Homeಮುಖಪುಟನನ್ನ ವಿರುದ್ಧದ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆದುಹಾಕಿ - ಸ್ಪೀಕರ್‌ಗೆ ರಾಹುಲ್ ಗಾಂಧಿ ಒತ್ತಾಯ

ನನ್ನ ವಿರುದ್ಧದ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆದುಹಾಕಿ – ಸ್ಪೀಕರ್‌ಗೆ ರಾಹುಲ್ ಗಾಂಧಿ ಒತ್ತಾಯ

- Advertisement -
- Advertisement -

ಲೋಕಸಭೆಯಲ್ಲಿ ಬಿಜೆಪಿ ಸಂಸದರು ತಮ್ಮ ಬಗ್ಗೆ ಮಾಡಿರುವ ಅವಹೇಳನಕಾರಿ ಹೇಳಿಕೆಗಳನ್ನು ಕಡತದಿಂದ ತೆಗೆದುಹಾಕುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಸದನದ ಸ್ಪೀಕರ್ ಓಂ ಬಿರ್ಲಾ ಅವರನ್ನು ಒತ್ತಾಯಿಸಿದ್ದಾರೆ. ಈ ವಿಷಯವನ್ನು ಪರಿಶೀಲಿಸುವುದಾಗಿ ಸ್ಪೀಕರ್ ಭರವಸೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ತಮ್ಮ ವಿರುದ್ಧದ ಅವಹೇಳನಕಾರಿ

“ಸದನವು ಕಾರ್ಯನಿರ್ವಹಿಸಬೇಕು ಮತ್ತು ಸದನದಲ್ಲಿ ಚರ್ಚೆಯಾಗಬೇಕು ಎಂಬುದು ನಮ್ಮ ಗುರಿಯಾಗಿದೆ. ಅವರು ನನ್ನ ಬಗ್ಗೆ ಏನು ಬೇಕಾದರೂ ಹೇಳಬಹುದು, ಆದರೆ ಸದನದಲ್ಲಿ ಚರ್ಚೆ ನಡೆಯಬೇಕೆಂದು ನಾವು ಬಯಸುತ್ತೇವೆ.” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಗಾಂಧಿ ಅವರು ಸ್ಪೀಕರ್ ಬಿರ್ಲಾ ಅವರನ್ನು ಭೇಟಿಯಾದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅದಾಗ್ಯೂ, ತಮ್ಮ ಮೇಲಿನ ಯಾವ ಟೀಕೆಗಳನ್ನು ಕಡತದಿಂದ ತೆಗೆದುಹಾಕುವಂತೆ ಅವರು ಬಯಸುತ್ತಿದ್ದಾರೆ ಎಂಬುದನ್ನು ರಾಹುಲ್ ಗಾಂಧಿ ನಿರ್ದಿಷ್ಟವಾಗಿ ಹೇಳಿಲ್ಲ. ಆದಾಗ್ಯೂ, ಸಂಸತ್ತಿನ ಚಳಿಗಾಲದ ಅಧಿವೇಶನದ ಆರಂಭದಿಂದಲೂ, ಬಿಜೆಪಿಯ ಸದಸ್ಯರು ಕಾಂಗ್ರೆಸ್ ಉನ್ನತ ನಾಯಕತ್ವವು ಭಾರತವನ್ನು “ಅಸ್ಥಿರಗೊಳಿಸಲು” ಬಿಲಿಯನೇರ್ ಲೋಕೋಪಕಾರಿ ಜಾರ್ಜ್ ಸೊರೊಸ್‌ನೊಂದಿಗೆ ಸಂಚು ರೂಪಿಸಿದೆ ಎಂದು ಪದೇ ಪದೇ ಆರೋಪಿಸುತ್ತಿದ್ದಾರೆ. ತಮ್ಮ ವಿರುದ್ಧದ ಅವಹೇಳನಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಸೆಂಬರ್ 6 ರಂದು ಪಕ್ಷದ ನಾಯಕರಾದ ಸಂಬಿತ್ ಪಾತ್ರ ಮತ್ತು ಕೆ ಲಕ್ಷ್ಮಣ್ ಅವರು ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಅವರನ್ನು “ದೇಶದ್ರೋಹಿ” ಎಂದು ಕರೆದಿದ್ದರು. ಆರ್ಗನೈಸ್ಡ್ ಕ್ರೈಮ್ ಅಂಡ್ ಕರಪ್ಷನ್ ರಿಪೋರ್ಟಿಂಗ್ ಪ್ರಾಜೆಕ್ಟ್‌(OCCRP)ಗೆ ಫ್ರೆಂಚ್ ತನಿಖಾ ಪತ್ರಿಕೋದ್ಯಮವಾದ ಮೀಡಿಯಾಪಾರ್ಟ್ ನಡೆಸಿದ ತನಿಖೆಯನ್ನು ಉಲ್ಲೇಖಿಸಿದ್ದ ಅವರು, “OCCRP ಮತ್ತು ರಾಹುಲ್ ಗಾಂಧಿ ಎರಡು ದೇಹ ಮತ್ತು ಒಂದು ಆತ್ಮ. ರಾಹುಲ್ ಗಾಂಧಿಗೆ ಭಾರತ ಮುಂದೆ ಹೋಗುವುದು ಇಷ್ಟವಿಲ್ಲ. ಭಾರತೀಯ ಸಂಸತ್ತು ಕಾರ್ಯನಿರ್ವಹಿಸುವುದನ್ನು ಅವರು ಬಯಸುವುದಿಲ್ಲ” ಎಂದು ಹೇಳಿದ್ದರು.

