Homeಕರ್ನಾಟಕ‘ಅಗ್ನಿ ಪಥ್’ ಯೋಜನೆ ಸೇನೆಗೆ ಅಪಾಯಕಾರಿ: ಕೊಡಗಿನ ವೀರ ಯೋಧರ ಆತಂಕ

‘ಅಗ್ನಿ ಪಥ್’ ಯೋಜನೆ ಸೇನೆಗೆ ಅಪಾಯಕಾರಿ: ಕೊಡಗಿನ ವೀರ ಯೋಧರ ಆತಂಕ

‘ಈ ಯೋಜನೆಯಿಂದಾಗಿ ಸೇನೆಯ ಸ್ಪಿರಿಟ್‌ಗೆ ಧಕ್ಕೆಯಾಗಬಹುದು’ ಎನ್ನುತ್ತಾರೆ ಕರ್ನಲ್‌ ಕೆ.ಸಿ.ಸುಬ್ಬಯ್ಯ... ‘ಚೆನ್ನಾಗಿದ್ದ ವ್ಯವಸ್ಥೆ ಹಾಳಾಗದಿರಲಿ” ಎನ್ನುತ್ತಾರೆ ಕರ್ನಲ್‌ ಸಿ.ಪಿ.ಮುತ್ತಣ್ಣ... (ಮುಂದೆ ಓದಿರಿ)

- Advertisement -
- Advertisement -

“ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಅಗ್ನಿಪಥ ಯೋಜನೆಯು ಸೇನೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ” ಎನ್ನುವುದು ಕೊಡಗಿನ ವೀರ ಯೋಧರ ಆತಂಕ.

ಸೈನಿಕ ನೇಮಕಾತಿಗೆ ಸಂಬಂಧಿಸಿದಂತೆ ‘ಅಗ್ನಿಪಥ’ ಎಂಬ ಹೊಸ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮೂವರು ಸೇನಾ ಮುಖ್ಯಸ್ಥರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಅಲ್ಪಾವಧಿಯ ರಕ್ಷಣಾ ನೇಮಕಾತಿ ಕುರಿತು ಮಾಹಿತಿ ನೀಡಿದ್ದಾರೆ. ಇದು ಸರ್ಕಾರದ ವತಿಯಿಂದ ಕೈಗೊಂಡ ಐತಿಹಾಸಿಕ ಕ್ರಮ ಎಂದು ಮಾಧ್ಯಮಗಳು ಬಣ್ಣಿಸುವ ವೇಳೆಗಾಗಲೇ ಈ ಯೋಜನೆಯನ್ನು ವಿರೋಧಿಸಿ ಲಕ್ಷಾಂತರ ಯುವಜನರು ಬೀದಿಗಿಳಿದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಇತರೆ ರಾಜ್ಯಗಳಲ್ಲಿ ಪ್ರತಿಭಟನೆಗಳನ್ನು ಹಿಂಸಾಚಾರಕ್ಕೆ ತಿರುಗಿವೆ. ಅಷ್ಟರಮಟ್ಟಿಗೆ ಯುವಜನರು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೇ ಕೊಡಗಿನ ವೀರ ಯೋಧರೂ ಈ ಯೋಜನೆಯ ಕುರಿತು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಕೊಡಗಿನ ಕರ್ನಲ್‌ ಕೆ.ಸಿ.ಸುಬ್ಬಯ್ಯ ಸೇನೆಯಲ್ಲಿ ಸುಮಾರು 28 ವರ್ಷ ಸೇವೆ ಸಲ್ಲಿಸಿದವರು. ಮೇಜರ್‌ ಆಗಿ ಯುನಿಟ್‌ ಮುನ್ನಡೆಸಿದವರು. ಮಾರಾಟವಾಗಿದ್ದ ಜನರಲ್‌ ತಿಮ್ಮಯ್ಯನವರ ಮನೆಯನ್ನು ಮರಳಿ ಪಡೆಯುವುದಕ್ಕಾಗಿ ಹೋರಾಡಿ ಬಳಿಕ ತಿಮ್ಮಯ್ಯ ಮ್ಯೂಸಿಯಂ ಮಾಡಿದವರು ಕೆ.ಸಿ.ಸುಬ್ಬಯ್ಯ. ಜೊತೆಗೆ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಫೋರಂ ರೂಪಿಸಿದ್ದಾರೆ. ಗೋಣಿಕೊಪ್ಪದಲ್ಲಿ ತಿಮ್ಮಯ್ಯ-ಕಾರ್ಯಪ್ಪ ಮೆಮೊರಿಯಲ್‌ ಸ್ಥಾಪನೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸೇನೆಯ ಕುರಿತು ಅಪಾರ ಪ್ರೀತಿಯನ್ನು ಹೊಂದಿರುವ ಇವರು, ‘ನಾನುಗೌರಿ.ಕಾಂ’ ಜೊತೆ ಮಾತನಾಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಇದನ್ನೂ ಓದಿರಿ: ಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

