Homeಮುಖಪುಟನನ್ನ ವಿರುದ್ಧದ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆದುಹಾಕಿ - ಸ್ಪೀಕರ್‌ಗೆ ರಾಹುಲ್ ಗಾಂಧಿ ಒತ್ತಾಯ

ನನ್ನ ವಿರುದ್ಧದ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆದುಹಾಕಿ – ಸ್ಪೀಕರ್‌ಗೆ ರಾಹುಲ್ ಗಾಂಧಿ ಒತ್ತಾಯ

- Advertisement -
- Advertisement -

ಲೋಕಸಭೆಯಲ್ಲಿ ಬಿಜೆಪಿ ಸಂಸದರು ತಮ್ಮ ಬಗ್ಗೆ ಮಾಡಿರುವ ಅವಹೇಳನಕಾರಿ ಹೇಳಿಕೆಗಳನ್ನು ಕಡತದಿಂದ ತೆಗೆದುಹಾಕುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಸದನದ ಸ್ಪೀಕರ್ ಓಂ ಬಿರ್ಲಾ ಅವರನ್ನು ಒತ್ತಾಯಿಸಿದ್ದಾರೆ. ಈ ವಿಷಯವನ್ನು ಪರಿಶೀಲಿಸುವುದಾಗಿ ಸ್ಪೀಕರ್ ಭರವಸೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ತಮ್ಮ ವಿರುದ್ಧದ ಅವಹೇಳನಕಾರಿ

“ಸದನವು ಕಾರ್ಯನಿರ್ವಹಿಸಬೇಕು ಮತ್ತು ಸದನದಲ್ಲಿ ಚರ್ಚೆಯಾಗಬೇಕು ಎಂಬುದು ನಮ್ಮ ಗುರಿಯಾಗಿದೆ. ಅವರು ನನ್ನ ಬಗ್ಗೆ ಏನು ಬೇಕಾದರೂ ಹೇಳಬಹುದು, ಆದರೆ ಸದನದಲ್ಲಿ ಚರ್ಚೆ ನಡೆಯಬೇಕೆಂದು ನಾವು ಬಯಸುತ್ತೇವೆ.” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಗಾಂಧಿ ಅವರು ಸ್ಪೀಕರ್ ಬಿರ್ಲಾ ಅವರನ್ನು ಭೇಟಿಯಾದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅದಾಗ್ಯೂ, ತಮ್ಮ ಮೇಲಿನ ಯಾವ ಟೀಕೆಗಳನ್ನು ಕಡತದಿಂದ ತೆಗೆದುಹಾಕುವಂತೆ ಅವರು ಬಯಸುತ್ತಿದ್ದಾರೆ ಎಂಬುದನ್ನು ರಾಹುಲ್ ಗಾಂಧಿ ನಿರ್ದಿಷ್ಟವಾಗಿ ಹೇಳಿಲ್ಲ. ಆದಾಗ್ಯೂ, ಸಂಸತ್ತಿನ ಚಳಿಗಾಲದ ಅಧಿವೇಶನದ ಆರಂಭದಿಂದಲೂ, ಬಿಜೆಪಿಯ ಸದಸ್ಯರು ಕಾಂಗ್ರೆಸ್ ಉನ್ನತ ನಾಯಕತ್ವವು ಭಾರತವನ್ನು “ಅಸ್ಥಿರಗೊಳಿಸಲು” ಬಿಲಿಯನೇರ್ ಲೋಕೋಪಕಾರಿ ಜಾರ್ಜ್ ಸೊರೊಸ್‌ನೊಂದಿಗೆ ಸಂಚು ರೂಪಿಸಿದೆ ಎಂದು ಪದೇ ಪದೇ ಆರೋಪಿಸುತ್ತಿದ್ದಾರೆ. ತಮ್ಮ ವಿರುದ್ಧದ ಅವಹೇಳನಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಸೆಂಬರ್ 6 ರಂದು ಪಕ್ಷದ ನಾಯಕರಾದ ಸಂಬಿತ್ ಪಾತ್ರ ಮತ್ತು ಕೆ ಲಕ್ಷ್ಮಣ್ ಅವರು ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಅವರನ್ನು “ದೇಶದ್ರೋಹಿ” ಎಂದು ಕರೆದಿದ್ದರು. ಆರ್ಗನೈಸ್ಡ್ ಕ್ರೈಮ್ ಅಂಡ್ ಕರಪ್ಷನ್ ರಿಪೋರ್ಟಿಂಗ್ ಪ್ರಾಜೆಕ್ಟ್‌(OCCRP)ಗೆ ಫ್ರೆಂಚ್ ತನಿಖಾ ಪತ್ರಿಕೋದ್ಯಮವಾದ ಮೀಡಿಯಾಪಾರ್ಟ್ ನಡೆಸಿದ ತನಿಖೆಯನ್ನು ಉಲ್ಲೇಖಿಸಿದ್ದ ಅವರು, “OCCRP ಮತ್ತು ರಾಹುಲ್ ಗಾಂಧಿ ಎರಡು ದೇಹ ಮತ್ತು ಒಂದು ಆತ್ಮ. ರಾಹುಲ್ ಗಾಂಧಿಗೆ ಭಾರತ ಮುಂದೆ ಹೋಗುವುದು ಇಷ್ಟವಿಲ್ಲ. ಭಾರತೀಯ ಸಂಸತ್ತು ಕಾರ್ಯನಿರ್ವಹಿಸುವುದನ್ನು ಅವರು ಬಯಸುವುದಿಲ್ಲ” ಎಂದು ಹೇಳಿದ್ದರು.