OCCRP ಹಲವಾರು ಅಮೆರಿಕ ಸರ್ಕಾರದ ದೇಣಿಗೆಗಳನ್ನು ಸ್ವೀಕರಿಸಿದೆ ಎಂದು ಮೀಡಿಯಾಪಾರ್ಟ್ ಇತ್ತೀಚೆಗೆ ವರದಿ ಮಾಡಿತ್ತು. OCCRP ಸಂಸ್ಥೆಯು ಅಮೆರಿಕ ಆದ್ಯತೆಯ ವಿಷಯವೆಂದು ಪರಿಗಣಿಸುವ ಕೆಲವು ದೇಶಗಳ ತನಿಖೆಗಳಿಗೆ ಖರ್ಚು ಮಾಡುತ್ತಿದೆ ಎಂದು ವರದಿ ಹೇಳಿತ್ತು. ಸಂಸ್ಥೆಯು ರಷ್ಯಾ, ವೆನೆಜುವೆಲಾ, ಮಾಲ್ಟಾ, ಸೈಪ್ರಸ್ ಮತ್ತು ಮೆಕ್ಸಿಕನ್ ಮೇಲೆ ವರದಿ ಮಾಡಿದೆ ಎಂದು ಹೇಳಿತ್ತು. ಅದಾಗ್ಯೂ, ಯಾವುದೇ ವರದಿಯಲ್ಲೂ ಭಾರತದ ಪ್ರಸ್ತಾಪವೇ ಇರಲಿಲ್ಲ.

ತನಿಖಾ ವರದಿ ಮಾಡಿರುವ ಮೀಡಿಯಾಪಾರ್ಟ್‌ನ ನಿರ್ದೇಶಕಿ ಕ್ಯಾರಿನ್ ಫೌಟೊ ಪ್ರತಿಕ್ರಿಯಿಸಿ, ಬಿಜೆಪಿಯು “ಪಿತೂರಿ ಸಿದ್ಧಾಂತ” ವನ್ನು ಪ್ರಚಾರ ಮಾಡಲು ತನ್ನ ವರದಿಯನ್ನು ವಿರೂಪಗೊಳಿಸಿದೆ ಎಂದು ಆರೋಪಿಸಿದ್ದಾರೆ. “ನಾವು ಎಂದಿಗೂ ಪ್ರಕಟಿಸದ ನಕಲಿ ಸುದ್ದಿಗಳನ್ನು ಹರಡಲು ಮೀಡಿಯಾಪಾರ್ಟ್‌ನ ಲೇಖನವನ್ನು ಬಿಜೆಪಿ ತಪ್ಪಾಗಿ ಬಳಸಿಕೊಂಡಿದೆ” ಎಂದು ಫೌಟೆಯು ಹೇಳಿರುವುದಾಗಿ ದಿ ವೈರ್ ಉಲ್ಲೇಖಿಸಿದೆ.