“ಅಗ್ನಿಪಥ್‌‌ನಲ್ಲಿ ಒಳ್ಳೆಯದು ಉಂಟು, ಕೆಟ್ಟದ್ದು ಉಂಟು. ರಕ್ಷಣಾ ಪಡೆ ಅತ್ಯಂತ ತಾರುಣ್ಯದಿಂದ ಕೂಡಿರುತ್ತದೆ ಎಂಬುದು ಒಳ್ಳೆಯ ವಿಚಾರ. ಆದರೆ ಈ ನಾಲ್ಕು ವರ್ಷಗಳಲ್ಲಿ ಆರು ತಿಂಗಳು ತರಬೇತಿಗೆ ಹೋಗುತ್ತದೆ. ಇನ್ನು ಮೂರುವರೆ ವರ್ಷವನ್ನು ಯೂನಿಟ್‌ನಲ್ಲಿ ಕಳೆಯುತ್ತಾನೆ. ಆದರೆ ಈ ಅಲ್ಪಾವಧಿಯಲ್ಲಿ ಹೊಂದಾಣಿಕೆ ಸಾಧ್ಯವಾಗುತ್ತದೆಯೇ ಎಂಬ ಸಂಶಯವಿದೆ. ಶೇ. 25ರಷ್ಟು ಜನರನ್ನು ಉಳಿಸಿಕೊಂಡು ಉಳಿದವರನ್ನು ವಾಪಸ್‌ ಕಳುಹಿಸುತ್ತಾರೆ. ಈ 25% ಜನರನ್ನು ಶಿಫಾರಸ್ಸು ಮಾಡುವವರು ಯಾರು? ಯುನಿಟ್‌‌ನ ಉಸ್ತುವಾರಿಗಳು ಮಾಡುತ್ತಾರೆ. ಕೆಲಸವನ್ನು ಉಳಿಸಿಕೊಳ್ಳಬೇಕೆಂದು ಈ ಯುವಕರು ಏನು ಬೇಕಾದರೂ ಮಾಡಬಹುದು. ಹೀಗಾಗಿ ಯುನಿಟ್‌ನೊಳಗಿನ ಸ್ಪಿರಿಟ್‌ ಇಲ್ಲವಾಗಿಬಿಡುತ್ತದೆ ಎಂಬ ಆತಂಕ ಕಾಡುತ್ತಿದೆ” ಎಂದರು.

“ಆರ್ಮಿಯಿಂದ ಹೊರಬಂದ ಮೇಲೆ ಬಿಎಸ್‌ಎಫ್‌, ಸಿಆರ್‌ಫಿಎಫ್‌‌, ಪೊಲೀಸ್ ಅಥವಾ ಇನ್ಯಾವುದೇ ಸರ್ಕಾರಿ ಉದ್ಯೋಗ ನೀಡುವ ಭರವಸೆಯನ್ನು ನೀಡಿದರೆ ಈ ಹುಡುಗರು ಉತ್ಸಾಹದಿಂದ ಸೇವೆ ಸಲ್ಲಿಸುತ್ತಾರೆ. ಈಗ ಒಂದೇ ಸಲಕ್ಕೆ 40 ಸಾವಿರ ಜನ ಸೇನೆಗೆ ಹೋಗಬಹುದು. ಆದರೆ ಎರಡನೇ ಅವಧಿಗೆ ಇಷ್ಟು ಯುವಕರು ಸಿಗುತ್ತಾರೆಯೇ ಎಂಬುದೇ ಅನುಮಾನ” ಎಂದು ತಿಳಿಸಿದರು.

