Homeಕರ್ನಾಟಕರಂಜನ್ ಗಗೋಯಿರವರಿಗೆ ಕ್ಲೀನ್ ಚಿಟ್ ವಿರುದ್ಧ ರಾಷ್ಟ್ರದ್ಯಂತ ಪ್ರತಿಭಟನೆ

ರಂಜನ್ ಗಗೋಯಿರವರಿಗೆ ಕ್ಲೀನ್ ಚಿಟ್ ವಿರುದ್ಧ ರಾಷ್ಟ್ರದ್ಯಂತ ಪ್ರತಿಭಟನೆ

- Advertisement -
- Advertisement -

ಇಂಗ್ಲಿಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸುಪ್ರಿಂ ಕೋರ್ಟ್‍ನ ಮುಖ್ಯ ನ್ಯಾಯಾಮೂರ್ತಿ ರಂಜನ್ ಗೊಗಯಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಪ್ರಕರಣ ದಿನೇ ದಿನೇ ತಿರುವು ಪಡೆದುಕೊಳ್ಳುತ್ತಿದೆ. ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಾಧೀಶರ ಸಮಿತಿಯು ಸಮರ್ಪಕವಾಗಿ ವಿಚಾರಣೆ ನಡೆಸದೇ ಪ್ರಕರಣವನ್ನು ವಜಾ ಗೊಳಿಸಿರುವುದು ಸರಿಯಲ್ಲ ಎಂದು ಆರೋಪ ದೇಶದೆಲ್ಲೆಡೆ ಕೇಳಿ ಬರುತ್ತಿದ್ದು ಪ್ರತಿಭಟನೆಗಳು ನಡೆದಿವೆ. ಈ ವಿಷಯವಾಗಿ ಬೆಂಗಳೂರಿನಲ್ಲಿ ಗುರುವಾರ ವಕೀಲರು, ಕಾನೂನು ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಾಧೀಶ ರಂಜನ್ ಗೊಗಯಿ ಅವರ ಮೇಲೆ ಸುಪ್ರೀಂ ಕೋರ್ಟ್‍ನಲ್ಲಿ ಕೆಲಸ ಮಾಡಿದ್ದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಇತ್ತೀಚೆಗೆ ದೂರು ನೀಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಾಧೀಶರ ಸಮಿತಿಯು ‘ಈ ಆರೋಪದಲ್ಲಿ ಹುರುಳಿಲ್ಲ’ ಎಂದು ವರದಿ ನೀಡಿ, ರಂಜನ್ ಗಗೋಯ್ ರವರಿಗೆ ಕ್ಲೀನ್ ಚಿಟ್ ನೀಡಿತ್ತು.

‘ಸುಪ್ರೀಂ ಕೋರ್ಟ್‍ನ ವಿಶ್ವಾಸಾರ್ಹತೆಯ ಗಂಭೀರ ಬಿಕ್ಕಟ್ಟಿನಲ್ಲಿದೆ. ನ್ಯಾಯಾಲಯವು ದೂರುದಾರರ ದೂರನ್ನು ಸರಿಯಾದ ರೀತಿಯಲ್ಲಿ ಆಲಿಸುವಲ್ಲಿ ವಿಫಲವಾಗಿದೆ. ದೂರುದಾರಳ ಬೇಡಿಕೆಯಾದ ‘ವಿಶೇಷ ವಿಚಾರಣಾ ಸಮಿತಿ’ಯನ್ನು ಕಡೆಗಣಿಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಕಿರಿಯರಾದ (ಜೂನಿಯರ್ಸ್) ನ್ಯಾಯಮೂರ್ತಿಗಳನ್ನು ಒಳಗೊಂಡ ಇನ್-ಹೌಸ್ ಸಮಿತಿಯನ್ನು ರಚಿಸಿತು. ಈ ಸಮಿತಿ 2019ರ ಮೇ 6 ರಂದು ‘ದೂರಿನಲ್ಲಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ’ ಎನ್ನುವ ತೀರ್ಮಾನ ನೀಡಿದ್ದಕ್ಕೆ ಆಶ್ಚರ್ಯ ಪಡಬೇಕಿಲ್ಲ.’ ಎಂದು ಪ್ರತಿಭಟನೆಯಲ್ಲಿ ಭಾಗಿಯಾದ ವಕೀಲರಾದ ವಿನಯ್ ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸುತ್ತಾರೆ.