ಇದರ ಹೊರತಾಗಿಯೂ ಬಿಜೆಪಿ ಸಂಸದರು ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಈ ನಡುವೆ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ವಿರುದ್ಧ “ಅತ್ಯಂತ ದೂಷಣೆಯ ಭಾಷೆ” ಬಳಸಿದ್ದಕ್ಕಾಗಿ ಸಂಬಿತ್ ಪಾತ್ರಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಡಿಸೆಂಬರ್ 6 ರಂದು ಬಿರ್ಲಾ ಅವರಿಗೆ ಪತ್ರ ಬರೆದಿದ್ದರು.

ಬಿಜೆಪಿ ಸಂಸದರು ತಮ್ಮ ವಿರುದ್ಧ ಆರೋಪ ಮಾಡುವ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ. ಆದರೆ ನಾವು ಸದನವನ್ನು ನಡೆಸಲು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ. ಡಿಸೆಂಬರ್ 13 ರಂದು ಸಂವಿಧಾನದ ಬಗ್ಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ, “ಈ ಚರ್ಚೆ ನಡೆಯಬೇಕು” ಎಂದು ಅವರು ಪ್ರತಿಪಾದಿಸಿದ್ದಾರೆ.

ಅದಾನಿ ಗ್ರೂಪ್ ಸಂಸ್ಥಾಪಕ ಗೌತಮ್ ಅದಾನಿ ವಿರುದ್ಧದ ಹಣಕಾಸು ಅವ್ಯವಹಾರದ ಆರೋಪಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲು ನರೇಂದ್ರ ಮೋದಿ ಸರ್ಕಾರ ಬಯಸುವುದಿಲ್ಲ ಎಂದು ಅವರು ಆರೋಪಿಸಿದ್ದಾರೆ. “ಅವರು ಸಮಸ್ಯೆಯನ್ನು ಬೇರೆಡೆಗೆ ತಿರುಗಿಸಲು ಬಯಸುತ್ತಾರೆ, ಆದರೆ ನಾವು ಈ ವಿಷಯವನ್ನು ಎತ್ತುತ್ತಲೇ ಇರುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನವೆಂಬರ್ 20 ರಂದು, ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಇತರ ಆರು ಮಂದಿಯನ್ನು ನ್ಯೂಯಾರ್ಕ್‌ನಲ್ಲಿ ಭಾರತದಲ್ಲಿ ಸೌರ ಯೋಜನೆಗಳ ಕುರಿತಾದ ಪ್ರಕರಣದಲ್ಲಿ ದೋಷಾರೋಪಣೆ ಮಾಡಲಾಗಿದೆ. ಆದಾಗ್ಯೂ, ಅದಾನಿ ಗ್ರೂಪ್ ಆರೋಪಗಳನ್ನು ನಿರಾಕರಿಸಿದ್ದು ಅವುಗಳನ್ನು ಆಧಾರರಹಿತ ಎಂದು ಹೇಳಿದೆ. ಈ ಆರೋಪದ ನಂತರ ರಾಹುಲ್ ಗಾಂಧಿ ಅವರು ಅದಾನಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಪಂಚಮಸಾಲಿ ಸಮುದಾಯವನ್ನು ‘ಪ್ರವರ್ಗ-2ಎ’ಗೆ ಸೇರಿಸದಂತೆ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹ; ಸಿಎಂಗೆ ಮನವಿ ಸಲ್ಲಿಕೆ

ಪಂಚಮಸಾಲಿ ಸಮುದಾಯವನ್ನು ‘ಪ್ರವರ್ಗ-2ಎ’ಗೆ ಸೇರಿಸದಂತೆ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹ; ಸಿಎಂಗೆ ಮನವಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...