“ಈ ನಾಲ್ಕು ವರ್ಷಗಳ ನಂತರ ತಾನು ಉಳಿಯಬೇಕೆಂದು ಇಲ್ಲದ ಸಲ್ಲದ ದೂರುಗಳನ್ನು ಹೇಳುತ್ತಾ, ಇಡೀ ಯೂನಿಟ್‌ ಹಾಳು ಮಾಡುವ ಸಾಧ್ಯತೆ ಇದೆ. ಈ ಅಗ್ನಿಪಥ್ ಯೋಜನೆ ಒಳ್ಳೆಯದೆಂದು ಕಾಣುತ್ತಿಲ್ಲ. ತರಾತುರಿಯಲ್ಲಿ ಮಾಡಿರುವ ಯೋಜನೆ ಇದು” ಎಂದು ಅಭಿಪ್ರಾಯಪಟ್ಟರು.

“ಆರ್ಮಿಯಿಂದ ಹೊರಗೆ ಬಂದ ಮೇಲೆ ಬೇರೆ ಕೆಲಸ ಕೊಡುವುದಾಗಿ ಈಗ ಹೇಳುತ್ತಿದ್ದಾರೆ. ಆದರೆ ನನ್ನ ಅನುಭವದಲ್ಲಿ ಹೇಳುವುದಾದರೆ ಯಾವುದೇ ಕೆಲಸವನ್ನೂ ಇವರು ಕೊಡುವುದಿಲ್ಲ. ಈ ಸಿಪಾಯಿಗಳು ಬಿಟ್ಟು ಬರುವಾಗ ಕನಿಷ್ಟ 32 ವರ್ಷಕ್ಕೆ ಕಾಲಿಟ್ಟಿರುತ್ತಾರೆ. ಇವರನ್ನು ಗನ್‌ ಮ್ಯಾನ್‌ ಅಲ್ಲದೆ ಬೇರೆ ಯಾವ ಕೆಲಸಕ್ಕೂ ತೆಗೆದುಕೊಂಡಿದ್ದು ನೋಡಿಲ್ಲ. 18 ವರ್ಷ ಸೇವೆ ಮಾಡಿ ಬಂದವರನ್ನೇ ತೆಗೆದುಕೊಳ್ಳಲಿಲ್ಲ ಅಂದ ಮೇಲೆ ನಾಲ್ಕು ವರ್ಷ ಕೆಲಸ ಮಾಡಿದವರನ್ನು ತೆಗೆದುಕೊಳ್ಳುತ್ತಾರೆಯೇ?” ಎಂದು ಪ್ರಶ್ನಿಸಿದರು.

