Homeಕರ್ನಾಟಕ‘ಅಗ್ನಿ ಪಥ್’ ಯೋಜನೆ ಸೇನೆಗೆ ಅಪಾಯಕಾರಿ: ಕೊಡಗಿನ ವೀರ ಯೋಧರ ಆತಂಕ

‘ಅಗ್ನಿ ಪಥ್’ ಯೋಜನೆ ಸೇನೆಗೆ ಅಪಾಯಕಾರಿ: ಕೊಡಗಿನ ವೀರ ಯೋಧರ ಆತಂಕ

‘ಈ ಯೋಜನೆಯಿಂದಾಗಿ ಸೇನೆಯ ಸ್ಪಿರಿಟ್‌ಗೆ ಧಕ್ಕೆಯಾಗಬಹುದು’ ಎನ್ನುತ್ತಾರೆ ಕರ್ನಲ್‌ ಕೆ.ಸಿ.ಸುಬ್ಬಯ್ಯ... ‘ಚೆನ್ನಾಗಿದ್ದ ವ್ಯವಸ್ಥೆ ಹಾಳಾಗದಿರಲಿ” ಎನ್ನುತ್ತಾರೆ ಕರ್ನಲ್‌ ಸಿ.ಪಿ.ಮುತ್ತಣ್ಣ... (ಮುಂದೆ ಓದಿರಿ)

- Advertisement -
- Advertisement -

“ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಅಗ್ನಿಪಥ ಯೋಜನೆಯು ಸೇನೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ” ಎನ್ನುವುದು ಕೊಡಗಿನ ವೀರ ಯೋಧರ ಆತಂಕ.

ಸೈನಿಕ ನೇಮಕಾತಿಗೆ ಸಂಬಂಧಿಸಿದಂತೆ ‘ಅಗ್ನಿಪಥ’ ಎಂಬ ಹೊಸ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮೂವರು ಸೇನಾ ಮುಖ್ಯಸ್ಥರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಅಲ್ಪಾವಧಿಯ ರಕ್ಷಣಾ ನೇಮಕಾತಿ ಕುರಿತು ಮಾಹಿತಿ ನೀಡಿದ್ದಾರೆ. ಇದು ಸರ್ಕಾರದ ವತಿಯಿಂದ ಕೈಗೊಂಡ ಐತಿಹಾಸಿಕ ಕ್ರಮ ಎಂದು ಮಾಧ್ಯಮಗಳು ಬಣ್ಣಿಸುವ ವೇಳೆಗಾಗಲೇ ಈ ಯೋಜನೆಯನ್ನು ವಿರೋಧಿಸಿ ಲಕ್ಷಾಂತರ ಯುವಜನರು ಬೀದಿಗಿಳಿದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಇತರೆ ರಾಜ್ಯಗಳಲ್ಲಿ ಪ್ರತಿಭಟನೆಗಳನ್ನು ಹಿಂಸಾಚಾರಕ್ಕೆ ತಿರುಗಿವೆ. ಅಷ್ಟರಮಟ್ಟಿಗೆ ಯುವಜನರು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೇ ಕೊಡಗಿನ ವೀರ ಯೋಧರೂ ಈ ಯೋಜನೆಯ ಕುರಿತು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಕೊಡಗಿನ ಕರ್ನಲ್‌ ಕೆ.ಸಿ.ಸುಬ್ಬಯ್ಯ ಸೇನೆಯಲ್ಲಿ ಸುಮಾರು 28 ವರ್ಷ ಸೇವೆ ಸಲ್ಲಿಸಿದವರು. ಮೇಜರ್‌ ಆಗಿ ಯುನಿಟ್‌ ಮುನ್ನಡೆಸಿದವರು. ಮಾರಾಟವಾಗಿದ್ದ ಜನರಲ್‌ ತಿಮ್ಮಯ್ಯನವರ ಮನೆಯನ್ನು ಮರಳಿ ಪಡೆಯುವುದಕ್ಕಾಗಿ ಹೋರಾಡಿ ಬಳಿಕ ತಿಮ್ಮಯ್ಯ ಮ್ಯೂಸಿಯಂ ಮಾಡಿದವರು ಕೆ.ಸಿ.ಸುಬ್ಬಯ್ಯ. ಜೊತೆಗೆ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಫೋರಂ ರೂಪಿಸಿದ್ದಾರೆ. ಗೋಣಿಕೊಪ್ಪದಲ್ಲಿ ತಿಮ್ಮಯ್ಯ-ಕಾರ್ಯಪ್ಪ ಮೆಮೊರಿಯಲ್‌ ಸ್ಥಾಪನೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸೇನೆಯ ಕುರಿತು ಅಪಾರ ಪ್ರೀತಿಯನ್ನು ಹೊಂದಿರುವ ಇವರು, ‘ನಾನುಗೌರಿ.ಕಾಂ’ ಜೊತೆ ಮಾತನಾಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಇದನ್ನೂ ಓದಿರಿ: ಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ಸೇನಾ ಆಕಾಂಕ್ಷಿಗಳ ಬೃಹತ್‌‌ ಪ್ರತಿಭಟನೆ

