Homeಕರ್ನಾಟಕರಂಜನ್ ಗಗೋಯಿರವರಿಗೆ ಕ್ಲೀನ್ ಚಿಟ್ ವಿರುದ್ಧ ರಾಷ್ಟ್ರದ್ಯಂತ ಪ್ರತಿಭಟನೆ

ರಂಜನ್ ಗಗೋಯಿರವರಿಗೆ ಕ್ಲೀನ್ ಚಿಟ್ ವಿರುದ್ಧ ರಾಷ್ಟ್ರದ್ಯಂತ ಪ್ರತಿಭಟನೆ

- Advertisement -
- Advertisement -

ಇಂಗ್ಲಿಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸುಪ್ರಿಂ ಕೋರ್ಟ್‍ನ ಮುಖ್ಯ ನ್ಯಾಯಾಮೂರ್ತಿ ರಂಜನ್ ಗೊಗಯಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಪ್ರಕರಣ ದಿನೇ ದಿನೇ ತಿರುವು ಪಡೆದುಕೊಳ್ಳುತ್ತಿದೆ. ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಾಧೀಶರ ಸಮಿತಿಯು ಸಮರ್ಪಕವಾಗಿ ವಿಚಾರಣೆ ನಡೆಸದೇ ಪ್ರಕರಣವನ್ನು ವಜಾ ಗೊಳಿಸಿರುವುದು ಸರಿಯಲ್ಲ ಎಂದು ಆರೋಪ ದೇಶದೆಲ್ಲೆಡೆ ಕೇಳಿ ಬರುತ್ತಿದ್ದು ಪ್ರತಿಭಟನೆಗಳು ನಡೆದಿವೆ. ಈ ವಿಷಯವಾಗಿ ಬೆಂಗಳೂರಿನಲ್ಲಿ ಗುರುವಾರ ವಕೀಲರು, ಕಾನೂನು ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಾಧೀಶ ರಂಜನ್ ಗೊಗಯಿ ಅವರ ಮೇಲೆ ಸುಪ್ರೀಂ ಕೋರ್ಟ್‍ನಲ್ಲಿ ಕೆಲಸ ಮಾಡಿದ್ದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಇತ್ತೀಚೆಗೆ ದೂರು ನೀಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಾಧೀಶರ ಸಮಿತಿಯು ‘ಈ ಆರೋಪದಲ್ಲಿ ಹುರುಳಿಲ್ಲ’ ಎಂದು ವರದಿ ನೀಡಿ, ರಂಜನ್ ಗಗೋಯ್ ರವರಿಗೆ ಕ್ಲೀನ್ ಚಿಟ್ ನೀಡಿತ್ತು.

‘ಸುಪ್ರೀಂ ಕೋರ್ಟ್‍ನ ವಿಶ್ವಾಸಾರ್ಹತೆಯ ಗಂಭೀರ ಬಿಕ್ಕಟ್ಟಿನಲ್ಲಿದೆ. ನ್ಯಾಯಾಲಯವು ದೂರುದಾರರ ದೂರನ್ನು ಸರಿಯಾದ ರೀತಿಯಲ್ಲಿ ಆಲಿಸುವಲ್ಲಿ ವಿಫಲವಾಗಿದೆ. ದೂರುದಾರಳ ಬೇಡಿಕೆಯಾದ ‘ವಿಶೇಷ ವಿಚಾರಣಾ ಸಮಿತಿ’ಯನ್ನು ಕಡೆಗಣಿಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಕಿರಿಯರಾದ (ಜೂನಿಯರ್ಸ್) ನ್ಯಾಯಮೂರ್ತಿಗಳನ್ನು ಒಳಗೊಂಡ ಇನ್-ಹೌಸ್ ಸಮಿತಿಯನ್ನು ರಚಿಸಿತು. ಈ ಸಮಿತಿ 2019ರ ಮೇ 6 ರಂದು ‘ದೂರಿನಲ್ಲಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ’ ಎನ್ನುವ ತೀರ್ಮಾನ ನೀಡಿದ್ದಕ್ಕೆ ಆಶ್ಚರ್ಯ ಪಡಬೇಕಿಲ್ಲ.’ ಎಂದು ಪ್ರತಿಭಟನೆಯಲ್ಲಿ ಭಾಗಿಯಾದ ವಕೀಲರಾದ ವಿನಯ್ ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸುತ್ತಾರೆ.

