Homeಕವನಮರೆವಿಗೆ ಎದುರಾಗಿ.. ಯುದ್ಧ ವಿರೋಧಿ ಪದ್ಯಗಳು

ಮರೆವಿಗೆ ಎದುರಾಗಿ.. ಯುದ್ಧ ವಿರೋಧಿ ಪದ್ಯಗಳು

- Advertisement -
- Advertisement -

1.

ನನ್ನ ಮಗಳು,
ಅವಳ ಸೈಕಲ್‌ನ ಹ್ಯಾಂಡಲ್ ನಡುವೆ ಕಟ್ಟಿದ್ದ
ಜೇಡರ ಬಲೆಯನ್ನು ಕತ್ತರಿಸಿ
ಆ ಜೇಡರ ಹುಳುವನ್ನು ಘಾಸಿ ಮಾಡಲು
ಸುತರಾಂ ಸಿದ್ಧಳಾಗಲಿಲ್ಲ.

ಎರಡು ವಾರ ಕಾಯ್ದಳು
ಜೇಡ ತಾನೇತಾನಾಗಿ
ಆ ಜಾಗ ಖಾಲೀ ಮಾಡುವ ತನಕ.

ನಾನು ಅವಳಿಗೆ ಬುದ್ಧಿ ಹೇಳಿದೆ.
ಅಲ್ಲ ಮಗಳೇ,
ನೀನು ಆ ಬಲೆಯನ್ನು ಕತ್ತರಿಸಿಬಿಟ್ಟಿದ್ದರೆ
ಜೇಡಕ್ಕೆ ಗೊತ್ತಾಗುತ್ತಿತ್ತು
ಆ ಜಾಗ ಅದರ ಮನೆಯಲ್ಲವೆಂದು,
ಮತ್ತು ನೀನು ಸೈಕಲ್ ಕೂಡ ಓಡಾಡಿಸಬಹುದಿತ್ತು.
ಮಗಳು ಕಣ್ಣು ಪಿಳುಕಿಸುತ್ತ….

ಅಪ್ಪಾ
ಹೀಗೆ ಮಾಡುವುದರಿಂದಲೇ ಅಲ್ವಾ
ಜನ, ರೆಫ್ಯೂಜಿಗಳಾಗೋದು?

ಫಾಡಿ ಜೂಡ,
ಪ್ಯಾಲೆಸ್ತೇನಿಯನ್-ಅಮೆರಿಕನ್ ಕವಿ

******

2.

“ನಾವು ರಿಯಲಿಸ್ಟಿಕ್ ಆಗಿ ಯೋಚಿಸಬೇಕು”
ಎಂದು ರಾಜಕಾರಣಿಗಳು ಎಚ್ಚರಿಕೆಯಿಂದ
ಗಂಭೀರವಾಗಿ ಮಾತಾಡುವಾಗ,
ಬಹುತೇಕ ಅವರು, ಸೋತು ಸುಣ್ಣವಾಗಿದ್ದಾರೆ
ಆದ್ದರಿಂದಲೇ ಅವರು ’ಸಮಾಧಾನ ಪ್ರಿಯರು’

ಆದರೆ, ಇದೇ ರಾಜಕಾರಣಿಗಳು
ಮೌಲ್ಯ, ಹೆಮ್ಮೆ ಮುಂತಾದವುಗಳ ಬಗ್ಗೆ
ಮಾತನಾಡಲು ಶುರು ಮಾಡಿದರೆಂದರೆ,
ಗಮನಿಸಿ,
ಈಗಾಗಲೇ ಅವರ ಜನರಲ್‌ಗಳು
ನಕ್ಷೆಯ ಮೇಲೆ
ಏನೋ ಗುರುತು ಮಾಡುತ್ತಿದ್ದಾರೆ.

