Homeಮುಖಪುಟ‘ತಂದೆ ವಿರುದ್ಧ ಬಿಜೆಪಿ ನಾಯಕನ ಹೇಳಿಕೆ’ | ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಾದ ದಿಲ್ಲಿ ಸಿಎಂ ಅತಿಶಿ

‘ತಂದೆ ವಿರುದ್ಧ ಬಿಜೆಪಿ ನಾಯಕನ ಹೇಳಿಕೆ’ | ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಾದ ದಿಲ್ಲಿ ಸಿಎಂ ಅತಿಶಿ

- Advertisement -
- Advertisement -

ಬಿಜೆಪಿ ನಾಯಕ ರಮೇಶ್ ಬಿಧುರಿ ಅವರು ತಮ್ಮ ತಂದೆಯ ಬಗ್ಗೆ ಹೇಳಿದ್ದ ಆಕ್ಷೇಪಾರ್ಹ ಹೇಳಿಕೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ದೆಹಲಿ ಮುಖ್ಯಮಂತ್ರಿ ಅತಿಶಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಭಾವುಕರಾಗಿದ್ದಾರೆ. ಕ್ಯಾಮೆರಾ ಮುಂದೆಯೆ ಕಣ್ಣೀರು ಹಾಕಿದ ಅವರು, ಸಂಕಟದಿಂದ ಮಾತನಾಡಿದರು. ಬಿಧುರಿ ತಮ್ಮ ವಯಸ್ಸಾದ ತಂದೆಯನ್ನು ಮತ ಗಳಿಸಲು ಬಳಸಿಕೊಂಡು ಅಧೋಗತಿಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ. ತಂದೆ ವಿರುದ್ಧ ಬಿಜೆಪಿ

”ವಯಸ್ಸಾದ, ನಡೆಯಲು ಸಹ ಆಸರೆ ಬೇಕಿರುವ ನನ್ನ ತಂದೆಯನ್ನು ರಾಜಕೀಯ ಲಾಭಕ್ಕಾಗಿ ಅವರು ಬಳಸಿಕೊಳ್ಳುತ್ತಿದ್ದಾರೆ” ಎಂದು ಅತಿಶಿ ಕಣ್ಣೀರಿಟ್ಟಿದ್ದಾರೆ. ಬಿಜೆಪಿ ನಾಯಕ ಬಿಧುರಿಯ ಟೀಕೆಗಳ ಬಗ್ಗೆ ಅವರು ತಮ್ಮ ದುಃಖವನ್ನು ವ್ಯಕ್ತಪಡಿಸಿ, ಇಂತಹ ತಂತ್ರಗಳು ತೀವ್ರ ನೋವುಂಟುಮಾಡುತ್ತವೆ ಮತ್ತು ಇದು ಅನುಚಿತವಾಗಿವೆ ಎಂದು ಒತ್ತಿ ಹೇಳಿದ್ದಾರೆ. ತಂದೆ ವಿರುದ್ಧ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಕ್ಷದ ಕೆಲಸ ಮತ್ತು ಜನಸೇವೆಯ ಮೂಲಕ ಮತಗಳನ್ನು ಗೆಲ್ಲುವತ್ತ ಗಮನ ಹರಿಸಬೇಕು ಎಂದು ಹೇಳಿದ ಸಿಎಂ ಅತಿಶಿ, ರಾಜಕೀಯ ಪ್ರಚಾರದಲ್ಲಿ ವೈಯಕ್ತಿಕ ದಾಳಿ ಅಥವಾ ಕುಟುಂಬ ಸದಸ್ಯರನ್ನು ಬಳಸಿ ಶೋಷಣೆ ಮಾಡುವುದು ಸರಿಯಲ್ಲ, “ನೀವು ನಿಮ್ಮ ಕೆಲಸದ ವಿಚಾರದಲ್ಲಿ ಮತಗಳನ್ನು ಕೇಳಿ” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

 

ರ‍್ಯಾಲಿಯೊಂದರಲ್ಲಿ ಮಾತನಾಡಿದ್ದ ರಮೇಶ್ ಬಿಧುರಿ, ಎಎಪಿ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಅತಿಶಿ ವಿರುದ್ಧ ವಾಗ್ದಾಳಿ ನಡೆಸುತ್ತಾ, “ಭ್ರಷ್ಟ ಕಾಂಗ್ರೆಸ್ ಜೊತೆ ಹೋಗುವುದಿಲ್ಲ ಎಂದು ಕೇಜ್ರಿವಾಲ್ ತಮ್ಮ ಮಕ್ಕಳ ಮೇಲೆ ಆಣೆ ಪ್ರಮಾಣ ಮಾಡಿದರು; ಮರ್ಲೆನಾ ತನ್ನ ತಂದೆಯನ್ನೆ ಬದಲಾಯಿಸಿದರು. ಮೊದಲು ಅವಳು ಮರ್ಲೆನಾ ಆಗಿದ್ದರು, ಈಗ ಅವಳು ಸಿಂಗ್ ಆಗಿದ್ದಾರೆ. ಇದು ಅವರ ಚಾರಿತ್ರ್ಯ” ಎಂದು ಹೇಳಿದ್ದಾರೆ

