Homeಕವನಮರೆವಿಗೆ ಎದುರಾಗಿ.. ಯುದ್ಧ ವಿರೋಧಿ ಪದ್ಯಗಳು

ಮರೆವಿಗೆ ಎದುರಾಗಿ.. ಯುದ್ಧ ವಿರೋಧಿ ಪದ್ಯಗಳು

- Advertisement -
- Advertisement -

1.

ನನ್ನ ಮಗಳು,
ಅವಳ ಸೈಕಲ್‌ನ ಹ್ಯಾಂಡಲ್ ನಡುವೆ ಕಟ್ಟಿದ್ದ
ಜೇಡರ ಬಲೆಯನ್ನು ಕತ್ತರಿಸಿ
ಆ ಜೇಡರ ಹುಳುವನ್ನು ಘಾಸಿ ಮಾಡಲು
ಸುತರಾಂ ಸಿದ್ಧಳಾಗಲಿಲ್ಲ.

ಎರಡು ವಾರ ಕಾಯ್ದಳು
ಜೇಡ ತಾನೇತಾನಾಗಿ
ಆ ಜಾಗ ಖಾಲೀ ಮಾಡುವ ತನಕ.

ನಾನು ಅವಳಿಗೆ ಬುದ್ಧಿ ಹೇಳಿದೆ.
ಅಲ್ಲ ಮಗಳೇ,
ನೀನು ಆ ಬಲೆಯನ್ನು ಕತ್ತರಿಸಿಬಿಟ್ಟಿದ್ದರೆ
ಜೇಡಕ್ಕೆ ಗೊತ್ತಾಗುತ್ತಿತ್ತು
ಆ ಜಾಗ ಅದರ ಮನೆಯಲ್ಲವೆಂದು,
ಮತ್ತು ನೀನು ಸೈಕಲ್ ಕೂಡ ಓಡಾಡಿಸಬಹುದಿತ್ತು.
ಮಗಳು ಕಣ್ಣು ಪಿಳುಕಿಸುತ್ತ….

ಅಪ್ಪಾ
ಹೀಗೆ ಮಾಡುವುದರಿಂದಲೇ ಅಲ್ವಾ
ಜನ, ರೆಫ್ಯೂಜಿಗಳಾಗೋದು?

ಫಾಡಿ ಜೂಡ,
ಪ್ಯಾಲೆಸ್ತೇನಿಯನ್-ಅಮೆರಿಕನ್ ಕವಿ

******

2.

“ನಾವು ರಿಯಲಿಸ್ಟಿಕ್ ಆಗಿ ಯೋಚಿಸಬೇಕು”
ಎಂದು ರಾಜಕಾರಣಿಗಳು ಎಚ್ಚರಿಕೆಯಿಂದ
ಗಂಭೀರವಾಗಿ ಮಾತಾಡುವಾಗ,
ಬಹುತೇಕ ಅವರು, ಸೋತು ಸುಣ್ಣವಾಗಿದ್ದಾರೆ
ಆದ್ದರಿಂದಲೇ ಅವರು ’ಸಮಾಧಾನ ಪ್ರಿಯರು’

ಆದರೆ, ಇದೇ ರಾಜಕಾರಣಿಗಳು
ಮೌಲ್ಯ, ಹೆಮ್ಮೆ ಮುಂತಾದವುಗಳ ಬಗ್ಗೆ
ಮಾತನಾಡಲು ಶುರು ಮಾಡಿದರೆಂದರೆ,
ಗಮನಿಸಿ,
ಈಗಾಗಲೇ ಅವರ ಜನರಲ್‌ಗಳು
ನಕ್ಷೆಯ ಮೇಲೆ
ಏನೋ ಗುರುತು ಮಾಡುತ್ತಿದ್ದಾರೆ.

