Homeಕರ್ನಾಟಕರಂಜನ್ ಗಗೋಯಿರವರಿಗೆ ಕ್ಲೀನ್ ಚಿಟ್ ವಿರುದ್ಧ ರಾಷ್ಟ್ರದ್ಯಂತ ಪ್ರತಿಭಟನೆ

ರಂಜನ್ ಗಗೋಯಿರವರಿಗೆ ಕ್ಲೀನ್ ಚಿಟ್ ವಿರುದ್ಧ ರಾಷ್ಟ್ರದ್ಯಂತ ಪ್ರತಿಭಟನೆ

- Advertisement -
- Advertisement -

ಇಂಗ್ಲಿಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸುಪ್ರಿಂ ಕೋರ್ಟ್‍ನ ಮುಖ್ಯ ನ್ಯಾಯಾಮೂರ್ತಿ ರಂಜನ್ ಗೊಗಯಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಪ್ರಕರಣ ದಿನೇ ದಿನೇ ತಿರುವು ಪಡೆದುಕೊಳ್ಳುತ್ತಿದೆ. ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಾಧೀಶರ ಸಮಿತಿಯು ಸಮರ್ಪಕವಾಗಿ ವಿಚಾರಣೆ ನಡೆಸದೇ ಪ್ರಕರಣವನ್ನು ವಜಾ ಗೊಳಿಸಿರುವುದು ಸರಿಯಲ್ಲ ಎಂದು ಆರೋಪ ದೇಶದೆಲ್ಲೆಡೆ ಕೇಳಿ ಬರುತ್ತಿದ್ದು ಪ್ರತಿಭಟನೆಗಳು ನಡೆದಿವೆ. ಈ ವಿಷಯವಾಗಿ ಬೆಂಗಳೂರಿನಲ್ಲಿ ಗುರುವಾರ ವಕೀಲರು, ಕಾನೂನು ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಾಧೀಶ ರಂಜನ್ ಗೊಗಯಿ ಅವರ ಮೇಲೆ ಸುಪ್ರೀಂ ಕೋರ್ಟ್‍ನಲ್ಲಿ ಕೆಲಸ ಮಾಡಿದ್ದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಇತ್ತೀಚೆಗೆ ದೂರು ನೀಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಾಧೀಶರ ಸಮಿತಿಯು ‘ಈ ಆರೋಪದಲ್ಲಿ ಹುರುಳಿಲ್ಲ’ ಎಂದು ವರದಿ ನೀಡಿ, ರಂಜನ್ ಗಗೋಯ್ ರವರಿಗೆ ಕ್ಲೀನ್ ಚಿಟ್ ನೀಡಿತ್ತು.

‘ಸುಪ್ರೀಂ ಕೋರ್ಟ್‍ನ ವಿಶ್ವಾಸಾರ್ಹತೆಯ ಗಂಭೀರ ಬಿಕ್ಕಟ್ಟಿನಲ್ಲಿದೆ. ನ್ಯಾಯಾಲಯವು ದೂರುದಾರರ ದೂರನ್ನು ಸರಿಯಾದ ರೀತಿಯಲ್ಲಿ ಆಲಿಸುವಲ್ಲಿ ವಿಫಲವಾಗಿದೆ. ದೂರುದಾರಳ ಬೇಡಿಕೆಯಾದ ‘ವಿಶೇಷ ವಿಚಾರಣಾ ಸಮಿತಿ’ಯನ್ನು ಕಡೆಗಣಿಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಕಿರಿಯರಾದ (ಜೂನಿಯರ್ಸ್) ನ್ಯಾಯಮೂರ್ತಿಗಳನ್ನು ಒಳಗೊಂಡ ಇನ್-ಹೌಸ್ ಸಮಿತಿಯನ್ನು ರಚಿಸಿತು. ಈ ಸಮಿತಿ 2019ರ ಮೇ 6 ರಂದು ‘ದೂರಿನಲ್ಲಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ’ ಎನ್ನುವ ತೀರ್ಮಾನ ನೀಡಿದ್ದಕ್ಕೆ ಆಶ್ಚರ್ಯ ಪಡಬೇಕಿಲ್ಲ.’ ಎಂದು ಪ್ರತಿಭಟನೆಯಲ್ಲಿ ಭಾಗಿಯಾದ ವಕೀಲರಾದ ವಿನಯ್ ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸುತ್ತಾರೆ.

