Homeಕವನಮರೆವಿಗೆ ಎದುರಾಗಿ.. ಯುದ್ಧ ವಿರೋಧಿ ಪದ್ಯಗಳು

ಮರೆವಿಗೆ ಎದುರಾಗಿ.. ಯುದ್ಧ ವಿರೋಧಿ ಪದ್ಯಗಳು

- Advertisement -
- Advertisement -

1.

ನನ್ನ ಮಗಳು,
ಅವಳ ಸೈಕಲ್‌ನ ಹ್ಯಾಂಡಲ್ ನಡುವೆ ಕಟ್ಟಿದ್ದ
ಜೇಡರ ಬಲೆಯನ್ನು ಕತ್ತರಿಸಿ
ಆ ಜೇಡರ ಹುಳುವನ್ನು ಘಾಸಿ ಮಾಡಲು
ಸುತರಾಂ ಸಿದ್ಧಳಾಗಲಿಲ್ಲ.

ಎರಡು ವಾರ ಕಾಯ್ದಳು
ಜೇಡ ತಾನೇತಾನಾಗಿ
ಆ ಜಾಗ ಖಾಲೀ ಮಾಡುವ ತನಕ.

ನಾನು ಅವಳಿಗೆ ಬುದ್ಧಿ ಹೇಳಿದೆ.
ಅಲ್ಲ ಮಗಳೇ,
ನೀನು ಆ ಬಲೆಯನ್ನು ಕತ್ತರಿಸಿಬಿಟ್ಟಿದ್ದರೆ
ಜೇಡಕ್ಕೆ ಗೊತ್ತಾಗುತ್ತಿತ್ತು
ಆ ಜಾಗ ಅದರ ಮನೆಯಲ್ಲವೆಂದು,
ಮತ್ತು ನೀನು ಸೈಕಲ್ ಕೂಡ ಓಡಾಡಿಸಬಹುದಿತ್ತು.
ಮಗಳು ಕಣ್ಣು ಪಿಳುಕಿಸುತ್ತ….

ಅಪ್ಪಾ
ಹೀಗೆ ಮಾಡುವುದರಿಂದಲೇ ಅಲ್ವಾ
ಜನ, ರೆಫ್ಯೂಜಿಗಳಾಗೋದು?

ಫಾಡಿ ಜೂಡ,
ಪ್ಯಾಲೆಸ್ತೇನಿಯನ್-ಅಮೆರಿಕನ್ ಕವಿ

******

2.

“ನಾವು ರಿಯಲಿಸ್ಟಿಕ್ ಆಗಿ ಯೋಚಿಸಬೇಕು”
ಎಂದು ರಾಜಕಾರಣಿಗಳು ಎಚ್ಚರಿಕೆಯಿಂದ
ಗಂಭೀರವಾಗಿ ಮಾತಾಡುವಾಗ,
ಬಹುತೇಕ ಅವರು, ಸೋತು ಸುಣ್ಣವಾಗಿದ್ದಾರೆ
ಆದ್ದರಿಂದಲೇ ಅವರು ’ಸಮಾಧಾನ ಪ್ರಿಯರು’

ಆದರೆ, ಇದೇ ರಾಜಕಾರಣಿಗಳು
ಮೌಲ್ಯ, ಹೆಮ್ಮೆ ಮುಂತಾದವುಗಳ ಬಗ್ಗೆ
ಮಾತನಾಡಲು ಶುರು ಮಾಡಿದರೆಂದರೆ,
ಗಮನಿಸಿ,
ಈಗಾಗಲೇ ಅವರ ಜನರಲ್‌ಗಳು
ನಕ್ಷೆಯ ಮೇಲೆ
ಏನೋ ಗುರುತು ಮಾಡುತ್ತಿದ್ದಾರೆ.