ಡಬ್ಲ್ಯು ಎಚ್ ಆಡೆನ್ (1907-1973),
ಬ್ರಿಟಿಷ್-ಅಮೆರಿಕನ್ ಕವಿ

******

3

ಕ್ರೂರಿಯೊಬ್ಬನ ಗೋರಿಯ ಮೇಲಿನ ಬರಹ

ಕೆಲಸದಲ್ಲಿ ಭಾರೀ ಅಚ್ಚುಕಟ್ಟು
ಒಂದು ಕೆಲಸ ಹಿಡಿದರೆ, ಮುಗಿಸುವವರೆಗೂ
ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ.
ಪದ್ಯ ಅಂತೂ ಅದ್ಭುತ
ಎಂಥ ಸಾಮಾನ್ಯರೂ ಮೈಮರೆತು ತಲೆದೂಗುತ್ತಾರೆ.
ಮನುಷ್ಯ ಜಾತಿಯ ಅವಿವೇಕದ ಇತಿಹಾಸವನ್ನು
ಅರೆದು ಕುಡಿದವರಂತೆ ಮಾತನಾಡುತ್ತಾನೆ.
ಸೈನ್ಯ, ಯುದ್ಧನೌಕೆಗಳ ಬಗ್ಗೆ ಅಪಾರ ತಿಳಿವಳಿಕೆ.
ಪಾರ್ಲಿಮೆಂಟಲ್ಲಿ ತಮಾಷೆ ಮಾಡಿದಾಗ
ಗೌರವಾನ್ವಿತ ಸದಸ್ಯರು
ಬೆಂಚು ಕುಟ್ಟಿ, ಗಹಗಹಿಸಿ ನಗುತ್ತಾರೆ.
ಹಾಗು
ಇವನು ಕಣ್ಣೀರು ಹಾಕಿದಾಗ
ಪುಟ್ಟ ಮಕ್ಕಳು
ರಸ್ತೆಯಲ್ಲಿ ಬಿದ್ದು ಸಾಯುತ್ತಾರೆ.

ಡಬ್ಲ್ಯು ಎಚ್ ಆಡೆನ್ (1907-1973), ಬ್ರಿಟಿಷ್-ಅಮೆರಿಕನ್ ಕವಿ

*********

4

ತಾವೋ ಮಾರ್ಗದಲ್ಲಿ
ಹತೋಟಿಗೆ ಬಲಪ್ರಯೋಗ,
ಗೆಲುವಿಗೆ ಆಯುಧ ನಿಷಿದ್ಧ.
ಸೈನಿಕರು ಓಡಾಡಿದಲ್ಲೆಲ್ಲ

ಬೆಳೆದು ನಿಂತಿವೆ ಮುಳ್ಳಿನ ಪೊದೆಗಳು.
ಹಿಂಸೆ ಅಂಟು ರೋಗ
ಉದ್ದೇಶ ಎಷ್ಟೇ ಒಳ್ಳೆಯದಾದರೂ.

ನಿಜದ ನಾಯಕ
ಯುದ್ಧದ ನಂತರ ನೆಲೆಗೊಳ್ಳುವ
ಶಾಂತಿಯ ಬುಡದಲ್ಲಿ ಜ್ವಾಲಾಮುಖಿ ಕಾಣಬಲ್ಲ.
ಅದಕ್ಕೇ ಅವನಿಗೆ ಯುದ್ಧದ ಬಗ್ಗೆ ಹೆಮ್ಮೆಯಿಲ್ಲ.

ಅವನಿಗೆ ತನ್ನ ಬಗ್ಗೆ ನಂಬಿಕೆ
ಆದ್ದರಿಂದ ಬೇರೆಯವರ ಮನ ಒಲಿಸುವುದಿಲ್ಲ,

ಅವನಿಗೆ ತನ್ನ ಬಗ್ಗೆ ಸಮಾಧಾನ
ಆದ್ದರಿಂದ ಬೇರೆಯವರ ಒಪ್ಪಿಗೆ ಬೇಕಿಲ್ಲ,

ಅವನು ತನ್ನನ್ನು ಒಪ್ಪಿಕೊಂಡಿರುವದರಿಂದ
ಜಗತ್ತು ಅವನನ್ನು ಒಪ್ಪಿಕೊಂಡಿದೆ.

