Homeಕರ್ನಾಟಕರಂಗ ಕಲಾವಿದರಿಗೆ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ನಲ್ಲಿ ವಯಸ್ಸಿನ ತಾರತಮ್ಯ ಆರೋಪ

ರಂಗ ಕಲಾವಿದರಿಗೆ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ನಲ್ಲಿ ವಯಸ್ಸಿನ ತಾರತಮ್ಯ ಆರೋಪ

’ರಂಗಾಯಣಗಳಿಗೆ ಕಲಾವಿದರ ಆಯ್ಕೆ ಮಾಡುವಾಗ 35 ವರ್ಷದ ಒಳಗಿರುವ ಯುವ ರಂಗ ಕಲಾವಿದರೇ ಬೇಕು ಎಂದು ದುಡಿಸಿಕೊಳ್ಳುವ ಸರ್ಕಾರ, ಕೋವಿಡ್ ಆರ್ಥಿಕ ನೆರವು ಪ್ಯಾಕೇಜ್‌ಗೆ ಪರಿಗಣಿಸದಿರುವುದು ಅನ್ಯಾಯ’

- Advertisement -
- Advertisement -

ರಾಜ್ಯದಲ್ಲಿ ವಿಧಿಸಲಾಗಿರುವ ಕೊರೊನಾ ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ರಂಗ ಕಲಾವಿದರಿಗೆ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದು, ನೀಡುತ್ತಿರುವ ಅಲ್ಪ ನೆರವಿನಲ್ಲಿಯೂ ವಯಸ್ಸಿನ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋವಿಡ್ ಲಾಕ್‌ಡೌನ್‌ನಿಂದ ಸಂಕಷ್ಟ ಎದುರಿಸುತ್ತಿರುವ ಕೂಲಿ ಕಾರ್ಮಿಕರಿಗೆ, ಕ್ಷೌರಿಕರಿಗೆ, ಆಟೋ ಚಾಲಕರಿಗೆ ಹಾಗೂ ಕಲಾವಿದರಿಗೆ ಆರ್ಥಿಕ ನೆರವು ಪ್ಯಾಕೇಜ್‌ನ್ನು ಘೋಷಣೆ ಮಾಡಿದ್ದರು. ಕಲಾವಿದರಿಗೆ 3,000 ರೂಪಾಯಿ ಘೋಷಿಸಿದ್ದರು.

ಸರ್ಕಾರ ಘೋಷಿಸಿರುವ 3,000 ರೂಪಾಯಿಗಳನ್ನು ಪಡೆಯಲು ಕಲಾವಿದರು ಅರ್ಜಿ ಸಲ್ಲಿಸಲು ಪಡುವ ಪಡಿಪಾಟಲಿಗೆ ಅರ್ಧ ಖರ್ಚು ಆಗುತ್ತದೆ. ಸಾಕಷ್ಟು ಕಲಾವಿದರು ಸರ್ಕಾರ ಹಣವನ್ನು ತೆಗೆದುಕೊಳ್ಳಲು ಮುಜುಗರ ಇರುತ್ತದೆ‌ ಅಂಥ ಸಮಯದಲ್ಲಿ, ಕಲಾವಿದರು ಹಣ ಪಡೆಯಲು ಸರ್ಕಾರ ವಯಸ್ಸಿನ ತಾರತಮ್ಯ ಮಾಡಿ ಮತ್ತಷ್ಟು ಅವಮಾನ ಮಾಡುತ್ತಿದೆ ಎಂದು ಕಲಾವಿದ ಲಕ್ಷ್ಮಣ್ ಮಂಡಲಗೇರಾ ಆರೋಪಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು, ಅಕಾಡೆಮಿ ಅಧ್ಯಕ್ಷರು, ಸದಸ್ಯರುಗಳು ಮತ್ತು ಸರ್ಕಾರ ಎಲ್ಲರೂ ಸೇರಿ ಕಲಾವಿದರಿಗೆ ವಯಸ್ಸಿನ ತಾರತಮ್ಯವನ್ನು ಏರ್ಪಡಿಸಿ 35 ವಯಸ್ಸಿನ ಮೇಲ್ಪಟ್ಟವರು ಮಾತ್ರ ಅರ್ಜಿ ಹಾಕಬೇಕು, 35 ವರ್ಷದೊಳಗಿನವರಿಗೆ,  ಮಾಶಾಸನ ಪಡೆಯುವವರಿಗೆ ಹಾಗೂ ಧನಸಹಾಯ ಪಡೆಯುವ ಸಂಘ – ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಅಂತ ಪತ್ರಿಕೆ ವರದಿ ಮೂಲಕ ಘೋಷಿಸಿ ಅವಮಾನ ಮಾಡಿದ್ದಿರಾ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

