Homeಕರ್ನಾಟಕರಂಜನ್ ಗಗೋಯಿರವರಿಗೆ ಕ್ಲೀನ್ ಚಿಟ್ ವಿರುದ್ಧ ರಾಷ್ಟ್ರದ್ಯಂತ ಪ್ರತಿಭಟನೆ

ರಂಜನ್ ಗಗೋಯಿರವರಿಗೆ ಕ್ಲೀನ್ ಚಿಟ್ ವಿರುದ್ಧ ರಾಷ್ಟ್ರದ್ಯಂತ ಪ್ರತಿಭಟನೆ

- Advertisement -
- Advertisement -

ಇಂಗ್ಲಿಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸುಪ್ರಿಂ ಕೋರ್ಟ್‍ನ ಮುಖ್ಯ ನ್ಯಾಯಾಮೂರ್ತಿ ರಂಜನ್ ಗೊಗಯಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಪ್ರಕರಣ ದಿನೇ ದಿನೇ ತಿರುವು ಪಡೆದುಕೊಳ್ಳುತ್ತಿದೆ. ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಾಧೀಶರ ಸಮಿತಿಯು ಸಮರ್ಪಕವಾಗಿ ವಿಚಾರಣೆ ನಡೆಸದೇ ಪ್ರಕರಣವನ್ನು ವಜಾ ಗೊಳಿಸಿರುವುದು ಸರಿಯಲ್ಲ ಎಂದು ಆರೋಪ ದೇಶದೆಲ್ಲೆಡೆ ಕೇಳಿ ಬರುತ್ತಿದ್ದು ಪ್ರತಿಭಟನೆಗಳು ನಡೆದಿವೆ. ಈ ವಿಷಯವಾಗಿ ಬೆಂಗಳೂರಿನಲ್ಲಿ ಗುರುವಾರ ವಕೀಲರು, ಕಾನೂನು ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಾಧೀಶ ರಂಜನ್ ಗೊಗಯಿ ಅವರ ಮೇಲೆ ಸುಪ್ರೀಂ ಕೋರ್ಟ್‍ನಲ್ಲಿ ಕೆಲಸ ಮಾಡಿದ್ದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಇತ್ತೀಚೆಗೆ ದೂರು ನೀಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಾಧೀಶರ ಸಮಿತಿಯು ‘ಈ ಆರೋಪದಲ್ಲಿ ಹುರುಳಿಲ್ಲ’ ಎಂದು ವರದಿ ನೀಡಿ, ರಂಜನ್ ಗಗೋಯ್ ರವರಿಗೆ ಕ್ಲೀನ್ ಚಿಟ್ ನೀಡಿತ್ತು.

‘ಸುಪ್ರೀಂ ಕೋರ್ಟ್‍ನ ವಿಶ್ವಾಸಾರ್ಹತೆಯ ಗಂಭೀರ ಬಿಕ್ಕಟ್ಟಿನಲ್ಲಿದೆ. ನ್ಯಾಯಾಲಯವು ದೂರುದಾರರ ದೂರನ್ನು ಸರಿಯಾದ ರೀತಿಯಲ್ಲಿ ಆಲಿಸುವಲ್ಲಿ ವಿಫಲವಾಗಿದೆ. ದೂರುದಾರಳ ಬೇಡಿಕೆಯಾದ ‘ವಿಶೇಷ ವಿಚಾರಣಾ ಸಮಿತಿ’ಯನ್ನು ಕಡೆಗಣಿಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಕಿರಿಯರಾದ (ಜೂನಿಯರ್ಸ್) ನ್ಯಾಯಮೂರ್ತಿಗಳನ್ನು ಒಳಗೊಂಡ ಇನ್-ಹೌಸ್ ಸಮಿತಿಯನ್ನು ರಚಿಸಿತು. ಈ ಸಮಿತಿ 2019ರ ಮೇ 6 ರಂದು ‘ದೂರಿನಲ್ಲಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ’ ಎನ್ನುವ ತೀರ್ಮಾನ ನೀಡಿದ್ದಕ್ಕೆ ಆಶ್ಚರ್ಯ ಪಡಬೇಕಿಲ್ಲ.’ ಎಂದು ಪ್ರತಿಭಟನೆಯಲ್ಲಿ ಭಾಗಿಯಾದ ವಕೀಲರಾದ ವಿನಯ್ ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸುತ್ತಾರೆ.