“ಅಗ್ನಿಪಥ್‌‌ನಲ್ಲಿ ಒಳ್ಳೆಯದು ಉಂಟು, ಕೆಟ್ಟದ್ದು ಉಂಟು. ರಕ್ಷಣಾ ಪಡೆ ಅತ್ಯಂತ ತಾರುಣ್ಯದಿಂದ ಕೂಡಿರುತ್ತದೆ ಎಂಬುದು ಒಳ್ಳೆಯ ವಿಚಾರ. ಆದರೆ ಈ ನಾಲ್ಕು ವರ್ಷಗಳಲ್ಲಿ ಆರು ತಿಂಗಳು ತರಬೇತಿಗೆ ಹೋಗುತ್ತದೆ. ಇನ್ನು ಮೂರುವರೆ ವರ್ಷವನ್ನು ಯೂನಿಟ್‌ನಲ್ಲಿ ಕಳೆಯುತ್ತಾನೆ. ಆದರೆ ಈ ಅಲ್ಪಾವಧಿಯಲ್ಲಿ ಹೊಂದಾಣಿಕೆ ಸಾಧ್ಯವಾಗುತ್ತದೆಯೇ ಎಂಬ ಸಂಶಯವಿದೆ. ಶೇ. 25ರಷ್ಟು ಜನರನ್ನು ಉಳಿಸಿಕೊಂಡು ಉಳಿದವರನ್ನು ವಾಪಸ್‌ ಕಳುಹಿಸುತ್ತಾರೆ. ಈ 25% ಜನರನ್ನು ಶಿಫಾರಸ್ಸು ಮಾಡುವವರು ಯಾರು? ಯುನಿಟ್‌‌ನ ಉಸ್ತುವಾರಿಗಳು ಮಾಡುತ್ತಾರೆ. ಕೆಲಸವನ್ನು ಉಳಿಸಿಕೊಳ್ಳಬೇಕೆಂದು ಈ ಯುವಕರು ಏನು ಬೇಕಾದರೂ ಮಾಡಬಹುದು. ಹೀಗಾಗಿ ಯುನಿಟ್‌ನೊಳಗಿನ ಸ್ಪಿರಿಟ್‌ ಇಲ್ಲವಾಗಿಬಿಡುತ್ತದೆ ಎಂಬ ಆತಂಕ ಕಾಡುತ್ತಿದೆ” ಎಂದರು.

“ಆರ್ಮಿಯಿಂದ ಹೊರಬಂದ ಮೇಲೆ ಬಿಎಸ್‌ಎಫ್‌, ಸಿಆರ್‌ಫಿಎಫ್‌‌, ಪೊಲೀಸ್ ಅಥವಾ ಇನ್ಯಾವುದೇ ಸರ್ಕಾರಿ ಉದ್ಯೋಗ ನೀಡುವ ಭರವಸೆಯನ್ನು ನೀಡಿದರೆ ಈ ಹುಡುಗರು ಉತ್ಸಾಹದಿಂದ ಸೇವೆ ಸಲ್ಲಿಸುತ್ತಾರೆ. ಈಗ ಒಂದೇ ಸಲಕ್ಕೆ 40 ಸಾವಿರ ಜನ ಸೇನೆಗೆ ಹೋಗಬಹುದು. ಆದರೆ ಎರಡನೇ ಅವಧಿಗೆ ಇಷ್ಟು ಯುವಕರು ಸಿಗುತ್ತಾರೆಯೇ ಎಂಬುದೇ ಅನುಮಾನ” ಎಂದು ತಿಳಿಸಿದರು.

