Homeಕವನಮರೆವಿಗೆ ಎದುರಾಗಿ.. ಯುದ್ಧ ವಿರೋಧಿ ಪದ್ಯಗಳು

ಮರೆವಿಗೆ ಎದುರಾಗಿ.. ಯುದ್ಧ ವಿರೋಧಿ ಪದ್ಯಗಳು

- Advertisement -
- Advertisement -

1.

ನನ್ನ ಮಗಳು,
ಅವಳ ಸೈಕಲ್‌ನ ಹ್ಯಾಂಡಲ್ ನಡುವೆ ಕಟ್ಟಿದ್ದ
ಜೇಡರ ಬಲೆಯನ್ನು ಕತ್ತರಿಸಿ
ಆ ಜೇಡರ ಹುಳುವನ್ನು ಘಾಸಿ ಮಾಡಲು
ಸುತರಾಂ ಸಿದ್ಧಳಾಗಲಿಲ್ಲ.

ಎರಡು ವಾರ ಕಾಯ್ದಳು
ಜೇಡ ತಾನೇತಾನಾಗಿ
ಆ ಜಾಗ ಖಾಲೀ ಮಾಡುವ ತನಕ.

ನಾನು ಅವಳಿಗೆ ಬುದ್ಧಿ ಹೇಳಿದೆ.
ಅಲ್ಲ ಮಗಳೇ,
ನೀನು ಆ ಬಲೆಯನ್ನು ಕತ್ತರಿಸಿಬಿಟ್ಟಿದ್ದರೆ
ಜೇಡಕ್ಕೆ ಗೊತ್ತಾಗುತ್ತಿತ್ತು
ಆ ಜಾಗ ಅದರ ಮನೆಯಲ್ಲವೆಂದು,
ಮತ್ತು ನೀನು ಸೈಕಲ್ ಕೂಡ ಓಡಾಡಿಸಬಹುದಿತ್ತು.
ಮಗಳು ಕಣ್ಣು ಪಿಳುಕಿಸುತ್ತ….

ಅಪ್ಪಾ
ಹೀಗೆ ಮಾಡುವುದರಿಂದಲೇ ಅಲ್ವಾ
ಜನ, ರೆಫ್ಯೂಜಿಗಳಾಗೋದು?

ಫಾಡಿ ಜೂಡ,
ಪ್ಯಾಲೆಸ್ತೇನಿಯನ್-ಅಮೆರಿಕನ್ ಕವಿ

******

2.

“ನಾವು ರಿಯಲಿಸ್ಟಿಕ್ ಆಗಿ ಯೋಚಿಸಬೇಕು”
ಎಂದು ರಾಜಕಾರಣಿಗಳು ಎಚ್ಚರಿಕೆಯಿಂದ
ಗಂಭೀರವಾಗಿ ಮಾತಾಡುವಾಗ,
ಬಹುತೇಕ ಅವರು, ಸೋತು ಸುಣ್ಣವಾಗಿದ್ದಾರೆ
ಆದ್ದರಿಂದಲೇ ಅವರು ’ಸಮಾಧಾನ ಪ್ರಿಯರು’

ಆದರೆ, ಇದೇ ರಾಜಕಾರಣಿಗಳು
ಮೌಲ್ಯ, ಹೆಮ್ಮೆ ಮುಂತಾದವುಗಳ ಬಗ್ಗೆ
ಮಾತನಾಡಲು ಶುರು ಮಾಡಿದರೆಂದರೆ,
ಗಮನಿಸಿ,
ಈಗಾಗಲೇ ಅವರ ಜನರಲ್‌ಗಳು
ನಕ್ಷೆಯ ಮೇಲೆ
ಏನೋ ಗುರುತು ಮಾಡುತ್ತಿದ್ದಾರೆ.

