Homeಮುಖಪುಟ‘ತಂದೆ ವಿರುದ್ಧ ಬಿಜೆಪಿ ನಾಯಕನ ಹೇಳಿಕೆ’ | ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಾದ ದಿಲ್ಲಿ ಸಿಎಂ ಅತಿಶಿ

‘ತಂದೆ ವಿರುದ್ಧ ಬಿಜೆಪಿ ನಾಯಕನ ಹೇಳಿಕೆ’ | ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಾದ ದಿಲ್ಲಿ ಸಿಎಂ ಅತಿಶಿ

- Advertisement -
- Advertisement -

ಬಿಜೆಪಿ ನಾಯಕ ರಮೇಶ್ ಬಿಧುರಿ ಅವರು ತಮ್ಮ ತಂದೆಯ ಬಗ್ಗೆ ಹೇಳಿದ್ದ ಆಕ್ಷೇಪಾರ್ಹ ಹೇಳಿಕೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ದೆಹಲಿ ಮುಖ್ಯಮಂತ್ರಿ ಅತಿಶಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಭಾವುಕರಾಗಿದ್ದಾರೆ. ಕ್ಯಾಮೆರಾ ಮುಂದೆಯೆ ಕಣ್ಣೀರು ಹಾಕಿದ ಅವರು, ಸಂಕಟದಿಂದ ಮಾತನಾಡಿದರು. ಬಿಧುರಿ ತಮ್ಮ ವಯಸ್ಸಾದ ತಂದೆಯನ್ನು ಮತ ಗಳಿಸಲು ಬಳಸಿಕೊಂಡು ಅಧೋಗತಿಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ. ತಂದೆ ವಿರುದ್ಧ ಬಿಜೆಪಿ

”ವಯಸ್ಸಾದ, ನಡೆಯಲು ಸಹ ಆಸರೆ ಬೇಕಿರುವ ನನ್ನ ತಂದೆಯನ್ನು ರಾಜಕೀಯ ಲಾಭಕ್ಕಾಗಿ ಅವರು ಬಳಸಿಕೊಳ್ಳುತ್ತಿದ್ದಾರೆ” ಎಂದು ಅತಿಶಿ ಕಣ್ಣೀರಿಟ್ಟಿದ್ದಾರೆ. ಬಿಜೆಪಿ ನಾಯಕ ಬಿಧುರಿಯ ಟೀಕೆಗಳ ಬಗ್ಗೆ ಅವರು ತಮ್ಮ ದುಃಖವನ್ನು ವ್ಯಕ್ತಪಡಿಸಿ, ಇಂತಹ ತಂತ್ರಗಳು ತೀವ್ರ ನೋವುಂಟುಮಾಡುತ್ತವೆ ಮತ್ತು ಇದು ಅನುಚಿತವಾಗಿವೆ ಎಂದು ಒತ್ತಿ ಹೇಳಿದ್ದಾರೆ. ತಂದೆ ವಿರುದ್ಧ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಕ್ಷದ ಕೆಲಸ ಮತ್ತು ಜನಸೇವೆಯ ಮೂಲಕ ಮತಗಳನ್ನು ಗೆಲ್ಲುವತ್ತ ಗಮನ ಹರಿಸಬೇಕು ಎಂದು ಹೇಳಿದ ಸಿಎಂ ಅತಿಶಿ, ರಾಜಕೀಯ ಪ್ರಚಾರದಲ್ಲಿ ವೈಯಕ್ತಿಕ ದಾಳಿ ಅಥವಾ ಕುಟುಂಬ ಸದಸ್ಯರನ್ನು ಬಳಸಿ ಶೋಷಣೆ ಮಾಡುವುದು ಸರಿಯಲ್ಲ, “ನೀವು ನಿಮ್ಮ ಕೆಲಸದ ವಿಚಾರದಲ್ಲಿ ಮತಗಳನ್ನು ಕೇಳಿ” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

 

ರ‍್ಯಾಲಿಯೊಂದರಲ್ಲಿ ಮಾತನಾಡಿದ್ದ ರಮೇಶ್ ಬಿಧುರಿ, ಎಎಪಿ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಅತಿಶಿ ವಿರುದ್ಧ ವಾಗ್ದಾಳಿ ನಡೆಸುತ್ತಾ, “ಭ್ರಷ್ಟ ಕಾಂಗ್ರೆಸ್ ಜೊತೆ ಹೋಗುವುದಿಲ್ಲ ಎಂದು ಕೇಜ್ರಿವಾಲ್ ತಮ್ಮ ಮಕ್ಕಳ ಮೇಲೆ ಆಣೆ ಪ್ರಮಾಣ ಮಾಡಿದರು; ಮರ್ಲೆನಾ ತನ್ನ ತಂದೆಯನ್ನೆ ಬದಲಾಯಿಸಿದರು. ಮೊದಲು ಅವಳು ಮರ್ಲೆನಾ ಆಗಿದ್ದರು, ಈಗ ಅವಳು ಸಿಂಗ್ ಆಗಿದ್ದಾರೆ. ಇದು ಅವರ ಚಾರಿತ್ರ್ಯ” ಎಂದು ಹೇಳಿದ್ದಾರೆ