“ಈ ನಾಲ್ಕು ವರ್ಷಗಳ ನಂತರ ತಾನು ಉಳಿಯಬೇಕೆಂದು ಇಲ್ಲದ ಸಲ್ಲದ ದೂರುಗಳನ್ನು ಹೇಳುತ್ತಾ, ಇಡೀ ಯೂನಿಟ್‌ ಹಾಳು ಮಾಡುವ ಸಾಧ್ಯತೆ ಇದೆ. ಈ ಅಗ್ನಿಪಥ್ ಯೋಜನೆ ಒಳ್ಳೆಯದೆಂದು ಕಾಣುತ್ತಿಲ್ಲ. ತರಾತುರಿಯಲ್ಲಿ ಮಾಡಿರುವ ಯೋಜನೆ ಇದು” ಎಂದು ಅಭಿಪ್ರಾಯಪಟ್ಟರು.

“ಆರ್ಮಿಯಿಂದ ಹೊರಗೆ ಬಂದ ಮೇಲೆ ಬೇರೆ ಕೆಲಸ ಕೊಡುವುದಾಗಿ ಈಗ ಹೇಳುತ್ತಿದ್ದಾರೆ. ಆದರೆ ನನ್ನ ಅನುಭವದಲ್ಲಿ ಹೇಳುವುದಾದರೆ ಯಾವುದೇ ಕೆಲಸವನ್ನೂ ಇವರು ಕೊಡುವುದಿಲ್ಲ. ಈ ಸಿಪಾಯಿಗಳು ಬಿಟ್ಟು ಬರುವಾಗ ಕನಿಷ್ಟ 32 ವರ್ಷಕ್ಕೆ ಕಾಲಿಟ್ಟಿರುತ್ತಾರೆ. ಇವರನ್ನು ಗನ್‌ ಮ್ಯಾನ್‌ ಅಲ್ಲದೆ ಬೇರೆ ಯಾವ ಕೆಲಸಕ್ಕೂ ತೆಗೆದುಕೊಂಡಿದ್ದು ನೋಡಿಲ್ಲ. 18 ವರ್ಷ ಸೇವೆ ಮಾಡಿ ಬಂದವರನ್ನೇ ತೆಗೆದುಕೊಳ್ಳಲಿಲ್ಲ ಅಂದ ಮೇಲೆ ನಾಲ್ಕು ವರ್ಷ ಕೆಲಸ ಮಾಡಿದವರನ್ನು ತೆಗೆದುಕೊಳ್ಳುತ್ತಾರೆಯೇ?” ಎಂದು ಪ್ರಶ್ನಿಸಿದರು.

“ಟ್ರೈನ್‌ ಆಗಿರುವ ಮಾನವ ಸಂಪನ್ಮೂಲ ಕೆಲಸವಿಲ್ಲದೆ ಕೂರುವುದೆಂದರೆ ಅದು ಈ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳು ಕಾಣುತ್ತಿವೆ. ಹಣ ಉಳಿಸಿಕೊಳ್ಳಬೇಕೆಂಬ ಧಾವಂತದಲ್ಲಿ ಇಡೀ ಸೈನ್ಯವನ್ನು ಕೆಡಿಸಿಬಿಡುತ್ತಾರೋ ಎಂಬ ಭಯ ಕಾಡುತ್ತಿದೆ. ಒಂದು ಯೂನಿಟ್‌ಗಾಗಿ ಸೈನಿಕ ಈವರೆಗೆ ಸಾಯಲು ಸಿದ್ಧನಿದ್ದ. ನಾನು ಯೂನಿಟ್‌ ಮುನ್ನೆಡೆಸುವಾಗ ನನ್ನೊಂದಿಗೆ ನಲವತ್ತು ಯೋಧರಿದ್ದರು. ಗುಂಡು ಹಾರಿಸಿದರೂ ಎದೆಕೊಡಲು ಎಲ್ಲರೂ ಮುಂದೆ ಬರುತ್ತಿದ್ದರು. ಕಾರಣ ಒಂದು ಯೂನಿಟ್‌ ಎಂದರೆ- ನಂಬಿಕೆ, ಪ್ರೀತಿಯ ಧ್ಯೋತಕವಾಗಿರುತ್ತದೆ. ಒಂದು ಕುಟುಂಬವೇ ಆಗಿರುತ್ತದೆ. ಆದರೆ ಈ ಹೊಸ ಯೋಜನೆಯಿಂದಾಗಿ ಅದೆಲ್ಲವೂ ಹಾಳಾಗುವ ಸಾಧ್ಯತೆ ಇದೆ” ಎಂದು ಎಚ್ಚರಿಸಿದರು.