OCCRP ಹಲವಾರು ಅಮೆರಿಕ ಸರ್ಕಾರದ ದೇಣಿಗೆಗಳನ್ನು ಸ್ವೀಕರಿಸಿದೆ ಎಂದು ಮೀಡಿಯಾಪಾರ್ಟ್ ಇತ್ತೀಚೆಗೆ ವರದಿ ಮಾಡಿತ್ತು. OCCRP ಸಂಸ್ಥೆಯು ಅಮೆರಿಕ ಆದ್ಯತೆಯ ವಿಷಯವೆಂದು ಪರಿಗಣಿಸುವ ಕೆಲವು ದೇಶಗಳ ತನಿಖೆಗಳಿಗೆ ಖರ್ಚು ಮಾಡುತ್ತಿದೆ ಎಂದು ವರದಿ ಹೇಳಿತ್ತು. ಸಂಸ್ಥೆಯು ರಷ್ಯಾ, ವೆನೆಜುವೆಲಾ, ಮಾಲ್ಟಾ, ಸೈಪ್ರಸ್ ಮತ್ತು ಮೆಕ್ಸಿಕನ್ ಮೇಲೆ ವರದಿ ಮಾಡಿದೆ ಎಂದು ಹೇಳಿತ್ತು. ಅದಾಗ್ಯೂ, ಯಾವುದೇ ವರದಿಯಲ್ಲೂ ಭಾರತದ ಪ್ರಸ್ತಾಪವೇ ಇರಲಿಲ್ಲ.

ತನಿಖಾ ವರದಿ ಮಾಡಿರುವ ಮೀಡಿಯಾಪಾರ್ಟ್‌ನ ನಿರ್ದೇಶಕಿ ಕ್ಯಾರಿನ್ ಫೌಟೊ ಪ್ರತಿಕ್ರಿಯಿಸಿ, ಬಿಜೆಪಿಯು “ಪಿತೂರಿ ಸಿದ್ಧಾಂತ” ವನ್ನು ಪ್ರಚಾರ ಮಾಡಲು ತನ್ನ ವರದಿಯನ್ನು ವಿರೂಪಗೊಳಿಸಿದೆ ಎಂದು ಆರೋಪಿಸಿದ್ದಾರೆ. “ನಾವು ಎಂದಿಗೂ ಪ್ರಕಟಿಸದ ನಕಲಿ ಸುದ್ದಿಗಳನ್ನು ಹರಡಲು ಮೀಡಿಯಾಪಾರ್ಟ್‌ನ ಲೇಖನವನ್ನು ಬಿಜೆಪಿ ತಪ್ಪಾಗಿ ಬಳಸಿಕೊಂಡಿದೆ” ಎಂದು ಫೌಟೆಯು ಹೇಳಿರುವುದಾಗಿ ದಿ ವೈರ್ ಉಲ್ಲೇಖಿಸಿದೆ.