ವಿನಯ್ ಶ್ರೀನಿವಾಸನ್

‘ನಾವೆಲ್ಲ ದೂರುದಾರ ಮಹಿಳೆಯೊಂದಿಗೆ ಐಕ್ಯಮತವಾಗಿ ನಿಂತುಕೊಳ್ಳುತ್ತೇವೆ. ಒಂದು ಸ್ವತಂತ್ರ ಮತ್ತು ನ್ಯಾಯಸಮ್ಮತ ವಿಚಾರಣೆಯ ನೀತಿನಿಯಮಗಳನ್ನು ಪಾಲಿಸದೇ ಸಮಿತಿ ನೀಡಿದ ತೀರ್ಮಾನವನ್ನು ತಿರಸ್ಕರಿಸುತ್ತೇವೆ. ಈ ಪ್ರಕರಣದಲ್ಲಿ ಪಾಲಿಸಲಾದ ಪ್ರಕ್ರಿಯೆಯಲ್ಲಿ ಬರೀ ಸ್ವಾಭಾವಿಕ ನ್ಯಾಯದ ತತ್ವಗಳನ್ನು ಮಾತ್ರ ಉಲ್ಲಂಘನೆಯಾಗದೇ ವಿಶಾಖ ತೀರ್ಪಿನ ಚೈತನ್ಯ ಮತ್ತು ಅದರಿಂದ ರೂಪಿಸಲಾದ ನೀತಿಗಳ ಉಲ್ಲಂಘನೆಯೂ ಆಗಿದೆ. ಇಷ್ಟೇ ಅಲ್ಲದೇ ಕೆಲಸ ಮಾಡುವ ಸ್ಥಳಗಳಲ್ಲಿ ಆಗುವ ಅಧಿಕಾರದ ಅಸಮತೋಲನಗಳನ್ನು ಗುರುತಿಸಿ ಅದನ್ನು ಸರಿಪಡಿಸಲು ಇರುವ ಸೆಕ್ಷುವಲ್ ಹ್ಯಾರ್ಯಾಸ್‍ಮೆಂಟ್ ಆಫ್ ವಿಮೆನ್ ಎಟ್ ವಕ್‍ಪ್ಲೇಸ್ ಆ್ಯಕ್ಟ್ 2013 (POSH ACT) ನ ಉಲ್ಲಂಘನೆಯೂ ಆಗಿದೆ’ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

 

ಇದನ್ನು ಓದಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

ನಾವೆಲ್ಲರೂ ನ್ಯಾಯಾಂಗದ ಸ್ವಾತಂತ್ರ ಮತ್ತು ಸ್ವಾಯತ್ತತೆಯ ಪರವಾಗಿದ್ದು, ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುತ್ತೇವೆ ಮತ್ತು ಗೌರವಿಸುತ್ತೇವೆ. ಆದರೆ ನಾವು ನ್ಯಾಯಾಂಗ ವ್ಯವಸ್ಥೆಯಲ್ಲಿ ಆಗುವ ಲೋಪದೋಷಗಳನ್ನು ಗುರುತಿಸಿ ಅವುಗಳನ್ನು ತೋರಿಸುವುದರಲ್ಲಿಯೂ ನಂಬಿಕೆ ಇಡುತ್ತೇವೆ, ಅದರಿಂದ ಲೋಪದೋಷಗಳನ್ನು ತಿದ್ದುಕೊಳ್ಳಲು ಸಹಾಯ ಆಗಿ ನ್ಯಾಯಾಂಗದ ಸ್ವಾತಂತ್ರದ ರಕ್ಷಣೆ ಆಗುತ್ತದೆಯೇ ಹೊರತು ಅದರ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದಂತೆ ಆಗುವುದಿಲ್ಲ. ನಮ್ಮ ದೇಶದ ಅತ್ಯುನ್ನತ ಸಾಂವಿಧಾನಿಕ ಪ್ರಾಧಿಕಾರವಾದ ಭಾರತದ ಸುಪ್ರೀಮ್ ಕೋರ್ಟಿನಿಂದ ಆದ ಅಧಿಕಾರದ ಈ ಸ್ಪಷ್ಟ ದುರ್ಬಳಕೆಯಿಂದ ನಮಗೆ ಹತಾಶೆ ಆಘಾತವಾಗಿದೆ ಎನ್ನುತ್ತಾರೆ ಪ್ರತಿಭಟನಾಕಾರರು.