ವಿನಯ್ ಶ್ರೀನಿವಾಸನ್

‘ನಾವೆಲ್ಲ ದೂರುದಾರ ಮಹಿಳೆಯೊಂದಿಗೆ ಐಕ್ಯಮತವಾಗಿ ನಿಂತುಕೊಳ್ಳುತ್ತೇವೆ. ಒಂದು ಸ್ವತಂತ್ರ ಮತ್ತು ನ್ಯಾಯಸಮ್ಮತ ವಿಚಾರಣೆಯ ನೀತಿನಿಯಮಗಳನ್ನು ಪಾಲಿಸದೇ ಸಮಿತಿ ನೀಡಿದ ತೀರ್ಮಾನವನ್ನು ತಿರಸ್ಕರಿಸುತ್ತೇವೆ. ಈ ಪ್ರಕರಣದಲ್ಲಿ ಪಾಲಿಸಲಾದ ಪ್ರಕ್ರಿಯೆಯಲ್ಲಿ ಬರೀ ಸ್ವಾಭಾವಿಕ ನ್ಯಾಯದ ತತ್ವಗಳನ್ನು ಮಾತ್ರ ಉಲ್ಲಂಘನೆಯಾಗದೇ ವಿಶಾಖ ತೀರ್ಪಿನ ಚೈತನ್ಯ ಮತ್ತು ಅದರಿಂದ ರೂಪಿಸಲಾದ ನೀತಿಗಳ ಉಲ್ಲಂಘನೆಯೂ ಆಗಿದೆ. ಇಷ್ಟೇ ಅಲ್ಲದೇ ಕೆಲಸ ಮಾಡುವ ಸ್ಥಳಗಳಲ್ಲಿ ಆಗುವ ಅಧಿಕಾರದ ಅಸಮತೋಲನಗಳನ್ನು ಗುರುತಿಸಿ ಅದನ್ನು ಸರಿಪಡಿಸಲು ಇರುವ ಸೆಕ್ಷುವಲ್ ಹ್ಯಾರ್ಯಾಸ್‍ಮೆಂಟ್ ಆಫ್ ವಿಮೆನ್ ಎಟ್ ವಕ್‍ಪ್ಲೇಸ್ ಆ್ಯಕ್ಟ್ 2013 (POSH ACT) ನ ಉಲ್ಲಂಘನೆಯೂ ಆಗಿದೆ’ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

 

ಇದನ್ನು ಓದಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

ನಾವೆಲ್ಲರೂ ನ್ಯಾಯಾಂಗದ ಸ್ವಾತಂತ್ರ ಮತ್ತು ಸ್ವಾಯತ್ತತೆಯ ಪರವಾಗಿದ್ದು, ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುತ್ತೇವೆ ಮತ್ತು ಗೌರವಿಸುತ್ತೇವೆ. ಆದರೆ ನಾವು ನ್ಯಾಯಾಂಗ ವ್ಯವಸ್ಥೆಯಲ್ಲಿ ಆಗುವ ಲೋಪದೋಷಗಳನ್ನು ಗುರುತಿಸಿ ಅವುಗಳನ್ನು ತೋರಿಸುವುದರಲ್ಲಿಯೂ ನಂಬಿಕೆ ಇಡುತ್ತೇವೆ, ಅದರಿಂದ ಲೋಪದೋಷಗಳನ್ನು ತಿದ್ದುಕೊಳ್ಳಲು ಸಹಾಯ ಆಗಿ ನ್ಯಾಯಾಂಗದ ಸ್ವಾತಂತ್ರದ ರಕ್ಷಣೆ ಆಗುತ್ತದೆಯೇ ಹೊರತು ಅದರ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದಂತೆ ಆಗುವುದಿಲ್ಲ. ನಮ್ಮ ದೇಶದ ಅತ್ಯುನ್ನತ ಸಾಂವಿಧಾನಿಕ ಪ್ರಾಧಿಕಾರವಾದ ಭಾರತದ ಸುಪ್ರೀಮ್ ಕೋರ್ಟಿನಿಂದ ಆದ ಅಧಿಕಾರದ ಈ ಸ್ಪಷ್ಟ ದುರ್ಬಳಕೆಯಿಂದ ನಮಗೆ ಹತಾಶೆ ಆಘಾತವಾಗಿದೆ ಎನ್ನುತ್ತಾರೆ ಪ್ರತಿಭಟನಾಕಾರರು.

