Homeಕವನಮರೆವಿಗೆ ಎದುರಾಗಿ.. ಯುದ್ಧ ವಿರೋಧಿ ಪದ್ಯಗಳು

ಮರೆವಿಗೆ ಎದುರಾಗಿ.. ಯುದ್ಧ ವಿರೋಧಿ ಪದ್ಯಗಳು

- Advertisement -
- Advertisement -

1.

ನನ್ನ ಮಗಳು,
ಅವಳ ಸೈಕಲ್‌ನ ಹ್ಯಾಂಡಲ್ ನಡುವೆ ಕಟ್ಟಿದ್ದ
ಜೇಡರ ಬಲೆಯನ್ನು ಕತ್ತರಿಸಿ
ಆ ಜೇಡರ ಹುಳುವನ್ನು ಘಾಸಿ ಮಾಡಲು
ಸುತರಾಂ ಸಿದ್ಧಳಾಗಲಿಲ್ಲ.

ಎರಡು ವಾರ ಕಾಯ್ದಳು
ಜೇಡ ತಾನೇತಾನಾಗಿ
ಆ ಜಾಗ ಖಾಲೀ ಮಾಡುವ ತನಕ.

ನಾನು ಅವಳಿಗೆ ಬುದ್ಧಿ ಹೇಳಿದೆ.
ಅಲ್ಲ ಮಗಳೇ,
ನೀನು ಆ ಬಲೆಯನ್ನು ಕತ್ತರಿಸಿಬಿಟ್ಟಿದ್ದರೆ
ಜೇಡಕ್ಕೆ ಗೊತ್ತಾಗುತ್ತಿತ್ತು
ಆ ಜಾಗ ಅದರ ಮನೆಯಲ್ಲವೆಂದು,
ಮತ್ತು ನೀನು ಸೈಕಲ್ ಕೂಡ ಓಡಾಡಿಸಬಹುದಿತ್ತು.
ಮಗಳು ಕಣ್ಣು ಪಿಳುಕಿಸುತ್ತ….

ಅಪ್ಪಾ
ಹೀಗೆ ಮಾಡುವುದರಿಂದಲೇ ಅಲ್ವಾ
ಜನ, ರೆಫ್ಯೂಜಿಗಳಾಗೋದು?

ಫಾಡಿ ಜೂಡ,
ಪ್ಯಾಲೆಸ್ತೇನಿಯನ್-ಅಮೆರಿಕನ್ ಕವಿ

******

2.

“ನಾವು ರಿಯಲಿಸ್ಟಿಕ್ ಆಗಿ ಯೋಚಿಸಬೇಕು”
ಎಂದು ರಾಜಕಾರಣಿಗಳು ಎಚ್ಚರಿಕೆಯಿಂದ
ಗಂಭೀರವಾಗಿ ಮಾತಾಡುವಾಗ,
ಬಹುತೇಕ ಅವರು, ಸೋತು ಸುಣ್ಣವಾಗಿದ್ದಾರೆ
ಆದ್ದರಿಂದಲೇ ಅವರು ’ಸಮಾಧಾನ ಪ್ರಿಯರು’

ಆದರೆ, ಇದೇ ರಾಜಕಾರಣಿಗಳು
ಮೌಲ್ಯ, ಹೆಮ್ಮೆ ಮುಂತಾದವುಗಳ ಬಗ್ಗೆ
ಮಾತನಾಡಲು ಶುರು ಮಾಡಿದರೆಂದರೆ,
ಗಮನಿಸಿ,
ಈಗಾಗಲೇ ಅವರ ಜನರಲ್‌ಗಳು
ನಕ್ಷೆಯ ಮೇಲೆ
ಏನೋ ಗುರುತು ಮಾಡುತ್ತಿದ್ದಾರೆ.

