Homeಕರ್ನಾಟಕರಂಗ ಕಲಾವಿದರಿಗೆ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ನಲ್ಲಿ ವಯಸ್ಸಿನ ತಾರತಮ್ಯ ಆರೋಪ

ರಂಗ ಕಲಾವಿದರಿಗೆ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ನಲ್ಲಿ ವಯಸ್ಸಿನ ತಾರತಮ್ಯ ಆರೋಪ

’ರಂಗಾಯಣಗಳಿಗೆ ಕಲಾವಿದರ ಆಯ್ಕೆ ಮಾಡುವಾಗ 35 ವರ್ಷದ ಒಳಗಿರುವ ಯುವ ರಂಗ ಕಲಾವಿದರೇ ಬೇಕು ಎಂದು ದುಡಿಸಿಕೊಳ್ಳುವ ಸರ್ಕಾರ, ಕೋವಿಡ್ ಆರ್ಥಿಕ ನೆರವು ಪ್ಯಾಕೇಜ್‌ಗೆ ಪರಿಗಣಿಸದಿರುವುದು ಅನ್ಯಾಯ’

- Advertisement -
- Advertisement -

ರಾಜ್ಯದಲ್ಲಿ ವಿಧಿಸಲಾಗಿರುವ ಕೊರೊನಾ ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ರಂಗ ಕಲಾವಿದರಿಗೆ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದು, ನೀಡುತ್ತಿರುವ ಅಲ್ಪ ನೆರವಿನಲ್ಲಿಯೂ ವಯಸ್ಸಿನ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋವಿಡ್ ಲಾಕ್‌ಡೌನ್‌ನಿಂದ ಸಂಕಷ್ಟ ಎದುರಿಸುತ್ತಿರುವ ಕೂಲಿ ಕಾರ್ಮಿಕರಿಗೆ, ಕ್ಷೌರಿಕರಿಗೆ, ಆಟೋ ಚಾಲಕರಿಗೆ ಹಾಗೂ ಕಲಾವಿದರಿಗೆ ಆರ್ಥಿಕ ನೆರವು ಪ್ಯಾಕೇಜ್‌ನ್ನು ಘೋಷಣೆ ಮಾಡಿದ್ದರು. ಕಲಾವಿದರಿಗೆ 3,000 ರೂಪಾಯಿ ಘೋಷಿಸಿದ್ದರು.

ಸರ್ಕಾರ ಘೋಷಿಸಿರುವ 3,000 ರೂಪಾಯಿಗಳನ್ನು ಪಡೆಯಲು ಕಲಾವಿದರು ಅರ್ಜಿ ಸಲ್ಲಿಸಲು ಪಡುವ ಪಡಿಪಾಟಲಿಗೆ ಅರ್ಧ ಖರ್ಚು ಆಗುತ್ತದೆ. ಸಾಕಷ್ಟು ಕಲಾವಿದರು ಸರ್ಕಾರ ಹಣವನ್ನು ತೆಗೆದುಕೊಳ್ಳಲು ಮುಜುಗರ ಇರುತ್ತದೆ‌ ಅಂಥ ಸಮಯದಲ್ಲಿ, ಕಲಾವಿದರು ಹಣ ಪಡೆಯಲು ಸರ್ಕಾರ ವಯಸ್ಸಿನ ತಾರತಮ್ಯ ಮಾಡಿ ಮತ್ತಷ್ಟು ಅವಮಾನ ಮಾಡುತ್ತಿದೆ ಎಂದು ಕಲಾವಿದ ಲಕ್ಷ್ಮಣ್ ಮಂಡಲಗೇರಾ ಆರೋಪಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು, ಅಕಾಡೆಮಿ ಅಧ್ಯಕ್ಷರು, ಸದಸ್ಯರುಗಳು ಮತ್ತು ಸರ್ಕಾರ ಎಲ್ಲರೂ ಸೇರಿ ಕಲಾವಿದರಿಗೆ ವಯಸ್ಸಿನ ತಾರತಮ್ಯವನ್ನು ಏರ್ಪಡಿಸಿ 35 ವಯಸ್ಸಿನ ಮೇಲ್ಪಟ್ಟವರು ಮಾತ್ರ ಅರ್ಜಿ ಹಾಕಬೇಕು, 35 ವರ್ಷದೊಳಗಿನವರಿಗೆ,  ಮಾಶಾಸನ ಪಡೆಯುವವರಿಗೆ ಹಾಗೂ ಧನಸಹಾಯ ಪಡೆಯುವ ಸಂಘ – ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಅಂತ ಪತ್ರಿಕೆ ವರದಿ ಮೂಲಕ ಘೋಷಿಸಿ ಅವಮಾನ ಮಾಡಿದ್ದಿರಾ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