ಇದರ ಹೊರತಾಗಿಯೂ ಬಿಜೆಪಿ ಸಂಸದರು ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಈ ನಡುವೆ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ವಿರುದ್ಧ “ಅತ್ಯಂತ ದೂಷಣೆಯ ಭಾಷೆ” ಬಳಸಿದ್ದಕ್ಕಾಗಿ ಸಂಬಿತ್ ಪಾತ್ರಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಡಿಸೆಂಬರ್ 6 ರಂದು ಬಿರ್ಲಾ ಅವರಿಗೆ ಪತ್ರ ಬರೆದಿದ್ದರು.

ಬಿಜೆಪಿ ಸಂಸದರು ತಮ್ಮ ವಿರುದ್ಧ ಆರೋಪ ಮಾಡುವ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ. ಆದರೆ ನಾವು ಸದನವನ್ನು ನಡೆಸಲು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ. ಡಿಸೆಂಬರ್ 13 ರಂದು ಸಂವಿಧಾನದ ಬಗ್ಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ, “ಈ ಚರ್ಚೆ ನಡೆಯಬೇಕು” ಎಂದು ಅವರು ಪ್ರತಿಪಾದಿಸಿದ್ದಾರೆ.

ಅದಾನಿ ಗ್ರೂಪ್ ಸಂಸ್ಥಾಪಕ ಗೌತಮ್ ಅದಾನಿ ವಿರುದ್ಧದ ಹಣಕಾಸು ಅವ್ಯವಹಾರದ ಆರೋಪಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲು ನರೇಂದ್ರ ಮೋದಿ ಸರ್ಕಾರ ಬಯಸುವುದಿಲ್ಲ ಎಂದು ಅವರು ಆರೋಪಿಸಿದ್ದಾರೆ. “ಅವರು ಸಮಸ್ಯೆಯನ್ನು ಬೇರೆಡೆಗೆ ತಿರುಗಿಸಲು ಬಯಸುತ್ತಾರೆ, ಆದರೆ ನಾವು ಈ ವಿಷಯವನ್ನು ಎತ್ತುತ್ತಲೇ ಇರುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನವೆಂಬರ್ 20 ರಂದು, ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಇತರ ಆರು ಮಂದಿಯನ್ನು ನ್ಯೂಯಾರ್ಕ್‌ನಲ್ಲಿ ಭಾರತದಲ್ಲಿ ಸೌರ ಯೋಜನೆಗಳ ಕುರಿತಾದ ಪ್ರಕರಣದಲ್ಲಿ ದೋಷಾರೋಪಣೆ ಮಾಡಲಾಗಿದೆ. ಆದಾಗ್ಯೂ, ಅದಾನಿ ಗ್ರೂಪ್ ಆರೋಪಗಳನ್ನು ನಿರಾಕರಿಸಿದ್ದು ಅವುಗಳನ್ನು ಆಧಾರರಹಿತ ಎಂದು ಹೇಳಿದೆ. ಈ ಆರೋಪದ ನಂತರ ರಾಹುಲ್ ಗಾಂಧಿ ಅವರು ಅದಾನಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಪಂಚಮಸಾಲಿ ಸಮುದಾಯವನ್ನು ‘ಪ್ರವರ್ಗ-2ಎ’ಗೆ ಸೇರಿಸದಂತೆ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹ; ಸಿಎಂಗೆ ಮನವಿ ಸಲ್ಲಿಕೆ

ಪಂಚಮಸಾಲಿ ಸಮುದಾಯವನ್ನು ‘ಪ್ರವರ್ಗ-2ಎ’ಗೆ ಸೇರಿಸದಂತೆ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹ; ಸಿಎಂಗೆ ಮನವಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....