ಡಬ್ಲ್ಯು ಎಚ್ ಆಡೆನ್ (1907-1973),
ಬ್ರಿಟಿಷ್-ಅಮೆರಿಕನ್ ಕವಿ

******

3

ಕ್ರೂರಿಯೊಬ್ಬನ ಗೋರಿಯ ಮೇಲಿನ ಬರಹ

ಕೆಲಸದಲ್ಲಿ ಭಾರೀ ಅಚ್ಚುಕಟ್ಟು
ಒಂದು ಕೆಲಸ ಹಿಡಿದರೆ, ಮುಗಿಸುವವರೆಗೂ
ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ.
ಪದ್ಯ ಅಂತೂ ಅದ್ಭುತ
ಎಂಥ ಸಾಮಾನ್ಯರೂ ಮೈಮರೆತು ತಲೆದೂಗುತ್ತಾರೆ.
ಮನುಷ್ಯ ಜಾತಿಯ ಅವಿವೇಕದ ಇತಿಹಾಸವನ್ನು
ಅರೆದು ಕುಡಿದವರಂತೆ ಮಾತನಾಡುತ್ತಾನೆ.
ಸೈನ್ಯ, ಯುದ್ಧನೌಕೆಗಳ ಬಗ್ಗೆ ಅಪಾರ ತಿಳಿವಳಿಕೆ.
ಪಾರ್ಲಿಮೆಂಟಲ್ಲಿ ತಮಾಷೆ ಮಾಡಿದಾಗ
ಗೌರವಾನ್ವಿತ ಸದಸ್ಯರು
ಬೆಂಚು ಕುಟ್ಟಿ, ಗಹಗಹಿಸಿ ನಗುತ್ತಾರೆ.
ಹಾಗು
ಇವನು ಕಣ್ಣೀರು ಹಾಕಿದಾಗ
ಪುಟ್ಟ ಮಕ್ಕಳು
ರಸ್ತೆಯಲ್ಲಿ ಬಿದ್ದು ಸಾಯುತ್ತಾರೆ.

ಡಬ್ಲ್ಯು ಎಚ್ ಆಡೆನ್ (1907-1973), ಬ್ರಿಟಿಷ್-ಅಮೆರಿಕನ್ ಕವಿ

*********

4

ತಾವೋ ಮಾರ್ಗದಲ್ಲಿ
ಹತೋಟಿಗೆ ಬಲಪ್ರಯೋಗ,
ಗೆಲುವಿಗೆ ಆಯುಧ ನಿಷಿದ್ಧ.
ಸೈನಿಕರು ಓಡಾಡಿದಲ್ಲೆಲ್ಲ

ಬೆಳೆದು ನಿಂತಿವೆ ಮುಳ್ಳಿನ ಪೊದೆಗಳು.
ಹಿಂಸೆ ಅಂಟು ರೋಗ
ಉದ್ದೇಶ ಎಷ್ಟೇ ಒಳ್ಳೆಯದಾದರೂ.

ನಿಜದ ನಾಯಕ
ಯುದ್ಧದ ನಂತರ ನೆಲೆಗೊಳ್ಳುವ
ಶಾಂತಿಯ ಬುಡದಲ್ಲಿ ಜ್ವಾಲಾಮುಖಿ ಕಾಣಬಲ್ಲ.
ಅದಕ್ಕೇ ಅವನಿಗೆ ಯುದ್ಧದ ಬಗ್ಗೆ ಹೆಮ್ಮೆಯಿಲ್ಲ.

ಅವನಿಗೆ ತನ್ನ ಬಗ್ಗೆ ನಂಬಿಕೆ
ಆದ್ದರಿಂದ ಬೇರೆಯವರ ಮನ ಒಲಿಸುವುದಿಲ್ಲ,

ಅವನಿಗೆ ತನ್ನ ಬಗ್ಗೆ ಸಮಾಧಾನ
ಆದ್ದರಿಂದ ಬೇರೆಯವರ ಒಪ್ಪಿಗೆ ಬೇಕಿಲ್ಲ,

ಅವನು ತನ್ನನ್ನು ಒಪ್ಪಿಕೊಂಡಿರುವದರಿಂದ
ಜಗತ್ತು ಅವನನ್ನು ಒಪ್ಪಿಕೊಂಡಿದೆ.

