Homeಮುಖಪುಟ'ಸಂವಿಧಾನದ ಆಶಯಕ್ಕೆ ವಿರುದ್ಧ': ತರಾತುರಿಯಲ್ಲಿ ಮುಖ್ಯ ಚು.ಆಯುಕ್ತರ ನೇಮಕಕ್ಕೆ ಕಾಂಗ್ರೆಸ್ ಟೀಕೆ

‘ಸಂವಿಧಾನದ ಆಶಯಕ್ಕೆ ವಿರುದ್ಧ’: ತರಾತುರಿಯಲ್ಲಿ ಮುಖ್ಯ ಚು.ಆಯುಕ್ತರ ನೇಮಕಕ್ಕೆ ಕಾಂಗ್ರೆಸ್ ಟೀಕೆ

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ (ಸಿಇಸಿ) ಮತ್ತು ಹರಿಯಾಣದ ಮುಖ್ಯ ಕಾರ್ಯದರ್ಶಿ ಡಾ. ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಿರುವುದು ‘ನಮ್ಮ ಸಂವಿಧಾನದ ಆಶಯ ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ವಿರುದ್ಧವಾದ ಮಧ್ಯರಾತ್ರಿಯ ಆತುರದ ನಡೆ’ ಎಂದು ಕಾಂಗ್ರೆಸ್ ಟೀಕಿಸಿದೆ.

ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನಿರ್ಧರಿಸುವವರೆಗೆ ನೇಮಕಾತಿ ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ ಮನವಿ ಮಾಡಿದ್ದರು. ಇದಾದ ಕೆಲವೇ ಗಂಟೆಗಳ ನಂತರ ಹೊಸ ಆಯುಕ್ತರ ನೇಮಕ ಆಗಿದೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಬುಧವಾರ (ಫೆ.19) ನಡೆಯಲಿದೆ.

“ಇದು ನಮ್ಮ ಸಂವಿಧಾನದ ಆಶಯಕ್ಕೆ ವಿರುದ್ಧವಾದ ನಡೆ. ಚುನಾವಣಾ ಪ್ರಕ್ರಿಯೆಯು ಸರಿಯಾಗಿ ನಡೆಯಬೇಕಾದರೆ, ಮುಖ್ಯ ಚುನಾವಣಾ ಆಯುಕ್ತ ನಿಷ್ಪಕ್ಷಪಾತ ಪಾಲುದಾರರಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಹಲವು ಪ್ರಕರಣಗಳಲ್ಲಿ ಪುನರುಚ್ಚರಿಸಿದೆ” ಎಂದು ಕಾಂಗ್ರೆಸ್ ಸಂಸದ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

“ತಿದ್ದುಪಡಿ ಮಾಡಿದ ಕಾನೂನಿನಲ್ಲಿ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನು ಹೊರಗಿಡಲಾಗಿದೆ. ಸರ್ಕಾರ ಮುಖ್ಯ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಮೊದಲು ಫೆಬ್ರವರಿ 19ರಂದು ನಡೆಯುವ ಸುಪ್ರೀಂ ಕೋರ್ಟ್‌ನ ವಿಚಾರಣೆಯವರೆಗೆ ಕಾಯಬೇಕಿತ್ತು” ಎಂದಿದ್ದಾರೆ.

“ಇಂದು ತರಾತುರಿಯಲ್ಲಿ ಸಭೆ ನಡೆಸಿ ಹೊಸ ಚುನಾವಣಾ ಆಯುಕ್ತರನ್ನು ನೇಮಿಸುವ ಅವರ (ಸರ್ಕಾರದ) ನಿರ್ಧಾರವು ಸುಪ್ರೀಂ ಕೋರ್ಟ್‌ನ ಪರಿಶೀಲನೆಯನ್ನು ತಪ್ಪಿಸಲು ಮತ್ತು ಸ್ಪಷ್ಟ ಆದೇಶ ಬರುವ ಮೊದಲು ನೇಮಕಾತಿಯನ್ನು ಪೂರ್ಣಗೊಳಿಸಲು ಅವರು ಉತ್ಸುಕರಾಗಿದ್ದಾರೆಂದು ತೋರಿಸುತ್ತದೆ” ಎಂದು ವೇಣುಗೋಪಾಲ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಇಂತಹ ನಡವಳಿಕೆಯು, ಆಡಳಿತ ನಡೆಸುತ್ತಿರುವ ಸರ್ಕಾರವು ಚುನಾವಣಾ ಪ್ರಕ್ರಿಯೆಯನ್ನು ಹೇಗೆ ನಾಶಪಡಿಸುತ್ತಿದೆ ಮತ್ತು ನಿಯಮಗಳನ್ನು ತನ್ನ ಲಾಭಕ್ಕಾಗಿ ಹೇಗೆ ಬದಲಾಯಿಸುತ್ತಿದೆ ಎಂಬುದರ ಬಗ್ಗೆ ಅನೇಕರು ವ್ಯಕ್ತಪಡಿಸಿರುವ ಅನುಮಾನಗಳನ್ನು ದೃಢಪಡಿಸುತ್ತದೆ. ಅದು ನಕಲಿ ಮತದಾರರ ಪಟ್ಟಿಗಳಾಗಿರಬಹುದು, ಬಿಜೆಪಿಗೆ ಅನುಕೂಲಕರವಾದ ವೇಳಾಪಟ್ಟಿಯಾಗಿರಬಹುದು ಅಥವಾ ಇವಿಎಂ ಹ್ಯಾಕಿಂಗ್ ಬಗ್ಗೆ ಕಳವಳಗಳಾಗಿರಬಹುದು – ಸರ್ಕಾರ ಮತ್ತು ಅದು ನೇಮಿಸುವ ಚುನಾವಣಾ ಆಯುಕ್ತರು ಇಂತಹ ಘಟನೆಗಳಿಂದಾಗಿ ಆಳವಾದ ಅನುಮಾನಕ್ಕೆ ಒಳಗಾಗುತ್ತಾರೆ” ಎಂದು ಹೇಳಿದ್ದಾರೆ.