ಸುಪ್ರೀಂ ಕೋರ್ಟ್ ತಾನು ಮಾಡಿದ ತಪ್ಪನ್ನು ತಿದ್ದಬೇಕು ಎಂದು ನಾವು ಆಗ್ರಹಿಸುತ್ತೇವೆ ಹಾಗೂ ದೂರುದಾರರ ಮೇಲೆ ಆಗಿರುವ ಘೋರ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸುತ್ತೇವೆ. ಸ್ಪಷ್ಟವಾದ ಕಾರ್ಯವಿಧಾನಗಳ ಅನುಪಸ್ಥಿತಿಯಲ್ಲಿ, ಸಹಜ ನ್ಯಾಯದ ತತ್ವಗಳನ್ನು ಪಾಲಿಸದೇ ಹಾಗೂ ದೂರುದಾರರ ಪರಿಣಾಮಕಾರಿಯಾದ ಪ್ರಾತಿನಿಧ್ಯ ಇಲ್ಲದೇ ಆಗಿರುವ ಈ ವರದಿ (ಇದನ್ನು ಸಾರ್ವಜನಿಕಗೊಳಿಸದೇ ಇದ್ದರೂ) ಯನ್ನು ಈ ವಿಷಯಕ್ಕೆ ಸಂಬಂಧಪಟ್ಟಂತೆ ಇದೇ ಕೊನೆಯ ಮತ್ತು ಅಂತಿಮ ತೀರ್ಪು ಎಂದು ಒಪ್ಪಿಕೊಳ್ಳಲಾಗದು ಎಂದರು.

ಪ್ರತಿಭಟನಾಕಾರರು ಸುಪ್ರೀಂ ಕೋರ್ಟಿನ ಮುಂದಿಟ್ಟಿರುವ ಹಕ್ಕೊತ್ತಾಯಗಳು ಕೆಳಗಿನಂತಿವೆ.

1. ದೂರುದಾರರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಸುಪ್ರೀಂ ಕೋಟ್‍ನ ಪೂರ್ಣ ಪೀಠ ಸೂಕ್ತ ಕ್ರಮ ತೆಗೆದುಕೊಳ್ಳುವ ಮೂಲಕ ಸುಪ್ರೀಂಕೋರ್ಟ್ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಪುನರ್‍ಗಳಿಸಬೇಕು.
2. ವಿಶಾಖ ಗೈಡ್‍ಲೈನ್ಸ್, POSH ACT ಬದ್ಧವಾಗಿರುವಂತಹ ಹೊಸ ಸಮಿತಿಯನ್ನು ಸೂಕ್ತ ಪ್ರಕ್ರಿಯೆಯ ಮೂಲಕ ರಚಿಸಿ ದೂರುದಾರರ ಹಿತಾಸಕ್ತಿಯನ್ನು ಕಾಪಾಡಬೇಕು.
3. ಜಸ್ಟೀಸ್ ಬಾಬ್ಡೆ ಪ್ಯಾನಲ್ ವರದಿಯ ಪ್ರತಿಯೊಂದನ್ನು ದೂರುದಾರರಿಗೆ ನೀಡಬೇಕು
4. ದೂರುದಾರರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು
5. ರಚಿಸಬೇಕಿರುವ ಹೊಸ ಸಮಿತಿಗೆ ದಲಿತ ಸಮುದಾಯಕ್ಕೆ ಸೇರಿದ ಒಬ್ಬರಾದರೂ ನ್ಯಾಯಾಂಗ (ವಕೀಲರು/ನ್ಯಾಯಾಧೀಶರು/ನಿವೃತ್ತ ನ್ಯಾಯಾಧೀಶರು) ವ್ಯಕ್ತಿಯನ್ನು ನೇಮಿಸಬೇಕು.
6. ಎಸ್‍ಸಿ/ಎಸ್‍ಟಿ/ಒಬಿಸಿ ಸಮುದಾಯಕ್ಕೆ ಸೇರಿದ ವ್ಯಕ್ತಿಗಳಿಗೆ ನ್ಯಾಯಾಂಗದ ಉನ್ನತ ಸ್ಥಾನಗಳಲ್ಲಿ ಮೀಸಲಾತಿಯನ್ನು ಒದಗಿಸಬೇಕು
ಈ ಮೊಕದ್ದಮೆಗೆ ಸಂಬಂಧಿಸಿ ನ್ಯಾ.ಚಂದ್ರಚೂಡ್ ಅವರ ಸಲಹೆಗಳನ್ನು ನಾವು ಅನುಮೋದಿಸುತ್ತೇವೆ.
7. ಹೊಸ ಸಮಿತಿಗೆ ನಿವೃತ್ತ ಮಹಿಳಾ ನ್ಯಾಯಾಧೀಶರನ್ನು ಬಾಹ್ಯ ಸದಸ್ಯರಾಗಿ ಕಡ್ಡಾಯವಾಗಿ ನೇಮಕ ಮಾಡಬೇಕು
8. ಬಾರ್ ಕೌನ್ಸಿಲ್‍ನ ಗೌರವಾನ್ವಿತ ಮಹಿಳಾ ಸದಸ್ಯರನ್ನು ಅಮಿಕಸ್ ಕ್ಯೂರಿ (ಕೋರ್ಟ್‍ನ ಸ್ನೇಹಿತರು) ಎಂದು ಪರಿಗಣಿಸಬೇಕು
9. ದೂರುದಾರರು ಮುಂದಿಟ್ಟಿರುವ ಕುಂದುಕೊರತೆಗಳನ್ನು, ಅದರಲ್ಲೂ ವಕೀಲರೊಬ್ಬರ ನೆರವನ್ನು ಪಡೆಯುವಂತಹವನ್ನು ಪರಿಗಣಿಸಿ ಪರಿಹಾರ ಕಲ್ಪಿಸಬೇಕು.