ಲಾವೋತ್ಸೆ (ಚೀನಾದ ಪ್ರಾಚೀನ ಕವಿ)

*******

5

ರೆಫ್ಯೂಜಿ ಕ್ಯಾಂಪಿನ ನಾಲ್ಕು ಕವಿತೆಗಳು
(ಅ)
ಅವಳ ಹೆಸರು ಯಾರಿಗೂ ಗೊತ್ತಿಲ್ಲ,
ಮರದ ದಿಣ್ಣೆಯ ಮೇಲೆ ಕುಳಿತಿರುವ
ಆ ಹೆಂಗಸನ್ನು ಯಾರೂ
ಅವಳ ಹೆಸರಿನಿಂದ ಕೂಗುವುದೇ ಇಲ್ಲ.

ಗರಗಸದಿಂದ ಕತ್ತರಿಸಲ್ಪಟ್ಟ
ಮಗುವಿನ ತಾಯಿ ಎಂದೇ

ಗುರುತಿಸುತ್ತಾರೆ ಅವಳನ್ನು ಇಲ್ಲಿ ಎಲ್ಲ
ಈ ರೆಫ್ಯೂಜಿ ಕ್ಯಾಂಪ್‌ನಲ್ಲಿ.

———

(ಆ)

ಅವರು, ತಮ್ಮ ಹಳ್ಳಿ, ಮನೆ, ಒಲೆ,
ಒಲೆ ಮೇಲಿನ ರೊಟ್ಟಿ ಎಲ್ಲವನ್ನೂ
ಇದ್ದಕ್ಕಿದ್ದ ಹಾಗೆಯೇ ಬಿಟ್ಟು
ಓಡಿ ಬಂದ ರಾತ್ರಿಯ

ಹಿಂದಿನ ರಾತ್ರಿ
ಯಾರು ತಟ್ಟಿದ್ದರು ಅವರ ಮನೆಯ ಬಾಗಿಲನ್ನ?

ಯಾಕೆ ಅವರು ತಮ್ಮ ಮನೆಯ
ಬಾಗಿಲು, ಕಿಟಕಿಗಳನ್ನ
ಆಮೇಲೆ ಯಾರಿಗೂ ತೆರೆಯಲೇ ಇಲ್ಲ?

ಯಾಕೆ ಅವರು ಆಮೇಲೆ
ತಮ್ಮ ಮನೆಯ ಹೆಣ್ಣುಮಕ್ಕಳ ಕಣ್ಣಲ್ಲಿ
ಕಣ್ಣಿಟ್ಟು ನೋಡಲೇ ಇಲ್ಲ
ಎನ್ನುವುದನ್ನ ಹೇಳುವುದಕ್ಕಿಂತ ಮೊದಲೇ….

ಭಾರಿ ಚಿನಾರ್ ಮರ
ಕರ್ಕಶವಾಗಿ ಸದ್ದು ಮಾಡುತ್ತಾ
ನೆಲಕ್ಕುರುಳಿತು.
ಅವರಿಗೆ ಹೇಳಬೇಕಾದ್ದನ್ನು ಹೇಳಲಿಕ್ಕಾಗಲೇ ಇಲ್ಲ.

——-

(ಇ)

ತನ್ನ ಟೆಂಟ್ ಹೊರಗೆ
ಆಟ ಆಡುತ್ತಿದ್ದ
ಆ ಪುಟ್ಟ ಹುಡುಗಿ
ಹತ್ತಾರು ಬಾರಿ ಕರೆದರೂ
ನಮ್ಮತ್ತ ಕಣ್ಣೆತ್ತಿ ನೋಡಲಿಲ್ಲ.