ವಿನಯ್ ಶ್ರೀನಿವಾಸನ್

‘ನಾವೆಲ್ಲ ದೂರುದಾರ ಮಹಿಳೆಯೊಂದಿಗೆ ಐಕ್ಯಮತವಾಗಿ ನಿಂತುಕೊಳ್ಳುತ್ತೇವೆ. ಒಂದು ಸ್ವತಂತ್ರ ಮತ್ತು ನ್ಯಾಯಸಮ್ಮತ ವಿಚಾರಣೆಯ ನೀತಿನಿಯಮಗಳನ್ನು ಪಾಲಿಸದೇ ಸಮಿತಿ ನೀಡಿದ ತೀರ್ಮಾನವನ್ನು ತಿರಸ್ಕರಿಸುತ್ತೇವೆ. ಈ ಪ್ರಕರಣದಲ್ಲಿ ಪಾಲಿಸಲಾದ ಪ್ರಕ್ರಿಯೆಯಲ್ಲಿ ಬರೀ ಸ್ವಾಭಾವಿಕ ನ್ಯಾಯದ ತತ್ವಗಳನ್ನು ಮಾತ್ರ ಉಲ್ಲಂಘನೆಯಾಗದೇ ವಿಶಾಖ ತೀರ್ಪಿನ ಚೈತನ್ಯ ಮತ್ತು ಅದರಿಂದ ರೂಪಿಸಲಾದ ನೀತಿಗಳ ಉಲ್ಲಂಘನೆಯೂ ಆಗಿದೆ. ಇಷ್ಟೇ ಅಲ್ಲದೇ ಕೆಲಸ ಮಾಡುವ ಸ್ಥಳಗಳಲ್ಲಿ ಆಗುವ ಅಧಿಕಾರದ ಅಸಮತೋಲನಗಳನ್ನು ಗುರುತಿಸಿ ಅದನ್ನು ಸರಿಪಡಿಸಲು ಇರುವ ಸೆಕ್ಷುವಲ್ ಹ್ಯಾರ್ಯಾಸ್‍ಮೆಂಟ್ ಆಫ್ ವಿಮೆನ್ ಎಟ್ ವಕ್‍ಪ್ಲೇಸ್ ಆ್ಯಕ್ಟ್ 2013 (POSH ACT) ನ ಉಲ್ಲಂಘನೆಯೂ ಆಗಿದೆ’ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

 

ಇದನ್ನು ಓದಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

ನಾವೆಲ್ಲರೂ ನ್ಯಾಯಾಂಗದ ಸ್ವಾತಂತ್ರ ಮತ್ತು ಸ್ವಾಯತ್ತತೆಯ ಪರವಾಗಿದ್ದು, ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುತ್ತೇವೆ ಮತ್ತು ಗೌರವಿಸುತ್ತೇವೆ. ಆದರೆ ನಾವು ನ್ಯಾಯಾಂಗ ವ್ಯವಸ್ಥೆಯಲ್ಲಿ ಆಗುವ ಲೋಪದೋಷಗಳನ್ನು ಗುರುತಿಸಿ ಅವುಗಳನ್ನು ತೋರಿಸುವುದರಲ್ಲಿಯೂ ನಂಬಿಕೆ ಇಡುತ್ತೇವೆ, ಅದರಿಂದ ಲೋಪದೋಷಗಳನ್ನು ತಿದ್ದುಕೊಳ್ಳಲು ಸಹಾಯ ಆಗಿ ನ್ಯಾಯಾಂಗದ ಸ್ವಾತಂತ್ರದ ರಕ್ಷಣೆ ಆಗುತ್ತದೆಯೇ ಹೊರತು ಅದರ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದಂತೆ ಆಗುವುದಿಲ್ಲ. ನಮ್ಮ ದೇಶದ ಅತ್ಯುನ್ನತ ಸಾಂವಿಧಾನಿಕ ಪ್ರಾಧಿಕಾರವಾದ ಭಾರತದ ಸುಪ್ರೀಮ್ ಕೋರ್ಟಿನಿಂದ ಆದ ಅಧಿಕಾರದ ಈ ಸ್ಪಷ್ಟ ದುರ್ಬಳಕೆಯಿಂದ ನಮಗೆ ಹತಾಶೆ ಆಘಾತವಾಗಿದೆ ಎನ್ನುತ್ತಾರೆ ಪ್ರತಿಭಟನಾಕಾರರು.