ವಿನಯ್ ಶ್ರೀನಿವಾಸನ್

‘ನಾವೆಲ್ಲ ದೂರುದಾರ ಮಹಿಳೆಯೊಂದಿಗೆ ಐಕ್ಯಮತವಾಗಿ ನಿಂತುಕೊಳ್ಳುತ್ತೇವೆ. ಒಂದು ಸ್ವತಂತ್ರ ಮತ್ತು ನ್ಯಾಯಸಮ್ಮತ ವಿಚಾರಣೆಯ ನೀತಿನಿಯಮಗಳನ್ನು ಪಾಲಿಸದೇ ಸಮಿತಿ ನೀಡಿದ ತೀರ್ಮಾನವನ್ನು ತಿರಸ್ಕರಿಸುತ್ತೇವೆ. ಈ ಪ್ರಕರಣದಲ್ಲಿ ಪಾಲಿಸಲಾದ ಪ್ರಕ್ರಿಯೆಯಲ್ಲಿ ಬರೀ ಸ್ವಾಭಾವಿಕ ನ್ಯಾಯದ ತತ್ವಗಳನ್ನು ಮಾತ್ರ ಉಲ್ಲಂಘನೆಯಾಗದೇ ವಿಶಾಖ ತೀರ್ಪಿನ ಚೈತನ್ಯ ಮತ್ತು ಅದರಿಂದ ರೂಪಿಸಲಾದ ನೀತಿಗಳ ಉಲ್ಲಂಘನೆಯೂ ಆಗಿದೆ. ಇಷ್ಟೇ ಅಲ್ಲದೇ ಕೆಲಸ ಮಾಡುವ ಸ್ಥಳಗಳಲ್ಲಿ ಆಗುವ ಅಧಿಕಾರದ ಅಸಮತೋಲನಗಳನ್ನು ಗುರುತಿಸಿ ಅದನ್ನು ಸರಿಪಡಿಸಲು ಇರುವ ಸೆಕ್ಷುವಲ್ ಹ್ಯಾರ್ಯಾಸ್‍ಮೆಂಟ್ ಆಫ್ ವಿಮೆನ್ ಎಟ್ ವಕ್‍ಪ್ಲೇಸ್ ಆ್ಯಕ್ಟ್ 2013 (POSH ACT) ನ ಉಲ್ಲಂಘನೆಯೂ ಆಗಿದೆ’ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

 

ಇದನ್ನು ಓದಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

ನಾವೆಲ್ಲರೂ ನ್ಯಾಯಾಂಗದ ಸ್ವಾತಂತ್ರ ಮತ್ತು ಸ್ವಾಯತ್ತತೆಯ ಪರವಾಗಿದ್ದು, ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುತ್ತೇವೆ ಮತ್ತು ಗೌರವಿಸುತ್ತೇವೆ. ಆದರೆ ನಾವು ನ್ಯಾಯಾಂಗ ವ್ಯವಸ್ಥೆಯಲ್ಲಿ ಆಗುವ ಲೋಪದೋಷಗಳನ್ನು ಗುರುತಿಸಿ ಅವುಗಳನ್ನು ತೋರಿಸುವುದರಲ್ಲಿಯೂ ನಂಬಿಕೆ ಇಡುತ್ತೇವೆ, ಅದರಿಂದ ಲೋಪದೋಷಗಳನ್ನು ತಿದ್ದುಕೊಳ್ಳಲು ಸಹಾಯ ಆಗಿ ನ್ಯಾಯಾಂಗದ ಸ್ವಾತಂತ್ರದ ರಕ್ಷಣೆ ಆಗುತ್ತದೆಯೇ ಹೊರತು ಅದರ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದಂತೆ ಆಗುವುದಿಲ್ಲ. ನಮ್ಮ ದೇಶದ ಅತ್ಯುನ್ನತ ಸಾಂವಿಧಾನಿಕ ಪ್ರಾಧಿಕಾರವಾದ ಭಾರತದ ಸುಪ್ರೀಮ್ ಕೋರ್ಟಿನಿಂದ ಆದ ಅಧಿಕಾರದ ಈ ಸ್ಪಷ್ಟ ದುರ್ಬಳಕೆಯಿಂದ ನಮಗೆ ಹತಾಶೆ ಆಘಾತವಾಗಿದೆ ಎನ್ನುತ್ತಾರೆ ಪ್ರತಿಭಟನಾಕಾರರು.

