Homeಕರ್ನಾಟಕರಂಜನ್ ಗಗೋಯಿರವರಿಗೆ ಕ್ಲೀನ್ ಚಿಟ್ ವಿರುದ್ಧ ರಾಷ್ಟ್ರದ್ಯಂತ ಪ್ರತಿಭಟನೆ

ರಂಜನ್ ಗಗೋಯಿರವರಿಗೆ ಕ್ಲೀನ್ ಚಿಟ್ ವಿರುದ್ಧ ರಾಷ್ಟ್ರದ್ಯಂತ ಪ್ರತಿಭಟನೆ

- Advertisement -
- Advertisement -

ಇಂಗ್ಲಿಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸುಪ್ರಿಂ ಕೋರ್ಟ್‍ನ ಮುಖ್ಯ ನ್ಯಾಯಾಮೂರ್ತಿ ರಂಜನ್ ಗೊಗಯಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಪ್ರಕರಣ ದಿನೇ ದಿನೇ ತಿರುವು ಪಡೆದುಕೊಳ್ಳುತ್ತಿದೆ. ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಾಧೀಶರ ಸಮಿತಿಯು ಸಮರ್ಪಕವಾಗಿ ವಿಚಾರಣೆ ನಡೆಸದೇ ಪ್ರಕರಣವನ್ನು ವಜಾ ಗೊಳಿಸಿರುವುದು ಸರಿಯಲ್ಲ ಎಂದು ಆರೋಪ ದೇಶದೆಲ್ಲೆಡೆ ಕೇಳಿ ಬರುತ್ತಿದ್ದು ಪ್ರತಿಭಟನೆಗಳು ನಡೆದಿವೆ. ಈ ವಿಷಯವಾಗಿ ಬೆಂಗಳೂರಿನಲ್ಲಿ ಗುರುವಾರ ವಕೀಲರು, ಕಾನೂನು ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಾಧೀಶ ರಂಜನ್ ಗೊಗಯಿ ಅವರ ಮೇಲೆ ಸುಪ್ರೀಂ ಕೋರ್ಟ್‍ನಲ್ಲಿ ಕೆಲಸ ಮಾಡಿದ್ದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಇತ್ತೀಚೆಗೆ ದೂರು ನೀಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಾಧೀಶರ ಸಮಿತಿಯು ‘ಈ ಆರೋಪದಲ್ಲಿ ಹುರುಳಿಲ್ಲ’ ಎಂದು ವರದಿ ನೀಡಿ, ರಂಜನ್ ಗಗೋಯ್ ರವರಿಗೆ ಕ್ಲೀನ್ ಚಿಟ್ ನೀಡಿತ್ತು.

‘ಸುಪ್ರೀಂ ಕೋರ್ಟ್‍ನ ವಿಶ್ವಾಸಾರ್ಹತೆಯ ಗಂಭೀರ ಬಿಕ್ಕಟ್ಟಿನಲ್ಲಿದೆ. ನ್ಯಾಯಾಲಯವು ದೂರುದಾರರ ದೂರನ್ನು ಸರಿಯಾದ ರೀತಿಯಲ್ಲಿ ಆಲಿಸುವಲ್ಲಿ ವಿಫಲವಾಗಿದೆ. ದೂರುದಾರಳ ಬೇಡಿಕೆಯಾದ ‘ವಿಶೇಷ ವಿಚಾರಣಾ ಸಮಿತಿ’ಯನ್ನು ಕಡೆಗಣಿಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಕಿರಿಯರಾದ (ಜೂನಿಯರ್ಸ್) ನ್ಯಾಯಮೂರ್ತಿಗಳನ್ನು ಒಳಗೊಂಡ ಇನ್-ಹೌಸ್ ಸಮಿತಿಯನ್ನು ರಚಿಸಿತು. ಈ ಸಮಿತಿ 2019ರ ಮೇ 6 ರಂದು ‘ದೂರಿನಲ್ಲಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ’ ಎನ್ನುವ ತೀರ್ಮಾನ ನೀಡಿದ್ದಕ್ಕೆ ಆಶ್ಚರ್ಯ ಪಡಬೇಕಿಲ್ಲ.’ ಎಂದು ಪ್ರತಿಭಟನೆಯಲ್ಲಿ ಭಾಗಿಯಾದ ವಕೀಲರಾದ ವಿನಯ್ ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸುತ್ತಾರೆ.