ಡಬ್ಲ್ಯು ಎಚ್ ಆಡೆನ್ (1907-1973),
ಬ್ರಿಟಿಷ್-ಅಮೆರಿಕನ್ ಕವಿ

******

3

ಕ್ರೂರಿಯೊಬ್ಬನ ಗೋರಿಯ ಮೇಲಿನ ಬರಹ

ಕೆಲಸದಲ್ಲಿ ಭಾರೀ ಅಚ್ಚುಕಟ್ಟು
ಒಂದು ಕೆಲಸ ಹಿಡಿದರೆ, ಮುಗಿಸುವವರೆಗೂ
ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ.
ಪದ್ಯ ಅಂತೂ ಅದ್ಭುತ
ಎಂಥ ಸಾಮಾನ್ಯರೂ ಮೈಮರೆತು ತಲೆದೂಗುತ್ತಾರೆ.
ಮನುಷ್ಯ ಜಾತಿಯ ಅವಿವೇಕದ ಇತಿಹಾಸವನ್ನು
ಅರೆದು ಕುಡಿದವರಂತೆ ಮಾತನಾಡುತ್ತಾನೆ.
ಸೈನ್ಯ, ಯುದ್ಧನೌಕೆಗಳ ಬಗ್ಗೆ ಅಪಾರ ತಿಳಿವಳಿಕೆ.
ಪಾರ್ಲಿಮೆಂಟಲ್ಲಿ ತಮಾಷೆ ಮಾಡಿದಾಗ
ಗೌರವಾನ್ವಿತ ಸದಸ್ಯರು
ಬೆಂಚು ಕುಟ್ಟಿ, ಗಹಗಹಿಸಿ ನಗುತ್ತಾರೆ.
ಹಾಗು
ಇವನು ಕಣ್ಣೀರು ಹಾಕಿದಾಗ
ಪುಟ್ಟ ಮಕ್ಕಳು
ರಸ್ತೆಯಲ್ಲಿ ಬಿದ್ದು ಸಾಯುತ್ತಾರೆ.

ಡಬ್ಲ್ಯು ಎಚ್ ಆಡೆನ್ (1907-1973), ಬ್ರಿಟಿಷ್-ಅಮೆರಿಕನ್ ಕವಿ

*********

4

ತಾವೋ ಮಾರ್ಗದಲ್ಲಿ
ಹತೋಟಿಗೆ ಬಲಪ್ರಯೋಗ,
ಗೆಲುವಿಗೆ ಆಯುಧ ನಿಷಿದ್ಧ.
ಸೈನಿಕರು ಓಡಾಡಿದಲ್ಲೆಲ್ಲ

ಬೆಳೆದು ನಿಂತಿವೆ ಮುಳ್ಳಿನ ಪೊದೆಗಳು.
ಹಿಂಸೆ ಅಂಟು ರೋಗ
ಉದ್ದೇಶ ಎಷ್ಟೇ ಒಳ್ಳೆಯದಾದರೂ.

ನಿಜದ ನಾಯಕ
ಯುದ್ಧದ ನಂತರ ನೆಲೆಗೊಳ್ಳುವ
ಶಾಂತಿಯ ಬುಡದಲ್ಲಿ ಜ್ವಾಲಾಮುಖಿ ಕಾಣಬಲ್ಲ.
ಅದಕ್ಕೇ ಅವನಿಗೆ ಯುದ್ಧದ ಬಗ್ಗೆ ಹೆಮ್ಮೆಯಿಲ್ಲ.

ಅವನಿಗೆ ತನ್ನ ಬಗ್ಗೆ ನಂಬಿಕೆ
ಆದ್ದರಿಂದ ಬೇರೆಯವರ ಮನ ಒಲಿಸುವುದಿಲ್ಲ,

ಅವನಿಗೆ ತನ್ನ ಬಗ್ಗೆ ಸಮಾಧಾನ
ಆದ್ದರಿಂದ ಬೇರೆಯವರ ಒಪ್ಪಿಗೆ ಬೇಕಿಲ್ಲ,

ಅವನು ತನ್ನನ್ನು ಒಪ್ಪಿಕೊಂಡಿರುವದರಿಂದ
ಜಗತ್ತು ಅವನನ್ನು ಒಪ್ಪಿಕೊಂಡಿದೆ.