ಅಕಾಡೆಮಿಗಳಿಗೆ, ಪ್ರಾಧಿಕಾರಗಳಿಗೆ, ಸಾಹಿತ್ಯ ಪರಿಷತ್ತುಗಳಿಗೆ, ಇಲಾಖೆಗಳಿಗೆ ಕಳೆದ ಎರಡು ಮೂರು ವರ್ಷಗಳಿಂದ ಕೊರೊನಾ ನೆಪ ಹೇಳಿ ಬಿಡುಗಡೆ ಆಗಬೇಕಾದ ಸುಮಾರು 200 ರಿಂದ 300 ಕೋಟಿ ರೂಪಾಯಿ ಹಣ ಎಲ್ಲಿ ಹೋಯಿತು..? ಎಂದು  ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ರಂಗಭೂಮಿಯನ್ನೇ ನಂಬಿ ತಮ್ಮ ಬದುಕನ್ನಾಗಿಸಿಕೊಂಡು ಅದನ್ನೇ ಜೀವನವಾಗಿ ಇಟ್ಟುಕೊಂಡು ರಂಗ ಚಟುವಟಿಕೆಗಳು ಇಲ್ಲದೇ ಮನೆ ಸೇರಿರುವ ಈ ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಸರ್ಕಾರ ಕಲಾವಿದರ ಸಹಾಯಕ್ಕೆ ನಿಲ್ಲದಿರುವಂತಹ ದುಸ್ಥಿತಿ ಈ ರಾಜ್ಯದಲ್ಲಿ ಇದೆ. ಘೋಷಿಸಿರುವ ಅಲ್ಪ ನೆರವನ್ನು ಪಡೆಯಲು ಸಹ ವಯಸ್ಸಿನ ಮಿತಿ ಇಟ್ಟಿರುವುದು ಏಕೆ ಎಂದಿದ್ದಾರೆ.

“ಇಡೀ ಕರ್ನಾಟಕದಲ್ಲಿ ರಂಗಭೂಮಿ ಕ್ರಿಯಾಶೀಲವಾಗಿ ಕೆಲಸ ಮಾಡಲು ಜೀವಂತವಾಗಿರುವುದಕ್ಕೆ 35 ವಯಸ್ಸಿನ ಒಳಗಿರುವ ಯುವ ರಂಗ ಕಲಾವಿದರು ಕಾರಣ. ಬೇಸಿಗೆ ಶಿಬಿರಗಳಲ್ಲಿ, ದೊಡ್ಡ ದೊಡ್ಡ ರೆಪರ್ಟರಿಗಳಲ್ಲಿ , ಸಣ್ಣ ಸಣ್ಣ ರಂಗತಂಡಗಳಲ್ಲಿ ಕ್ರಿಯಾಶೀಲವಾಗಿ ಹೊಸ ಹೊಸ ಯೋಚನೆಗಳೊಂದಿಗೆ ನಾಟಕಗಳನ್ನು ನಿರ್ದೇಶಿಸಿ ನಟಿಸಿ, ಸಂಘಟಿಸುವುದರ ಮೂಲಕ ಇಂದು ಯುವರಂಗ ಕಲಾವಿದರು ರಂಗಭೂಮಿಯನ್ನು , ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿದ್ದಾರೆ ಮತ್ತು ರಂಗಭೂಮಿಯನ್ನೇ ಬದುಕನ್ನಾಗಿಸಿಕೊಂಡಿದ್ದಾರೆ. ಆದರೆ ಈ ಕಲಾವಿದರನ್ನು ಸರ್ಕಾರಗಳು ಕಡೆಗಣಿಸುತ್ತಿರುವುದು ವಿಷಾದನೀಯ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