ಸುಪ್ರೀಂ ಕೋರ್ಟ್ ತಾನು ಮಾಡಿದ ತಪ್ಪನ್ನು ತಿದ್ದಬೇಕು ಎಂದು ನಾವು ಆಗ್ರಹಿಸುತ್ತೇವೆ ಹಾಗೂ ದೂರುದಾರರ ಮೇಲೆ ಆಗಿರುವ ಘೋರ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸುತ್ತೇವೆ. ಸ್ಪಷ್ಟವಾದ ಕಾರ್ಯವಿಧಾನಗಳ ಅನುಪಸ್ಥಿತಿಯಲ್ಲಿ, ಸಹಜ ನ್ಯಾಯದ ತತ್ವಗಳನ್ನು ಪಾಲಿಸದೇ ಹಾಗೂ ದೂರುದಾರರ ಪರಿಣಾಮಕಾರಿಯಾದ ಪ್ರಾತಿನಿಧ್ಯ ಇಲ್ಲದೇ ಆಗಿರುವ ಈ ವರದಿ (ಇದನ್ನು ಸಾರ್ವಜನಿಕಗೊಳಿಸದೇ ಇದ್ದರೂ) ಯನ್ನು ಈ ವಿಷಯಕ್ಕೆ ಸಂಬಂಧಪಟ್ಟಂತೆ ಇದೇ ಕೊನೆಯ ಮತ್ತು ಅಂತಿಮ ತೀರ್ಪು ಎಂದು ಒಪ್ಪಿಕೊಳ್ಳಲಾಗದು ಎಂದರು.

ಪ್ರತಿಭಟನಾಕಾರರು ಸುಪ್ರೀಂ ಕೋರ್ಟಿನ ಮುಂದಿಟ್ಟಿರುವ ಹಕ್ಕೊತ್ತಾಯಗಳು ಕೆಳಗಿನಂತಿವೆ.

1. ದೂರುದಾರರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಸುಪ್ರೀಂ ಕೋಟ್‍ನ ಪೂರ್ಣ ಪೀಠ ಸೂಕ್ತ ಕ್ರಮ ತೆಗೆದುಕೊಳ್ಳುವ ಮೂಲಕ ಸುಪ್ರೀಂಕೋರ್ಟ್ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಪುನರ್‍ಗಳಿಸಬೇಕು.
2. ವಿಶಾಖ ಗೈಡ್‍ಲೈನ್ಸ್, POSH ACT ಬದ್ಧವಾಗಿರುವಂತಹ ಹೊಸ ಸಮಿತಿಯನ್ನು ಸೂಕ್ತ ಪ್ರಕ್ರಿಯೆಯ ಮೂಲಕ ರಚಿಸಿ ದೂರುದಾರರ ಹಿತಾಸಕ್ತಿಯನ್ನು ಕಾಪಾಡಬೇಕು.
3. ಜಸ್ಟೀಸ್ ಬಾಬ್ಡೆ ಪ್ಯಾನಲ್ ವರದಿಯ ಪ್ರತಿಯೊಂದನ್ನು ದೂರುದಾರರಿಗೆ ನೀಡಬೇಕು
4. ದೂರುದಾರರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು
5. ರಚಿಸಬೇಕಿರುವ ಹೊಸ ಸಮಿತಿಗೆ ದಲಿತ ಸಮುದಾಯಕ್ಕೆ ಸೇರಿದ ಒಬ್ಬರಾದರೂ ನ್ಯಾಯಾಂಗ (ವಕೀಲರು/ನ್ಯಾಯಾಧೀಶರು/ನಿವೃತ್ತ ನ್ಯಾಯಾಧೀಶರು) ವ್ಯಕ್ತಿಯನ್ನು ನೇಮಿಸಬೇಕು.
6. ಎಸ್‍ಸಿ/ಎಸ್‍ಟಿ/ಒಬಿಸಿ ಸಮುದಾಯಕ್ಕೆ ಸೇರಿದ ವ್ಯಕ್ತಿಗಳಿಗೆ ನ್ಯಾಯಾಂಗದ ಉನ್ನತ ಸ್ಥಾನಗಳಲ್ಲಿ ಮೀಸಲಾತಿಯನ್ನು ಒದಗಿಸಬೇಕು
ಈ ಮೊಕದ್ದಮೆಗೆ ಸಂಬಂಧಿಸಿ ನ್ಯಾ.ಚಂದ್ರಚೂಡ್ ಅವರ ಸಲಹೆಗಳನ್ನು ನಾವು ಅನುಮೋದಿಸುತ್ತೇವೆ.
7. ಹೊಸ ಸಮಿತಿಗೆ ನಿವೃತ್ತ ಮಹಿಳಾ ನ್ಯಾಯಾಧೀಶರನ್ನು ಬಾಹ್ಯ ಸದಸ್ಯರಾಗಿ ಕಡ್ಡಾಯವಾಗಿ ನೇಮಕ ಮಾಡಬೇಕು
8. ಬಾರ್ ಕೌನ್ಸಿಲ್‍ನ ಗೌರವಾನ್ವಿತ ಮಹಿಳಾ ಸದಸ್ಯರನ್ನು ಅಮಿಕಸ್ ಕ್ಯೂರಿ (ಕೋರ್ಟ್‍ನ ಸ್ನೇಹಿತರು) ಎಂದು ಪರಿಗಣಿಸಬೇಕು
9. ದೂರುದಾರರು ಮುಂದಿಟ್ಟಿರುವ ಕುಂದುಕೊರತೆಗಳನ್ನು, ಅದರಲ್ಲೂ ವಕೀಲರೊಬ್ಬರ ನೆರವನ್ನು ಪಡೆಯುವಂತಹವನ್ನು ಪರಿಗಣಿಸಿ ಪರಿಹಾರ ಕಲ್ಪಿಸಬೇಕು.