ಲಾವೋತ್ಸೆ (ಚೀನಾದ ಪ್ರಾಚೀನ ಕವಿ)

*******

5

ರೆಫ್ಯೂಜಿ ಕ್ಯಾಂಪಿನ ನಾಲ್ಕು ಕವಿತೆಗಳು
(ಅ)
ಅವಳ ಹೆಸರು ಯಾರಿಗೂ ಗೊತ್ತಿಲ್ಲ,
ಮರದ ದಿಣ್ಣೆಯ ಮೇಲೆ ಕುಳಿತಿರುವ
ಆ ಹೆಂಗಸನ್ನು ಯಾರೂ
ಅವಳ ಹೆಸರಿನಿಂದ ಕೂಗುವುದೇ ಇಲ್ಲ.

ಗರಗಸದಿಂದ ಕತ್ತರಿಸಲ್ಪಟ್ಟ
ಮಗುವಿನ ತಾಯಿ ಎಂದೇ

ಗುರುತಿಸುತ್ತಾರೆ ಅವಳನ್ನು ಇಲ್ಲಿ ಎಲ್ಲ
ಈ ರೆಫ್ಯೂಜಿ ಕ್ಯಾಂಪ್‌ನಲ್ಲಿ.

———

(ಆ)

ಅವರು, ತಮ್ಮ ಹಳ್ಳಿ, ಮನೆ, ಒಲೆ,
ಒಲೆ ಮೇಲಿನ ರೊಟ್ಟಿ ಎಲ್ಲವನ್ನೂ
ಇದ್ದಕ್ಕಿದ್ದ ಹಾಗೆಯೇ ಬಿಟ್ಟು
ಓಡಿ ಬಂದ ರಾತ್ರಿಯ

ಹಿಂದಿನ ರಾತ್ರಿ
ಯಾರು ತಟ್ಟಿದ್ದರು ಅವರ ಮನೆಯ ಬಾಗಿಲನ್ನ?

ಯಾಕೆ ಅವರು ತಮ್ಮ ಮನೆಯ
ಬಾಗಿಲು, ಕಿಟಕಿಗಳನ್ನ
ಆಮೇಲೆ ಯಾರಿಗೂ ತೆರೆಯಲೇ ಇಲ್ಲ?

ಯಾಕೆ ಅವರು ಆಮೇಲೆ
ತಮ್ಮ ಮನೆಯ ಹೆಣ್ಣುಮಕ್ಕಳ ಕಣ್ಣಲ್ಲಿ
ಕಣ್ಣಿಟ್ಟು ನೋಡಲೇ ಇಲ್ಲ
ಎನ್ನುವುದನ್ನ ಹೇಳುವುದಕ್ಕಿಂತ ಮೊದಲೇ….

ಭಾರಿ ಚಿನಾರ್ ಮರ
ಕರ್ಕಶವಾಗಿ ಸದ್ದು ಮಾಡುತ್ತಾ
ನೆಲಕ್ಕುರುಳಿತು.
ಅವರಿಗೆ ಹೇಳಬೇಕಾದ್ದನ್ನು ಹೇಳಲಿಕ್ಕಾಗಲೇ ಇಲ್ಲ.

——-

(ಇ)

ತನ್ನ ಟೆಂಟ್ ಹೊರಗೆ
ಆಟ ಆಡುತ್ತಿದ್ದ
ಆ ಪುಟ್ಟ ಹುಡುಗಿ
ಹತ್ತಾರು ಬಾರಿ ಕರೆದರೂ
ನಮ್ಮತ್ತ ಕಣ್ಣೆತ್ತಿ ನೋಡಲಿಲ್ಲ.