ಪ್ರತಿಭಟನೆಗೆ ಭಾಗವಹಿಸಿದ, ಬೆಂಬಲಿಸಿದ ಸಂಘಟನೆಗಳು

ಸಿಐಇಡಿಎಸ್ ಕಲೆಕ್ಟಿವ್, ಬೆಂಗಳೂರು
2. ಪರ್ಯಾಯ ಕಾನೂನು ವೇದಿಕೆ, ಬೆಂಗಳೂರು
3. ನ್ಯಾಷನಲ್ ನೆಟ್‍ವರ್ಕ್ ಆಫ್ ಸೆಕ್ಸ್ ವರ್ಕರ್ಸ್
4. ಕರ್ನಾಟಕ ಜನಾರೋಗ್ಯ ಚಳವಳಿ
5. ವಂಪ್
6. ಮುಸ್ಕಾನ್
7. ಕರ್ನಾಟಕ ಸೆಕ್ಸ್ ವರ್ಕ್‍ರ್ಸ್ ಯೂನಿಯನ್
8. ಸ್ತ್ರೀ ಜಾಗೃತಿ ಸಮಿತಿ
9. ಡೊಮೆಸ್ಟಿಕ್ ವರ್ಕ್‍ರ್ಸ್ ರೈಟ್ಸ್ ಯೂನಿಯನ್
10. ಮಹಿಳಾ ಮುನ್ನಡೆ
11. ಕರ್ನಾಟಕ ಜನಶಕ್ತಿ
12. ಸಂವಿಧಾನ ಉಳಿವಿಗಾಗಿ ಕರ್ನಾಟಕ
13. ಸೌಥ್ ಇಂಡಿಯಾ ಸೆಲ್ ಫಾರ್ ಹ್ಯುಮನ್ ರೈಟ್ಸ್, ಎಡುಕೇಷನ್ ಅಂಡ್ ಮಾನಿಟರಿಂಗ್ (ಎಸ್‍ಐಸಿಎಚ್‍ಆರ್‍ಇಎಂ)
14. ರಾಮದಾಸ್ ರಾವ್
15. ತಾರಾ ಕೃಷ್ಣಮೂರ್ತಿ, ಕೋ ಫೌಂಡರ್, ಶಕ್ತಿ – ಪೊಲಿಟಿಕಲ್ ಪವರ್ ಟು ವುಮೆನ್
16. ಗಮನ ವರ್ಕರ್ಸ್ ಕಲೆಕ್ಟಿವ್, ಬೆಂಗಳೂರು
17. ಸಾಧನ ಮಹಿಳೆಯರ ಸಂಘ, ಬೆಂಗಳೂರು
18. ಲೈಂಗಿಕ ಹಿಂಸೆಯ ವಿರೋಧಿ ಜನಚಳವಳಿ
19. ಕರ್ನಾಟಕ ಗಾರ್ಮೆಂಟ್ಸ್ ವರ್ಕರ್ಸ್ ಯೂನಿಯನ್ (ಏಔಔಉU)
20. ಸೌತ್ ಇಂಡಿಯಾ ಫೆಡೆರೇಷನ್ ಆಫ್ ಟ್ರೇಡ್ ಯೂನಿಯನ್ಸ್ (SIಈಖಿU)
21. ಂIಏಙಂಖಿಂ (ಸೀನಿಯರ್ ಸಿಟಿಜನ್ಸ್ ಗ್ರೂಪ್)
22. ಮನೆಗೆಲಸ ಕಾರ್ಮಿಕರ ಯೂನಿಯನ್ (ಒಂಏಂಂಙU)
23. ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕರ ಯೂನಿಯನ್ (ಂಏಏಏU)
24. ಫೆಡಿನಾ
25. ರಾಜೇಶ್, ಉಮಾದೇವಿ, ಶ್ರೀನಿವಾಸ್

‘ನ್ಯಾಯಾಧೀಶರೇ ಆರೋಪಿಯಾದರೆ… ವಿಚಾರಣಾ ಪೀಠದಲ್ಲಿ ಸ್ವತಃ ನ್ಯಾಯಮೂರ್ತಿಯಾಗಿ ಕುಳಿತರೇ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...