Homeಕರ್ನಾಟಕರಂಗ ಕಲಾವಿದರಿಗೆ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ನಲ್ಲಿ ವಯಸ್ಸಿನ ತಾರತಮ್ಯ ಆರೋಪ

ರಂಗ ಕಲಾವಿದರಿಗೆ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ನಲ್ಲಿ ವಯಸ್ಸಿನ ತಾರತಮ್ಯ ಆರೋಪ

’ರಂಗಾಯಣಗಳಿಗೆ ಕಲಾವಿದರ ಆಯ್ಕೆ ಮಾಡುವಾಗ 35 ವರ್ಷದ ಒಳಗಿರುವ ಯುವ ರಂಗ ಕಲಾವಿದರೇ ಬೇಕು ಎಂದು ದುಡಿಸಿಕೊಳ್ಳುವ ಸರ್ಕಾರ, ಕೋವಿಡ್ ಆರ್ಥಿಕ ನೆರವು ಪ್ಯಾಕೇಜ್‌ಗೆ ಪರಿಗಣಿಸದಿರುವುದು ಅನ್ಯಾಯ’

- Advertisement -
- Advertisement -

ರಾಜ್ಯದಲ್ಲಿ ವಿಧಿಸಲಾಗಿರುವ ಕೊರೊನಾ ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ರಂಗ ಕಲಾವಿದರಿಗೆ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದು, ನೀಡುತ್ತಿರುವ ಅಲ್ಪ ನೆರವಿನಲ್ಲಿಯೂ ವಯಸ್ಸಿನ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋವಿಡ್ ಲಾಕ್‌ಡೌನ್‌ನಿಂದ ಸಂಕಷ್ಟ ಎದುರಿಸುತ್ತಿರುವ ಕೂಲಿ ಕಾರ್ಮಿಕರಿಗೆ, ಕ್ಷೌರಿಕರಿಗೆ, ಆಟೋ ಚಾಲಕರಿಗೆ ಹಾಗೂ ಕಲಾವಿದರಿಗೆ ಆರ್ಥಿಕ ನೆರವು ಪ್ಯಾಕೇಜ್‌ನ್ನು ಘೋಷಣೆ ಮಾಡಿದ್ದರು. ಕಲಾವಿದರಿಗೆ 3,000 ರೂಪಾಯಿ ಘೋಷಿಸಿದ್ದರು.

ಸರ್ಕಾರ ಘೋಷಿಸಿರುವ 3,000 ರೂಪಾಯಿಗಳನ್ನು ಪಡೆಯಲು ಕಲಾವಿದರು ಅರ್ಜಿ ಸಲ್ಲಿಸಲು ಪಡುವ ಪಡಿಪಾಟಲಿಗೆ ಅರ್ಧ ಖರ್ಚು ಆಗುತ್ತದೆ. ಸಾಕಷ್ಟು ಕಲಾವಿದರು ಸರ್ಕಾರ ಹಣವನ್ನು ತೆಗೆದುಕೊಳ್ಳಲು ಮುಜುಗರ ಇರುತ್ತದೆ‌ ಅಂಥ ಸಮಯದಲ್ಲಿ, ಕಲಾವಿದರು ಹಣ ಪಡೆಯಲು ಸರ್ಕಾರ ವಯಸ್ಸಿನ ತಾರತಮ್ಯ ಮಾಡಿ ಮತ್ತಷ್ಟು ಅವಮಾನ ಮಾಡುತ್ತಿದೆ ಎಂದು ಕಲಾವಿದ ಲಕ್ಷ್ಮಣ್ ಮಂಡಲಗೇರಾ ಆರೋಪಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು, ಅಕಾಡೆಮಿ ಅಧ್ಯಕ್ಷರು, ಸದಸ್ಯರುಗಳು ಮತ್ತು ಸರ್ಕಾರ ಎಲ್ಲರೂ ಸೇರಿ ಕಲಾವಿದರಿಗೆ ವಯಸ್ಸಿನ ತಾರತಮ್ಯವನ್ನು ಏರ್ಪಡಿಸಿ 35 ವಯಸ್ಸಿನ ಮೇಲ್ಪಟ್ಟವರು ಮಾತ್ರ ಅರ್ಜಿ ಹಾಕಬೇಕು, 35 ವರ್ಷದೊಳಗಿನವರಿಗೆ,  ಮಾಶಾಸನ ಪಡೆಯುವವರಿಗೆ ಹಾಗೂ ಧನಸಹಾಯ ಪಡೆಯುವ ಸಂಘ – ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಅಂತ ಪತ್ರಿಕೆ ವರದಿ ಮೂಲಕ ಘೋಷಿಸಿ ಅವಮಾನ ಮಾಡಿದ್ದಿರಾ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