ಆಕೆ ಓಡಿ ಹೋಗಿ
ತನ್ನ ಟೆಂಟ್‌ನ ಬಾಗಿಲಲ್ಲಿ
ಎರಡೂ ಬದಿಯ ಹಗ್ಗ ಜಗ್ಗಿ ಹಿಡಿದು
ಅಡ್ಡ ನಿಂತುಕೊಂಡಳು,
ಇನ್ನು ಮುಂದೆ
ಯಾರನ್ನೂ ಒಳಗೆ ಬಿಡಲಾರೆ ಎಂಬಂತೆ.

ಅವಳು ಗುರುತಿಸದ
ಯಾವ ಮುಖಕ್ಕೂ
ಇನ್ನು ಅವಳ ಹೊಸಮನೆಯಲ್ಲಿ
ಜಾಗವಿಲ್ಲ.

———-

(ಈ)

ಒಂದು ಟೆಂಟ್‌ನಿಂದ
ಇನ್ನೊಂದು ಟೆಂಟ್‌ಗೆ,
ಎರಡೇ ಎರಡು ಹೆಜ್ಜೆ ದಾಟಿ
ನವ ವಧು
ಗಂಡನ ಮನೆಗೆ ಬಂದಿದ್ದಾಳೆ.

ನಿನ್ನೆಯತನಕ
ಗುರುತು ಪರಿಚಯವೇ ಇಲ್ಲದ
ಎರಡು ಪರಿವಾರಗಳು
ಇಂದು
ಮದುವೆಯ ಹಾಡು ಹಾಡುತ್ತಾ
ಜೋರಾಗಿ ಗದ್ದಲ ಮಾಡುತ್ತಿವೆ,
ಗುಂಡಿನ ಸದ್ದಿನ ಸುದ್ದಿ
ಒಂದಿಷ್ಟು ಹೊತ್ತಾದರೂ
ಕಿವಿ ಮೇಲೆ ಬೀಳದಂತೆ.

ಚಹಾದ ಪಾತ್ರೆಯಲ್ಲಿ ವಿಧಿಯಿಲ್ಲದೇ

ಕುದಿಯುತ್ತಿರುವ ಬಣ್ಣ ಬಣ್ಣದ ಮಸಾಲೆ.
ವಧುವಿನ ಮೊದಲರಾತ್ರಿ.

ಕಲ್ಪನಾ ಸಿಂಗ್ ಚಿಟ್ನಿಸ್,
ಭಾರತೀಯ-ಅಮೆರಿಕನ ಕವಿ

***********

6

ಮರಿ,
ತೊಗೋ ಈ ಕಿತ್ತಳೆ ಹಣ್ಣು
ಗಫೂರ್‌ನ ಕೊಲ್ಲಬೇಡ
ಅವ ನನ್ನ ಮೊಮ್ಮಗ.

ಮರಿ,
ತೊಗೋ ಈ ಸೇಬು
ಇಸ್ಮಾಯಿಲ್‌ನ ಬಿಟ್ಟುಬಿಡು

ಆವಾ ನನ್ನ ಸಂಬಂಧಿ.

ಮರಿ,
ಈ ಆಲಿವ್ಸ್ ತೊಗೋ
ನಿಸ್ಸಾರ್‌ಗೆ ಏನು ಮಾಡಬೇಡ
ಅವನು ಒಳ್ಳೆಯ ಹುಡುಗ.

ಕೊಲ್ಲಲೇಬೇಕಾದರೆ
ಈ ಮುದುಕಿಯನ್ನು ಕೊಲ್ಲು
ಮಾತು ಸತ್ತ ಊರಿನಲ್ಲಿ
ಈ ಬಾಯ್ಬಡುಕಿಗೇನು ಕೆಲಸ?

ದೇವರನ್ನೂ ಕೊಲ್ಲು
ಅವನಿಗೂ ಬಂದೂಕಿನ ಹೊಗೆ
ಆಗಿ ಬರುವುದಿಲ್ಲ.