ವಿನಯ್ ಶ್ರೀನಿವಾಸನ್

‘ನಾವೆಲ್ಲ ದೂರುದಾರ ಮಹಿಳೆಯೊಂದಿಗೆ ಐಕ್ಯಮತವಾಗಿ ನಿಂತುಕೊಳ್ಳುತ್ತೇವೆ. ಒಂದು ಸ್ವತಂತ್ರ ಮತ್ತು ನ್ಯಾಯಸಮ್ಮತ ವಿಚಾರಣೆಯ ನೀತಿನಿಯಮಗಳನ್ನು ಪಾಲಿಸದೇ ಸಮಿತಿ ನೀಡಿದ ತೀರ್ಮಾನವನ್ನು ತಿರಸ್ಕರಿಸುತ್ತೇವೆ. ಈ ಪ್ರಕರಣದಲ್ಲಿ ಪಾಲಿಸಲಾದ ಪ್ರಕ್ರಿಯೆಯಲ್ಲಿ ಬರೀ ಸ್ವಾಭಾವಿಕ ನ್ಯಾಯದ ತತ್ವಗಳನ್ನು ಮಾತ್ರ ಉಲ್ಲಂಘನೆಯಾಗದೇ ವಿಶಾಖ ತೀರ್ಪಿನ ಚೈತನ್ಯ ಮತ್ತು ಅದರಿಂದ ರೂಪಿಸಲಾದ ನೀತಿಗಳ ಉಲ್ಲಂಘನೆಯೂ ಆಗಿದೆ. ಇಷ್ಟೇ ಅಲ್ಲದೇ ಕೆಲಸ ಮಾಡುವ ಸ್ಥಳಗಳಲ್ಲಿ ಆಗುವ ಅಧಿಕಾರದ ಅಸಮತೋಲನಗಳನ್ನು ಗುರುತಿಸಿ ಅದನ್ನು ಸರಿಪಡಿಸಲು ಇರುವ ಸೆಕ್ಷುವಲ್ ಹ್ಯಾರ್ಯಾಸ್‍ಮೆಂಟ್ ಆಫ್ ವಿಮೆನ್ ಎಟ್ ವಕ್‍ಪ್ಲೇಸ್ ಆ್ಯಕ್ಟ್ 2013 (POSH ACT) ನ ಉಲ್ಲಂಘನೆಯೂ ಆಗಿದೆ’ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

 

ಇದನ್ನು ಓದಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

ನಾವೆಲ್ಲರೂ ನ್ಯಾಯಾಂಗದ ಸ್ವಾತಂತ್ರ ಮತ್ತು ಸ್ವಾಯತ್ತತೆಯ ಪರವಾಗಿದ್ದು, ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುತ್ತೇವೆ ಮತ್ತು ಗೌರವಿಸುತ್ತೇವೆ. ಆದರೆ ನಾವು ನ್ಯಾಯಾಂಗ ವ್ಯವಸ್ಥೆಯಲ್ಲಿ ಆಗುವ ಲೋಪದೋಷಗಳನ್ನು ಗುರುತಿಸಿ ಅವುಗಳನ್ನು ತೋರಿಸುವುದರಲ್ಲಿಯೂ ನಂಬಿಕೆ ಇಡುತ್ತೇವೆ, ಅದರಿಂದ ಲೋಪದೋಷಗಳನ್ನು ತಿದ್ದುಕೊಳ್ಳಲು ಸಹಾಯ ಆಗಿ ನ್ಯಾಯಾಂಗದ ಸ್ವಾತಂತ್ರದ ರಕ್ಷಣೆ ಆಗುತ್ತದೆಯೇ ಹೊರತು ಅದರ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದಂತೆ ಆಗುವುದಿಲ್ಲ. ನಮ್ಮ ದೇಶದ ಅತ್ಯುನ್ನತ ಸಾಂವಿಧಾನಿಕ ಪ್ರಾಧಿಕಾರವಾದ ಭಾರತದ ಸುಪ್ರೀಮ್ ಕೋರ್ಟಿನಿಂದ ಆದ ಅಧಿಕಾರದ ಈ ಸ್ಪಷ್ಟ ದುರ್ಬಳಕೆಯಿಂದ ನಮಗೆ ಹತಾಶೆ ಆಘಾತವಾಗಿದೆ ಎನ್ನುತ್ತಾರೆ ಪ್ರತಿಭಟನಾಕಾರರು.

