Homeಕರ್ನಾಟಕರಂಗ ಕಲಾವಿದರಿಗೆ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ನಲ್ಲಿ ವಯಸ್ಸಿನ ತಾರತಮ್ಯ ಆರೋಪ

ರಂಗ ಕಲಾವಿದರಿಗೆ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ನಲ್ಲಿ ವಯಸ್ಸಿನ ತಾರತಮ್ಯ ಆರೋಪ

’ರಂಗಾಯಣಗಳಿಗೆ ಕಲಾವಿದರ ಆಯ್ಕೆ ಮಾಡುವಾಗ 35 ವರ್ಷದ ಒಳಗಿರುವ ಯುವ ರಂಗ ಕಲಾವಿದರೇ ಬೇಕು ಎಂದು ದುಡಿಸಿಕೊಳ್ಳುವ ಸರ್ಕಾರ, ಕೋವಿಡ್ ಆರ್ಥಿಕ ನೆರವು ಪ್ಯಾಕೇಜ್‌ಗೆ ಪರಿಗಣಿಸದಿರುವುದು ಅನ್ಯಾಯ’

- Advertisement -
- Advertisement -

ರಾಜ್ಯದಲ್ಲಿ ವಿಧಿಸಲಾಗಿರುವ ಕೊರೊನಾ ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ರಂಗ ಕಲಾವಿದರಿಗೆ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದು, ನೀಡುತ್ತಿರುವ ಅಲ್ಪ ನೆರವಿನಲ್ಲಿಯೂ ವಯಸ್ಸಿನ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋವಿಡ್ ಲಾಕ್‌ಡೌನ್‌ನಿಂದ ಸಂಕಷ್ಟ ಎದುರಿಸುತ್ತಿರುವ ಕೂಲಿ ಕಾರ್ಮಿಕರಿಗೆ, ಕ್ಷೌರಿಕರಿಗೆ, ಆಟೋ ಚಾಲಕರಿಗೆ ಹಾಗೂ ಕಲಾವಿದರಿಗೆ ಆರ್ಥಿಕ ನೆರವು ಪ್ಯಾಕೇಜ್‌ನ್ನು ಘೋಷಣೆ ಮಾಡಿದ್ದರು. ಕಲಾವಿದರಿಗೆ 3,000 ರೂಪಾಯಿ ಘೋಷಿಸಿದ್ದರು.

ಸರ್ಕಾರ ಘೋಷಿಸಿರುವ 3,000 ರೂಪಾಯಿಗಳನ್ನು ಪಡೆಯಲು ಕಲಾವಿದರು ಅರ್ಜಿ ಸಲ್ಲಿಸಲು ಪಡುವ ಪಡಿಪಾಟಲಿಗೆ ಅರ್ಧ ಖರ್ಚು ಆಗುತ್ತದೆ. ಸಾಕಷ್ಟು ಕಲಾವಿದರು ಸರ್ಕಾರ ಹಣವನ್ನು ತೆಗೆದುಕೊಳ್ಳಲು ಮುಜುಗರ ಇರುತ್ತದೆ‌ ಅಂಥ ಸಮಯದಲ್ಲಿ, ಕಲಾವಿದರು ಹಣ ಪಡೆಯಲು ಸರ್ಕಾರ ವಯಸ್ಸಿನ ತಾರತಮ್ಯ ಮಾಡಿ ಮತ್ತಷ್ಟು ಅವಮಾನ ಮಾಡುತ್ತಿದೆ ಎಂದು ಕಲಾವಿದ ಲಕ್ಷ್ಮಣ್ ಮಂಡಲಗೇರಾ ಆರೋಪಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು, ಅಕಾಡೆಮಿ ಅಧ್ಯಕ್ಷರು, ಸದಸ್ಯರುಗಳು ಮತ್ತು ಸರ್ಕಾರ ಎಲ್ಲರೂ ಸೇರಿ ಕಲಾವಿದರಿಗೆ ವಯಸ್ಸಿನ ತಾರತಮ್ಯವನ್ನು ಏರ್ಪಡಿಸಿ 35 ವಯಸ್ಸಿನ ಮೇಲ್ಪಟ್ಟವರು ಮಾತ್ರ ಅರ್ಜಿ ಹಾಕಬೇಕು, 35 ವರ್ಷದೊಳಗಿನವರಿಗೆ,  ಮಾಶಾಸನ ಪಡೆಯುವವರಿಗೆ ಹಾಗೂ ಧನಸಹಾಯ ಪಡೆಯುವ ಸಂಘ – ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಅಂತ ಪತ್ರಿಕೆ ವರದಿ ಮೂಲಕ ಘೋಷಿಸಿ ಅವಮಾನ ಮಾಡಿದ್ದಿರಾ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