ಡಬ್ಲ್ಯು ಎಚ್ ಆಡೆನ್ (1907-1973),
ಬ್ರಿಟಿಷ್-ಅಮೆರಿಕನ್ ಕವಿ

******

3

ಕ್ರೂರಿಯೊಬ್ಬನ ಗೋರಿಯ ಮೇಲಿನ ಬರಹ

ಕೆಲಸದಲ್ಲಿ ಭಾರೀ ಅಚ್ಚುಕಟ್ಟು
ಒಂದು ಕೆಲಸ ಹಿಡಿದರೆ, ಮುಗಿಸುವವರೆಗೂ
ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ.
ಪದ್ಯ ಅಂತೂ ಅದ್ಭುತ
ಎಂಥ ಸಾಮಾನ್ಯರೂ ಮೈಮರೆತು ತಲೆದೂಗುತ್ತಾರೆ.
ಮನುಷ್ಯ ಜಾತಿಯ ಅವಿವೇಕದ ಇತಿಹಾಸವನ್ನು
ಅರೆದು ಕುಡಿದವರಂತೆ ಮಾತನಾಡುತ್ತಾನೆ.
ಸೈನ್ಯ, ಯುದ್ಧನೌಕೆಗಳ ಬಗ್ಗೆ ಅಪಾರ ತಿಳಿವಳಿಕೆ.
ಪಾರ್ಲಿಮೆಂಟಲ್ಲಿ ತಮಾಷೆ ಮಾಡಿದಾಗ
ಗೌರವಾನ್ವಿತ ಸದಸ್ಯರು
ಬೆಂಚು ಕುಟ್ಟಿ, ಗಹಗಹಿಸಿ ನಗುತ್ತಾರೆ.
ಹಾಗು
ಇವನು ಕಣ್ಣೀರು ಹಾಕಿದಾಗ
ಪುಟ್ಟ ಮಕ್ಕಳು
ರಸ್ತೆಯಲ್ಲಿ ಬಿದ್ದು ಸಾಯುತ್ತಾರೆ.

ಡಬ್ಲ್ಯು ಎಚ್ ಆಡೆನ್ (1907-1973), ಬ್ರಿಟಿಷ್-ಅಮೆರಿಕನ್ ಕವಿ

*********

4

ತಾವೋ ಮಾರ್ಗದಲ್ಲಿ
ಹತೋಟಿಗೆ ಬಲಪ್ರಯೋಗ,
ಗೆಲುವಿಗೆ ಆಯುಧ ನಿಷಿದ್ಧ.
ಸೈನಿಕರು ಓಡಾಡಿದಲ್ಲೆಲ್ಲ

ಬೆಳೆದು ನಿಂತಿವೆ ಮುಳ್ಳಿನ ಪೊದೆಗಳು.
ಹಿಂಸೆ ಅಂಟು ರೋಗ
ಉದ್ದೇಶ ಎಷ್ಟೇ ಒಳ್ಳೆಯದಾದರೂ.

ನಿಜದ ನಾಯಕ
ಯುದ್ಧದ ನಂತರ ನೆಲೆಗೊಳ್ಳುವ
ಶಾಂತಿಯ ಬುಡದಲ್ಲಿ ಜ್ವಾಲಾಮುಖಿ ಕಾಣಬಲ್ಲ.
ಅದಕ್ಕೇ ಅವನಿಗೆ ಯುದ್ಧದ ಬಗ್ಗೆ ಹೆಮ್ಮೆಯಿಲ್ಲ.

ಅವನಿಗೆ ತನ್ನ ಬಗ್ಗೆ ನಂಬಿಕೆ
ಆದ್ದರಿಂದ ಬೇರೆಯವರ ಮನ ಒಲಿಸುವುದಿಲ್ಲ,

ಅವನಿಗೆ ತನ್ನ ಬಗ್ಗೆ ಸಮಾಧಾನ
ಆದ್ದರಿಂದ ಬೇರೆಯವರ ಒಪ್ಪಿಗೆ ಬೇಕಿಲ್ಲ,

ಅವನು ತನ್ನನ್ನು ಒಪ್ಪಿಕೊಂಡಿರುವದರಿಂದ
ಜಗತ್ತು ಅವನನ್ನು ಒಪ್ಪಿಕೊಂಡಿದೆ.

