Homeಕರ್ನಾಟಕರಂಗ ಕಲಾವಿದರಿಗೆ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ನಲ್ಲಿ ವಯಸ್ಸಿನ ತಾರತಮ್ಯ ಆರೋಪ

ರಂಗ ಕಲಾವಿದರಿಗೆ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ನಲ್ಲಿ ವಯಸ್ಸಿನ ತಾರತಮ್ಯ ಆರೋಪ

’ರಂಗಾಯಣಗಳಿಗೆ ಕಲಾವಿದರ ಆಯ್ಕೆ ಮಾಡುವಾಗ 35 ವರ್ಷದ ಒಳಗಿರುವ ಯುವ ರಂಗ ಕಲಾವಿದರೇ ಬೇಕು ಎಂದು ದುಡಿಸಿಕೊಳ್ಳುವ ಸರ್ಕಾರ, ಕೋವಿಡ್ ಆರ್ಥಿಕ ನೆರವು ಪ್ಯಾಕೇಜ್‌ಗೆ ಪರಿಗಣಿಸದಿರುವುದು ಅನ್ಯಾಯ’

- Advertisement -
- Advertisement -

ರಾಜ್ಯದಲ್ಲಿ ವಿಧಿಸಲಾಗಿರುವ ಕೊರೊನಾ ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ರಂಗ ಕಲಾವಿದರಿಗೆ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದು, ನೀಡುತ್ತಿರುವ ಅಲ್ಪ ನೆರವಿನಲ್ಲಿಯೂ ವಯಸ್ಸಿನ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋವಿಡ್ ಲಾಕ್‌ಡೌನ್‌ನಿಂದ ಸಂಕಷ್ಟ ಎದುರಿಸುತ್ತಿರುವ ಕೂಲಿ ಕಾರ್ಮಿಕರಿಗೆ, ಕ್ಷೌರಿಕರಿಗೆ, ಆಟೋ ಚಾಲಕರಿಗೆ ಹಾಗೂ ಕಲಾವಿದರಿಗೆ ಆರ್ಥಿಕ ನೆರವು ಪ್ಯಾಕೇಜ್‌ನ್ನು ಘೋಷಣೆ ಮಾಡಿದ್ದರು. ಕಲಾವಿದರಿಗೆ 3,000 ರೂಪಾಯಿ ಘೋಷಿಸಿದ್ದರು.

ಸರ್ಕಾರ ಘೋಷಿಸಿರುವ 3,000 ರೂಪಾಯಿಗಳನ್ನು ಪಡೆಯಲು ಕಲಾವಿದರು ಅರ್ಜಿ ಸಲ್ಲಿಸಲು ಪಡುವ ಪಡಿಪಾಟಲಿಗೆ ಅರ್ಧ ಖರ್ಚು ಆಗುತ್ತದೆ. ಸಾಕಷ್ಟು ಕಲಾವಿದರು ಸರ್ಕಾರ ಹಣವನ್ನು ತೆಗೆದುಕೊಳ್ಳಲು ಮುಜುಗರ ಇರುತ್ತದೆ‌ ಅಂಥ ಸಮಯದಲ್ಲಿ, ಕಲಾವಿದರು ಹಣ ಪಡೆಯಲು ಸರ್ಕಾರ ವಯಸ್ಸಿನ ತಾರತಮ್ಯ ಮಾಡಿ ಮತ್ತಷ್ಟು ಅವಮಾನ ಮಾಡುತ್ತಿದೆ ಎಂದು ಕಲಾವಿದ ಲಕ್ಷ್ಮಣ್ ಮಂಡಲಗೇರಾ ಆರೋಪಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು, ಅಕಾಡೆಮಿ ಅಧ್ಯಕ್ಷರು, ಸದಸ್ಯರುಗಳು ಮತ್ತು ಸರ್ಕಾರ ಎಲ್ಲರೂ ಸೇರಿ ಕಲಾವಿದರಿಗೆ ವಯಸ್ಸಿನ ತಾರತಮ್ಯವನ್ನು ಏರ್ಪಡಿಸಿ 35 ವಯಸ್ಸಿನ ಮೇಲ್ಪಟ್ಟವರು ಮಾತ್ರ ಅರ್ಜಿ ಹಾಕಬೇಕು, 35 ವರ್ಷದೊಳಗಿನವರಿಗೆ,  ಮಾಶಾಸನ ಪಡೆಯುವವರಿಗೆ ಹಾಗೂ ಧನಸಹಾಯ ಪಡೆಯುವ ಸಂಘ – ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಅಂತ ಪತ್ರಿಕೆ ವರದಿ ಮೂಲಕ ಘೋಷಿಸಿ ಅವಮಾನ ಮಾಡಿದ್ದಿರಾ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