ಡಬ್ಲ್ಯು ಎಚ್ ಆಡೆನ್ (1907-1973),
ಬ್ರಿಟಿಷ್-ಅಮೆರಿಕನ್ ಕವಿ

******

3

ಕ್ರೂರಿಯೊಬ್ಬನ ಗೋರಿಯ ಮೇಲಿನ ಬರಹ

ಕೆಲಸದಲ್ಲಿ ಭಾರೀ ಅಚ್ಚುಕಟ್ಟು
ಒಂದು ಕೆಲಸ ಹಿಡಿದರೆ, ಮುಗಿಸುವವರೆಗೂ
ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ.
ಪದ್ಯ ಅಂತೂ ಅದ್ಭುತ
ಎಂಥ ಸಾಮಾನ್ಯರೂ ಮೈಮರೆತು ತಲೆದೂಗುತ್ತಾರೆ.
ಮನುಷ್ಯ ಜಾತಿಯ ಅವಿವೇಕದ ಇತಿಹಾಸವನ್ನು
ಅರೆದು ಕುಡಿದವರಂತೆ ಮಾತನಾಡುತ್ತಾನೆ.
ಸೈನ್ಯ, ಯುದ್ಧನೌಕೆಗಳ ಬಗ್ಗೆ ಅಪಾರ ತಿಳಿವಳಿಕೆ.
ಪಾರ್ಲಿಮೆಂಟಲ್ಲಿ ತಮಾಷೆ ಮಾಡಿದಾಗ
ಗೌರವಾನ್ವಿತ ಸದಸ್ಯರು
ಬೆಂಚು ಕುಟ್ಟಿ, ಗಹಗಹಿಸಿ ನಗುತ್ತಾರೆ.
ಹಾಗು
ಇವನು ಕಣ್ಣೀರು ಹಾಕಿದಾಗ
ಪುಟ್ಟ ಮಕ್ಕಳು
ರಸ್ತೆಯಲ್ಲಿ ಬಿದ್ದು ಸಾಯುತ್ತಾರೆ.

ಡಬ್ಲ್ಯು ಎಚ್ ಆಡೆನ್ (1907-1973), ಬ್ರಿಟಿಷ್-ಅಮೆರಿಕನ್ ಕವಿ

*********

4

ತಾವೋ ಮಾರ್ಗದಲ್ಲಿ
ಹತೋಟಿಗೆ ಬಲಪ್ರಯೋಗ,
ಗೆಲುವಿಗೆ ಆಯುಧ ನಿಷಿದ್ಧ.
ಸೈನಿಕರು ಓಡಾಡಿದಲ್ಲೆಲ್ಲ

ಬೆಳೆದು ನಿಂತಿವೆ ಮುಳ್ಳಿನ ಪೊದೆಗಳು.
ಹಿಂಸೆ ಅಂಟು ರೋಗ
ಉದ್ದೇಶ ಎಷ್ಟೇ ಒಳ್ಳೆಯದಾದರೂ.

ನಿಜದ ನಾಯಕ
ಯುದ್ಧದ ನಂತರ ನೆಲೆಗೊಳ್ಳುವ
ಶಾಂತಿಯ ಬುಡದಲ್ಲಿ ಜ್ವಾಲಾಮುಖಿ ಕಾಣಬಲ್ಲ.
ಅದಕ್ಕೇ ಅವನಿಗೆ ಯುದ್ಧದ ಬಗ್ಗೆ ಹೆಮ್ಮೆಯಿಲ್ಲ.

ಅವನಿಗೆ ತನ್ನ ಬಗ್ಗೆ ನಂಬಿಕೆ
ಆದ್ದರಿಂದ ಬೇರೆಯವರ ಮನ ಒಲಿಸುವುದಿಲ್ಲ,

ಅವನಿಗೆ ತನ್ನ ಬಗ್ಗೆ ಸಮಾಧಾನ
ಆದ್ದರಿಂದ ಬೇರೆಯವರ ಒಪ್ಪಿಗೆ ಬೇಕಿಲ್ಲ,

ಅವನು ತನ್ನನ್ನು ಒಪ್ಪಿಕೊಂಡಿರುವದರಿಂದ
ಜಗತ್ತು ಅವನನ್ನು ಒಪ್ಪಿಕೊಂಡಿದೆ.