ಅಕಾಡೆಮಿಗಳಿಗೆ, ಪ್ರಾಧಿಕಾರಗಳಿಗೆ, ಸಾಹಿತ್ಯ ಪರಿಷತ್ತುಗಳಿಗೆ, ಇಲಾಖೆಗಳಿಗೆ ಕಳೆದ ಎರಡು ಮೂರು ವರ್ಷಗಳಿಂದ ಕೊರೊನಾ ನೆಪ ಹೇಳಿ ಬಿಡುಗಡೆ ಆಗಬೇಕಾದ ಸುಮಾರು 200 ರಿಂದ 300 ಕೋಟಿ ರೂಪಾಯಿ ಹಣ ಎಲ್ಲಿ ಹೋಯಿತು..? ಎಂದು  ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ರಂಗಭೂಮಿಯನ್ನೇ ನಂಬಿ ತಮ್ಮ ಬದುಕನ್ನಾಗಿಸಿಕೊಂಡು ಅದನ್ನೇ ಜೀವನವಾಗಿ ಇಟ್ಟುಕೊಂಡು ರಂಗ ಚಟುವಟಿಕೆಗಳು ಇಲ್ಲದೇ ಮನೆ ಸೇರಿರುವ ಈ ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಸರ್ಕಾರ ಕಲಾವಿದರ ಸಹಾಯಕ್ಕೆ ನಿಲ್ಲದಿರುವಂತಹ ದುಸ್ಥಿತಿ ಈ ರಾಜ್ಯದಲ್ಲಿ ಇದೆ. ಘೋಷಿಸಿರುವ ಅಲ್ಪ ನೆರವನ್ನು ಪಡೆಯಲು ಸಹ ವಯಸ್ಸಿನ ಮಿತಿ ಇಟ್ಟಿರುವುದು ಏಕೆ ಎಂದಿದ್ದಾರೆ.

“ಇಡೀ ಕರ್ನಾಟಕದಲ್ಲಿ ರಂಗಭೂಮಿ ಕ್ರಿಯಾಶೀಲವಾಗಿ ಕೆಲಸ ಮಾಡಲು ಜೀವಂತವಾಗಿರುವುದಕ್ಕೆ 35 ವಯಸ್ಸಿನ ಒಳಗಿರುವ ಯುವ ರಂಗ ಕಲಾವಿದರು ಕಾರಣ. ಬೇಸಿಗೆ ಶಿಬಿರಗಳಲ್ಲಿ, ದೊಡ್ಡ ದೊಡ್ಡ ರೆಪರ್ಟರಿಗಳಲ್ಲಿ , ಸಣ್ಣ ಸಣ್ಣ ರಂಗತಂಡಗಳಲ್ಲಿ ಕ್ರಿಯಾಶೀಲವಾಗಿ ಹೊಸ ಹೊಸ ಯೋಚನೆಗಳೊಂದಿಗೆ ನಾಟಕಗಳನ್ನು ನಿರ್ದೇಶಿಸಿ ನಟಿಸಿ, ಸಂಘಟಿಸುವುದರ ಮೂಲಕ ಇಂದು ಯುವರಂಗ ಕಲಾವಿದರು ರಂಗಭೂಮಿಯನ್ನು , ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿದ್ದಾರೆ ಮತ್ತು ರಂಗಭೂಮಿಯನ್ನೇ ಬದುಕನ್ನಾಗಿಸಿಕೊಂಡಿದ್ದಾರೆ. ಆದರೆ ಈ ಕಲಾವಿದರನ್ನು ಸರ್ಕಾರಗಳು ಕಡೆಗಣಿಸುತ್ತಿರುವುದು ವಿಷಾದನೀಯ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

’ಸರ್ಕಾರದ ರಂಗಭೂಮಿಯಲ್ಲಿ ನಡೆಯುತ್ತಿರುವ ದೊಡ್ಡ ರೆಪರ್ಟರಿಗಳು ಎನಿಸಿಕೊಂಡಿರುವ ರಂಗಾಯಣಗಳಿಗೆ ಕಲಾವಿದರ ಆಯ್ಕೆ ಮಾಡುವಾಗ ಇದೇ 35 ವರ್ಷದ ಒಳಗಿರುವ ಯುವ ರಂಗ ಕಲಾವಿದರೇ ಬೇಕು ಎಂದು  ರಂಗಾಯಣಗಳಿಗೆ ದುಡಿಸಿಕೊಳ್ಳುವ ಸರ್ಕಾರ, ಕೋವಿಡ್ ಆರ್ಥಿಕ ನೆರವು ಪ್ಯಾಕೇಜ್‌ ತೆಗೆದುಕೊಳ್ಳಲು ಅರ್ಹರಲ್ಲ ಎನ್ನುತ್ತದೆ ಇದ್ಯಾವ ನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಯುವ ರಂಗಕಲಾವಿದರು ಬೀದಿಗಿಳಿಯುವ ಮುಂಚೆ ವಯಸ್ಸಿನ ಮಿತಿಯನ್ನು ಸಡಿಲಗೊಳಿಸಿ ಮತ್ತೆ ಆರ್ಥಿಕ ನೆರವನ್ನು 10,000 ರೂಪಾಯಿಗೆ ಏರಿಸಿ, 10 ವರ್ಷಗಳ ಕಲಾಸೇವೆಯನ್ನು 5 ವರ್ಷಕ್ಕೆ ಇಳಿಸಿ ಕಲಾವಿದರಿಗೆ ಗೌರವಧನವಾಗಿ ತಲುಪುವಂತೆ ಮಾಡಬೇಕು. ಆನ್ ಲೈನ್ ಮೂಲಕ ಅರ್ಜಿ ಹಾಕುವ ಕೊನೆಯ ದಿನಾಂಕವನ್ನು ಮುಂದೂಡಬೇಕು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲದವರಿಗೆ ಜಿಲ್ಲಾ ಕಛೇರಿಗಳಲ್ಲಿ ಇರುವ ಕಲಾವಿದರ ಮಾಹಿತಿ ಆಧರಿಸಿ ಅರ್ಜಿ ಹಾಕಿಸಿ ಎಲ್ಲಾ ಕಲಾವಿದರಿಗೆ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮಂಗಳವಾರವಷ್ಟೇ ಚಿತ್ರರಂಗದ 3,000 ಕಾರ್ಮಿಕರಿಗೆ ತಲಾ 5,000 ರೂಪಾಯಿ ನೀಡುವುದಾಗಿ ನಟ ಯಶ್ ಘೋಷಿಸಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...