ಅಕಾಡೆಮಿಗಳಿಗೆ, ಪ್ರಾಧಿಕಾರಗಳಿಗೆ, ಸಾಹಿತ್ಯ ಪರಿಷತ್ತುಗಳಿಗೆ, ಇಲಾಖೆಗಳಿಗೆ ಕಳೆದ ಎರಡು ಮೂರು ವರ್ಷಗಳಿಂದ ಕೊರೊನಾ ನೆಪ ಹೇಳಿ ಬಿಡುಗಡೆ ಆಗಬೇಕಾದ ಸುಮಾರು 200 ರಿಂದ 300 ಕೋಟಿ ರೂಪಾಯಿ ಹಣ ಎಲ್ಲಿ ಹೋಯಿತು..? ಎಂದು  ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ರಂಗಭೂಮಿಯನ್ನೇ ನಂಬಿ ತಮ್ಮ ಬದುಕನ್ನಾಗಿಸಿಕೊಂಡು ಅದನ್ನೇ ಜೀವನವಾಗಿ ಇಟ್ಟುಕೊಂಡು ರಂಗ ಚಟುವಟಿಕೆಗಳು ಇಲ್ಲದೇ ಮನೆ ಸೇರಿರುವ ಈ ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಸರ್ಕಾರ ಕಲಾವಿದರ ಸಹಾಯಕ್ಕೆ ನಿಲ್ಲದಿರುವಂತಹ ದುಸ್ಥಿತಿ ಈ ರಾಜ್ಯದಲ್ಲಿ ಇದೆ. ಘೋಷಿಸಿರುವ ಅಲ್ಪ ನೆರವನ್ನು ಪಡೆಯಲು ಸಹ ವಯಸ್ಸಿನ ಮಿತಿ ಇಟ್ಟಿರುವುದು ಏಕೆ ಎಂದಿದ್ದಾರೆ.

“ಇಡೀ ಕರ್ನಾಟಕದಲ್ಲಿ ರಂಗಭೂಮಿ ಕ್ರಿಯಾಶೀಲವಾಗಿ ಕೆಲಸ ಮಾಡಲು ಜೀವಂತವಾಗಿರುವುದಕ್ಕೆ 35 ವಯಸ್ಸಿನ ಒಳಗಿರುವ ಯುವ ರಂಗ ಕಲಾವಿದರು ಕಾರಣ. ಬೇಸಿಗೆ ಶಿಬಿರಗಳಲ್ಲಿ, ದೊಡ್ಡ ದೊಡ್ಡ ರೆಪರ್ಟರಿಗಳಲ್ಲಿ , ಸಣ್ಣ ಸಣ್ಣ ರಂಗತಂಡಗಳಲ್ಲಿ ಕ್ರಿಯಾಶೀಲವಾಗಿ ಹೊಸ ಹೊಸ ಯೋಚನೆಗಳೊಂದಿಗೆ ನಾಟಕಗಳನ್ನು ನಿರ್ದೇಶಿಸಿ ನಟಿಸಿ, ಸಂಘಟಿಸುವುದರ ಮೂಲಕ ಇಂದು ಯುವರಂಗ ಕಲಾವಿದರು ರಂಗಭೂಮಿಯನ್ನು , ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿದ್ದಾರೆ ಮತ್ತು ರಂಗಭೂಮಿಯನ್ನೇ ಬದುಕನ್ನಾಗಿಸಿಕೊಂಡಿದ್ದಾರೆ. ಆದರೆ ಈ ಕಲಾವಿದರನ್ನು ಸರ್ಕಾರಗಳು ಕಡೆಗಣಿಸುತ್ತಿರುವುದು ವಿಷಾದನೀಯ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

’ಸರ್ಕಾರದ ರಂಗಭೂಮಿಯಲ್ಲಿ ನಡೆಯುತ್ತಿರುವ ದೊಡ್ಡ ರೆಪರ್ಟರಿಗಳು ಎನಿಸಿಕೊಂಡಿರುವ ರಂಗಾಯಣಗಳಿಗೆ ಕಲಾವಿದರ ಆಯ್ಕೆ ಮಾಡುವಾಗ ಇದೇ 35 ವರ್ಷದ ಒಳಗಿರುವ ಯುವ ರಂಗ ಕಲಾವಿದರೇ ಬೇಕು ಎಂದು  ರಂಗಾಯಣಗಳಿಗೆ ದುಡಿಸಿಕೊಳ್ಳುವ ಸರ್ಕಾರ, ಕೋವಿಡ್ ಆರ್ಥಿಕ ನೆರವು ಪ್ಯಾಕೇಜ್‌ ತೆಗೆದುಕೊಳ್ಳಲು ಅರ್ಹರಲ್ಲ ಎನ್ನುತ್ತದೆ ಇದ್ಯಾವ ನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಯುವ ರಂಗಕಲಾವಿದರು ಬೀದಿಗಿಳಿಯುವ ಮುಂಚೆ ವಯಸ್ಸಿನ ಮಿತಿಯನ್ನು ಸಡಿಲಗೊಳಿಸಿ ಮತ್ತೆ ಆರ್ಥಿಕ ನೆರವನ್ನು 10,000 ರೂಪಾಯಿಗೆ ಏರಿಸಿ, 10 ವರ್ಷಗಳ ಕಲಾಸೇವೆಯನ್ನು 5 ವರ್ಷಕ್ಕೆ ಇಳಿಸಿ ಕಲಾವಿದರಿಗೆ ಗೌರವಧನವಾಗಿ ತಲುಪುವಂತೆ ಮಾಡಬೇಕು. ಆನ್ ಲೈನ್ ಮೂಲಕ ಅರ್ಜಿ ಹಾಕುವ ಕೊನೆಯ ದಿನಾಂಕವನ್ನು ಮುಂದೂಡಬೇಕು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲದವರಿಗೆ ಜಿಲ್ಲಾ ಕಛೇರಿಗಳಲ್ಲಿ ಇರುವ ಕಲಾವಿದರ ಮಾಹಿತಿ ಆಧರಿಸಿ ಅರ್ಜಿ ಹಾಕಿಸಿ ಎಲ್ಲಾ ಕಲಾವಿದರಿಗೆ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮಂಗಳವಾರವಷ್ಟೇ ಚಿತ್ರರಂಗದ 3,000 ಕಾರ್ಮಿಕರಿಗೆ ತಲಾ 5,000 ರೂಪಾಯಿ ನೀಡುವುದಾಗಿ ನಟ ಯಶ್ ಘೋಷಿಸಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...