ಸುಪ್ರೀಂ ಕೋರ್ಟ್ ತಾನು ಮಾಡಿದ ತಪ್ಪನ್ನು ತಿದ್ದಬೇಕು ಎಂದು ನಾವು ಆಗ್ರಹಿಸುತ್ತೇವೆ ಹಾಗೂ ದೂರುದಾರರ ಮೇಲೆ ಆಗಿರುವ ಘೋರ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸುತ್ತೇವೆ. ಸ್ಪಷ್ಟವಾದ ಕಾರ್ಯವಿಧಾನಗಳ ಅನುಪಸ್ಥಿತಿಯಲ್ಲಿ, ಸಹಜ ನ್ಯಾಯದ ತತ್ವಗಳನ್ನು ಪಾಲಿಸದೇ ಹಾಗೂ ದೂರುದಾರರ ಪರಿಣಾಮಕಾರಿಯಾದ ಪ್ರಾತಿನಿಧ್ಯ ಇಲ್ಲದೇ ಆಗಿರುವ ಈ ವರದಿ (ಇದನ್ನು ಸಾರ್ವಜನಿಕಗೊಳಿಸದೇ ಇದ್ದರೂ) ಯನ್ನು ಈ ವಿಷಯಕ್ಕೆ ಸಂಬಂಧಪಟ್ಟಂತೆ ಇದೇ ಕೊನೆಯ ಮತ್ತು ಅಂತಿಮ ತೀರ್ಪು ಎಂದು ಒಪ್ಪಿಕೊಳ್ಳಲಾಗದು ಎಂದರು.

ಪ್ರತಿಭಟನಾಕಾರರು ಸುಪ್ರೀಂ ಕೋರ್ಟಿನ ಮುಂದಿಟ್ಟಿರುವ ಹಕ್ಕೊತ್ತಾಯಗಳು ಕೆಳಗಿನಂತಿವೆ.

1. ದೂರುದಾರರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಸುಪ್ರೀಂ ಕೋಟ್‍ನ ಪೂರ್ಣ ಪೀಠ ಸೂಕ್ತ ಕ್ರಮ ತೆಗೆದುಕೊಳ್ಳುವ ಮೂಲಕ ಸುಪ್ರೀಂಕೋರ್ಟ್ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಪುನರ್‍ಗಳಿಸಬೇಕು.
2. ವಿಶಾಖ ಗೈಡ್‍ಲೈನ್ಸ್, POSH ACT ಬದ್ಧವಾಗಿರುವಂತಹ ಹೊಸ ಸಮಿತಿಯನ್ನು ಸೂಕ್ತ ಪ್ರಕ್ರಿಯೆಯ ಮೂಲಕ ರಚಿಸಿ ದೂರುದಾರರ ಹಿತಾಸಕ್ತಿಯನ್ನು ಕಾಪಾಡಬೇಕು.
3. ಜಸ್ಟೀಸ್ ಬಾಬ್ಡೆ ಪ್ಯಾನಲ್ ವರದಿಯ ಪ್ರತಿಯೊಂದನ್ನು ದೂರುದಾರರಿಗೆ ನೀಡಬೇಕು
4. ದೂರುದಾರರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು
5. ರಚಿಸಬೇಕಿರುವ ಹೊಸ ಸಮಿತಿಗೆ ದಲಿತ ಸಮುದಾಯಕ್ಕೆ ಸೇರಿದ ಒಬ್ಬರಾದರೂ ನ್ಯಾಯಾಂಗ (ವಕೀಲರು/ನ್ಯಾಯಾಧೀಶರು/ನಿವೃತ್ತ ನ್ಯಾಯಾಧೀಶರು) ವ್ಯಕ್ತಿಯನ್ನು ನೇಮಿಸಬೇಕು.
6. ಎಸ್‍ಸಿ/ಎಸ್‍ಟಿ/ಒಬಿಸಿ ಸಮುದಾಯಕ್ಕೆ ಸೇರಿದ ವ್ಯಕ್ತಿಗಳಿಗೆ ನ್ಯಾಯಾಂಗದ ಉನ್ನತ ಸ್ಥಾನಗಳಲ್ಲಿ ಮೀಸಲಾತಿಯನ್ನು ಒದಗಿಸಬೇಕು
ಈ ಮೊಕದ್ದಮೆಗೆ ಸಂಬಂಧಿಸಿ ನ್ಯಾ.ಚಂದ್ರಚೂಡ್ ಅವರ ಸಲಹೆಗಳನ್ನು ನಾವು ಅನುಮೋದಿಸುತ್ತೇವೆ.
7. ಹೊಸ ಸಮಿತಿಗೆ ನಿವೃತ್ತ ಮಹಿಳಾ ನ್ಯಾಯಾಧೀಶರನ್ನು ಬಾಹ್ಯ ಸದಸ್ಯರಾಗಿ ಕಡ್ಡಾಯವಾಗಿ ನೇಮಕ ಮಾಡಬೇಕು
8. ಬಾರ್ ಕೌನ್ಸಿಲ್‍ನ ಗೌರವಾನ್ವಿತ ಮಹಿಳಾ ಸದಸ್ಯರನ್ನು ಅಮಿಕಸ್ ಕ್ಯೂರಿ (ಕೋರ್ಟ್‍ನ ಸ್ನೇಹಿತರು) ಎಂದು ಪರಿಗಣಿಸಬೇಕು
9. ದೂರುದಾರರು ಮುಂದಿಟ್ಟಿರುವ ಕುಂದುಕೊರತೆಗಳನ್ನು, ಅದರಲ್ಲೂ ವಕೀಲರೊಬ್ಬರ ನೆರವನ್ನು ಪಡೆಯುವಂತಹವನ್ನು ಪರಿಗಣಿಸಿ ಪರಿಹಾರ ಕಲ್ಪಿಸಬೇಕು.