ಸುಪ್ರೀಂ ಕೋರ್ಟ್ ತಾನು ಮಾಡಿದ ತಪ್ಪನ್ನು ತಿದ್ದಬೇಕು ಎಂದು ನಾವು ಆಗ್ರಹಿಸುತ್ತೇವೆ ಹಾಗೂ ದೂರುದಾರರ ಮೇಲೆ ಆಗಿರುವ ಘೋರ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸುತ್ತೇವೆ. ಸ್ಪಷ್ಟವಾದ ಕಾರ್ಯವಿಧಾನಗಳ ಅನುಪಸ್ಥಿತಿಯಲ್ಲಿ, ಸಹಜ ನ್ಯಾಯದ ತತ್ವಗಳನ್ನು ಪಾಲಿಸದೇ ಹಾಗೂ ದೂರುದಾರರ ಪರಿಣಾಮಕಾರಿಯಾದ ಪ್ರಾತಿನಿಧ್ಯ ಇಲ್ಲದೇ ಆಗಿರುವ ಈ ವರದಿ (ಇದನ್ನು ಸಾರ್ವಜನಿಕಗೊಳಿಸದೇ ಇದ್ದರೂ) ಯನ್ನು ಈ ವಿಷಯಕ್ಕೆ ಸಂಬಂಧಪಟ್ಟಂತೆ ಇದೇ ಕೊನೆಯ ಮತ್ತು ಅಂತಿಮ ತೀರ್ಪು ಎಂದು ಒಪ್ಪಿಕೊಳ್ಳಲಾಗದು ಎಂದರು.

ಪ್ರತಿಭಟನಾಕಾರರು ಸುಪ್ರೀಂ ಕೋರ್ಟಿನ ಮುಂದಿಟ್ಟಿರುವ ಹಕ್ಕೊತ್ತಾಯಗಳು ಕೆಳಗಿನಂತಿವೆ.

1. ದೂರುದಾರರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಸುಪ್ರೀಂ ಕೋಟ್‍ನ ಪೂರ್ಣ ಪೀಠ ಸೂಕ್ತ ಕ್ರಮ ತೆಗೆದುಕೊಳ್ಳುವ ಮೂಲಕ ಸುಪ್ರೀಂಕೋರ್ಟ್ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಪುನರ್‍ಗಳಿಸಬೇಕು.
2. ವಿಶಾಖ ಗೈಡ್‍ಲೈನ್ಸ್, POSH ACT ಬದ್ಧವಾಗಿರುವಂತಹ ಹೊಸ ಸಮಿತಿಯನ್ನು ಸೂಕ್ತ ಪ್ರಕ್ರಿಯೆಯ ಮೂಲಕ ರಚಿಸಿ ದೂರುದಾರರ ಹಿತಾಸಕ್ತಿಯನ್ನು ಕಾಪಾಡಬೇಕು.
3. ಜಸ್ಟೀಸ್ ಬಾಬ್ಡೆ ಪ್ಯಾನಲ್ ವರದಿಯ ಪ್ರತಿಯೊಂದನ್ನು ದೂರುದಾರರಿಗೆ ನೀಡಬೇಕು
4. ದೂರುದಾರರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು
5. ರಚಿಸಬೇಕಿರುವ ಹೊಸ ಸಮಿತಿಗೆ ದಲಿತ ಸಮುದಾಯಕ್ಕೆ ಸೇರಿದ ಒಬ್ಬರಾದರೂ ನ್ಯಾಯಾಂಗ (ವಕೀಲರು/ನ್ಯಾಯಾಧೀಶರು/ನಿವೃತ್ತ ನ್ಯಾಯಾಧೀಶರು) ವ್ಯಕ್ತಿಯನ್ನು ನೇಮಿಸಬೇಕು.
6. ಎಸ್‍ಸಿ/ಎಸ್‍ಟಿ/ಒಬಿಸಿ ಸಮುದಾಯಕ್ಕೆ ಸೇರಿದ ವ್ಯಕ್ತಿಗಳಿಗೆ ನ್ಯಾಯಾಂಗದ ಉನ್ನತ ಸ್ಥಾನಗಳಲ್ಲಿ ಮೀಸಲಾತಿಯನ್ನು ಒದಗಿಸಬೇಕು
ಈ ಮೊಕದ್ದಮೆಗೆ ಸಂಬಂಧಿಸಿ ನ್ಯಾ.ಚಂದ್ರಚೂಡ್ ಅವರ ಸಲಹೆಗಳನ್ನು ನಾವು ಅನುಮೋದಿಸುತ್ತೇವೆ.
7. ಹೊಸ ಸಮಿತಿಗೆ ನಿವೃತ್ತ ಮಹಿಳಾ ನ್ಯಾಯಾಧೀಶರನ್ನು ಬಾಹ್ಯ ಸದಸ್ಯರಾಗಿ ಕಡ್ಡಾಯವಾಗಿ ನೇಮಕ ಮಾಡಬೇಕು
8. ಬಾರ್ ಕೌನ್ಸಿಲ್‍ನ ಗೌರವಾನ್ವಿತ ಮಹಿಳಾ ಸದಸ್ಯರನ್ನು ಅಮಿಕಸ್ ಕ್ಯೂರಿ (ಕೋರ್ಟ್‍ನ ಸ್ನೇಹಿತರು) ಎಂದು ಪರಿಗಣಿಸಬೇಕು
9. ದೂರುದಾರರು ಮುಂದಿಟ್ಟಿರುವ ಕುಂದುಕೊರತೆಗಳನ್ನು, ಅದರಲ್ಲೂ ವಕೀಲರೊಬ್ಬರ ನೆರವನ್ನು ಪಡೆಯುವಂತಹವನ್ನು ಪರಿಗಣಿಸಿ ಪರಿಹಾರ ಕಲ್ಪಿಸಬೇಕು.

