Homeಚಳವಳಿತೀವ್ರಗೊಳ್ಳುತ್ತಿರುವ ರೈತರ ಆಕ್ರೋಶ: ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು

ತೀವ್ರಗೊಳ್ಳುತ್ತಿರುವ ರೈತರ ಆಕ್ರೋಶ: ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಮತ್ತು ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆಗೆ ದೇಶದಾದ್ಯಂತ ಇರುವ ಇನ್ನಷ್ಟು ರೈತರು ಸೇರಿಕೊಳ್ಳುತ್ತಿದ್ದಾರೆ. ಹಾಗಾಗಿ ದೆಹಲಿಯ ಗಡಿಯಲ್ಲಿ ರೈತ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತಿದೆ.

ಮಹಾರಾಷ್ಟ್ರದ ರೈತರು ಇಂದು ದೆಹಲಿಯ ಪ್ರತಿಭಟನೆಗೆ ಸೇರಿಕೊಳ್ಳಲು ಸಾಗರೋಪಾದಿಯಲ್ಲಿ ತೆರಳುತ್ತಿರುವ ವೀಡಿಯೋವನ್ನು ಈ ಕೆಳಗೆ ನೋಡಬಹುದು.

ಇದನ್ನೂ ಓದಿ:ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ಇದನ್ನೂ ಓದಿ:ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ಈ ಕುರಿತು ಫೇಸ್‌ಬುಕ್‌ನಲ್ಲಿ ಪತ್ರಿಕಾ ವರದಿಯೊಂದನ್ನು ಹಂಚಿಕೊಂಡಿರುವ ಚಿಂತಕರು ಮತ್ತು ಹೋರಾಟಗಾರರಾದ ಶ್ರೀಪಾದ್ ಭಟ್, “ಮಹಾರಾಷ್ಟ್ರದ ರೈತರು ಜೇಬಿನಲ್ಲಿ 100ರೂ.ಇಟ್ಟುಕೊಂಡು, ಸಾವಿರಾರು ಕಿ.ಮೀ. ಪ್ರಯಾಣಿಸಿ ದೆಹಲಿಗೆ ಬರುತ್ತಿದ್ದಾರೆ. ಸಂಘಿಗಳೇ ನಿಮಗೆ ನೆನಪಿದೆಯೇ? ಎರಡು ವರ್ಷಗಳ ಹಿಂದೆ ಇದೇ 35,000 ರೈತರು 700 ಕಿ.ಮೀ.ನ ‘ಲಾಂಗ್ ಮಾರ್ಚ್’ನ ಮೂಲಕ ಮುಂಬೈಗೆ ಮುತ್ತಿಗೆ ಹಾಕಿದ್ದರು. ನಿಮ್ಮ ವಟು ಫಡ್ನವೀಸ್‌ನ ಬೆವರಿಳಿಸಿದ್ದರು. ಈಗ ದೆಹಲಿಗೆ ಬರುತ್ತಿದ್ದಾರೆ. ಕಷ್ಟವಿದೆ ನಿಮಗೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

ಇನ್ನು ಪಶ್ಚಿಮ ಬಂಗಾಳದ ನಂದಿಗ್ರಾಮದಿಂದಲೂ ದೆಹಲಿಯ ಸಿಂಘು ಗಡಿಗೆ ಸಾವಿರಾರು ರೈತರು ಬರುತ್ತಿದ್ದಾರೆ. ಈ ವಾರಾಂತ್ಯದಲ್ಲಿ ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನಗಳಲ್ಲಿ ಸುಗ್ಗೀ ಕಾಲ ಮುಗಿಯಲಿದ್ದು, ದೊಡ್ಡ ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ ಎಂದು ಪ್ರತಿಧ್ವನಿ ವರದಿ ಮಾಡಿದೆ.

ರೈತರ ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಏನೆಲ್ಲಾ ಪ್ರಯತ್ನಪಟ್ಟರೂ ರೈತರನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಇದರ ನಡುವೆಯೇ ರೈತರ ಪ್ರತಿಭಟನೆ ಒಂದು ತಿಂಗಳನ್ನು ಪೂರೈಸಿದೆ.

ಡಿಸಂಬರ್ 29 ರಂದು ರೈತ ಮುಖಂಡರೊಂದಿಗೆ ಕೇಂದ್ರ ಸರ್ಕಾರವು ಮಾತುಕತೆ ನಡೆಸಲಿದ್ದು, ಇದು ನಿರ್ಣಾಯಕ ಸಭೆಯಾಗಲಿದೆ ಎಂದು ರೈತರು ಹೇಳಿದ್ದಾರೆ. ಜೊತೆಗೆ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎನ್ನುವ ನಿಲುವಿನಿಂದ ಹಿಂದೆ ಸರಿಯುವುದಿಲ್ಲ ಎಂದೂ ಹೇಳಿದ್ದಾರೆ.


ಇದನ್ನೂ ಓದಿ:ಮತಾಂತರ ನಿಷೇಧ ಕಾಯ್ದೆ: ಉತ್ತರಪ್ರದೇಶ ತೊರೆಯುತ್ತಿರುವ ಅಂತರ್‌ಧರ್ಮೀಯ ಸಂಗಾತಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....