“ಅವರು ನಾಚಿಕೆಯ ಎಲ್ಲ ಮಿತಿಗಳನ್ನು ದಾಟಿದ್ದು, ಮಹಿಳಾ ಮುಖ್ಯಮಂತ್ರಿಯನ್ನು ಅವಮಾನ ಮಾಡಿರುವುದನ್ನು ದೆಹಲಿಯ ಜನರು ಸಹಿಸುವುದಿಲ್ಲ. ಇದರ ವಿರುದ್ಧ ದೆಹಲಿಯ ಎಲ್ಲಾ ಮಹಿಳೆಯರು ಪ್ರತೀಕಾರ ತೀರಿಸಿಕೊಳ್ಳುತ್ತಾರೆ” ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಎಕ್ಸ್‌ನಲ್ಲಿ ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಬಿಧುರಿ ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ಕೂಡಾ ಅಶ್ಲೀಲ ಹೇಳಿಕೆ ನೀಡಿದ್ದರು. ಅವರ ಹೇಳಿಕೆಗಳು ಬಿಜೆಪಿಯ “ಮಹಿಳಾ ವಿರೋಧಿ” ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕಾಂಗ್ರೆಸ್ ಮತ್ತು ಎಎಪಿ ಆರೋಪಿಸಿದೆ.

“ಲಾಲು ಪ್ರಸಾದ್ ಯಾದವ್ ಅವರು ಬಿಹಾರದ ರಸ್ತೆಗಳನ್ನು ಹೇಮಾಮಾಲಿನಿಯ ಕೆನ್ನೆಯಂತೆ ಮಾಡುವುದಾಗಿ ಹೇಳಿದ್ದರು. ಆದರೆ ಅವರು ಸುಳ್ಳು ಹೇಳಿದ್ದು, ಅವರಿಗೆ ಅದನ್ನು ಮಾಡಲು ಸಾಧ್ಯವಾಗಿಲ್ಲ. ಆದರೆ ಓಖ್ಲಾ ಮತ್ತು ಸಂಗಮ್ ವಿಹಾರ್‌ನಲ್ಲಿ ನಾವು ನಿರ್ಮಿಸಿದ ರಸ್ತೆಗಳಂತೆ, ಕಲ್ಕಾಜಿಯ ಎಲ್ಲಾ ರಸ್ತೆಗಳನ್ನು ಪ್ರಿಯಾಂಕ ಗಾಂಧಿ ಅವರ ಕೆನ್ನೆಗಳಂತೆ ಮಾಡುತ್ತೇವೆ ಎಂದು ನಿಮಗೆ ಭರವಸೆ ನೀಡುತ್ತೇನೆ” ಎಂದು ಬಿಧುರಿ ಹೇಳಿರುವ ವಿಡಿಯೋದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಅವರು, “ಪ್ರಿಯಾಂಕಾ ಗಾಂಧಿ ಬಗ್ಗೆ ರಮೇಶ್ ಬಿಧುರಿ ಅವರ ಹೇಳಿಕೆ ಅತ್ಯಂತ ನಾಚಿಕೆಗೇಡಿನ ಸಂಗತಿ. ಅಷ್ಟೆ ಅಲ್ಲದೆ, ಅವರ ಹೇಳಿಕೆ ಅವರ ಕೊಳಕು ಮಹಿಳಾ ವಿರೋಧಿ ಚಿಂತನೆಯನ್ನು ಬಿಂಬಿಸುತ್ತದೆ. ಅದಾಗ್ಯೂ, ಸದನದಲ್ಲಿ ತನ್ನ ಸಹ ಸಂಸದರ ವಿರುದ್ಧ ಅಸಭ್ಯ ಭಾಷೆ ಬಳಸಿ ಯಾವುದೇ ಶಿಕ್ಷೆಗೆ ಗುರಿಯಾಗದ ವ್ಯಕ್ತಿಯಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?” ಎಂದು ಹೇಳಿದ್ದಾರೆ.

“ಬಿಧುರಿ ಮಾತ್ರವಲ್ಲ, ಬಿಜೆಪಿಯ ಉನ್ನತ ನಾಯಕತ್ವ ಇದಕ್ಕಾಗಿ ಕೈ ಜೋಡಿಸಿ ಕ್ಷಮೆಯಾಚಿಸಬೇಕು” ಎಂದು ಶ್ರೀನಾಟೆ ಹೇಳಿದ್ದು, ಇದು ಕೇವಲ ಪ್ರಿಯಾಂಕಾ ಗಾಂಧಿಗೆ ಮಾತ್ರವಲ್ಲ ಎಲ್ಲಾ ಮಹಿಳೆಯರಿಗೆ ಮಾಡಿದ ಅವಮಾನವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂಓದಿ:  ದೆಹಲಿ ಚುನಾವಣೆ: ಎಎಪಿಯ ‘ಮಹಿಳಾ ಸಮ್ಮಾನ್’ ನಂತರ ಕಾಂಗ್ರೆಸ್ ‘ಪ್ಯಾರಿ ದೀದಿ’ ಯೋಜನೆ

ದೆಹಲಿ ಚುನಾವಣೆ: ಎಎಪಿಯ ‘ಮಹಿಳಾ ಸಮ್ಮಾನ್’ ನಂತರ ಕಾಂಗ್ರೆಸ್ ‘ಪ್ಯಾರಿ ದೀದಿ’ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...