“ಟ್ರೈನ್‌ ಆಗಿರುವ ಮಾನವ ಸಂಪನ್ಮೂಲ ಕೆಲಸವಿಲ್ಲದೆ ಕೂರುವುದೆಂದರೆ ಅದು ಈ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳು ಕಾಣುತ್ತಿವೆ. ಹಣ ಉಳಿಸಿಕೊಳ್ಳಬೇಕೆಂಬ ಧಾವಂತದಲ್ಲಿ ಇಡೀ ಸೈನ್ಯವನ್ನು ಕೆಡಿಸಿಬಿಡುತ್ತಾರೋ ಎಂಬ ಭಯ ಕಾಡುತ್ತಿದೆ. ಒಂದು ಯೂನಿಟ್‌ಗಾಗಿ ಸೈನಿಕ ಈವರೆಗೆ ಸಾಯಲು ಸಿದ್ಧನಿದ್ದ. ನಾನು ಯೂನಿಟ್‌ ಮುನ್ನೆಡೆಸುವಾಗ ನನ್ನೊಂದಿಗೆ ನಲವತ್ತು ಯೋಧರಿದ್ದರು. ಗುಂಡು ಹಾರಿಸಿದರೂ ಎದೆಕೊಡಲು ಎಲ್ಲರೂ ಮುಂದೆ ಬರುತ್ತಿದ್ದರು. ಕಾರಣ ಒಂದು ಯೂನಿಟ್‌ ಎಂದರೆ- ನಂಬಿಕೆ, ಪ್ರೀತಿಯ ಧ್ಯೋತಕವಾಗಿರುತ್ತದೆ. ಒಂದು ಕುಟುಂಬವೇ ಆಗಿರುತ್ತದೆ. ಆದರೆ ಈ ಹೊಸ ಯೋಜನೆಯಿಂದಾಗಿ ಅದೆಲ್ಲವೂ ಹಾಳಾಗುವ ಸಾಧ್ಯತೆ ಇದೆ” ಎಂದು ಎಚ್ಚರಿಸಿದರು.

“ಹಣ ಉಳಿಸುವ ಮಾತುಗಳನ್ನಾಡುತ್ತಿದ್ದಾರೆ. ಭದ್ರತಾ ವಿಚಾರದಲ್ಲಿ ಚೌಕಾಸಿ ಬೇಡವಿತ್ತು. ನಾಲ್ಕೈದು ಯುದ್ಧಗಳು ನಡೆದಿವೆ. ಗೆದ್ದಿದ್ದೇವೆ. ಯುದ್ಧದಲ್ಲಿ ಸೋತಿದ್ದರೆ ಸೈನ್ಯದ ಬೆಲೆ ಏನು, ಸೇನೆ ಹೇಗೆ ಕೆಲಸ ಮಾಡುತ್ತದೆ ಎಂಬುದು ಈ ರಾಜಕಾರಣಿಗಳಿಗೆ ಗೊತ್ತಾಗುತ್ತಿತ್ತು. ಸಂಸತ್ತಿನ ಮೇಲೆ ಅಟ್ಯಾಕ್‌ ಆಯಿತು. ಕಣ್ಣಿಗೆ ಬಂದಿದ್ದನ್ನು ರೆಪ್ಪೆ ತಡೆಯಿತು ಎಂಬಂತೆ ಎಲ್ಲರೂ ಬಚಾವಾದರು. ಯಾರಾದರೂ ಸಚಿವರಿಗೂ ಸಂಸದರಿಗೋ ಜೀವ ಹಾನಿಯಾಗಿದ್ದರೆ ಈ ಡಿಫೆನ್ಸ್‌ ಫೋರ್ಸ್‌‌ನ ಬೆಲೆ ಏನೆಂಬುದು ಗೊತ್ತಾಗುತ್ತಿತ್ತು. ರಕ್ಷಣಾ ಪಡೆಯೊಂದಿಗೆ ಸರ್ಕಾರ ಚೆಲ್ಲಾಟವಾಡಬಾರದು” ಎಂದು ಮನವಿ ಮಾಡಿದರು.

“ಪಿಂಚಣಿಯನ್ನು ನಿಲ್ಲಿಸಲು ಯೋಚಿಸಿದ್ದಾರೆ. ಒಬ್ಬಾತ ಎಂಎಲ್‌ಎ ಆಗಿಯೋ ಎಂಪಿಯಾಗಿಯೋ ಐದು ಬಾರಿ ಆಯ್ಕೆಯಾದರೆ ಐದು ಪಟ್ಟು ಹೆಚ್ಚು ಪಿಂಚಣಿ ಪಡೆಯುತ್ತಾನೆ. ಏನಿದರ ಅರ್ಥ? ಯೋಧರಿಗೆ ನೀಡಬೇಕಾದ ಪಿಂಚಣಿಯನ್ನು ಜನರ ಬೊಕ್ಕಸದಿಂದಲೇ ಕೊಡಬೇಕಲ್ಲ. ಆರ್ಮಿಯೊಂದಿಗೆ ಚೆಲ್ಲಾಟವಾಡುತ್ತಿರುವುದು ಏತಕ್ಕೆ?” ಎಂದು ಪ್ರಶ್ನಿಸಿದರು ಕರ್ನಲ್‌ ಕೆ.ಸಿ.ಸುಬ್ಬಯ್ಯ.