ಅಕಾಡೆಮಿಗಳಿಗೆ, ಪ್ರಾಧಿಕಾರಗಳಿಗೆ, ಸಾಹಿತ್ಯ ಪರಿಷತ್ತುಗಳಿಗೆ, ಇಲಾಖೆಗಳಿಗೆ ಕಳೆದ ಎರಡು ಮೂರು ವರ್ಷಗಳಿಂದ ಕೊರೊನಾ ನೆಪ ಹೇಳಿ ಬಿಡುಗಡೆ ಆಗಬೇಕಾದ ಸುಮಾರು 200 ರಿಂದ 300 ಕೋಟಿ ರೂಪಾಯಿ ಹಣ ಎಲ್ಲಿ ಹೋಯಿತು..? ಎಂದು  ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ರಂಗಭೂಮಿಯನ್ನೇ ನಂಬಿ ತಮ್ಮ ಬದುಕನ್ನಾಗಿಸಿಕೊಂಡು ಅದನ್ನೇ ಜೀವನವಾಗಿ ಇಟ್ಟುಕೊಂಡು ರಂಗ ಚಟುವಟಿಕೆಗಳು ಇಲ್ಲದೇ ಮನೆ ಸೇರಿರುವ ಈ ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಸರ್ಕಾರ ಕಲಾವಿದರ ಸಹಾಯಕ್ಕೆ ನಿಲ್ಲದಿರುವಂತಹ ದುಸ್ಥಿತಿ ಈ ರಾಜ್ಯದಲ್ಲಿ ಇದೆ. ಘೋಷಿಸಿರುವ ಅಲ್ಪ ನೆರವನ್ನು ಪಡೆಯಲು ಸಹ ವಯಸ್ಸಿನ ಮಿತಿ ಇಟ್ಟಿರುವುದು ಏಕೆ ಎಂದಿದ್ದಾರೆ.

“ಇಡೀ ಕರ್ನಾಟಕದಲ್ಲಿ ರಂಗಭೂಮಿ ಕ್ರಿಯಾಶೀಲವಾಗಿ ಕೆಲಸ ಮಾಡಲು ಜೀವಂತವಾಗಿರುವುದಕ್ಕೆ 35 ವಯಸ್ಸಿನ ಒಳಗಿರುವ ಯುವ ರಂಗ ಕಲಾವಿದರು ಕಾರಣ. ಬೇಸಿಗೆ ಶಿಬಿರಗಳಲ್ಲಿ, ದೊಡ್ಡ ದೊಡ್ಡ ರೆಪರ್ಟರಿಗಳಲ್ಲಿ , ಸಣ್ಣ ಸಣ್ಣ ರಂಗತಂಡಗಳಲ್ಲಿ ಕ್ರಿಯಾಶೀಲವಾಗಿ ಹೊಸ ಹೊಸ ಯೋಚನೆಗಳೊಂದಿಗೆ ನಾಟಕಗಳನ್ನು ನಿರ್ದೇಶಿಸಿ ನಟಿಸಿ, ಸಂಘಟಿಸುವುದರ ಮೂಲಕ ಇಂದು ಯುವರಂಗ ಕಲಾವಿದರು ರಂಗಭೂಮಿಯನ್ನು , ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿದ್ದಾರೆ ಮತ್ತು ರಂಗಭೂಮಿಯನ್ನೇ ಬದುಕನ್ನಾಗಿಸಿಕೊಂಡಿದ್ದಾರೆ. ಆದರೆ ಈ ಕಲಾವಿದರನ್ನು ಸರ್ಕಾರಗಳು ಕಡೆಗಣಿಸುತ್ತಿರುವುದು ವಿಷಾದನೀಯ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

’ಸರ್ಕಾರದ ರಂಗಭೂಮಿಯಲ್ಲಿ ನಡೆಯುತ್ತಿರುವ ದೊಡ್ಡ ರೆಪರ್ಟರಿಗಳು ಎನಿಸಿಕೊಂಡಿರುವ ರಂಗಾಯಣಗಳಿಗೆ ಕಲಾವಿದರ ಆಯ್ಕೆ ಮಾಡುವಾಗ ಇದೇ 35 ವರ್ಷದ ಒಳಗಿರುವ ಯುವ ರಂಗ ಕಲಾವಿದರೇ ಬೇಕು ಎಂದು  ರಂಗಾಯಣಗಳಿಗೆ ದುಡಿಸಿಕೊಳ್ಳುವ ಸರ್ಕಾರ, ಕೋವಿಡ್ ಆರ್ಥಿಕ ನೆರವು ಪ್ಯಾಕೇಜ್‌ ತೆಗೆದುಕೊಳ್ಳಲು ಅರ್ಹರಲ್ಲ ಎನ್ನುತ್ತದೆ ಇದ್ಯಾವ ನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಯುವ ರಂಗಕಲಾವಿದರು ಬೀದಿಗಿಳಿಯುವ ಮುಂಚೆ ವಯಸ್ಸಿನ ಮಿತಿಯನ್ನು ಸಡಿಲಗೊಳಿಸಿ ಮತ್ತೆ ಆರ್ಥಿಕ ನೆರವನ್ನು 10,000 ರೂಪಾಯಿಗೆ ಏರಿಸಿ, 10 ವರ್ಷಗಳ ಕಲಾಸೇವೆಯನ್ನು 5 ವರ್ಷಕ್ಕೆ ಇಳಿಸಿ ಕಲಾವಿದರಿಗೆ ಗೌರವಧನವಾಗಿ ತಲುಪುವಂತೆ ಮಾಡಬೇಕು. ಆನ್ ಲೈನ್ ಮೂಲಕ ಅರ್ಜಿ ಹಾಕುವ ಕೊನೆಯ ದಿನಾಂಕವನ್ನು ಮುಂದೂಡಬೇಕು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲದವರಿಗೆ ಜಿಲ್ಲಾ ಕಛೇರಿಗಳಲ್ಲಿ ಇರುವ ಕಲಾವಿದರ ಮಾಹಿತಿ ಆಧರಿಸಿ ಅರ್ಜಿ ಹಾಕಿಸಿ ಎಲ್ಲಾ ಕಲಾವಿದರಿಗೆ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮಂಗಳವಾರವಷ್ಟೇ ಚಿತ್ರರಂಗದ 3,000 ಕಾರ್ಮಿಕರಿಗೆ ತಲಾ 5,000 ರೂಪಾಯಿ ನೀಡುವುದಾಗಿ ನಟ ಯಶ್ ಘೋಷಿಸಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...