ಲಾವೋತ್ಸೆ (ಚೀನಾದ ಪ್ರಾಚೀನ ಕವಿ)

*******

5

ರೆಫ್ಯೂಜಿ ಕ್ಯಾಂಪಿನ ನಾಲ್ಕು ಕವಿತೆಗಳು
(ಅ)
ಅವಳ ಹೆಸರು ಯಾರಿಗೂ ಗೊತ್ತಿಲ್ಲ,
ಮರದ ದಿಣ್ಣೆಯ ಮೇಲೆ ಕುಳಿತಿರುವ
ಆ ಹೆಂಗಸನ್ನು ಯಾರೂ
ಅವಳ ಹೆಸರಿನಿಂದ ಕೂಗುವುದೇ ಇಲ್ಲ.

ಗರಗಸದಿಂದ ಕತ್ತರಿಸಲ್ಪಟ್ಟ
ಮಗುವಿನ ತಾಯಿ ಎಂದೇ

ಗುರುತಿಸುತ್ತಾರೆ ಅವಳನ್ನು ಇಲ್ಲಿ ಎಲ್ಲ
ಈ ರೆಫ್ಯೂಜಿ ಕ್ಯಾಂಪ್‌ನಲ್ಲಿ.

———

(ಆ)

ಅವರು, ತಮ್ಮ ಹಳ್ಳಿ, ಮನೆ, ಒಲೆ,
ಒಲೆ ಮೇಲಿನ ರೊಟ್ಟಿ ಎಲ್ಲವನ್ನೂ
ಇದ್ದಕ್ಕಿದ್ದ ಹಾಗೆಯೇ ಬಿಟ್ಟು
ಓಡಿ ಬಂದ ರಾತ್ರಿಯ

ಹಿಂದಿನ ರಾತ್ರಿ
ಯಾರು ತಟ್ಟಿದ್ದರು ಅವರ ಮನೆಯ ಬಾಗಿಲನ್ನ?

ಯಾಕೆ ಅವರು ತಮ್ಮ ಮನೆಯ
ಬಾಗಿಲು, ಕಿಟಕಿಗಳನ್ನ
ಆಮೇಲೆ ಯಾರಿಗೂ ತೆರೆಯಲೇ ಇಲ್ಲ?

ಯಾಕೆ ಅವರು ಆಮೇಲೆ
ತಮ್ಮ ಮನೆಯ ಹೆಣ್ಣುಮಕ್ಕಳ ಕಣ್ಣಲ್ಲಿ
ಕಣ್ಣಿಟ್ಟು ನೋಡಲೇ ಇಲ್ಲ
ಎನ್ನುವುದನ್ನ ಹೇಳುವುದಕ್ಕಿಂತ ಮೊದಲೇ….

ಭಾರಿ ಚಿನಾರ್ ಮರ
ಕರ್ಕಶವಾಗಿ ಸದ್ದು ಮಾಡುತ್ತಾ
ನೆಲಕ್ಕುರುಳಿತು.
ಅವರಿಗೆ ಹೇಳಬೇಕಾದ್ದನ್ನು ಹೇಳಲಿಕ್ಕಾಗಲೇ ಇಲ್ಲ.

——-

(ಇ)

ತನ್ನ ಟೆಂಟ್ ಹೊರಗೆ
ಆಟ ಆಡುತ್ತಿದ್ದ
ಆ ಪುಟ್ಟ ಹುಡುಗಿ
ಹತ್ತಾರು ಬಾರಿ ಕರೆದರೂ
ನಮ್ಮತ್ತ ಕಣ್ಣೆತ್ತಿ ನೋಡಲಿಲ್ಲ.

