜಶೇಖರ್ ಅಬ್ಬರಕ್ಕೆ ಬೆರಗಾದ ಚಿರಂಜೀವಿ “ನಮ್ಮ ಮಾತಿಗೆ ನೆಲೆ ಇಲ್ಲ, ನಮ್ಮ ಹಿರಿತನಕ್ಕೂ ಕಿಂಚಿತ್ತೂ ಕಿಮ್ಮತ್ತಿಲ್ಲದ ಕಡೆ ನಾವ್ಯಾಕೆ ಇರಬೇಕು? ಸಭೆಗೆ ಗೌರವ ಕೊಡದ ರಾಜಶೇಖರ್ ವಿರುದ್ಧ ಮಾ ಕ್ರಮ ಕೈಗೊಳ್ಳಬೇಕು ಎಂದು ರೋಷಾವೇಶ ವ್ಯಕ್ತಪಡಿಸಿದರು. ನೀವೇನಪ್ಪಾ ಕ್ರಮ ತಕೊಳದು ನಾನೇ ರಾಜಿನಾಮೆ ಕೊಡ್ತಿನಿ ಇಟ್ಕೊಳಿ ಅಂತ ರಾಜಶೇಖರ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟುಹೋಗಿದ್ದಾರೆ. ಏನೇ ಇರಲಿ ಶಾಂತಿದೂತರಂತೆ ಯಾವುದೇ ವಿಚಾರಕ್ಕೂ ಸ್ಟಾರ್‌ವಾರ್‌ಗೆ ಇಳಿಯದ ಟಾಲಿವುಡ್ ಮಂದಿ ಒಂದೇ ಬಾರಿಗೆ ವೇದಿಕೆ ಮೇಲೆ ವಾರ್ ಶುರು ಮಾಡಿದ್ದು ಮಾತ್ರ ಬೇಸರದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...