Homeಮುಖಪುಟ'ಸಂವಿಧಾನದ ಆಶಯಕ್ಕೆ ವಿರುದ್ಧ': ತರಾತುರಿಯಲ್ಲಿ ಮುಖ್ಯ ಚು.ಆಯುಕ್ತರ ನೇಮಕಕ್ಕೆ ಕಾಂಗ್ರೆಸ್ ಟೀಕೆ

‘ಸಂವಿಧಾನದ ಆಶಯಕ್ಕೆ ವಿರುದ್ಧ’: ತರಾತುರಿಯಲ್ಲಿ ಮುಖ್ಯ ಚು.ಆಯುಕ್ತರ ನೇಮಕಕ್ಕೆ ಕಾಂಗ್ರೆಸ್ ಟೀಕೆ

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ (ಸಿಇಸಿ) ಮತ್ತು ಹರಿಯಾಣದ ಮುಖ್ಯ ಕಾರ್ಯದರ್ಶಿ ಡಾ. ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಿರುವುದು ‘ನಮ್ಮ ಸಂವಿಧಾನದ ಆಶಯ ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ವಿರುದ್ಧವಾದ ಮಧ್ಯರಾತ್ರಿಯ ಆತುರದ ನಡೆ’ ಎಂದು ಕಾಂಗ್ರೆಸ್ ಟೀಕಿಸಿದೆ.

ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನಿರ್ಧರಿಸುವವರೆಗೆ ನೇಮಕಾತಿ ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ ಮನವಿ ಮಾಡಿದ್ದರು. ಇದಾದ ಕೆಲವೇ ಗಂಟೆಗಳ ನಂತರ ಹೊಸ ಆಯುಕ್ತರ ನೇಮಕ ಆಗಿದೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಬುಧವಾರ (ಫೆ.19) ನಡೆಯಲಿದೆ.

“ಇದು ನಮ್ಮ ಸಂವಿಧಾನದ ಆಶಯಕ್ಕೆ ವಿರುದ್ಧವಾದ ನಡೆ. ಚುನಾವಣಾ ಪ್ರಕ್ರಿಯೆಯು ಸರಿಯಾಗಿ ನಡೆಯಬೇಕಾದರೆ, ಮುಖ್ಯ ಚುನಾವಣಾ ಆಯುಕ್ತ ನಿಷ್ಪಕ್ಷಪಾತ ಪಾಲುದಾರರಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಹಲವು ಪ್ರಕರಣಗಳಲ್ಲಿ ಪುನರುಚ್ಚರಿಸಿದೆ” ಎಂದು ಕಾಂಗ್ರೆಸ್ ಸಂಸದ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

“ತಿದ್ದುಪಡಿ ಮಾಡಿದ ಕಾನೂನಿನಲ್ಲಿ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನು ಹೊರಗಿಡಲಾಗಿದೆ. ಸರ್ಕಾರ ಮುಖ್ಯ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಮೊದಲು ಫೆಬ್ರವರಿ 19ರಂದು ನಡೆಯುವ ಸುಪ್ರೀಂ ಕೋರ್ಟ್‌ನ ವಿಚಾರಣೆಯವರೆಗೆ ಕಾಯಬೇಕಿತ್ತು” ಎಂದಿದ್ದಾರೆ.

“ಇಂದು ತರಾತುರಿಯಲ್ಲಿ ಸಭೆ ನಡೆಸಿ ಹೊಸ ಚುನಾವಣಾ ಆಯುಕ್ತರನ್ನು ನೇಮಿಸುವ ಅವರ (ಸರ್ಕಾರದ) ನಿರ್ಧಾರವು ಸುಪ್ರೀಂ ಕೋರ್ಟ್‌ನ ಪರಿಶೀಲನೆಯನ್ನು ತಪ್ಪಿಸಲು ಮತ್ತು ಸ್ಪಷ್ಟ ಆದೇಶ ಬರುವ ಮೊದಲು ನೇಮಕಾತಿಯನ್ನು ಪೂರ್ಣಗೊಳಿಸಲು ಅವರು ಉತ್ಸುಕರಾಗಿದ್ದಾರೆಂದು ತೋರಿಸುತ್ತದೆ” ಎಂದು ವೇಣುಗೋಪಾಲ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಇಂತಹ ನಡವಳಿಕೆಯು, ಆಡಳಿತ ನಡೆಸುತ್ತಿರುವ ಸರ್ಕಾರವು ಚುನಾವಣಾ ಪ್ರಕ್ರಿಯೆಯನ್ನು ಹೇಗೆ ನಾಶಪಡಿಸುತ್ತಿದೆ ಮತ್ತು ನಿಯಮಗಳನ್ನು ತನ್ನ ಲಾಭಕ್ಕಾಗಿ ಹೇಗೆ ಬದಲಾಯಿಸುತ್ತಿದೆ ಎಂಬುದರ ಬಗ್ಗೆ ಅನೇಕರು ವ್ಯಕ್ತಪಡಿಸಿರುವ ಅನುಮಾನಗಳನ್ನು ದೃಢಪಡಿಸುತ್ತದೆ. ಅದು ನಕಲಿ ಮತದಾರರ ಪಟ್ಟಿಗಳಾಗಿರಬಹುದು, ಬಿಜೆಪಿಗೆ ಅನುಕೂಲಕರವಾದ ವೇಳಾಪಟ್ಟಿಯಾಗಿರಬಹುದು ಅಥವಾ ಇವಿಎಂ ಹ್ಯಾಕಿಂಗ್ ಬಗ್ಗೆ ಕಳವಳಗಳಾಗಿರಬಹುದು – ಸರ್ಕಾರ ಮತ್ತು ಅದು ನೇಮಿಸುವ ಚುನಾವಣಾ ಆಯುಕ್ತರು ಇಂತಹ ಘಟನೆಗಳಿಂದಾಗಿ ಆಳವಾದ ಅನುಮಾನಕ್ಕೆ ಒಳಗಾಗುತ್ತಾರೆ” ಎಂದು ಹೇಳಿದ್ದಾರೆ.

