HomeUncategorizedಪೌರತ್ವ ಕಾಯ್ದೆ ವಿರೋಧಿಸಿ ಬಿಜೆಪಿ ತೊರೆದ ಚಿತ್ರನಟ: ಸಿಎಬಿಗೆ ಭೈಚುಂಗ್ ಭುಟಿಯಾ ಅಸಮಾಧಾನ

ಪೌರತ್ವ ಕಾಯ್ದೆ ವಿರೋಧಿಸಿ ಬಿಜೆಪಿ ತೊರೆದ ಚಿತ್ರನಟ: ಸಿಎಬಿಗೆ ಭೈಚುಂಗ್ ಭುಟಿಯಾ ಅಸಮಾಧಾನ

- Advertisement -
- Advertisement -

ಪೌರತ್ವ ಕಾಯ್ದೆಗೆ ಮಾಡಿದ ತಿದ್ದುಪಡಿಗಳನ್ನು ವಿರೋಧಿಸಿ ನಟ ಮತ್ತು ರಾಜಕಾರಣಿ ಜತಿನ್ ಬೋರಾ ಗುರುವಾರ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಅಸ್ಸಾಂ ರಾಜ್ಯ ಚಲನಚಿತ್ರ ಹಣಕಾಸು ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನವನ್ನು ಅವರು ತ್ಯಜಿಸಿದ್ದಾರೆ.

ಗುವಾಹಟಿಯ ಲತಾಸಿಲ್ ಮೈದಾನದಲ್ಲಿ ಸಾವಿರಾರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು “ನಾನು ಸಿಎಬಿಯನ್ನು ಸ್ವೀಕರಿಸುವುದಿಲ್ಲ” ಎಂದು ಹೇಳಿದ್ದಾರೆ.  “ಅಸ್ಸಾಂನ ಜನರಿಂದಾಗಿ ನಾನು ಮೇಲೆ ಬಂದಿದ್ದು, ನಾನು ಈ ವಿಷಯದಲ್ಲಿ ಅವರೊಂದಿಗೆ ಇದ್ದೇನೆ.” ಎಂದಿದ್ದಾರೆ.

ತೀವ್ರ ಪ್ರತಿಭಟನೆಯ ನಂತರ ಸರ್ಕಾರವು ಮಸೂದೆಯನ್ನು ಹಿಂತೆಗೆದುಕೊಳ್ಳುತ್ತದೆ ಎಂದು ನಾನು ಭಾವಿಸಿದ್ದೆ. ಆದರೆ ಅದು ಅದನ್ನು ಅಂಗೀಕರಿಸಿತು ಎಂದ ಅವರು ನಾನು ಪಕ್ಷದ ಸದಸ್ಯನಾದ ಕಾರಣಕ್ಕೆ ಅದು ಹೇಳುವ ಎಲ್ಲವನ್ನೂ ನಾನು ಬೆಂಬಲಿಸುವುದಿಲ್ಲ. ನಾನು ಸಿಎಬಿಯನ್ನು ವಿರೋಧಿಸುತ್ತೇನೆ ಮತ್ತು ನಾನು ಅದರ ವಿರುದ್ಧ ಪ್ರತಿಭಟಿಸುತ್ತಲೇ ಇರುತ್ತೇನೆ ಎಂದಿದ್ದಾರೆ.

ಮಸೂದೆಯನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಿದ ನಂತರ ಮತ್ತೊಬ್ಬ ಅಸ್ಸಾಮಿ ನಟ ರವಿ ಶರ್ಮಾ ಕೂಡ ರಾಜೀನಾಮೆ ನೀಡಿದ್ದರು. ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಜಹ್ನು ಬರುವಾ ಅವರು 8 ನೇ ಅಸ್ಸಾಂ ರಾಜ್ಯ ಚಲನಚಿತ್ರ ಪ್ರಶಸ್ತಿ ಮತ್ತು ಈ ವರ್ಷದ ಚಲನಚಿತ್ರೋತ್ಸವದಿಂದ ಪೌರತ್ವ ಕಾಯ್ದೆಯ ತಿದ್ದುಪಡಿಗಳನ್ನು ವಿರೋಧಿಸಿ ತಮ್ಮ ಚಲನಚಿತ್ರವನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಸಿಂಗರ್ ಪಾಪನ್ ಅವರು ಗುರುವಾರ ದೆಹಲಿಯಲ್ಲಿ ಅವರ ಸಂಗೀತ ಕಚೇರಿಯನ್ನು ರದ್ದುಗೊಳಿಸಿದ್ದರು. ಅವರು “ತವರು ರಾಜ್ಯ ಅಸ್ಸಾಂ ಉರಿಯುತ್ತಿದೆ, ಅಳುತ್ತಿದೆ ಮತ್ತು ಕರ್ಫ್ಯೂ ಅಡಿಯಲ್ಲಿದೆ” ಎಂದು ಹೇಳಿದ್ದರು.

ಪೌರತ್ವ ತಿದ್ದುಪಡಿ ಕಾಯ್ದೆ ಸಿಕ್ಕಿಂನ ಸ್ಥಳೀಯ ಜನರ ವಿರುದ್ಧವಿದೆ: ಭೈಚುಂಗ್ ಭೂಟಿಯಾ
ಪೌರತ್ವ ತಿದ್ದುಪಡಿ ಮಸೂದೆ ಕಾನೂನಾಗಿ ಮಾರ್ಪಟ್ಟ ನಂತರ ಹಿಮಾಲಯ ರಾಜ್ಯದಲ್ಲಿ ವಿದೇಶಿಯರು ಮತ್ತು ಇತರ ರಾಜ್ಯಗಳ ಜನರ ಅಕ್ರಮ ನುಸುಳುವಿಕೆ ತೀವ್ರವಾಗಲಿದೆ ಎಂದು ಹೆಸರಾಂತ ಫುಟ್ಬಾಲ್ ಆಟಗಾರ ಭೈಚುಂಗ್ ಭುಟಿಯಾ ಆತಂಕ ವ್ಯಕ್ತಪಡಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯು ಸಿಕ್ಕಿಂನ ಸ್ಥಳೀಯ ಜನರ ಹಿತಾಸಕ್ತಿಗೆ ಮತ್ತು ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 371 (ಎಫ್) ವಿಧಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...