ಪ್ರತಿಭಟನೆಗೆ ಭಾಗವಹಿಸಿದ, ಬೆಂಬಲಿಸಿದ ಸಂಘಟನೆಗಳು

ಸಿಐಇಡಿಎಸ್ ಕಲೆಕ್ಟಿವ್, ಬೆಂಗಳೂರು
2. ಪರ್ಯಾಯ ಕಾನೂನು ವೇದಿಕೆ, ಬೆಂಗಳೂರು
3. ನ್ಯಾಷನಲ್ ನೆಟ್‍ವರ್ಕ್ ಆಫ್ ಸೆಕ್ಸ್ ವರ್ಕರ್ಸ್
4. ಕರ್ನಾಟಕ ಜನಾರೋಗ್ಯ ಚಳವಳಿ
5. ವಂಪ್
6. ಮುಸ್ಕಾನ್
7. ಕರ್ನಾಟಕ ಸೆಕ್ಸ್ ವರ್ಕ್‍ರ್ಸ್ ಯೂನಿಯನ್
8. ಸ್ತ್ರೀ ಜಾಗೃತಿ ಸಮಿತಿ
9. ಡೊಮೆಸ್ಟಿಕ್ ವರ್ಕ್‍ರ್ಸ್ ರೈಟ್ಸ್ ಯೂನಿಯನ್
10. ಮಹಿಳಾ ಮುನ್ನಡೆ
11. ಕರ್ನಾಟಕ ಜನಶಕ್ತಿ
12. ಸಂವಿಧಾನ ಉಳಿವಿಗಾಗಿ ಕರ್ನಾಟಕ
13. ಸೌಥ್ ಇಂಡಿಯಾ ಸೆಲ್ ಫಾರ್ ಹ್ಯುಮನ್ ರೈಟ್ಸ್, ಎಡುಕೇಷನ್ ಅಂಡ್ ಮಾನಿಟರಿಂಗ್ (ಎಸ್‍ಐಸಿಎಚ್‍ಆರ್‍ಇಎಂ)
14. ರಾಮದಾಸ್ ರಾವ್
15. ತಾರಾ ಕೃಷ್ಣಮೂರ್ತಿ, ಕೋ ಫೌಂಡರ್, ಶಕ್ತಿ – ಪೊಲಿಟಿಕಲ್ ಪವರ್ ಟು ವುಮೆನ್
16. ಗಮನ ವರ್ಕರ್ಸ್ ಕಲೆಕ್ಟಿವ್, ಬೆಂಗಳೂರು
17. ಸಾಧನ ಮಹಿಳೆಯರ ಸಂಘ, ಬೆಂಗಳೂರು
18. ಲೈಂಗಿಕ ಹಿಂಸೆಯ ವಿರೋಧಿ ಜನಚಳವಳಿ
19. ಕರ್ನಾಟಕ ಗಾರ್ಮೆಂಟ್ಸ್ ವರ್ಕರ್ಸ್ ಯೂನಿಯನ್ (ಏಔಔಉU)
20. ಸೌತ್ ಇಂಡಿಯಾ ಫೆಡೆರೇಷನ್ ಆಫ್ ಟ್ರೇಡ್ ಯೂನಿಯನ್ಸ್ (SIಈಖಿU)
21. ಂIಏಙಂಖಿಂ (ಸೀನಿಯರ್ ಸಿಟಿಜನ್ಸ್ ಗ್ರೂಪ್)
22. ಮನೆಗೆಲಸ ಕಾರ್ಮಿಕರ ಯೂನಿಯನ್ (ಒಂಏಂಂಙU)
23. ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕರ ಯೂನಿಯನ್ (ಂಏಏಏU)
24. ಫೆಡಿನಾ
25. ರಾಜೇಶ್, ಉಮಾದೇವಿ, ಶ್ರೀನಿವಾಸ್

‘ನ್ಯಾಯಾಧೀಶರೇ ಆರೋಪಿಯಾದರೆ… ವಿಚಾರಣಾ ಪೀಠದಲ್ಲಿ ಸ್ವತಃ ನ್ಯಾಯಮೂರ್ತಿಯಾಗಿ ಕುಳಿತರೇ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...