ಲಾವೋತ್ಸೆ (ಚೀನಾದ ಪ್ರಾಚೀನ ಕವಿ)

*******

5

ರೆಫ್ಯೂಜಿ ಕ್ಯಾಂಪಿನ ನಾಲ್ಕು ಕವಿತೆಗಳು
(ಅ)
ಅವಳ ಹೆಸರು ಯಾರಿಗೂ ಗೊತ್ತಿಲ್ಲ,
ಮರದ ದಿಣ್ಣೆಯ ಮೇಲೆ ಕುಳಿತಿರುವ
ಆ ಹೆಂಗಸನ್ನು ಯಾರೂ
ಅವಳ ಹೆಸರಿನಿಂದ ಕೂಗುವುದೇ ಇಲ್ಲ.

ಗರಗಸದಿಂದ ಕತ್ತರಿಸಲ್ಪಟ್ಟ
ಮಗುವಿನ ತಾಯಿ ಎಂದೇ

ಗುರುತಿಸುತ್ತಾರೆ ಅವಳನ್ನು ಇಲ್ಲಿ ಎಲ್ಲ
ಈ ರೆಫ್ಯೂಜಿ ಕ್ಯಾಂಪ್‌ನಲ್ಲಿ.

———

(ಆ)

ಅವರು, ತಮ್ಮ ಹಳ್ಳಿ, ಮನೆ, ಒಲೆ,
ಒಲೆ ಮೇಲಿನ ರೊಟ್ಟಿ ಎಲ್ಲವನ್ನೂ
ಇದ್ದಕ್ಕಿದ್ದ ಹಾಗೆಯೇ ಬಿಟ್ಟು
ಓಡಿ ಬಂದ ರಾತ್ರಿಯ

ಹಿಂದಿನ ರಾತ್ರಿ
ಯಾರು ತಟ್ಟಿದ್ದರು ಅವರ ಮನೆಯ ಬಾಗಿಲನ್ನ?

ಯಾಕೆ ಅವರು ತಮ್ಮ ಮನೆಯ
ಬಾಗಿಲು, ಕಿಟಕಿಗಳನ್ನ
ಆಮೇಲೆ ಯಾರಿಗೂ ತೆರೆಯಲೇ ಇಲ್ಲ?

ಯಾಕೆ ಅವರು ಆಮೇಲೆ
ತಮ್ಮ ಮನೆಯ ಹೆಣ್ಣುಮಕ್ಕಳ ಕಣ್ಣಲ್ಲಿ
ಕಣ್ಣಿಟ್ಟು ನೋಡಲೇ ಇಲ್ಲ
ಎನ್ನುವುದನ್ನ ಹೇಳುವುದಕ್ಕಿಂತ ಮೊದಲೇ….

ಭಾರಿ ಚಿನಾರ್ ಮರ
ಕರ್ಕಶವಾಗಿ ಸದ್ದು ಮಾಡುತ್ತಾ
ನೆಲಕ್ಕುರುಳಿತು.
ಅವರಿಗೆ ಹೇಳಬೇಕಾದ್ದನ್ನು ಹೇಳಲಿಕ್ಕಾಗಲೇ ಇಲ್ಲ.

——-

(ಇ)

ತನ್ನ ಟೆಂಟ್ ಹೊರಗೆ
ಆಟ ಆಡುತ್ತಿದ್ದ
ಆ ಪುಟ್ಟ ಹುಡುಗಿ
ಹತ್ತಾರು ಬಾರಿ ಕರೆದರೂ
ನಮ್ಮತ್ತ ಕಣ್ಣೆತ್ತಿ ನೋಡಲಿಲ್ಲ.