ಆಕೆ ಓಡಿ ಹೋಗಿ
ತನ್ನ ಟೆಂಟ್‌ನ ಬಾಗಿಲಲ್ಲಿ
ಎರಡೂ ಬದಿಯ ಹಗ್ಗ ಜಗ್ಗಿ ಹಿಡಿದು
ಅಡ್ಡ ನಿಂತುಕೊಂಡಳು,
ಇನ್ನು ಮುಂದೆ
ಯಾರನ್ನೂ ಒಳಗೆ ಬಿಡಲಾರೆ ಎಂಬಂತೆ.

ಅವಳು ಗುರುತಿಸದ
ಯಾವ ಮುಖಕ್ಕೂ
ಇನ್ನು ಅವಳ ಹೊಸಮನೆಯಲ್ಲಿ
ಜಾಗವಿಲ್ಲ.

———-

(ಈ)

ಒಂದು ಟೆಂಟ್‌ನಿಂದ
ಇನ್ನೊಂದು ಟೆಂಟ್‌ಗೆ,
ಎರಡೇ ಎರಡು ಹೆಜ್ಜೆ ದಾಟಿ
ನವ ವಧು
ಗಂಡನ ಮನೆಗೆ ಬಂದಿದ್ದಾಳೆ.

ನಿನ್ನೆಯತನಕ
ಗುರುತು ಪರಿಚಯವೇ ಇಲ್ಲದ
ಎರಡು ಪರಿವಾರಗಳು
ಇಂದು
ಮದುವೆಯ ಹಾಡು ಹಾಡುತ್ತಾ
ಜೋರಾಗಿ ಗದ್ದಲ ಮಾಡುತ್ತಿವೆ,
ಗುಂಡಿನ ಸದ್ದಿನ ಸುದ್ದಿ
ಒಂದಿಷ್ಟು ಹೊತ್ತಾದರೂ
ಕಿವಿ ಮೇಲೆ ಬೀಳದಂತೆ.

ಚಹಾದ ಪಾತ್ರೆಯಲ್ಲಿ ವಿಧಿಯಿಲ್ಲದೇ

ಕುದಿಯುತ್ತಿರುವ ಬಣ್ಣ ಬಣ್ಣದ ಮಸಾಲೆ.
ವಧುವಿನ ಮೊದಲರಾತ್ರಿ.

ಕಲ್ಪನಾ ಸಿಂಗ್ ಚಿಟ್ನಿಸ್,
ಭಾರತೀಯ-ಅಮೆರಿಕನ ಕವಿ

***********

6

ಮರಿ,
ತೊಗೋ ಈ ಕಿತ್ತಳೆ ಹಣ್ಣು
ಗಫೂರ್‌ನ ಕೊಲ್ಲಬೇಡ
ಅವ ನನ್ನ ಮೊಮ್ಮಗ.

ಮರಿ,
ತೊಗೋ ಈ ಸೇಬು
ಇಸ್ಮಾಯಿಲ್‌ನ ಬಿಟ್ಟುಬಿಡು

ಆವಾ ನನ್ನ ಸಂಬಂಧಿ.

ಮರಿ,
ಈ ಆಲಿವ್ಸ್ ತೊಗೋ
ನಿಸ್ಸಾರ್‌ಗೆ ಏನು ಮಾಡಬೇಡ
ಅವನು ಒಳ್ಳೆಯ ಹುಡುಗ.

ಕೊಲ್ಲಲೇಬೇಕಾದರೆ
ಈ ಮುದುಕಿಯನ್ನು ಕೊಲ್ಲು
ಮಾತು ಸತ್ತ ಊರಿನಲ್ಲಿ
ಈ ಬಾಯ್ಬಡುಕಿಗೇನು ಕೆಲಸ?

ದೇವರನ್ನೂ ಕೊಲ್ಲು
ಅವನಿಗೂ ಬಂದೂಕಿನ ಹೊಗೆ
ಆಗಿ ಬರುವುದಿಲ್ಲ.