ನನ್ನ ಭಾಷೆ
ಅವಳ ರಕ್ತದೊಂದಿಗೆ ಚಿಮ್ಮಿದೆ,
ಸಿಡಿದ ಗುಂಡಿನ ಚೂರುಗಳು

ನನ್ನ ಅಕ್ಷರಗಳನ್ನು ಘಾಸಿ ಮಾಡಿವೆ.
ನನ್ನ ಕವಿತೆಯಿಂದ ರಕ್ತ ಸೋರುತ್ತಿದೆ.

ಕಟಕಟೆಯಲ್ಲಿ ನಿಂತ ಕವಿತೆ
ವಿಷದ ಗಾಳಿಯನ್ನು
ಸಹಿಸಿಕೊಳ್ಳದೆ ಹೋದರೆ ಹೇಗೆ?

ಕೆ. ಸಚ್ಚಿದಾನಂದನ್, ಕೇರಳ ಮೂಲದ ಕವಿ

7

ವಿಯೆಟ್ನಾಂ
“ಮಗಳೇ, ನಿನ್ನ ಹೆಸರೇನು”
“ನನಗೆ ಗೊತ್ತಿಲ್ಲ”

“ಎಷ್ಟು ವಯಸ್ಸು? ಯಾವೂರು?”
“ನನಗೆ ಗೊತ್ತಿಲ್ಲ”

“ಯಾಕೆ ಆ ಬಿಲವನ್ನ ಮತ್ತೆ ಅಗೆಯುತ್ತಿದ್ದೀಯ?”
“ನನಗೆ ಗೊತ್ತಿಲ್ಲ”

“ಎಷ್ಟು ದಿನಗಳಾಯ್ತು ಹೀಗೆ ಅಡಗಿಕೊಂಡು?”
“ನನಗೆ ಗೊತ್ತಿಲ್ಲ”

“ನನ್ನ ಬೆರಳನ್ನ ಯಾಕೆ ಕಚ್ಚಿದೆ?”
“ನನಗೆ ಗೊತ್ತಿಲ್ಲ”

“ನಮ್ಮಿಂದ ಅಪಾಯ ಇಲ್ಲದಿರುವುದು ನಿನಗೆ ಗೊತ್ತಿಲ್ಲವೆ?”
“ನನಗೆ ಗೊತ್ತಿಲ್ಲ”

“ನೀನು ಯಾರ ಪರವಾಗಿರುವೆ?”
“ನನಗೆ ಗೊತ್ತಿಲ್ಲ”

“ಇದು ಯುದ್ಧ, ನೀನು ಯಾರನ್ನಾದರೂ ಆಯ್ಕೆ ಮಾಡಲೇ ಬೇಕು”
“ನನಗೆ ಗೊತ್ತಿಲ್ಲ”

“ನಿನ್ನ ಹಳ್ಳಿ ಇನ್ನೂ ಇದೆಯಾ?”
“ನನಗೆ ಗೊತ್ತಿಲ್ಲ”

“ಈ ಹುಡುಗ, ಹುಡುಗಿ ನಿನ್ನ ಮಕ್ಕಳಾ?”
“ಹೌದು”

ವಿಸ್ವಾವಾ ಸಿಂಬೋರ್‍ಸ್‌ಕ, ಪೋಲಿಶ್ ಕವಿ

ಸಂಗ್ರಹ ಮತ್ತು ಕನ್ನಡ ಅನುವಾದ: ಚಿದಂಬರ ನರೇಂದ್ರ


ಇದನ್ನೂ ಓದಿ: ಪ್ರತಿರೋಧವೊಡ್ಡದೆ ನನ್ನೊಳಗಿನ ಕವಿತೆ ಪೂರ್ಣವಾಗುವುದೇ ಇಲ್ಲ: ಮಿಸ್ರಿಯಾ. ಐ.ಪಜೀರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...