ಲಾವೋತ್ಸೆ (ಚೀನಾದ ಪ್ರಾಚೀನ ಕವಿ)

*******

5

ರೆಫ್ಯೂಜಿ ಕ್ಯಾಂಪಿನ ನಾಲ್ಕು ಕವಿತೆಗಳು
(ಅ)
ಅವಳ ಹೆಸರು ಯಾರಿಗೂ ಗೊತ್ತಿಲ್ಲ,
ಮರದ ದಿಣ್ಣೆಯ ಮೇಲೆ ಕುಳಿತಿರುವ
ಆ ಹೆಂಗಸನ್ನು ಯಾರೂ
ಅವಳ ಹೆಸರಿನಿಂದ ಕೂಗುವುದೇ ಇಲ್ಲ.

ಗರಗಸದಿಂದ ಕತ್ತರಿಸಲ್ಪಟ್ಟ
ಮಗುವಿನ ತಾಯಿ ಎಂದೇ

ಗುರುತಿಸುತ್ತಾರೆ ಅವಳನ್ನು ಇಲ್ಲಿ ಎಲ್ಲ
ಈ ರೆಫ್ಯೂಜಿ ಕ್ಯಾಂಪ್‌ನಲ್ಲಿ.

———

(ಆ)

ಅವರು, ತಮ್ಮ ಹಳ್ಳಿ, ಮನೆ, ಒಲೆ,
ಒಲೆ ಮೇಲಿನ ರೊಟ್ಟಿ ಎಲ್ಲವನ್ನೂ
ಇದ್ದಕ್ಕಿದ್ದ ಹಾಗೆಯೇ ಬಿಟ್ಟು
ಓಡಿ ಬಂದ ರಾತ್ರಿಯ

ಹಿಂದಿನ ರಾತ್ರಿ
ಯಾರು ತಟ್ಟಿದ್ದರು ಅವರ ಮನೆಯ ಬಾಗಿಲನ್ನ?

ಯಾಕೆ ಅವರು ತಮ್ಮ ಮನೆಯ
ಬಾಗಿಲು, ಕಿಟಕಿಗಳನ್ನ
ಆಮೇಲೆ ಯಾರಿಗೂ ತೆರೆಯಲೇ ಇಲ್ಲ?

ಯಾಕೆ ಅವರು ಆಮೇಲೆ
ತಮ್ಮ ಮನೆಯ ಹೆಣ್ಣುಮಕ್ಕಳ ಕಣ್ಣಲ್ಲಿ
ಕಣ್ಣಿಟ್ಟು ನೋಡಲೇ ಇಲ್ಲ
ಎನ್ನುವುದನ್ನ ಹೇಳುವುದಕ್ಕಿಂತ ಮೊದಲೇ….

ಭಾರಿ ಚಿನಾರ್ ಮರ
ಕರ್ಕಶವಾಗಿ ಸದ್ದು ಮಾಡುತ್ತಾ
ನೆಲಕ್ಕುರುಳಿತು.
ಅವರಿಗೆ ಹೇಳಬೇಕಾದ್ದನ್ನು ಹೇಳಲಿಕ್ಕಾಗಲೇ ಇಲ್ಲ.

——-

(ಇ)

ತನ್ನ ಟೆಂಟ್ ಹೊರಗೆ
ಆಟ ಆಡುತ್ತಿದ್ದ
ಆ ಪುಟ್ಟ ಹುಡುಗಿ
ಹತ್ತಾರು ಬಾರಿ ಕರೆದರೂ
ನಮ್ಮತ್ತ ಕಣ್ಣೆತ್ತಿ ನೋಡಲಿಲ್ಲ.