ಸುಪ್ರೀಂ ಕೋರ್ಟ್ ತಾನು ಮಾಡಿದ ತಪ್ಪನ್ನು ತಿದ್ದಬೇಕು ಎಂದು ನಾವು ಆಗ್ರಹಿಸುತ್ತೇವೆ ಹಾಗೂ ದೂರುದಾರರ ಮೇಲೆ ಆಗಿರುವ ಘೋರ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸುತ್ತೇವೆ. ಸ್ಪಷ್ಟವಾದ ಕಾರ್ಯವಿಧಾನಗಳ ಅನುಪಸ್ಥಿತಿಯಲ್ಲಿ, ಸಹಜ ನ್ಯಾಯದ ತತ್ವಗಳನ್ನು ಪಾಲಿಸದೇ ಹಾಗೂ ದೂರುದಾರರ ಪರಿಣಾಮಕಾರಿಯಾದ ಪ್ರಾತಿನಿಧ್ಯ ಇಲ್ಲದೇ ಆಗಿರುವ ಈ ವರದಿ (ಇದನ್ನು ಸಾರ್ವಜನಿಕಗೊಳಿಸದೇ ಇದ್ದರೂ) ಯನ್ನು ಈ ವಿಷಯಕ್ಕೆ ಸಂಬಂಧಪಟ್ಟಂತೆ ಇದೇ ಕೊನೆಯ ಮತ್ತು ಅಂತಿಮ ತೀರ್ಪು ಎಂದು ಒಪ್ಪಿಕೊಳ್ಳಲಾಗದು ಎಂದರು.

ಪ್ರತಿಭಟನಾಕಾರರು ಸುಪ್ರೀಂ ಕೋರ್ಟಿನ ಮುಂದಿಟ್ಟಿರುವ ಹಕ್ಕೊತ್ತಾಯಗಳು ಕೆಳಗಿನಂತಿವೆ.

1. ದೂರುದಾರರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಸುಪ್ರೀಂ ಕೋಟ್‍ನ ಪೂರ್ಣ ಪೀಠ ಸೂಕ್ತ ಕ್ರಮ ತೆಗೆದುಕೊಳ್ಳುವ ಮೂಲಕ ಸುಪ್ರೀಂಕೋರ್ಟ್ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಪುನರ್‍ಗಳಿಸಬೇಕು.
2. ವಿಶಾಖ ಗೈಡ್‍ಲೈನ್ಸ್, POSH ACT ಬದ್ಧವಾಗಿರುವಂತಹ ಹೊಸ ಸಮಿತಿಯನ್ನು ಸೂಕ್ತ ಪ್ರಕ್ರಿಯೆಯ ಮೂಲಕ ರಚಿಸಿ ದೂರುದಾರರ ಹಿತಾಸಕ್ತಿಯನ್ನು ಕಾಪಾಡಬೇಕು.
3. ಜಸ್ಟೀಸ್ ಬಾಬ್ಡೆ ಪ್ಯಾನಲ್ ವರದಿಯ ಪ್ರತಿಯೊಂದನ್ನು ದೂರುದಾರರಿಗೆ ನೀಡಬೇಕು
4. ದೂರುದಾರರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು
5. ರಚಿಸಬೇಕಿರುವ ಹೊಸ ಸಮಿತಿಗೆ ದಲಿತ ಸಮುದಾಯಕ್ಕೆ ಸೇರಿದ ಒಬ್ಬರಾದರೂ ನ್ಯಾಯಾಂಗ (ವಕೀಲರು/ನ್ಯಾಯಾಧೀಶರು/ನಿವೃತ್ತ ನ್ಯಾಯಾಧೀಶರು) ವ್ಯಕ್ತಿಯನ್ನು ನೇಮಿಸಬೇಕು.
6. ಎಸ್‍ಸಿ/ಎಸ್‍ಟಿ/ಒಬಿಸಿ ಸಮುದಾಯಕ್ಕೆ ಸೇರಿದ ವ್ಯಕ್ತಿಗಳಿಗೆ ನ್ಯಾಯಾಂಗದ ಉನ್ನತ ಸ್ಥಾನಗಳಲ್ಲಿ ಮೀಸಲಾತಿಯನ್ನು ಒದಗಿಸಬೇಕು
ಈ ಮೊಕದ್ದಮೆಗೆ ಸಂಬಂಧಿಸಿ ನ್ಯಾ.ಚಂದ್ರಚೂಡ್ ಅವರ ಸಲಹೆಗಳನ್ನು ನಾವು ಅನುಮೋದಿಸುತ್ತೇವೆ.
7. ಹೊಸ ಸಮಿತಿಗೆ ನಿವೃತ್ತ ಮಹಿಳಾ ನ್ಯಾಯಾಧೀಶರನ್ನು ಬಾಹ್ಯ ಸದಸ್ಯರಾಗಿ ಕಡ್ಡಾಯವಾಗಿ ನೇಮಕ ಮಾಡಬೇಕು
8. ಬಾರ್ ಕೌನ್ಸಿಲ್‍ನ ಗೌರವಾನ್ವಿತ ಮಹಿಳಾ ಸದಸ್ಯರನ್ನು ಅಮಿಕಸ್ ಕ್ಯೂರಿ (ಕೋರ್ಟ್‍ನ ಸ್ನೇಹಿತರು) ಎಂದು ಪರಿಗಣಿಸಬೇಕು
9. ದೂರುದಾರರು ಮುಂದಿಟ್ಟಿರುವ ಕುಂದುಕೊರತೆಗಳನ್ನು, ಅದರಲ್ಲೂ ವಕೀಲರೊಬ್ಬರ ನೆರವನ್ನು ಪಡೆಯುವಂತಹವನ್ನು ಪರಿಗಣಿಸಿ ಪರಿಹಾರ ಕಲ್ಪಿಸಬೇಕು.

