Homeಕರ್ನಾಟಕವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಕೆಗೆ SFI, KVS ಸಂಘಟನೆಗಳಿಂದ ಖಂಡನೆ

ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಕೆಗೆ SFI, KVS ಸಂಘಟನೆಗಳಿಂದ ಖಂಡನೆ

- Advertisement -
- Advertisement -

ಬಿ.ಎಂ.ಟಿ.ಸಿ ಮತ್ತು ಕೆ.ಎಸ್.ಆರ್.ಟಿ.ಸಿ.ಯು ವಿದ್ಯಾರ್ಥಿಗಳ ಬಸ್ ಪಾಸ್ ದರವನ್ನು ಹೆಚ್ಚಳ ಮಾಡಲು ಮುಂದಾಗಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಮತ್ತು ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ತೀವ್ರವಾಗಿ ಖಂಡಿಸಿದ್ದು ಈ ನಿರ್ಧಾರದಿಂದ ಹಿಂದೆ ಸರಿಯದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ ನೀಡಿವೆ.

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 100 ರೂ, ಕಾಲೇಜು ವಿದ್ಯಾರ್ಥಿಗಳಿಗೆ 150 ರೂ ಮತ್ತು ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳಿಗೆ 200 ರೂ ಹೆಚ್ಚಳ ಮಾಡಲು ಕೆ.ಎಸ್.ಆರ್.ಟಿ.ಸಿ ನಿರ್ಧರಿಸಿದ್ದು ಇನ್ನೆರೆಡು ದಿನಗಳಲ್ಲಿ ಏರಿಕೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದಾಗ ದಲಿತ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಉಚಿತ ಮಾಡಿದ್ದರು. ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಕಳೆದ ವರ್ಷ ಉಚಿತ ಬಸ್ ಪಾಸ್ ನೀಡುವುದಾಗಿ ಹೇಳಿ ಈಗ ದರವನ್ನು ಹೆಚ್ಚಳ ಮಾಡಿರುವುದು ವಿದ್ಯಾರ್ಥಿ ವಿರೋಧಿ ನೀತಿಯಾಗಿದೆ. ಹಾಗಾಗಿ ಸರಕಾರ ಮತ್ತು ಸಾರಿಗೆ ಇಲಾಖೆ ಕೂಡಲೆ ದರ ಹೆಚ್ಚಳದ ಆದೇಶವನ್ನು ವಾಪಸ್ ಪಡೆಯಬೇಕೆಂದು ವಿದ್ಯಾರ್ಥಿ ಮುಖಂಡರು ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಎಸ್.ಎಫ್.ಐ ಕಳೆದ ಹತ್ತು ವರ್ಷಗಳಿಂದ ನಿರಂತರ ಹೋರಾಟ, ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಸರಕಾರ ಮತ್ತು ಸಾರಿಗೆ ಇಲಾಖೆಯಗಮನಕ್ಕೆ ತರುತ್ತಲೇ ಇದೆ. ಹಿಂದೆ ಇದ್ದ ಕಾಂಗ್ರೆಸ್ ಸರಕಾರ ಬಜೆಟ್ ನಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದವರೆಗೆ ಉಚಿತ ಬಸ್ ನೀಡುವುದಾಗಿ ರಾಜ್ಯ ಸರಕಾರ ಘೋಷಿಸಿತ್ತು. ಆದರೆ ಹೊಸದಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ – ಜೆಡಿಸ್ ಸಮ್ಮಿಶ್ರ ಸರಕಾರ ಉಚಿತ ಬಸ್ ಪಾಸ್ ಯೋಜನೆಯನ್ನು ರದ್ದು ಪಡಿಸಿ ಪೂರ್ಣ ಪ್ರಮಾಣದ ಹಣ ನೀಡಿ ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯುವಂತೆ ಆದೇಶ ಹೊರಡಿಸಿದ್ದು ವಿದ್ಯಾರ್ಥಿ ವಿರೋಧಿ ಕ್ರಮವಾಗಿದೆ ಎಂದು ಕೋಲಾರದ ಎಸ್.ಎಫ್.ಐ ಮುಖಂಡ ವಾಸುದೇವರೆಡ್ಡಿ ಹೇಳಿದ್ದಾರೆ.

