Homeಕರ್ನಾಟಕವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಕೆಗೆ SFI, KVS ಸಂಘಟನೆಗಳಿಂದ ಖಂಡನೆ

ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಕೆಗೆ SFI, KVS ಸಂಘಟನೆಗಳಿಂದ ಖಂಡನೆ

- Advertisement -
- Advertisement -

ಬಿ.ಎಂ.ಟಿ.ಸಿ ಮತ್ತು ಕೆ.ಎಸ್.ಆರ್.ಟಿ.ಸಿ.ಯು ವಿದ್ಯಾರ್ಥಿಗಳ ಬಸ್ ಪಾಸ್ ದರವನ್ನು ಹೆಚ್ಚಳ ಮಾಡಲು ಮುಂದಾಗಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಮತ್ತು ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ತೀವ್ರವಾಗಿ ಖಂಡಿಸಿದ್ದು ಈ ನಿರ್ಧಾರದಿಂದ ಹಿಂದೆ ಸರಿಯದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ ನೀಡಿವೆ.

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 100 ರೂ, ಕಾಲೇಜು ವಿದ್ಯಾರ್ಥಿಗಳಿಗೆ 150 ರೂ ಮತ್ತು ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳಿಗೆ 200 ರೂ ಹೆಚ್ಚಳ ಮಾಡಲು ಕೆ.ಎಸ್.ಆರ್.ಟಿ.ಸಿ ನಿರ್ಧರಿಸಿದ್ದು ಇನ್ನೆರೆಡು ದಿನಗಳಲ್ಲಿ ಏರಿಕೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದಾಗ ದಲಿತ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಉಚಿತ ಮಾಡಿದ್ದರು. ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಕಳೆದ ವರ್ಷ ಉಚಿತ ಬಸ್ ಪಾಸ್ ನೀಡುವುದಾಗಿ ಹೇಳಿ ಈಗ ದರವನ್ನು ಹೆಚ್ಚಳ ಮಾಡಿರುವುದು ವಿದ್ಯಾರ್ಥಿ ವಿರೋಧಿ ನೀತಿಯಾಗಿದೆ. ಹಾಗಾಗಿ ಸರಕಾರ ಮತ್ತು ಸಾರಿಗೆ ಇಲಾಖೆ ಕೂಡಲೆ ದರ ಹೆಚ್ಚಳದ ಆದೇಶವನ್ನು ವಾಪಸ್ ಪಡೆಯಬೇಕೆಂದು ವಿದ್ಯಾರ್ಥಿ ಮುಖಂಡರು ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಎಸ್.ಎಫ್.ಐ ಕಳೆದ ಹತ್ತು ವರ್ಷಗಳಿಂದ ನಿರಂತರ ಹೋರಾಟ, ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಸರಕಾರ ಮತ್ತು ಸಾರಿಗೆ ಇಲಾಖೆಯಗಮನಕ್ಕೆ ತರುತ್ತಲೇ ಇದೆ. ಹಿಂದೆ ಇದ್ದ ಕಾಂಗ್ರೆಸ್ ಸರಕಾರ ಬಜೆಟ್ ನಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದವರೆಗೆ ಉಚಿತ ಬಸ್ ನೀಡುವುದಾಗಿ ರಾಜ್ಯ ಸರಕಾರ ಘೋಷಿಸಿತ್ತು. ಆದರೆ ಹೊಸದಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ – ಜೆಡಿಸ್ ಸಮ್ಮಿಶ್ರ ಸರಕಾರ ಉಚಿತ ಬಸ್ ಪಾಸ್ ಯೋಜನೆಯನ್ನು ರದ್ದು ಪಡಿಸಿ ಪೂರ್ಣ ಪ್ರಮಾಣದ ಹಣ ನೀಡಿ ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯುವಂತೆ ಆದೇಶ ಹೊರಡಿಸಿದ್ದು ವಿದ್ಯಾರ್ಥಿ ವಿರೋಧಿ ಕ್ರಮವಾಗಿದೆ ಎಂದು ಕೋಲಾರದ ಎಸ್.ಎಫ್.ಐ ಮುಖಂಡ ವಾಸುದೇವರೆಡ್ಡಿ ಹೇಳಿದ್ದಾರೆ.