ಆಕೆ ಓಡಿ ಹೋಗಿ
ತನ್ನ ಟೆಂಟ್‌ನ ಬಾಗಿಲಲ್ಲಿ
ಎರಡೂ ಬದಿಯ ಹಗ್ಗ ಜಗ್ಗಿ ಹಿಡಿದು
ಅಡ್ಡ ನಿಂತುಕೊಂಡಳು,
ಇನ್ನು ಮುಂದೆ
ಯಾರನ್ನೂ ಒಳಗೆ ಬಿಡಲಾರೆ ಎಂಬಂತೆ.

ಅವಳು ಗುರುತಿಸದ
ಯಾವ ಮುಖಕ್ಕೂ
ಇನ್ನು ಅವಳ ಹೊಸಮನೆಯಲ್ಲಿ
ಜಾಗವಿಲ್ಲ.

———-

(ಈ)

ಒಂದು ಟೆಂಟ್‌ನಿಂದ
ಇನ್ನೊಂದು ಟೆಂಟ್‌ಗೆ,
ಎರಡೇ ಎರಡು ಹೆಜ್ಜೆ ದಾಟಿ
ನವ ವಧು
ಗಂಡನ ಮನೆಗೆ ಬಂದಿದ್ದಾಳೆ.

ನಿನ್ನೆಯತನಕ
ಗುರುತು ಪರಿಚಯವೇ ಇಲ್ಲದ
ಎರಡು ಪರಿವಾರಗಳು
ಇಂದು
ಮದುವೆಯ ಹಾಡು ಹಾಡುತ್ತಾ
ಜೋರಾಗಿ ಗದ್ದಲ ಮಾಡುತ್ತಿವೆ,
ಗುಂಡಿನ ಸದ್ದಿನ ಸುದ್ದಿ
ಒಂದಿಷ್ಟು ಹೊತ್ತಾದರೂ
ಕಿವಿ ಮೇಲೆ ಬೀಳದಂತೆ.

ಚಹಾದ ಪಾತ್ರೆಯಲ್ಲಿ ವಿಧಿಯಿಲ್ಲದೇ

ಕುದಿಯುತ್ತಿರುವ ಬಣ್ಣ ಬಣ್ಣದ ಮಸಾಲೆ.
ವಧುವಿನ ಮೊದಲರಾತ್ರಿ.

ಕಲ್ಪನಾ ಸಿಂಗ್ ಚಿಟ್ನಿಸ್,
ಭಾರತೀಯ-ಅಮೆರಿಕನ ಕವಿ

***********

6

ಮರಿ,
ತೊಗೋ ಈ ಕಿತ್ತಳೆ ಹಣ್ಣು
ಗಫೂರ್‌ನ ಕೊಲ್ಲಬೇಡ
ಅವ ನನ್ನ ಮೊಮ್ಮಗ.

ಮರಿ,
ತೊಗೋ ಈ ಸೇಬು
ಇಸ್ಮಾಯಿಲ್‌ನ ಬಿಟ್ಟುಬಿಡು

ಆವಾ ನನ್ನ ಸಂಬಂಧಿ.

ಮರಿ,
ಈ ಆಲಿವ್ಸ್ ತೊಗೋ
ನಿಸ್ಸಾರ್‌ಗೆ ಏನು ಮಾಡಬೇಡ
ಅವನು ಒಳ್ಳೆಯ ಹುಡುಗ.

ಕೊಲ್ಲಲೇಬೇಕಾದರೆ
ಈ ಮುದುಕಿಯನ್ನು ಕೊಲ್ಲು
ಮಾತು ಸತ್ತ ಊರಿನಲ್ಲಿ
ಈ ಬಾಯ್ಬಡುಕಿಗೇನು ಕೆಲಸ?

ದೇವರನ್ನೂ ಕೊಲ್ಲು
ಅವನಿಗೂ ಬಂದೂಕಿನ ಹೊಗೆ
ಆಗಿ ಬರುವುದಿಲ್ಲ.