“ಅವರು ನಾಚಿಕೆಯ ಎಲ್ಲ ಮಿತಿಗಳನ್ನು ದಾಟಿದ್ದು, ಮಹಿಳಾ ಮುಖ್ಯಮಂತ್ರಿಯನ್ನು ಅವಮಾನ ಮಾಡಿರುವುದನ್ನು ದೆಹಲಿಯ ಜನರು ಸಹಿಸುವುದಿಲ್ಲ. ಇದರ ವಿರುದ್ಧ ದೆಹಲಿಯ ಎಲ್ಲಾ ಮಹಿಳೆಯರು ಪ್ರತೀಕಾರ ತೀರಿಸಿಕೊಳ್ಳುತ್ತಾರೆ” ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಎಕ್ಸ್‌ನಲ್ಲಿ ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಬಿಧುರಿ ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ಕೂಡಾ ಅಶ್ಲೀಲ ಹೇಳಿಕೆ ನೀಡಿದ್ದರು. ಅವರ ಹೇಳಿಕೆಗಳು ಬಿಜೆಪಿಯ “ಮಹಿಳಾ ವಿರೋಧಿ” ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕಾಂಗ್ರೆಸ್ ಮತ್ತು ಎಎಪಿ ಆರೋಪಿಸಿದೆ.

“ಲಾಲು ಪ್ರಸಾದ್ ಯಾದವ್ ಅವರು ಬಿಹಾರದ ರಸ್ತೆಗಳನ್ನು ಹೇಮಾಮಾಲಿನಿಯ ಕೆನ್ನೆಯಂತೆ ಮಾಡುವುದಾಗಿ ಹೇಳಿದ್ದರು. ಆದರೆ ಅವರು ಸುಳ್ಳು ಹೇಳಿದ್ದು, ಅವರಿಗೆ ಅದನ್ನು ಮಾಡಲು ಸಾಧ್ಯವಾಗಿಲ್ಲ. ಆದರೆ ಓಖ್ಲಾ ಮತ್ತು ಸಂಗಮ್ ವಿಹಾರ್‌ನಲ್ಲಿ ನಾವು ನಿರ್ಮಿಸಿದ ರಸ್ತೆಗಳಂತೆ, ಕಲ್ಕಾಜಿಯ ಎಲ್ಲಾ ರಸ್ತೆಗಳನ್ನು ಪ್ರಿಯಾಂಕ ಗಾಂಧಿ ಅವರ ಕೆನ್ನೆಗಳಂತೆ ಮಾಡುತ್ತೇವೆ ಎಂದು ನಿಮಗೆ ಭರವಸೆ ನೀಡುತ್ತೇನೆ” ಎಂದು ಬಿಧುರಿ ಹೇಳಿರುವ ವಿಡಿಯೋದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಅವರು, “ಪ್ರಿಯಾಂಕಾ ಗಾಂಧಿ ಬಗ್ಗೆ ರಮೇಶ್ ಬಿಧುರಿ ಅವರ ಹೇಳಿಕೆ ಅತ್ಯಂತ ನಾಚಿಕೆಗೇಡಿನ ಸಂಗತಿ. ಅಷ್ಟೆ ಅಲ್ಲದೆ, ಅವರ ಹೇಳಿಕೆ ಅವರ ಕೊಳಕು ಮಹಿಳಾ ವಿರೋಧಿ ಚಿಂತನೆಯನ್ನು ಬಿಂಬಿಸುತ್ತದೆ. ಅದಾಗ್ಯೂ, ಸದನದಲ್ಲಿ ತನ್ನ ಸಹ ಸಂಸದರ ವಿರುದ್ಧ ಅಸಭ್ಯ ಭಾಷೆ ಬಳಸಿ ಯಾವುದೇ ಶಿಕ್ಷೆಗೆ ಗುರಿಯಾಗದ ವ್ಯಕ್ತಿಯಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?” ಎಂದು ಹೇಳಿದ್ದಾರೆ.

“ಬಿಧುರಿ ಮಾತ್ರವಲ್ಲ, ಬಿಜೆಪಿಯ ಉನ್ನತ ನಾಯಕತ್ವ ಇದಕ್ಕಾಗಿ ಕೈ ಜೋಡಿಸಿ ಕ್ಷಮೆಯಾಚಿಸಬೇಕು” ಎಂದು ಶ್ರೀನಾಟೆ ಹೇಳಿದ್ದು, ಇದು ಕೇವಲ ಪ್ರಿಯಾಂಕಾ ಗಾಂಧಿಗೆ ಮಾತ್ರವಲ್ಲ ಎಲ್ಲಾ ಮಹಿಳೆಯರಿಗೆ ಮಾಡಿದ ಅವಮಾನವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂಓದಿ:  ದೆಹಲಿ ಚುನಾವಣೆ: ಎಎಪಿಯ ‘ಮಹಿಳಾ ಸಮ್ಮಾನ್’ ನಂತರ ಕಾಂಗ್ರೆಸ್ ‘ಪ್ಯಾರಿ ದೀದಿ’ ಯೋಜನೆ

ದೆಹಲಿ ಚುನಾವಣೆ: ಎಎಪಿಯ ‘ಮಹಿಳಾ ಸಮ್ಮಾನ್’ ನಂತರ ಕಾಂಗ್ರೆಸ್ ‘ಪ್ಯಾರಿ ದೀದಿ’ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...