’ಸರ್ಕಾರದ ರಂಗಭೂಮಿಯಲ್ಲಿ ನಡೆಯುತ್ತಿರುವ ದೊಡ್ಡ ರೆಪರ್ಟರಿಗಳು ಎನಿಸಿಕೊಂಡಿರುವ ರಂಗಾಯಣಗಳಿಗೆ ಕಲಾವಿದರ ಆಯ್ಕೆ ಮಾಡುವಾಗ ಇದೇ 35 ವರ್ಷದ ಒಳಗಿರುವ ಯುವ ರಂಗ ಕಲಾವಿದರೇ ಬೇಕು ಎಂದು  ರಂಗಾಯಣಗಳಿಗೆ ದುಡಿಸಿಕೊಳ್ಳುವ ಸರ್ಕಾರ, ಕೋವಿಡ್ ಆರ್ಥಿಕ ನೆರವು ಪ್ಯಾಕೇಜ್‌ ತೆಗೆದುಕೊಳ್ಳಲು ಅರ್ಹರಲ್ಲ ಎನ್ನುತ್ತದೆ ಇದ್ಯಾವ ನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಯುವ ರಂಗಕಲಾವಿದರು ಬೀದಿಗಿಳಿಯುವ ಮುಂಚೆ ವಯಸ್ಸಿನ ಮಿತಿಯನ್ನು ಸಡಿಲಗೊಳಿಸಿ ಮತ್ತೆ ಆರ್ಥಿಕ ನೆರವನ್ನು 10,000 ರೂಪಾಯಿಗೆ ಏರಿಸಿ, 10 ವರ್ಷಗಳ ಕಲಾಸೇವೆಯನ್ನು 5 ವರ್ಷಕ್ಕೆ ಇಳಿಸಿ ಕಲಾವಿದರಿಗೆ ಗೌರವಧನವಾಗಿ ತಲುಪುವಂತೆ ಮಾಡಬೇಕು. ಆನ್ ಲೈನ್ ಮೂಲಕ ಅರ್ಜಿ ಹಾಕುವ ಕೊನೆಯ ದಿನಾಂಕವನ್ನು ಮುಂದೂಡಬೇಕು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲದವರಿಗೆ ಜಿಲ್ಲಾ ಕಛೇರಿಗಳಲ್ಲಿ ಇರುವ ಕಲಾವಿದರ ಮಾಹಿತಿ ಆಧರಿಸಿ ಅರ್ಜಿ ಹಾಕಿಸಿ ಎಲ್ಲಾ ಕಲಾವಿದರಿಗೆ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮಂಗಳವಾರವಷ್ಟೇ ಚಿತ್ರರಂಗದ 3,000 ಕಾರ್ಮಿಕರಿಗೆ ತಲಾ 5,000 ರೂಪಾಯಿ ನೀಡುವುದಾಗಿ ನಟ ಯಶ್ ಘೋಷಿಸಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...

ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ನಿತೀಶ್ ಕುಮಾರ್, 20 ವರ್ಷಗಳಿಗೂ ಹೆಚ್ಚು ಕಾಲ ತಾವು ಹೊಂದಿದ್ದ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳುವುದಾಗಿ ದೃಢಪಡಿಸಿದ್ದಾರೆ. "ನನ್ನ ಸಂಸದೀಯ...

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ,...

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ...

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...