ಆಕೆ ಓಡಿ ಹೋಗಿ
ತನ್ನ ಟೆಂಟ್‌ನ ಬಾಗಿಲಲ್ಲಿ
ಎರಡೂ ಬದಿಯ ಹಗ್ಗ ಜಗ್ಗಿ ಹಿಡಿದು
ಅಡ್ಡ ನಿಂತುಕೊಂಡಳು,
ಇನ್ನು ಮುಂದೆ
ಯಾರನ್ನೂ ಒಳಗೆ ಬಿಡಲಾರೆ ಎಂಬಂತೆ.

ಅವಳು ಗುರುತಿಸದ
ಯಾವ ಮುಖಕ್ಕೂ
ಇನ್ನು ಅವಳ ಹೊಸಮನೆಯಲ್ಲಿ
ಜಾಗವಿಲ್ಲ.

———-

(ಈ)

ಒಂದು ಟೆಂಟ್‌ನಿಂದ
ಇನ್ನೊಂದು ಟೆಂಟ್‌ಗೆ,
ಎರಡೇ ಎರಡು ಹೆಜ್ಜೆ ದಾಟಿ
ನವ ವಧು
ಗಂಡನ ಮನೆಗೆ ಬಂದಿದ್ದಾಳೆ.

ನಿನ್ನೆಯತನಕ
ಗುರುತು ಪರಿಚಯವೇ ಇಲ್ಲದ
ಎರಡು ಪರಿವಾರಗಳು
ಇಂದು
ಮದುವೆಯ ಹಾಡು ಹಾಡುತ್ತಾ
ಜೋರಾಗಿ ಗದ್ದಲ ಮಾಡುತ್ತಿವೆ,
ಗುಂಡಿನ ಸದ್ದಿನ ಸುದ್ದಿ
ಒಂದಿಷ್ಟು ಹೊತ್ತಾದರೂ
ಕಿವಿ ಮೇಲೆ ಬೀಳದಂತೆ.

ಚಹಾದ ಪಾತ್ರೆಯಲ್ಲಿ ವಿಧಿಯಿಲ್ಲದೇ

ಕುದಿಯುತ್ತಿರುವ ಬಣ್ಣ ಬಣ್ಣದ ಮಸಾಲೆ.
ವಧುವಿನ ಮೊದಲರಾತ್ರಿ.

ಕಲ್ಪನಾ ಸಿಂಗ್ ಚಿಟ್ನಿಸ್,
ಭಾರತೀಯ-ಅಮೆರಿಕನ ಕವಿ

***********

6

ಮರಿ,
ತೊಗೋ ಈ ಕಿತ್ತಳೆ ಹಣ್ಣು
ಗಫೂರ್‌ನ ಕೊಲ್ಲಬೇಡ
ಅವ ನನ್ನ ಮೊಮ್ಮಗ.

ಮರಿ,
ತೊಗೋ ಈ ಸೇಬು
ಇಸ್ಮಾಯಿಲ್‌ನ ಬಿಟ್ಟುಬಿಡು

ಆವಾ ನನ್ನ ಸಂಬಂಧಿ.

ಮರಿ,
ಈ ಆಲಿವ್ಸ್ ತೊಗೋ
ನಿಸ್ಸಾರ್‌ಗೆ ಏನು ಮಾಡಬೇಡ
ಅವನು ಒಳ್ಳೆಯ ಹುಡುಗ.

ಕೊಲ್ಲಲೇಬೇಕಾದರೆ
ಈ ಮುದುಕಿಯನ್ನು ಕೊಲ್ಲು
ಮಾತು ಸತ್ತ ಊರಿನಲ್ಲಿ
ಈ ಬಾಯ್ಬಡುಕಿಗೇನು ಕೆಲಸ?

ದೇವರನ್ನೂ ಕೊಲ್ಲು
ಅವನಿಗೂ ಬಂದೂಕಿನ ಹೊಗೆ
ಆಗಿ ಬರುವುದಿಲ್ಲ.