“ವಿರೋಧ ಪಕ್ಷದ ನಾಯಕರು ಸರಿಯಾಗಿಯೇ ಹೇಳಿದಂತೆ, ಸುಪ್ರೀಂ ಕೋರ್ಟ್ ಸಂವಿಧಾನಕ್ಕೆ ಅನುಗುಣವಾಗಿ ಈ ವಿಷಯವನ್ನು ನಿರ್ಧರಿಸುವವರೆಗೆ ಈ ನಿರ್ಧಾರವನ್ನು ಪಕ್ಕಕ್ಕೆ ಇಡಬೇಕಾಗಿತ್ತು” ಎಂದಿದ್ದಾರೆ.

ನೂತನ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬುಧವಾರ (ಫೆ.19) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹಾಲಿ ಆಯುಕ್ತ ರಾಜೀವ್ ಕುಮಾರ್ ಮಂಗಳವಾರ (ಫೆ.18) ನಿವೃತ್ತರಾಗಲಿದ್ದಾರೆ.

ಮೂಲಗಳ ಪ್ರಕಾರ, 30 ನಿಮಿಷದ ಸಭೆಯಲ್ಲಿ ಹೊಸ ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲಾದ ಐದು ಹೆಸರುಗಳ ಪಟ್ಟಿಯನ್ನು ಸಮಿತಿಯ ಮುಂದೆ ಪರಿಗಣನೆಗೆ ಇಡಲಾಗಿತ್ತು.

ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ಸಚೇತಕ ಮಾಣಿಕ್ಕಂ ಟ್ಯಾಗೋರ್ ಕೂಡ ವೇಣುಗೋಪಾಲ್ ಹೇಳಿದ್ದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಆಯುಕ್ತರ ಈ ನೇಮಕ ‘ನಮ್ಮ ಸಂವಿಧಾನದ ಆಶಯ ಮತ್ತು ಮುಕ್ತ ಚುನಾವಣೆಗಳನ್ನು ದುರ್ಬಲಗೊಳಿಸುತ್ತದೆ’ ಎಂದಿದ್ದಾರೆ.

“ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದಂತೆ, ಫೆಬ್ರವರಿ 19ರಂದು ನಡೆಯುವ ಸುಪ್ರೀಂ ಕೋರ್ಟ್ ವಿಚಾರಣೆಯವರೆಗೆ ಕಾಯಬೇಕಿತ್ತು. ಆದರೆ, ಅವಸರದಿಂದ ನೇಮಕ ಮಾಡಿರುವುದು ಪರಿಶೀಲನೆಯನ್ನು ತಪ್ಪಿಸುವ ಅವರ ಉದ್ದೇಶವನ್ನು ತೋರಿಸುತ್ತದೆ. ಪ್ರಜಾಪ್ರಭುತ್ವವು ಇದಕ್ಕಿಂತ ಉತ್ತಮವಾದುದಕ್ಕೆ ಅರ್ಹವಾಗಿದೆ” ಎಂದು ಟ್ಯಾಗೋರ್ ಹೇಳಿದ್ದಾರೆ.

ರಿಲಯನ್ಸ್ ವಿರುದ್ಧದ ವಂಚನೆ ಆರೋಪಗಳನ್ನು ಮರುಸ್ಥಾಪಿಸಿದ ದೆಹಲಿ ಹೈಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...