ಆಕೆ ಓಡಿ ಹೋಗಿ
ತನ್ನ ಟೆಂಟ್‌ನ ಬಾಗಿಲಲ್ಲಿ
ಎರಡೂ ಬದಿಯ ಹಗ್ಗ ಜಗ್ಗಿ ಹಿಡಿದು
ಅಡ್ಡ ನಿಂತುಕೊಂಡಳು,
ಇನ್ನು ಮುಂದೆ
ಯಾರನ್ನೂ ಒಳಗೆ ಬಿಡಲಾರೆ ಎಂಬಂತೆ.

ಅವಳು ಗುರುತಿಸದ
ಯಾವ ಮುಖಕ್ಕೂ
ಇನ್ನು ಅವಳ ಹೊಸಮನೆಯಲ್ಲಿ
ಜಾಗವಿಲ್ಲ.

———-

(ಈ)

ಒಂದು ಟೆಂಟ್‌ನಿಂದ
ಇನ್ನೊಂದು ಟೆಂಟ್‌ಗೆ,
ಎರಡೇ ಎರಡು ಹೆಜ್ಜೆ ದಾಟಿ
ನವ ವಧು
ಗಂಡನ ಮನೆಗೆ ಬಂದಿದ್ದಾಳೆ.

ನಿನ್ನೆಯತನಕ
ಗುರುತು ಪರಿಚಯವೇ ಇಲ್ಲದ
ಎರಡು ಪರಿವಾರಗಳು
ಇಂದು
ಮದುವೆಯ ಹಾಡು ಹಾಡುತ್ತಾ
ಜೋರಾಗಿ ಗದ್ದಲ ಮಾಡುತ್ತಿವೆ,
ಗುಂಡಿನ ಸದ್ದಿನ ಸುದ್ದಿ
ಒಂದಿಷ್ಟು ಹೊತ್ತಾದರೂ
ಕಿವಿ ಮೇಲೆ ಬೀಳದಂತೆ.

ಚಹಾದ ಪಾತ್ರೆಯಲ್ಲಿ ವಿಧಿಯಿಲ್ಲದೇ

ಕುದಿಯುತ್ತಿರುವ ಬಣ್ಣ ಬಣ್ಣದ ಮಸಾಲೆ.
ವಧುವಿನ ಮೊದಲರಾತ್ರಿ.

ಕಲ್ಪನಾ ಸಿಂಗ್ ಚಿಟ್ನಿಸ್,
ಭಾರತೀಯ-ಅಮೆರಿಕನ ಕವಿ

***********

6

ಮರಿ,
ತೊಗೋ ಈ ಕಿತ್ತಳೆ ಹಣ್ಣು
ಗಫೂರ್‌ನ ಕೊಲ್ಲಬೇಡ
ಅವ ನನ್ನ ಮೊಮ್ಮಗ.

ಮರಿ,
ತೊಗೋ ಈ ಸೇಬು
ಇಸ್ಮಾಯಿಲ್‌ನ ಬಿಟ್ಟುಬಿಡು

ಆವಾ ನನ್ನ ಸಂಬಂಧಿ.

ಮರಿ,
ಈ ಆಲಿವ್ಸ್ ತೊಗೋ
ನಿಸ್ಸಾರ್‌ಗೆ ಏನು ಮಾಡಬೇಡ
ಅವನು ಒಳ್ಳೆಯ ಹುಡುಗ.

ಕೊಲ್ಲಲೇಬೇಕಾದರೆ
ಈ ಮುದುಕಿಯನ್ನು ಕೊಲ್ಲು
ಮಾತು ಸತ್ತ ಊರಿನಲ್ಲಿ
ಈ ಬಾಯ್ಬಡುಕಿಗೇನು ಕೆಲಸ?

ದೇವರನ್ನೂ ಕೊಲ್ಲು
ಅವನಿಗೂ ಬಂದೂಕಿನ ಹೊಗೆ
ಆಗಿ ಬರುವುದಿಲ್ಲ.