ಚೆನ್ನಾಗಿದ್ದ ವ್ಯವಸ್ಥೆಯನ್ನು ಹಾಳು ಮಾಡುವುದು ಬೇಕಿಲ್ಲ: ಸಿ.ಪಿ.ಮುತ್ತಣ್ಣ

24 ವರ್ಷ ದೇಶಕ್ಕಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದವರು ಕರ್ನಲ್‌‌ ಸಿ.ಪಿ.ಮುತ್ತಣ್ಣ. ‘ನಾನುಗೌರಿ.ಕಾಂ’ನಲ್ಲಿ ಮಾತನಾಡಿದ ಅವರು, “ವಿಶ್ವದಲ್ಲೇ ಅತ್ಯುತ್ತಮ ಸೇನೆ ಎಂಬ ಹೆಗ್ಗಳಿಕೆ ನಮ್ಮ ಆರ್ಮಿಗಿದೆ. ಎಲ್ಲವೂ ಚೆನ್ನಾಗಿರುವಾಗ ಅದಕ್ಕೆ ತೊಂದರೆ ಮಾಡುವ ಅವಶ್ಯಕತೆ ಇರಲಿಲ್ಲ. ಸರ್ಕಾರದ ಯೋಚನೆ ಸರಿ ಇರಬಹುದು. ಆದರೆ ಸರಿಯಾಗಿ ಆಲೋಚನೆ ಮಾಡಿದಂತಿಲ್ಲ” ಎಂದು ಅಭಿಪ್ರಾಯಪಟ್ಟರು.

“25% ಜನರನ್ನು ಉಳಿಸಿಕೊಂಡು ಉಳಿದವರನ್ನು ಕೆಲಸದಿಂದ ತೆಗೆಯಲು ಯೋಚಿಸಿದ್ದಾರೆ. ಹೀಗೆ ಮಾಡದೆ, ಸಿಆರ್‌ಪಿಎಫ್‌, ಬಿಎಸ್‌ಎಫ್‌, ಪೊಲೀಸ್‌, ಕೆಎಸ್‌ಆರ್‌ಪಿ- ಇವುಗಳಲ್ಲಿ ಸೈಡ್‌ ಸ್ಟೆಪ್‌ ಮಾಡಲು ಅವಕಾಶ ನೀಡಬಹುದು. ಇಲ್ಲವೆಂದರೆ ಪಾಪ, ಈ ಯುವಕರು ಎಲ್ಲಿಗೆ ಹೋಗಬೇಕು? ಕೊನೆಗೆ ಸೆಕ್ಯುರಿಟಿ ಆಗಬೇಕಷ್ಟೇ” ಎಂದು ತಿಳಿಸಿದರು.

“ಯುವಕರು ಪ್ರತಿಭಟನೆ ಮಾಡುತ್ತಿದ್ದಾರೆ. ಕೋವಿಡ್ ಬಿಕ್ಕಟ್ಟಿನಿಂದಾಗಿ ಎರಡು ವರ್ಷದಿಂದ ಆರ್ಮಿ ನೇಮಕಾತಿ ನಡೆದಿಲ್ಲ. ಕೆಲವರಿಗೆ ಪರೀಕ್ಷೆಗಳು ನಡೆದವು. ಆದರೆ ನೇಮಕಾತಿ ಪ್ರಕ್ರಿಯೆ ಅರ್ಧಕ್ಕೆ ನಿಂತು ಹೋಯಿತು. ಕೆಲವು ಯುವಕರು ವಯೋಮಿತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಯುವಕರು ಖಾಯಂ ಉದ್ಯೋಗದತ್ತ ನೋಡುತ್ತಿದ್ದಾರೆ. ಆದರೆ ಈ ರೀತಿಯ ಹೋರಾಟ ಅಗತ್ಯವಿಲ್ಲ. ಈ ಯುವಕರನ್ನು ರೌಡಿ ಶೀಟರ್‌ ಒಮ್ಮೆ ಗುರುತಿಸಿಬಿಟ್ಟರೆ ಮತ್ತೆಂದೂ ಯಾವುದೇ ಕೆಲಸ ಸಿಗುವುದಿಲ್ಲ. ಶಾಂತಿಯುತ ಹೋರಾಟಕ್ಕೆ ಮರಳಬೇಕು” ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿರಿ: Explainer: ಏನಿದು ಅಗ್ನಿಪಥ್ ಯೋಜನೆ? ಯಾಕಿಷ್ಟು ವಿರೋಧ?

