Homeಕರ್ನಾಟಕರಂಗ ಕಲಾವಿದರಿಗೆ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ನಲ್ಲಿ ವಯಸ್ಸಿನ ತಾರತಮ್ಯ ಆರೋಪ

ರಂಗ ಕಲಾವಿದರಿಗೆ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ನಲ್ಲಿ ವಯಸ್ಸಿನ ತಾರತಮ್ಯ ಆರೋಪ

’ರಂಗಾಯಣಗಳಿಗೆ ಕಲಾವಿದರ ಆಯ್ಕೆ ಮಾಡುವಾಗ 35 ವರ್ಷದ ಒಳಗಿರುವ ಯುವ ರಂಗ ಕಲಾವಿದರೇ ಬೇಕು ಎಂದು ದುಡಿಸಿಕೊಳ್ಳುವ ಸರ್ಕಾರ, ಕೋವಿಡ್ ಆರ್ಥಿಕ ನೆರವು ಪ್ಯಾಕೇಜ್‌ಗೆ ಪರಿಗಣಿಸದಿರುವುದು ಅನ್ಯಾಯ’

- Advertisement -
- Advertisement -

ರಾಜ್ಯದಲ್ಲಿ ವಿಧಿಸಲಾಗಿರುವ ಕೊರೊನಾ ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ರಂಗ ಕಲಾವಿದರಿಗೆ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದು, ನೀಡುತ್ತಿರುವ ಅಲ್ಪ ನೆರವಿನಲ್ಲಿಯೂ ವಯಸ್ಸಿನ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋವಿಡ್ ಲಾಕ್‌ಡೌನ್‌ನಿಂದ ಸಂಕಷ್ಟ ಎದುರಿಸುತ್ತಿರುವ ಕೂಲಿ ಕಾರ್ಮಿಕರಿಗೆ, ಕ್ಷೌರಿಕರಿಗೆ, ಆಟೋ ಚಾಲಕರಿಗೆ ಹಾಗೂ ಕಲಾವಿದರಿಗೆ ಆರ್ಥಿಕ ನೆರವು ಪ್ಯಾಕೇಜ್‌ನ್ನು ಘೋಷಣೆ ಮಾಡಿದ್ದರು. ಕಲಾವಿದರಿಗೆ 3,000 ರೂಪಾಯಿ ಘೋಷಿಸಿದ್ದರು.

ಸರ್ಕಾರ ಘೋಷಿಸಿರುವ 3,000 ರೂಪಾಯಿಗಳನ್ನು ಪಡೆಯಲು ಕಲಾವಿದರು ಅರ್ಜಿ ಸಲ್ಲಿಸಲು ಪಡುವ ಪಡಿಪಾಟಲಿಗೆ ಅರ್ಧ ಖರ್ಚು ಆಗುತ್ತದೆ. ಸಾಕಷ್ಟು ಕಲಾವಿದರು ಸರ್ಕಾರ ಹಣವನ್ನು ತೆಗೆದುಕೊಳ್ಳಲು ಮುಜುಗರ ಇರುತ್ತದೆ‌ ಅಂಥ ಸಮಯದಲ್ಲಿ, ಕಲಾವಿದರು ಹಣ ಪಡೆಯಲು ಸರ್ಕಾರ ವಯಸ್ಸಿನ ತಾರತಮ್ಯ ಮಾಡಿ ಮತ್ತಷ್ಟು ಅವಮಾನ ಮಾಡುತ್ತಿದೆ ಎಂದು ಕಲಾವಿದ ಲಕ್ಷ್ಮಣ್ ಮಂಡಲಗೇರಾ ಆರೋಪಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು, ಅಕಾಡೆಮಿ ಅಧ್ಯಕ್ಷರು, ಸದಸ್ಯರುಗಳು ಮತ್ತು ಸರ್ಕಾರ ಎಲ್ಲರೂ ಸೇರಿ ಕಲಾವಿದರಿಗೆ ವಯಸ್ಸಿನ ತಾರತಮ್ಯವನ್ನು ಏರ್ಪಡಿಸಿ 35 ವಯಸ್ಸಿನ ಮೇಲ್ಪಟ್ಟವರು ಮಾತ್ರ ಅರ್ಜಿ ಹಾಕಬೇಕು, 35 ವರ್ಷದೊಳಗಿನವರಿಗೆ,  ಮಾಶಾಸನ ಪಡೆಯುವವರಿಗೆ ಹಾಗೂ ಧನಸಹಾಯ ಪಡೆಯುವ ಸಂಘ – ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಅಂತ ಪತ್ರಿಕೆ ವರದಿ ಮೂಲಕ ಘೋಷಿಸಿ ಅವಮಾನ ಮಾಡಿದ್ದಿರಾ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