ನನ್ನ ಭಾಷೆ
ಅವಳ ರಕ್ತದೊಂದಿಗೆ ಚಿಮ್ಮಿದೆ,
ಸಿಡಿದ ಗುಂಡಿನ ಚೂರುಗಳು

ನನ್ನ ಅಕ್ಷರಗಳನ್ನು ಘಾಸಿ ಮಾಡಿವೆ.
ನನ್ನ ಕವಿತೆಯಿಂದ ರಕ್ತ ಸೋರುತ್ತಿದೆ.

ಕಟಕಟೆಯಲ್ಲಿ ನಿಂತ ಕವಿತೆ
ವಿಷದ ಗಾಳಿಯನ್ನು
ಸಹಿಸಿಕೊಳ್ಳದೆ ಹೋದರೆ ಹೇಗೆ?

ಕೆ. ಸಚ್ಚಿದಾನಂದನ್, ಕೇರಳ ಮೂಲದ ಕವಿ

7

ವಿಯೆಟ್ನಾಂ
“ಮಗಳೇ, ನಿನ್ನ ಹೆಸರೇನು”
“ನನಗೆ ಗೊತ್ತಿಲ್ಲ”

“ಎಷ್ಟು ವಯಸ್ಸು? ಯಾವೂರು?”
“ನನಗೆ ಗೊತ್ತಿಲ್ಲ”

“ಯಾಕೆ ಆ ಬಿಲವನ್ನ ಮತ್ತೆ ಅಗೆಯುತ್ತಿದ್ದೀಯ?”
“ನನಗೆ ಗೊತ್ತಿಲ್ಲ”

“ಎಷ್ಟು ದಿನಗಳಾಯ್ತು ಹೀಗೆ ಅಡಗಿಕೊಂಡು?”
“ನನಗೆ ಗೊತ್ತಿಲ್ಲ”

“ನನ್ನ ಬೆರಳನ್ನ ಯಾಕೆ ಕಚ್ಚಿದೆ?”
“ನನಗೆ ಗೊತ್ತಿಲ್ಲ”

“ನಮ್ಮಿಂದ ಅಪಾಯ ಇಲ್ಲದಿರುವುದು ನಿನಗೆ ಗೊತ್ತಿಲ್ಲವೆ?”
“ನನಗೆ ಗೊತ್ತಿಲ್ಲ”

“ನೀನು ಯಾರ ಪರವಾಗಿರುವೆ?”
“ನನಗೆ ಗೊತ್ತಿಲ್ಲ”

“ಇದು ಯುದ್ಧ, ನೀನು ಯಾರನ್ನಾದರೂ ಆಯ್ಕೆ ಮಾಡಲೇ ಬೇಕು”
“ನನಗೆ ಗೊತ್ತಿಲ್ಲ”

“ನಿನ್ನ ಹಳ್ಳಿ ಇನ್ನೂ ಇದೆಯಾ?”
“ನನಗೆ ಗೊತ್ತಿಲ್ಲ”

“ಈ ಹುಡುಗ, ಹುಡುಗಿ ನಿನ್ನ ಮಕ್ಕಳಾ?”
“ಹೌದು”

ವಿಸ್ವಾವಾ ಸಿಂಬೋರ್‍ಸ್‌ಕ, ಪೋಲಿಶ್ ಕವಿ

ಸಂಗ್ರಹ ಮತ್ತು ಕನ್ನಡ ಅನುವಾದ: ಚಿದಂಬರ ನರೇಂದ್ರ


ಇದನ್ನೂ ಓದಿ: ಪ್ರತಿರೋಧವೊಡ್ಡದೆ ನನ್ನೊಳಗಿನ ಕವಿತೆ ಪೂರ್ಣವಾಗುವುದೇ ಇಲ್ಲ: ಮಿಸ್ರಿಯಾ. ಐ.ಪಜೀರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...