Homeಮುಖಪುಟ‘ತಂದೆ ವಿರುದ್ಧ ಬಿಜೆಪಿ ನಾಯಕನ ಹೇಳಿಕೆ’ | ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಾದ ದಿಲ್ಲಿ ಸಿಎಂ ಅತಿಶಿ

‘ತಂದೆ ವಿರುದ್ಧ ಬಿಜೆಪಿ ನಾಯಕನ ಹೇಳಿಕೆ’ | ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಾದ ದಿಲ್ಲಿ ಸಿಎಂ ಅತಿಶಿ

- Advertisement -
- Advertisement -

ಬಿಜೆಪಿ ನಾಯಕ ರಮೇಶ್ ಬಿಧುರಿ ಅವರು ತಮ್ಮ ತಂದೆಯ ಬಗ್ಗೆ ಹೇಳಿದ್ದ ಆಕ್ಷೇಪಾರ್ಹ ಹೇಳಿಕೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ದೆಹಲಿ ಮುಖ್ಯಮಂತ್ರಿ ಅತಿಶಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಭಾವುಕರಾಗಿದ್ದಾರೆ. ಕ್ಯಾಮೆರಾ ಮುಂದೆಯೆ ಕಣ್ಣೀರು ಹಾಕಿದ ಅವರು, ಸಂಕಟದಿಂದ ಮಾತನಾಡಿದರು. ಬಿಧುರಿ ತಮ್ಮ ವಯಸ್ಸಾದ ತಂದೆಯನ್ನು ಮತ ಗಳಿಸಲು ಬಳಸಿಕೊಂಡು ಅಧೋಗತಿಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ. ತಂದೆ ವಿರುದ್ಧ ಬಿಜೆಪಿ

”ವಯಸ್ಸಾದ, ನಡೆಯಲು ಸಹ ಆಸರೆ ಬೇಕಿರುವ ನನ್ನ ತಂದೆಯನ್ನು ರಾಜಕೀಯ ಲಾಭಕ್ಕಾಗಿ ಅವರು ಬಳಸಿಕೊಳ್ಳುತ್ತಿದ್ದಾರೆ” ಎಂದು ಅತಿಶಿ ಕಣ್ಣೀರಿಟ್ಟಿದ್ದಾರೆ. ಬಿಜೆಪಿ ನಾಯಕ ಬಿಧುರಿಯ ಟೀಕೆಗಳ ಬಗ್ಗೆ ಅವರು ತಮ್ಮ ದುಃಖವನ್ನು ವ್ಯಕ್ತಪಡಿಸಿ, ಇಂತಹ ತಂತ್ರಗಳು ತೀವ್ರ ನೋವುಂಟುಮಾಡುತ್ತವೆ ಮತ್ತು ಇದು ಅನುಚಿತವಾಗಿವೆ ಎಂದು ಒತ್ತಿ ಹೇಳಿದ್ದಾರೆ. ತಂದೆ ವಿರುದ್ಧ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಕ್ಷದ ಕೆಲಸ ಮತ್ತು ಜನಸೇವೆಯ ಮೂಲಕ ಮತಗಳನ್ನು ಗೆಲ್ಲುವತ್ತ ಗಮನ ಹರಿಸಬೇಕು ಎಂದು ಹೇಳಿದ ಸಿಎಂ ಅತಿಶಿ, ರಾಜಕೀಯ ಪ್ರಚಾರದಲ್ಲಿ ವೈಯಕ್ತಿಕ ದಾಳಿ ಅಥವಾ ಕುಟುಂಬ ಸದಸ್ಯರನ್ನು ಬಳಸಿ ಶೋಷಣೆ ಮಾಡುವುದು ಸರಿಯಲ್ಲ, “ನೀವು ನಿಮ್ಮ ಕೆಲಸದ ವಿಚಾರದಲ್ಲಿ ಮತಗಳನ್ನು ಕೇಳಿ” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

 

ರ‍್ಯಾಲಿಯೊಂದರಲ್ಲಿ ಮಾತನಾಡಿದ್ದ ರಮೇಶ್ ಬಿಧುರಿ, ಎಎಪಿ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಅತಿಶಿ ವಿರುದ್ಧ ವಾಗ್ದಾಳಿ ನಡೆಸುತ್ತಾ, “ಭ್ರಷ್ಟ ಕಾಂಗ್ರೆಸ್ ಜೊತೆ ಹೋಗುವುದಿಲ್ಲ ಎಂದು ಕೇಜ್ರಿವಾಲ್ ತಮ್ಮ ಮಕ್ಕಳ ಮೇಲೆ ಆಣೆ ಪ್ರಮಾಣ ಮಾಡಿದರು; ಮರ್ಲೆನಾ ತನ್ನ ತಂದೆಯನ್ನೆ ಬದಲಾಯಿಸಿದರು. ಮೊದಲು ಅವಳು ಮರ್ಲೆನಾ ಆಗಿದ್ದರು, ಈಗ ಅವಳು ಸಿಂಗ್ ಆಗಿದ್ದಾರೆ. ಇದು ಅವರ ಚಾರಿತ್ರ್ಯ” ಎಂದು ಹೇಳಿದ್ದಾರೆ