“ವಿರೋಧ ಪಕ್ಷದ ನಾಯಕರು ಸರಿಯಾಗಿಯೇ ಹೇಳಿದಂತೆ, ಸುಪ್ರೀಂ ಕೋರ್ಟ್ ಸಂವಿಧಾನಕ್ಕೆ ಅನುಗುಣವಾಗಿ ಈ ವಿಷಯವನ್ನು ನಿರ್ಧರಿಸುವವರೆಗೆ ಈ ನಿರ್ಧಾರವನ್ನು ಪಕ್ಕಕ್ಕೆ ಇಡಬೇಕಾಗಿತ್ತು” ಎಂದಿದ್ದಾರೆ.

ನೂತನ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬುಧವಾರ (ಫೆ.19) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹಾಲಿ ಆಯುಕ್ತ ರಾಜೀವ್ ಕುಮಾರ್ ಮಂಗಳವಾರ (ಫೆ.18) ನಿವೃತ್ತರಾಗಲಿದ್ದಾರೆ.

ಮೂಲಗಳ ಪ್ರಕಾರ, 30 ನಿಮಿಷದ ಸಭೆಯಲ್ಲಿ ಹೊಸ ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲಾದ ಐದು ಹೆಸರುಗಳ ಪಟ್ಟಿಯನ್ನು ಸಮಿತಿಯ ಮುಂದೆ ಪರಿಗಣನೆಗೆ ಇಡಲಾಗಿತ್ತು.

ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ಸಚೇತಕ ಮಾಣಿಕ್ಕಂ ಟ್ಯಾಗೋರ್ ಕೂಡ ವೇಣುಗೋಪಾಲ್ ಹೇಳಿದ್ದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಆಯುಕ್ತರ ಈ ನೇಮಕ ‘ನಮ್ಮ ಸಂವಿಧಾನದ ಆಶಯ ಮತ್ತು ಮುಕ್ತ ಚುನಾವಣೆಗಳನ್ನು ದುರ್ಬಲಗೊಳಿಸುತ್ತದೆ’ ಎಂದಿದ್ದಾರೆ.

“ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದಂತೆ, ಫೆಬ್ರವರಿ 19ರಂದು ನಡೆಯುವ ಸುಪ್ರೀಂ ಕೋರ್ಟ್ ವಿಚಾರಣೆಯವರೆಗೆ ಕಾಯಬೇಕಿತ್ತು. ಆದರೆ, ಅವಸರದಿಂದ ನೇಮಕ ಮಾಡಿರುವುದು ಪರಿಶೀಲನೆಯನ್ನು ತಪ್ಪಿಸುವ ಅವರ ಉದ್ದೇಶವನ್ನು ತೋರಿಸುತ್ತದೆ. ಪ್ರಜಾಪ್ರಭುತ್ವವು ಇದಕ್ಕಿಂತ ಉತ್ತಮವಾದುದಕ್ಕೆ ಅರ್ಹವಾಗಿದೆ” ಎಂದು ಟ್ಯಾಗೋರ್ ಹೇಳಿದ್ದಾರೆ.

ರಿಲಯನ್ಸ್ ವಿರುದ್ಧದ ವಂಚನೆ ಆರೋಪಗಳನ್ನು ಮರುಸ್ಥಾಪಿಸಿದ ದೆಹಲಿ ಹೈಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರಿನ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...