ನನ್ನ ಭಾಷೆ
ಅವಳ ರಕ್ತದೊಂದಿಗೆ ಚಿಮ್ಮಿದೆ,
ಸಿಡಿದ ಗುಂಡಿನ ಚೂರುಗಳು

ನನ್ನ ಅಕ್ಷರಗಳನ್ನು ಘಾಸಿ ಮಾಡಿವೆ.
ನನ್ನ ಕವಿತೆಯಿಂದ ರಕ್ತ ಸೋರುತ್ತಿದೆ.

ಕಟಕಟೆಯಲ್ಲಿ ನಿಂತ ಕವಿತೆ
ವಿಷದ ಗಾಳಿಯನ್ನು
ಸಹಿಸಿಕೊಳ್ಳದೆ ಹೋದರೆ ಹೇಗೆ?

ಕೆ. ಸಚ್ಚಿದಾನಂದನ್, ಕೇರಳ ಮೂಲದ ಕವಿ

7

ವಿಯೆಟ್ನಾಂ
“ಮಗಳೇ, ನಿನ್ನ ಹೆಸರೇನು”
“ನನಗೆ ಗೊತ್ತಿಲ್ಲ”

“ಎಷ್ಟು ವಯಸ್ಸು? ಯಾವೂರು?”
“ನನಗೆ ಗೊತ್ತಿಲ್ಲ”

“ಯಾಕೆ ಆ ಬಿಲವನ್ನ ಮತ್ತೆ ಅಗೆಯುತ್ತಿದ್ದೀಯ?”
“ನನಗೆ ಗೊತ್ತಿಲ್ಲ”

“ಎಷ್ಟು ದಿನಗಳಾಯ್ತು ಹೀಗೆ ಅಡಗಿಕೊಂಡು?”
“ನನಗೆ ಗೊತ್ತಿಲ್ಲ”

“ನನ್ನ ಬೆರಳನ್ನ ಯಾಕೆ ಕಚ್ಚಿದೆ?”
“ನನಗೆ ಗೊತ್ತಿಲ್ಲ”

“ನಮ್ಮಿಂದ ಅಪಾಯ ಇಲ್ಲದಿರುವುದು ನಿನಗೆ ಗೊತ್ತಿಲ್ಲವೆ?”
“ನನಗೆ ಗೊತ್ತಿಲ್ಲ”

“ನೀನು ಯಾರ ಪರವಾಗಿರುವೆ?”
“ನನಗೆ ಗೊತ್ತಿಲ್ಲ”

“ಇದು ಯುದ್ಧ, ನೀನು ಯಾರನ್ನಾದರೂ ಆಯ್ಕೆ ಮಾಡಲೇ ಬೇಕು”
“ನನಗೆ ಗೊತ್ತಿಲ್ಲ”

“ನಿನ್ನ ಹಳ್ಳಿ ಇನ್ನೂ ಇದೆಯಾ?”
“ನನಗೆ ಗೊತ್ತಿಲ್ಲ”

“ಈ ಹುಡುಗ, ಹುಡುಗಿ ನಿನ್ನ ಮಕ್ಕಳಾ?”
“ಹೌದು”

ವಿಸ್ವಾವಾ ಸಿಂಬೋರ್‍ಸ್‌ಕ, ಪೋಲಿಶ್ ಕವಿ

ಸಂಗ್ರಹ ಮತ್ತು ಕನ್ನಡ ಅನುವಾದ: ಚಿದಂಬರ ನರೇಂದ್ರ


ಇದನ್ನೂ ಓದಿ: ಪ್ರತಿರೋಧವೊಡ್ಡದೆ ನನ್ನೊಳಗಿನ ಕವಿತೆ ಪೂರ್ಣವಾಗುವುದೇ ಇಲ್ಲ: ಮಿಸ್ರಿಯಾ. ಐ.ಪಜೀರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...