ಅಕಾಡೆಮಿಗಳಿಗೆ, ಪ್ರಾಧಿಕಾರಗಳಿಗೆ, ಸಾಹಿತ್ಯ ಪರಿಷತ್ತುಗಳಿಗೆ, ಇಲಾಖೆಗಳಿಗೆ ಕಳೆದ ಎರಡು ಮೂರು ವರ್ಷಗಳಿಂದ ಕೊರೊನಾ ನೆಪ ಹೇಳಿ ಬಿಡುಗಡೆ ಆಗಬೇಕಾದ ಸುಮಾರು 200 ರಿಂದ 300 ಕೋಟಿ ರೂಪಾಯಿ ಹಣ ಎಲ್ಲಿ ಹೋಯಿತು..? ಎಂದು  ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ರಂಗಭೂಮಿಯನ್ನೇ ನಂಬಿ ತಮ್ಮ ಬದುಕನ್ನಾಗಿಸಿಕೊಂಡು ಅದನ್ನೇ ಜೀವನವಾಗಿ ಇಟ್ಟುಕೊಂಡು ರಂಗ ಚಟುವಟಿಕೆಗಳು ಇಲ್ಲದೇ ಮನೆ ಸೇರಿರುವ ಈ ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಸರ್ಕಾರ ಕಲಾವಿದರ ಸಹಾಯಕ್ಕೆ ನಿಲ್ಲದಿರುವಂತಹ ದುಸ್ಥಿತಿ ಈ ರಾಜ್ಯದಲ್ಲಿ ಇದೆ. ಘೋಷಿಸಿರುವ ಅಲ್ಪ ನೆರವನ್ನು ಪಡೆಯಲು ಸಹ ವಯಸ್ಸಿನ ಮಿತಿ ಇಟ್ಟಿರುವುದು ಏಕೆ ಎಂದಿದ್ದಾರೆ.

“ಇಡೀ ಕರ್ನಾಟಕದಲ್ಲಿ ರಂಗಭೂಮಿ ಕ್ರಿಯಾಶೀಲವಾಗಿ ಕೆಲಸ ಮಾಡಲು ಜೀವಂತವಾಗಿರುವುದಕ್ಕೆ 35 ವಯಸ್ಸಿನ ಒಳಗಿರುವ ಯುವ ರಂಗ ಕಲಾವಿದರು ಕಾರಣ. ಬೇಸಿಗೆ ಶಿಬಿರಗಳಲ್ಲಿ, ದೊಡ್ಡ ದೊಡ್ಡ ರೆಪರ್ಟರಿಗಳಲ್ಲಿ , ಸಣ್ಣ ಸಣ್ಣ ರಂಗತಂಡಗಳಲ್ಲಿ ಕ್ರಿಯಾಶೀಲವಾಗಿ ಹೊಸ ಹೊಸ ಯೋಚನೆಗಳೊಂದಿಗೆ ನಾಟಕಗಳನ್ನು ನಿರ್ದೇಶಿಸಿ ನಟಿಸಿ, ಸಂಘಟಿಸುವುದರ ಮೂಲಕ ಇಂದು ಯುವರಂಗ ಕಲಾವಿದರು ರಂಗಭೂಮಿಯನ್ನು , ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿದ್ದಾರೆ ಮತ್ತು ರಂಗಭೂಮಿಯನ್ನೇ ಬದುಕನ್ನಾಗಿಸಿಕೊಂಡಿದ್ದಾರೆ. ಆದರೆ ಈ ಕಲಾವಿದರನ್ನು ಸರ್ಕಾರಗಳು ಕಡೆಗಣಿಸುತ್ತಿರುವುದು ವಿಷಾದನೀಯ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

’ಸರ್ಕಾರದ ರಂಗಭೂಮಿಯಲ್ಲಿ ನಡೆಯುತ್ತಿರುವ ದೊಡ್ಡ ರೆಪರ್ಟರಿಗಳು ಎನಿಸಿಕೊಂಡಿರುವ ರಂಗಾಯಣಗಳಿಗೆ ಕಲಾವಿದರ ಆಯ್ಕೆ ಮಾಡುವಾಗ ಇದೇ 35 ವರ್ಷದ ಒಳಗಿರುವ ಯುವ ರಂಗ ಕಲಾವಿದರೇ ಬೇಕು ಎಂದು  ರಂಗಾಯಣಗಳಿಗೆ ದುಡಿಸಿಕೊಳ್ಳುವ ಸರ್ಕಾರ, ಕೋವಿಡ್ ಆರ್ಥಿಕ ನೆರವು ಪ್ಯಾಕೇಜ್‌ ತೆಗೆದುಕೊಳ್ಳಲು ಅರ್ಹರಲ್ಲ ಎನ್ನುತ್ತದೆ ಇದ್ಯಾವ ನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಯುವ ರಂಗಕಲಾವಿದರು ಬೀದಿಗಿಳಿಯುವ ಮುಂಚೆ ವಯಸ್ಸಿನ ಮಿತಿಯನ್ನು ಸಡಿಲಗೊಳಿಸಿ ಮತ್ತೆ ಆರ್ಥಿಕ ನೆರವನ್ನು 10,000 ರೂಪಾಯಿಗೆ ಏರಿಸಿ, 10 ವರ್ಷಗಳ ಕಲಾಸೇವೆಯನ್ನು 5 ವರ್ಷಕ್ಕೆ ಇಳಿಸಿ ಕಲಾವಿದರಿಗೆ ಗೌರವಧನವಾಗಿ ತಲುಪುವಂತೆ ಮಾಡಬೇಕು. ಆನ್ ಲೈನ್ ಮೂಲಕ ಅರ್ಜಿ ಹಾಕುವ ಕೊನೆಯ ದಿನಾಂಕವನ್ನು ಮುಂದೂಡಬೇಕು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲದವರಿಗೆ ಜಿಲ್ಲಾ ಕಛೇರಿಗಳಲ್ಲಿ ಇರುವ ಕಲಾವಿದರ ಮಾಹಿತಿ ಆಧರಿಸಿ ಅರ್ಜಿ ಹಾಕಿಸಿ ಎಲ್ಲಾ ಕಲಾವಿದರಿಗೆ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮಂಗಳವಾರವಷ್ಟೇ ಚಿತ್ರರಂಗದ 3,000 ಕಾರ್ಮಿಕರಿಗೆ ತಲಾ 5,000 ರೂಪಾಯಿ ನೀಡುವುದಾಗಿ ನಟ ಯಶ್ ಘೋಷಿಸಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...