ನನ್ನ ಭಾಷೆ
ಅವಳ ರಕ್ತದೊಂದಿಗೆ ಚಿಮ್ಮಿದೆ,
ಸಿಡಿದ ಗುಂಡಿನ ಚೂರುಗಳು

ನನ್ನ ಅಕ್ಷರಗಳನ್ನು ಘಾಸಿ ಮಾಡಿವೆ.
ನನ್ನ ಕವಿತೆಯಿಂದ ರಕ್ತ ಸೋರುತ್ತಿದೆ.

ಕಟಕಟೆಯಲ್ಲಿ ನಿಂತ ಕವಿತೆ
ವಿಷದ ಗಾಳಿಯನ್ನು
ಸಹಿಸಿಕೊಳ್ಳದೆ ಹೋದರೆ ಹೇಗೆ?

ಕೆ. ಸಚ್ಚಿದಾನಂದನ್, ಕೇರಳ ಮೂಲದ ಕವಿ

7

ವಿಯೆಟ್ನಾಂ
“ಮಗಳೇ, ನಿನ್ನ ಹೆಸರೇನು”
“ನನಗೆ ಗೊತ್ತಿಲ್ಲ”

“ಎಷ್ಟು ವಯಸ್ಸು? ಯಾವೂರು?”
“ನನಗೆ ಗೊತ್ತಿಲ್ಲ”

“ಯಾಕೆ ಆ ಬಿಲವನ್ನ ಮತ್ತೆ ಅಗೆಯುತ್ತಿದ್ದೀಯ?”
“ನನಗೆ ಗೊತ್ತಿಲ್ಲ”

“ಎಷ್ಟು ದಿನಗಳಾಯ್ತು ಹೀಗೆ ಅಡಗಿಕೊಂಡು?”
“ನನಗೆ ಗೊತ್ತಿಲ್ಲ”

“ನನ್ನ ಬೆರಳನ್ನ ಯಾಕೆ ಕಚ್ಚಿದೆ?”
“ನನಗೆ ಗೊತ್ತಿಲ್ಲ”

“ನಮ್ಮಿಂದ ಅಪಾಯ ಇಲ್ಲದಿರುವುದು ನಿನಗೆ ಗೊತ್ತಿಲ್ಲವೆ?”
“ನನಗೆ ಗೊತ್ತಿಲ್ಲ”

“ನೀನು ಯಾರ ಪರವಾಗಿರುವೆ?”
“ನನಗೆ ಗೊತ್ತಿಲ್ಲ”

“ಇದು ಯುದ್ಧ, ನೀನು ಯಾರನ್ನಾದರೂ ಆಯ್ಕೆ ಮಾಡಲೇ ಬೇಕು”
“ನನಗೆ ಗೊತ್ತಿಲ್ಲ”

“ನಿನ್ನ ಹಳ್ಳಿ ಇನ್ನೂ ಇದೆಯಾ?”
“ನನಗೆ ಗೊತ್ತಿಲ್ಲ”

“ಈ ಹುಡುಗ, ಹುಡುಗಿ ನಿನ್ನ ಮಕ್ಕಳಾ?”
“ಹೌದು”

ವಿಸ್ವಾವಾ ಸಿಂಬೋರ್‍ಸ್‌ಕ, ಪೋಲಿಶ್ ಕವಿ

ಸಂಗ್ರಹ ಮತ್ತು ಕನ್ನಡ ಅನುವಾದ: ಚಿದಂಬರ ನರೇಂದ್ರ


ಇದನ್ನೂ ಓದಿ: ಪ್ರತಿರೋಧವೊಡ್ಡದೆ ನನ್ನೊಳಗಿನ ಕವಿತೆ ಪೂರ್ಣವಾಗುವುದೇ ಇಲ್ಲ: ಮಿಸ್ರಿಯಾ. ಐ.ಪಜೀರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...