ಪ್ರತಿಭಟನೆಗೆ ಭಾಗವಹಿಸಿದ, ಬೆಂಬಲಿಸಿದ ಸಂಘಟನೆಗಳು

ಸಿಐಇಡಿಎಸ್ ಕಲೆಕ್ಟಿವ್, ಬೆಂಗಳೂರು
2. ಪರ್ಯಾಯ ಕಾನೂನು ವೇದಿಕೆ, ಬೆಂಗಳೂರು
3. ನ್ಯಾಷನಲ್ ನೆಟ್‍ವರ್ಕ್ ಆಫ್ ಸೆಕ್ಸ್ ವರ್ಕರ್ಸ್
4. ಕರ್ನಾಟಕ ಜನಾರೋಗ್ಯ ಚಳವಳಿ
5. ವಂಪ್
6. ಮುಸ್ಕಾನ್
7. ಕರ್ನಾಟಕ ಸೆಕ್ಸ್ ವರ್ಕ್‍ರ್ಸ್ ಯೂನಿಯನ್
8. ಸ್ತ್ರೀ ಜಾಗೃತಿ ಸಮಿತಿ
9. ಡೊಮೆಸ್ಟಿಕ್ ವರ್ಕ್‍ರ್ಸ್ ರೈಟ್ಸ್ ಯೂನಿಯನ್
10. ಮಹಿಳಾ ಮುನ್ನಡೆ
11. ಕರ್ನಾಟಕ ಜನಶಕ್ತಿ
12. ಸಂವಿಧಾನ ಉಳಿವಿಗಾಗಿ ಕರ್ನಾಟಕ
13. ಸೌಥ್ ಇಂಡಿಯಾ ಸೆಲ್ ಫಾರ್ ಹ್ಯುಮನ್ ರೈಟ್ಸ್, ಎಡುಕೇಷನ್ ಅಂಡ್ ಮಾನಿಟರಿಂಗ್ (ಎಸ್‍ಐಸಿಎಚ್‍ಆರ್‍ಇಎಂ)
14. ರಾಮದಾಸ್ ರಾವ್
15. ತಾರಾ ಕೃಷ್ಣಮೂರ್ತಿ, ಕೋ ಫೌಂಡರ್, ಶಕ್ತಿ – ಪೊಲಿಟಿಕಲ್ ಪವರ್ ಟು ವುಮೆನ್
16. ಗಮನ ವರ್ಕರ್ಸ್ ಕಲೆಕ್ಟಿವ್, ಬೆಂಗಳೂರು
17. ಸಾಧನ ಮಹಿಳೆಯರ ಸಂಘ, ಬೆಂಗಳೂರು
18. ಲೈಂಗಿಕ ಹಿಂಸೆಯ ವಿರೋಧಿ ಜನಚಳವಳಿ
19. ಕರ್ನಾಟಕ ಗಾರ್ಮೆಂಟ್ಸ್ ವರ್ಕರ್ಸ್ ಯೂನಿಯನ್ (ಏಔಔಉU)
20. ಸೌತ್ ಇಂಡಿಯಾ ಫೆಡೆರೇಷನ್ ಆಫ್ ಟ್ರೇಡ್ ಯೂನಿಯನ್ಸ್ (SIಈಖಿU)
21. ಂIಏಙಂಖಿಂ (ಸೀನಿಯರ್ ಸಿಟಿಜನ್ಸ್ ಗ್ರೂಪ್)
22. ಮನೆಗೆಲಸ ಕಾರ್ಮಿಕರ ಯೂನಿಯನ್ (ಒಂಏಂಂಙU)
23. ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕರ ಯೂನಿಯನ್ (ಂಏಏಏU)
24. ಫೆಡಿನಾ
25. ರಾಜೇಶ್, ಉಮಾದೇವಿ, ಶ್ರೀನಿವಾಸ್

‘ನ್ಯಾಯಾಧೀಶರೇ ಆರೋಪಿಯಾದರೆ… ವಿಚಾರಣಾ ಪೀಠದಲ್ಲಿ ಸ್ವತಃ ನ್ಯಾಯಮೂರ್ತಿಯಾಗಿ ಕುಳಿತರೇ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...