ವಾಸುದೇವರೆಡ್ಡಿ

ಬೇರೆ ರಾಜ್ಯಗಳಲ್ಲಿ ವಿದ್ಯಾರ್ಥಿಗಳಿಗೆ ಸುಲಭ ದರದಲ್ಲಿ ಬಸ್ ಪಾಸ್ ನೀಡಲಾಗುತ್ತಿದೆ. ತಮಿಳುನಾಡಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್ ನೀಡಲಾಗುತ್ತಿದೆ. ಕೇರಳದಲ್ಲಿ ನಾಲ್ಕು ರೂ ಬಸ್ ಚಾರ್ಜ ಇದ್ದರೆ 1 ರೂ ಮಾತ್ರ ವಿದ್ಯಾರ್ಥಿಗಳು ನೀಡಬೇಕು. ಹರ್ಯಾಣ ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ನೀಡಲಾಗುತ್ತಿದೆ. ಈಗಿರುವಾಗ ಕರ್ನಾಟಕದಲ್ಲಿ ಮಾತ್ರ ಬಸ್ ಪಾಸ್ ದರ ಹೆಚ್ಚಳಕ್ಕೆ ಆದೇಶ ನೀಡಿರುವುದು ಅಕ್ಷಮ್ಯ ಎಂದವರು ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS)ಯ ಸಂಚಾಲಕರಾದ ಸರೋವರ್ ಬೆಂಕೀಕೆರೆಯವರು, “ಒಂದು ಕಡೆ ಶಿಕ್ಷಣವನ್ನು ಖಾಸಗೀಕರಣ ಮಾಡುತ್ತಾ ಹಣವಿದ್ದವರಿಗೇ ಶಿಕ್ಷಣ ಎಂಬಂತೆ ಮಾಡಲಾಗುತ್ತಿದೆ. ಇದರ ಮಧ್ಯೆ ಗುಣಮಟ್ಟದ ಶಿಕ್ಷಣ ಪಡೆಯಲು ನಗರಗಳಿಗೆ ಪ್ರಯಾಣ ಮಾಡುವ ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಕೆ ಮಾಡುತ್ತಿರುವ ರಾಜ್ಯ ಸರ್ಕಾರದ ಯೋಚನೆ ವಿದ್ಯಾರ್ಥಿ ವಿರೋಧಿಯಾಗಿದೆ. ಜೂನ್ ಜುಲೈ ತಿಂಗಳಿನಲ್ಲಿ ಬಿತ್ತನೆಗಾಗಿ ಸಾಲ ಮಾಡಿಕೊಳ್ಳುವ ಪೋಷಕರು ಹಾಗು ವಿದ್ಯಾರ್ಥಿಗಳ ಗಾಯದ ಮೇಲೆ ಬರೆ ಎಳೆಯುವ ಕೆಲಸ ಇದಾಗಿದ್ದು, ಇದರಿಂದ ಬಡವರು, ಅಲ್ಪಸಂಖ್ಯಾತರು, ದಲಿತರು ಮತ್ತು ವಿಶೇಷವಾಗಿ ಮಹಿಳೆಯರನ್ನು ಶಿಕ್ಷಣದಿಂದ ದೂರ ಉಳಿಯುವ ಸಾಧ್ಯತೆಗಳು ಹೆಚ್ಚಿದೆ. ರಾಜ್ಯ ಸರ್ಕಾರ ಈ ನಡೆಯನ್ನು ಹಿಂದೆ ಪಡೆಯದಿದ್ದರೆ ರಾಜ್ಯದಾದ್ಯಂತ ವಿದ್ಯಾರ್ಥಿಗಳ ಹೋರಾಟವನ್ನು ಎದುರಿಸಬೇಕಾಗುತ್ತದೆ.” ಎಂದಿದ್ದಾರೆ.

ಸರೋವರ್ ಬೆಂಕೀಕೆರೆ

ದೆಹಲಿ ಸರ್ಕಾರ ಮಹಿಳೆಯರಿಗೂ ಬಸ್ ಮತ್ತು ಮೆಟ್ರೊದಲ್ಲಿ ಉಚಿತ ಪ್ರವೇಶ ನೀಡಲು ಮುಂದಾಗಿರುವಾಗ ನಮ್ಮ ಸರ್ಕಾರ ಬಡ ವಿದ್ಯಾರ್ಥಿಗಳಿಂದ ಹೆಚ್ಚುವರಿ ಹಣ ಪಡೆಯುತ್ತಿರುವುದು ದುರಂತವೇ ಸರಿ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಪ್ ಡೇಟ್: ಕೆ.ಎಸ್.ಆರ್.ಟಿ.ಸಿ ಯೂ ತನ್ನ ನಿಲುವನ್ನು ವಾಪಸ್ ತೆಗೆದುಕೊಂಡಿದೆ. ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಕೆಯಲ್ಲಿ ಯಾವುದೇ ಹೆಚ್ಚುವರಿ ಅಥವಾ ಬದಲಾವಣೆ ಇಲ್ಲ ಎಂದು ತಿಳಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...