ವಾಸುದೇವರೆಡ್ಡಿ

ಬೇರೆ ರಾಜ್ಯಗಳಲ್ಲಿ ವಿದ್ಯಾರ್ಥಿಗಳಿಗೆ ಸುಲಭ ದರದಲ್ಲಿ ಬಸ್ ಪಾಸ್ ನೀಡಲಾಗುತ್ತಿದೆ. ತಮಿಳುನಾಡಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್ ನೀಡಲಾಗುತ್ತಿದೆ. ಕೇರಳದಲ್ಲಿ ನಾಲ್ಕು ರೂ ಬಸ್ ಚಾರ್ಜ ಇದ್ದರೆ 1 ರೂ ಮಾತ್ರ ವಿದ್ಯಾರ್ಥಿಗಳು ನೀಡಬೇಕು. ಹರ್ಯಾಣ ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ನೀಡಲಾಗುತ್ತಿದೆ. ಈಗಿರುವಾಗ ಕರ್ನಾಟಕದಲ್ಲಿ ಮಾತ್ರ ಬಸ್ ಪಾಸ್ ದರ ಹೆಚ್ಚಳಕ್ಕೆ ಆದೇಶ ನೀಡಿರುವುದು ಅಕ್ಷಮ್ಯ ಎಂದವರು ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS)ಯ ಸಂಚಾಲಕರಾದ ಸರೋವರ್ ಬೆಂಕೀಕೆರೆಯವರು, “ಒಂದು ಕಡೆ ಶಿಕ್ಷಣವನ್ನು ಖಾಸಗೀಕರಣ ಮಾಡುತ್ತಾ ಹಣವಿದ್ದವರಿಗೇ ಶಿಕ್ಷಣ ಎಂಬಂತೆ ಮಾಡಲಾಗುತ್ತಿದೆ. ಇದರ ಮಧ್ಯೆ ಗುಣಮಟ್ಟದ ಶಿಕ್ಷಣ ಪಡೆಯಲು ನಗರಗಳಿಗೆ ಪ್ರಯಾಣ ಮಾಡುವ ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಕೆ ಮಾಡುತ್ತಿರುವ ರಾಜ್ಯ ಸರ್ಕಾರದ ಯೋಚನೆ ವಿದ್ಯಾರ್ಥಿ ವಿರೋಧಿಯಾಗಿದೆ. ಜೂನ್ ಜುಲೈ ತಿಂಗಳಿನಲ್ಲಿ ಬಿತ್ತನೆಗಾಗಿ ಸಾಲ ಮಾಡಿಕೊಳ್ಳುವ ಪೋಷಕರು ಹಾಗು ವಿದ್ಯಾರ್ಥಿಗಳ ಗಾಯದ ಮೇಲೆ ಬರೆ ಎಳೆಯುವ ಕೆಲಸ ಇದಾಗಿದ್ದು, ಇದರಿಂದ ಬಡವರು, ಅಲ್ಪಸಂಖ್ಯಾತರು, ದಲಿತರು ಮತ್ತು ವಿಶೇಷವಾಗಿ ಮಹಿಳೆಯರನ್ನು ಶಿಕ್ಷಣದಿಂದ ದೂರ ಉಳಿಯುವ ಸಾಧ್ಯತೆಗಳು ಹೆಚ್ಚಿದೆ. ರಾಜ್ಯ ಸರ್ಕಾರ ಈ ನಡೆಯನ್ನು ಹಿಂದೆ ಪಡೆಯದಿದ್ದರೆ ರಾಜ್ಯದಾದ್ಯಂತ ವಿದ್ಯಾರ್ಥಿಗಳ ಹೋರಾಟವನ್ನು ಎದುರಿಸಬೇಕಾಗುತ್ತದೆ.” ಎಂದಿದ್ದಾರೆ.

ಸರೋವರ್ ಬೆಂಕೀಕೆರೆ

ದೆಹಲಿ ಸರ್ಕಾರ ಮಹಿಳೆಯರಿಗೂ ಬಸ್ ಮತ್ತು ಮೆಟ್ರೊದಲ್ಲಿ ಉಚಿತ ಪ್ರವೇಶ ನೀಡಲು ಮುಂದಾಗಿರುವಾಗ ನಮ್ಮ ಸರ್ಕಾರ ಬಡ ವಿದ್ಯಾರ್ಥಿಗಳಿಂದ ಹೆಚ್ಚುವರಿ ಹಣ ಪಡೆಯುತ್ತಿರುವುದು ದುರಂತವೇ ಸರಿ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಪ್ ಡೇಟ್: ಕೆ.ಎಸ್.ಆರ್.ಟಿ.ಸಿ ಯೂ ತನ್ನ ನಿಲುವನ್ನು ವಾಪಸ್ ತೆಗೆದುಕೊಂಡಿದೆ. ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಕೆಯಲ್ಲಿ ಯಾವುದೇ ಹೆಚ್ಚುವರಿ ಅಥವಾ ಬದಲಾವಣೆ ಇಲ್ಲ ಎಂದು ತಿಳಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...