ಅಕಾಡೆಮಿಗಳಿಗೆ, ಪ್ರಾಧಿಕಾರಗಳಿಗೆ, ಸಾಹಿತ್ಯ ಪರಿಷತ್ತುಗಳಿಗೆ, ಇಲಾಖೆಗಳಿಗೆ ಕಳೆದ ಎರಡು ಮೂರು ವರ್ಷಗಳಿಂದ ಕೊರೊನಾ ನೆಪ ಹೇಳಿ ಬಿಡುಗಡೆ ಆಗಬೇಕಾದ ಸುಮಾರು 200 ರಿಂದ 300 ಕೋಟಿ ರೂಪಾಯಿ ಹಣ ಎಲ್ಲಿ ಹೋಯಿತು..? ಎಂದು  ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ರಂಗಭೂಮಿಯನ್ನೇ ನಂಬಿ ತಮ್ಮ ಬದುಕನ್ನಾಗಿಸಿಕೊಂಡು ಅದನ್ನೇ ಜೀವನವಾಗಿ ಇಟ್ಟುಕೊಂಡು ರಂಗ ಚಟುವಟಿಕೆಗಳು ಇಲ್ಲದೇ ಮನೆ ಸೇರಿರುವ ಈ ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಸರ್ಕಾರ ಕಲಾವಿದರ ಸಹಾಯಕ್ಕೆ ನಿಲ್ಲದಿರುವಂತಹ ದುಸ್ಥಿತಿ ಈ ರಾಜ್ಯದಲ್ಲಿ ಇದೆ. ಘೋಷಿಸಿರುವ ಅಲ್ಪ ನೆರವನ್ನು ಪಡೆಯಲು ಸಹ ವಯಸ್ಸಿನ ಮಿತಿ ಇಟ್ಟಿರುವುದು ಏಕೆ ಎಂದಿದ್ದಾರೆ.

“ಇಡೀ ಕರ್ನಾಟಕದಲ್ಲಿ ರಂಗಭೂಮಿ ಕ್ರಿಯಾಶೀಲವಾಗಿ ಕೆಲಸ ಮಾಡಲು ಜೀವಂತವಾಗಿರುವುದಕ್ಕೆ 35 ವಯಸ್ಸಿನ ಒಳಗಿರುವ ಯುವ ರಂಗ ಕಲಾವಿದರು ಕಾರಣ. ಬೇಸಿಗೆ ಶಿಬಿರಗಳಲ್ಲಿ, ದೊಡ್ಡ ದೊಡ್ಡ ರೆಪರ್ಟರಿಗಳಲ್ಲಿ , ಸಣ್ಣ ಸಣ್ಣ ರಂಗತಂಡಗಳಲ್ಲಿ ಕ್ರಿಯಾಶೀಲವಾಗಿ ಹೊಸ ಹೊಸ ಯೋಚನೆಗಳೊಂದಿಗೆ ನಾಟಕಗಳನ್ನು ನಿರ್ದೇಶಿಸಿ ನಟಿಸಿ, ಸಂಘಟಿಸುವುದರ ಮೂಲಕ ಇಂದು ಯುವರಂಗ ಕಲಾವಿದರು ರಂಗಭೂಮಿಯನ್ನು , ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿದ್ದಾರೆ ಮತ್ತು ರಂಗಭೂಮಿಯನ್ನೇ ಬದುಕನ್ನಾಗಿಸಿಕೊಂಡಿದ್ದಾರೆ. ಆದರೆ ಈ ಕಲಾವಿದರನ್ನು ಸರ್ಕಾರಗಳು ಕಡೆಗಣಿಸುತ್ತಿರುವುದು ವಿಷಾದನೀಯ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

’ಸರ್ಕಾರದ ರಂಗಭೂಮಿಯಲ್ಲಿ ನಡೆಯುತ್ತಿರುವ ದೊಡ್ಡ ರೆಪರ್ಟರಿಗಳು ಎನಿಸಿಕೊಂಡಿರುವ ರಂಗಾಯಣಗಳಿಗೆ ಕಲಾವಿದರ ಆಯ್ಕೆ ಮಾಡುವಾಗ ಇದೇ 35 ವರ್ಷದ ಒಳಗಿರುವ ಯುವ ರಂಗ ಕಲಾವಿದರೇ ಬೇಕು ಎಂದು  ರಂಗಾಯಣಗಳಿಗೆ ದುಡಿಸಿಕೊಳ್ಳುವ ಸರ್ಕಾರ, ಕೋವಿಡ್ ಆರ್ಥಿಕ ನೆರವು ಪ್ಯಾಕೇಜ್‌ ತೆಗೆದುಕೊಳ್ಳಲು ಅರ್ಹರಲ್ಲ ಎನ್ನುತ್ತದೆ ಇದ್ಯಾವ ನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಯುವ ರಂಗಕಲಾವಿದರು ಬೀದಿಗಿಳಿಯುವ ಮುಂಚೆ ವಯಸ್ಸಿನ ಮಿತಿಯನ್ನು ಸಡಿಲಗೊಳಿಸಿ ಮತ್ತೆ ಆರ್ಥಿಕ ನೆರವನ್ನು 10,000 ರೂಪಾಯಿಗೆ ಏರಿಸಿ, 10 ವರ್ಷಗಳ ಕಲಾಸೇವೆಯನ್ನು 5 ವರ್ಷಕ್ಕೆ ಇಳಿಸಿ ಕಲಾವಿದರಿಗೆ ಗೌರವಧನವಾಗಿ ತಲುಪುವಂತೆ ಮಾಡಬೇಕು. ಆನ್ ಲೈನ್ ಮೂಲಕ ಅರ್ಜಿ ಹಾಕುವ ಕೊನೆಯ ದಿನಾಂಕವನ್ನು ಮುಂದೂಡಬೇಕು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲದವರಿಗೆ ಜಿಲ್ಲಾ ಕಛೇರಿಗಳಲ್ಲಿ ಇರುವ ಕಲಾವಿದರ ಮಾಹಿತಿ ಆಧರಿಸಿ ಅರ್ಜಿ ಹಾಕಿಸಿ ಎಲ್ಲಾ ಕಲಾವಿದರಿಗೆ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮಂಗಳವಾರವಷ್ಟೇ ಚಿತ್ರರಂಗದ 3,000 ಕಾರ್ಮಿಕರಿಗೆ ತಲಾ 5,000 ರೂಪಾಯಿ ನೀಡುವುದಾಗಿ ನಟ ಯಶ್ ಘೋಷಿಸಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...