ಪ್ರತಿಭಟನೆಗೆ ಭಾಗವಹಿಸಿದ, ಬೆಂಬಲಿಸಿದ ಸಂಘಟನೆಗಳು

ಸಿಐಇಡಿಎಸ್ ಕಲೆಕ್ಟಿವ್, ಬೆಂಗಳೂರು
2. ಪರ್ಯಾಯ ಕಾನೂನು ವೇದಿಕೆ, ಬೆಂಗಳೂರು
3. ನ್ಯಾಷನಲ್ ನೆಟ್‍ವರ್ಕ್ ಆಫ್ ಸೆಕ್ಸ್ ವರ್ಕರ್ಸ್
4. ಕರ್ನಾಟಕ ಜನಾರೋಗ್ಯ ಚಳವಳಿ
5. ವಂಪ್
6. ಮುಸ್ಕಾನ್
7. ಕರ್ನಾಟಕ ಸೆಕ್ಸ್ ವರ್ಕ್‍ರ್ಸ್ ಯೂನಿಯನ್
8. ಸ್ತ್ರೀ ಜಾಗೃತಿ ಸಮಿತಿ
9. ಡೊಮೆಸ್ಟಿಕ್ ವರ್ಕ್‍ರ್ಸ್ ರೈಟ್ಸ್ ಯೂನಿಯನ್
10. ಮಹಿಳಾ ಮುನ್ನಡೆ
11. ಕರ್ನಾಟಕ ಜನಶಕ್ತಿ
12. ಸಂವಿಧಾನ ಉಳಿವಿಗಾಗಿ ಕರ್ನಾಟಕ
13. ಸೌಥ್ ಇಂಡಿಯಾ ಸೆಲ್ ಫಾರ್ ಹ್ಯುಮನ್ ರೈಟ್ಸ್, ಎಡುಕೇಷನ್ ಅಂಡ್ ಮಾನಿಟರಿಂಗ್ (ಎಸ್‍ಐಸಿಎಚ್‍ಆರ್‍ಇಎಂ)
14. ರಾಮದಾಸ್ ರಾವ್
15. ತಾರಾ ಕೃಷ್ಣಮೂರ್ತಿ, ಕೋ ಫೌಂಡರ್, ಶಕ್ತಿ – ಪೊಲಿಟಿಕಲ್ ಪವರ್ ಟು ವುಮೆನ್
16. ಗಮನ ವರ್ಕರ್ಸ್ ಕಲೆಕ್ಟಿವ್, ಬೆಂಗಳೂರು
17. ಸಾಧನ ಮಹಿಳೆಯರ ಸಂಘ, ಬೆಂಗಳೂರು
18. ಲೈಂಗಿಕ ಹಿಂಸೆಯ ವಿರೋಧಿ ಜನಚಳವಳಿ
19. ಕರ್ನಾಟಕ ಗಾರ್ಮೆಂಟ್ಸ್ ವರ್ಕರ್ಸ್ ಯೂನಿಯನ್ (ಏಔಔಉU)
20. ಸೌತ್ ಇಂಡಿಯಾ ಫೆಡೆರೇಷನ್ ಆಫ್ ಟ್ರೇಡ್ ಯೂನಿಯನ್ಸ್ (SIಈಖಿU)
21. ಂIಏಙಂಖಿಂ (ಸೀನಿಯರ್ ಸಿಟಿಜನ್ಸ್ ಗ್ರೂಪ್)
22. ಮನೆಗೆಲಸ ಕಾರ್ಮಿಕರ ಯೂನಿಯನ್ (ಒಂಏಂಂಙU)
23. ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕರ ಯೂನಿಯನ್ (ಂಏಏಏU)
24. ಫೆಡಿನಾ
25. ರಾಜೇಶ್, ಉಮಾದೇವಿ, ಶ್ರೀನಿವಾಸ್

‘ನ್ಯಾಯಾಧೀಶರೇ ಆರೋಪಿಯಾದರೆ… ವಿಚಾರಣಾ ಪೀಠದಲ್ಲಿ ಸ್ವತಃ ನ್ಯಾಯಮೂರ್ತಿಯಾಗಿ ಕುಳಿತರೇ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...