ನನ್ನ ಭಾಷೆ
ಅವಳ ರಕ್ತದೊಂದಿಗೆ ಚಿಮ್ಮಿದೆ,
ಸಿಡಿದ ಗುಂಡಿನ ಚೂರುಗಳು

ನನ್ನ ಅಕ್ಷರಗಳನ್ನು ಘಾಸಿ ಮಾಡಿವೆ.
ನನ್ನ ಕವಿತೆಯಿಂದ ರಕ್ತ ಸೋರುತ್ತಿದೆ.

ಕಟಕಟೆಯಲ್ಲಿ ನಿಂತ ಕವಿತೆ
ವಿಷದ ಗಾಳಿಯನ್ನು
ಸಹಿಸಿಕೊಳ್ಳದೆ ಹೋದರೆ ಹೇಗೆ?

ಕೆ. ಸಚ್ಚಿದಾನಂದನ್, ಕೇರಳ ಮೂಲದ ಕವಿ

7

ವಿಯೆಟ್ನಾಂ
“ಮಗಳೇ, ನಿನ್ನ ಹೆಸರೇನು”
“ನನಗೆ ಗೊತ್ತಿಲ್ಲ”

“ಎಷ್ಟು ವಯಸ್ಸು? ಯಾವೂರು?”
“ನನಗೆ ಗೊತ್ತಿಲ್ಲ”

“ಯಾಕೆ ಆ ಬಿಲವನ್ನ ಮತ್ತೆ ಅಗೆಯುತ್ತಿದ್ದೀಯ?”
“ನನಗೆ ಗೊತ್ತಿಲ್ಲ”

“ಎಷ್ಟು ದಿನಗಳಾಯ್ತು ಹೀಗೆ ಅಡಗಿಕೊಂಡು?”
“ನನಗೆ ಗೊತ್ತಿಲ್ಲ”

“ನನ್ನ ಬೆರಳನ್ನ ಯಾಕೆ ಕಚ್ಚಿದೆ?”
“ನನಗೆ ಗೊತ್ತಿಲ್ಲ”

“ನಮ್ಮಿಂದ ಅಪಾಯ ಇಲ್ಲದಿರುವುದು ನಿನಗೆ ಗೊತ್ತಿಲ್ಲವೆ?”
“ನನಗೆ ಗೊತ್ತಿಲ್ಲ”

“ನೀನು ಯಾರ ಪರವಾಗಿರುವೆ?”
“ನನಗೆ ಗೊತ್ತಿಲ್ಲ”

“ಇದು ಯುದ್ಧ, ನೀನು ಯಾರನ್ನಾದರೂ ಆಯ್ಕೆ ಮಾಡಲೇ ಬೇಕು”
“ನನಗೆ ಗೊತ್ತಿಲ್ಲ”

“ನಿನ್ನ ಹಳ್ಳಿ ಇನ್ನೂ ಇದೆಯಾ?”
“ನನಗೆ ಗೊತ್ತಿಲ್ಲ”

“ಈ ಹುಡುಗ, ಹುಡುಗಿ ನಿನ್ನ ಮಕ್ಕಳಾ?”
“ಹೌದು”

ವಿಸ್ವಾವಾ ಸಿಂಬೋರ್‍ಸ್‌ಕ, ಪೋಲಿಶ್ ಕವಿ

ಸಂಗ್ರಹ ಮತ್ತು ಕನ್ನಡ ಅನುವಾದ: ಚಿದಂಬರ ನರೇಂದ್ರ


ಇದನ್ನೂ ಓದಿ: ಪ್ರತಿರೋಧವೊಡ್ಡದೆ ನನ್ನೊಳಗಿನ ಕವಿತೆ ಪೂರ್ಣವಾಗುವುದೇ ಇಲ್ಲ: ಮಿಸ್ರಿಯಾ. ಐ.ಪಜೀರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...