ಪ್ರತಿಭಟನೆಗೆ ಭಾಗವಹಿಸಿದ, ಬೆಂಬಲಿಸಿದ ಸಂಘಟನೆಗಳು

ಸಿಐಇಡಿಎಸ್ ಕಲೆಕ್ಟಿವ್, ಬೆಂಗಳೂರು
2. ಪರ್ಯಾಯ ಕಾನೂನು ವೇದಿಕೆ, ಬೆಂಗಳೂರು
3. ನ್ಯಾಷನಲ್ ನೆಟ್‍ವರ್ಕ್ ಆಫ್ ಸೆಕ್ಸ್ ವರ್ಕರ್ಸ್
4. ಕರ್ನಾಟಕ ಜನಾರೋಗ್ಯ ಚಳವಳಿ
5. ವಂಪ್
6. ಮುಸ್ಕಾನ್
7. ಕರ್ನಾಟಕ ಸೆಕ್ಸ್ ವರ್ಕ್‍ರ್ಸ್ ಯೂನಿಯನ್
8. ಸ್ತ್ರೀ ಜಾಗೃತಿ ಸಮಿತಿ
9. ಡೊಮೆಸ್ಟಿಕ್ ವರ್ಕ್‍ರ್ಸ್ ರೈಟ್ಸ್ ಯೂನಿಯನ್
10. ಮಹಿಳಾ ಮುನ್ನಡೆ
11. ಕರ್ನಾಟಕ ಜನಶಕ್ತಿ
12. ಸಂವಿಧಾನ ಉಳಿವಿಗಾಗಿ ಕರ್ನಾಟಕ
13. ಸೌಥ್ ಇಂಡಿಯಾ ಸೆಲ್ ಫಾರ್ ಹ್ಯುಮನ್ ರೈಟ್ಸ್, ಎಡುಕೇಷನ್ ಅಂಡ್ ಮಾನಿಟರಿಂಗ್ (ಎಸ್‍ಐಸಿಎಚ್‍ಆರ್‍ಇಎಂ)
14. ರಾಮದಾಸ್ ರಾವ್
15. ತಾರಾ ಕೃಷ್ಣಮೂರ್ತಿ, ಕೋ ಫೌಂಡರ್, ಶಕ್ತಿ – ಪೊಲಿಟಿಕಲ್ ಪವರ್ ಟು ವುಮೆನ್
16. ಗಮನ ವರ್ಕರ್ಸ್ ಕಲೆಕ್ಟಿವ್, ಬೆಂಗಳೂರು
17. ಸಾಧನ ಮಹಿಳೆಯರ ಸಂಘ, ಬೆಂಗಳೂರು
18. ಲೈಂಗಿಕ ಹಿಂಸೆಯ ವಿರೋಧಿ ಜನಚಳವಳಿ
19. ಕರ್ನಾಟಕ ಗಾರ್ಮೆಂಟ್ಸ್ ವರ್ಕರ್ಸ್ ಯೂನಿಯನ್ (ಏಔಔಉU)
20. ಸೌತ್ ಇಂಡಿಯಾ ಫೆಡೆರೇಷನ್ ಆಫ್ ಟ್ರೇಡ್ ಯೂನಿಯನ್ಸ್ (SIಈಖಿU)
21. ಂIಏಙಂಖಿಂ (ಸೀನಿಯರ್ ಸಿಟಿಜನ್ಸ್ ಗ್ರೂಪ್)
22. ಮನೆಗೆಲಸ ಕಾರ್ಮಿಕರ ಯೂನಿಯನ್ (ಒಂಏಂಂಙU)
23. ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕರ ಯೂನಿಯನ್ (ಂಏಏಏU)
24. ಫೆಡಿನಾ
25. ರಾಜೇಶ್, ಉಮಾದೇವಿ, ಶ್ರೀನಿವಾಸ್

‘ನ್ಯಾಯಾಧೀಶರೇ ಆರೋಪಿಯಾದರೆ… ವಿಚಾರಣಾ ಪೀಠದಲ್ಲಿ ಸ್ವತಃ ನ್ಯಾಯಮೂರ್ತಿಯಾಗಿ ಕುಳಿತರೇ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...