“ಅವರು ನಾಚಿಕೆಯ ಎಲ್ಲ ಮಿತಿಗಳನ್ನು ದಾಟಿದ್ದು, ಮಹಿಳಾ ಮುಖ್ಯಮಂತ್ರಿಯನ್ನು ಅವಮಾನ ಮಾಡಿರುವುದನ್ನು ದೆಹಲಿಯ ಜನರು ಸಹಿಸುವುದಿಲ್ಲ. ಇದರ ವಿರುದ್ಧ ದೆಹಲಿಯ ಎಲ್ಲಾ ಮಹಿಳೆಯರು ಪ್ರತೀಕಾರ ತೀರಿಸಿಕೊಳ್ಳುತ್ತಾರೆ” ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಎಕ್ಸ್‌ನಲ್ಲಿ ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಬಿಧುರಿ ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ಕೂಡಾ ಅಶ್ಲೀಲ ಹೇಳಿಕೆ ನೀಡಿದ್ದರು. ಅವರ ಹೇಳಿಕೆಗಳು ಬಿಜೆಪಿಯ “ಮಹಿಳಾ ವಿರೋಧಿ” ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕಾಂಗ್ರೆಸ್ ಮತ್ತು ಎಎಪಿ ಆರೋಪಿಸಿದೆ.

“ಲಾಲು ಪ್ರಸಾದ್ ಯಾದವ್ ಅವರು ಬಿಹಾರದ ರಸ್ತೆಗಳನ್ನು ಹೇಮಾಮಾಲಿನಿಯ ಕೆನ್ನೆಯಂತೆ ಮಾಡುವುದಾಗಿ ಹೇಳಿದ್ದರು. ಆದರೆ ಅವರು ಸುಳ್ಳು ಹೇಳಿದ್ದು, ಅವರಿಗೆ ಅದನ್ನು ಮಾಡಲು ಸಾಧ್ಯವಾಗಿಲ್ಲ. ಆದರೆ ಓಖ್ಲಾ ಮತ್ತು ಸಂಗಮ್ ವಿಹಾರ್‌ನಲ್ಲಿ ನಾವು ನಿರ್ಮಿಸಿದ ರಸ್ತೆಗಳಂತೆ, ಕಲ್ಕಾಜಿಯ ಎಲ್ಲಾ ರಸ್ತೆಗಳನ್ನು ಪ್ರಿಯಾಂಕ ಗಾಂಧಿ ಅವರ ಕೆನ್ನೆಗಳಂತೆ ಮಾಡುತ್ತೇವೆ ಎಂದು ನಿಮಗೆ ಭರವಸೆ ನೀಡುತ್ತೇನೆ” ಎಂದು ಬಿಧುರಿ ಹೇಳಿರುವ ವಿಡಿಯೋದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಅವರು, “ಪ್ರಿಯಾಂಕಾ ಗಾಂಧಿ ಬಗ್ಗೆ ರಮೇಶ್ ಬಿಧುರಿ ಅವರ ಹೇಳಿಕೆ ಅತ್ಯಂತ ನಾಚಿಕೆಗೇಡಿನ ಸಂಗತಿ. ಅಷ್ಟೆ ಅಲ್ಲದೆ, ಅವರ ಹೇಳಿಕೆ ಅವರ ಕೊಳಕು ಮಹಿಳಾ ವಿರೋಧಿ ಚಿಂತನೆಯನ್ನು ಬಿಂಬಿಸುತ್ತದೆ. ಅದಾಗ್ಯೂ, ಸದನದಲ್ಲಿ ತನ್ನ ಸಹ ಸಂಸದರ ವಿರುದ್ಧ ಅಸಭ್ಯ ಭಾಷೆ ಬಳಸಿ ಯಾವುದೇ ಶಿಕ್ಷೆಗೆ ಗುರಿಯಾಗದ ವ್ಯಕ್ತಿಯಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?” ಎಂದು ಹೇಳಿದ್ದಾರೆ.

“ಬಿಧುರಿ ಮಾತ್ರವಲ್ಲ, ಬಿಜೆಪಿಯ ಉನ್ನತ ನಾಯಕತ್ವ ಇದಕ್ಕಾಗಿ ಕೈ ಜೋಡಿಸಿ ಕ್ಷಮೆಯಾಚಿಸಬೇಕು” ಎಂದು ಶ್ರೀನಾಟೆ ಹೇಳಿದ್ದು, ಇದು ಕೇವಲ ಪ್ರಿಯಾಂಕಾ ಗಾಂಧಿಗೆ ಮಾತ್ರವಲ್ಲ ಎಲ್ಲಾ ಮಹಿಳೆಯರಿಗೆ ಮಾಡಿದ ಅವಮಾನವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂಓದಿ:  ದೆಹಲಿ ಚುನಾವಣೆ: ಎಎಪಿಯ ‘ಮಹಿಳಾ ಸಮ್ಮಾನ್’ ನಂತರ ಕಾಂಗ್ರೆಸ್ ‘ಪ್ಯಾರಿ ದೀದಿ’ ಯೋಜನೆ

ದೆಹಲಿ ಚುನಾವಣೆ: ಎಎಪಿಯ ‘ಮಹಿಳಾ ಸಮ್ಮಾನ್’ ನಂತರ ಕಾಂಗ್ರೆಸ್ ‘ಪ್ಯಾರಿ ದೀದಿ’ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...