“ಇದು ದೇಶದ ರಕ್ಷಣೆಯ ವಿಚಾರ. ಆರ್ಮಿ ಹೇಗಿರುತ್ತದೆ ಎಂಬುದು ರಾಜಕಾರಣಿಗಳಿಗೆ ಗೊತ್ತಿಲ್ಲ. ಈ ರಾಜಕಾರಣಿಗಳಾಗಲೀ, ಇವರ ತಂದೆಯವರೂ ಸೇನೆಯಲ್ಲಿ ಕೆಲಸ ಮಾಡಿರುವುದಿಲ್ಲ. ಈ ಅಗ್ನಿಪಥ್‌ ಯೋಜನೆ ಬೇಡವೆಂದು ಸೇನಾ ತಜ್ಞರೂ ಹೇಳುತ್ತಿದ್ದಾರೆ. ಇದೆಲ್ಲ ಈ ರಾಜಕಾರಣಿಗಳಿಗೆ ಅರ್ಥವಾಗುವುದಿಲ್ಲ” ಎಂದು ವಿಷಾದಿಸಿದರು.

“ಬೇರೆ ದೇಶದಲ್ಲಿಯೂ ಇದೇ ರೀತಿಯ ಯೋಜನೆಗಳಿವೆ ಎಂದು ಸಮರ್ಥಿಸುತ್ತಿದ್ದಾರೆ. ಬೇರೆ ದೇಶದಲ್ಲಿ ಮಾಡಿದರೆಂದೂ ನಾವು ಅದನ್ನೇ ಮಾಡಬೇಕಾ? ಈಗ ಇರುವ ವ್ಯವಸ್ಥೆಯೇ ಸದೃಢವಾಗಿದೆಯಲ್ಲ. ರಷ್ಯಾ- ಉಕ್ರೇನ್‌ ನಡುವೆ ಯುದ್ಧ ನಡೆಯುತ್ತಿದೆ. ರಷ್ಯಾ ಸೇನೆಯಲ್ಲಿ ಹೀಗೆಯೇ ಯುವಕರನ್ನು ಸೇರಿಸಿಕೊಳ್ಳಲಾಗಿದೆ. ಬಹುತೇಕರು ಆರು ತಿಂಗಳಲ್ಲಿ ಕೆಲಸ ಕಳೆದುಕೊಳ್ಳಲಿದ್ದಾರೆ. ಬಹುತೇಕ ಯೋಧರಿಗೆ ಈ ಕದನದ ಮೇಲೆ ಹೆಚ್ಚಿನ ಆಸಕ್ತಿ ಇಲ್ಲ” ಎಂದು ಉಲ್ಲೇಖಿಸಿದರು.

ಮಾಜಿ ಯೋಧರಾದ ಕೆ.ಜಿ.ಶಿವಂ ಮಾತನಾಡಿ, “ಸೇನೆಗೆ ಸೇರಿ ತರಬೇತಿ ಪಡೆದು ಹೊರಬಂದವರು ತಮ್ಮ ತರಬೇತಿಯನ್ನು ದುರುಪಯೋಗ ಮಾಡಿಕೊಳ್ಳಬಹುದು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...