“ಹಣ ಉಳಿಸುವ ಮಾತುಗಳನ್ನಾಡುತ್ತಿದ್ದಾರೆ. ಭದ್ರತಾ ವಿಚಾರದಲ್ಲಿ ಚೌಕಾಸಿ ಬೇಡವಿತ್ತು. ನಾಲ್ಕೈದು ಯುದ್ಧಗಳು ನಡೆದಿವೆ. ಗೆದ್ದಿದ್ದೇವೆ. ಯುದ್ಧದಲ್ಲಿ ಸೋತಿದ್ದರೆ ಸೈನ್ಯದ ಬೆಲೆ ಏನು, ಸೇನೆ ಹೇಗೆ ಕೆಲಸ ಮಾಡುತ್ತದೆ ಎಂಬುದು ಈ ರಾಜಕಾರಣಿಗಳಿಗೆ ಗೊತ್ತಾಗುತ್ತಿತ್ತು. ಸಂಸತ್ತಿನ ಮೇಲೆ ಅಟ್ಯಾಕ್‌ ಆಯಿತು. ಕಣ್ಣಿಗೆ ಬಂದಿದ್ದನ್ನು ರೆಪ್ಪೆ ತಡೆಯಿತು ಎಂಬಂತೆ ಎಲ್ಲರೂ ಬಚಾವಾದರು. ಯಾರಾದರೂ ಸಚಿವರಿಗೂ ಸಂಸದರಿಗೋ ಜೀವ ಹಾನಿಯಾಗಿದ್ದರೆ ಈ ಡಿಫೆನ್ಸ್‌ ಫೋರ್ಸ್‌‌ನ ಬೆಲೆ ಏನೆಂಬುದು ಗೊತ್ತಾಗುತ್ತಿತ್ತು. ರಕ್ಷಣಾ ಪಡೆಯೊಂದಿಗೆ ಸರ್ಕಾರ ಚೆಲ್ಲಾಟವಾಡಬಾರದು” ಎಂದು ಮನವಿ ಮಾಡಿದರು.

“ಪಿಂಚಣಿಯನ್ನು ನಿಲ್ಲಿಸಲು ಯೋಚಿಸಿದ್ದಾರೆ. ಒಬ್ಬಾತ ಎಂಎಲ್‌ಎ ಆಗಿಯೋ ಎಂಪಿಯಾಗಿಯೋ ಐದು ಬಾರಿ ಆಯ್ಕೆಯಾದರೆ ಐದು ಪಟ್ಟು ಹೆಚ್ಚು ಪಿಂಚಣಿ ಪಡೆಯುತ್ತಾನೆ. ಏನಿದರ ಅರ್ಥ? ಯೋಧರಿಗೆ ನೀಡಬೇಕಾದ ಪಿಂಚಣಿಯನ್ನು ಜನರ ಬೊಕ್ಕಸದಿಂದಲೇ ಕೊಡಬೇಕಲ್ಲ. ಆರ್ಮಿಯೊಂದಿಗೆ ಚೆಲ್ಲಾಟವಾಡುತ್ತಿರುವುದು ಏತಕ್ಕೆ?” ಎಂದು ಪ್ರಶ್ನಿಸಿದರು ಕರ್ನಲ್‌ ಕೆ.ಸಿ.ಸುಬ್ಬಯ್ಯ.

ಚೆನ್ನಾಗಿದ್ದ ವ್ಯವಸ್ಥೆಯನ್ನು ಹಾಳು ಮಾಡುವುದು ಬೇಕಿಲ್ಲ: ಸಿ.ಪಿ.ಮುತ್ತಣ್ಣ

24 ವರ್ಷ ದೇಶಕ್ಕಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದವರು ಕರ್ನಲ್‌‌ ಸಿ.ಪಿ.ಮುತ್ತಣ್ಣ. ‘ನಾನುಗೌರಿ.ಕಾಂ’ನಲ್ಲಿ ಮಾತನಾಡಿದ ಅವರು, “ವಿಶ್ವದಲ್ಲೇ ಅತ್ಯುತ್ತಮ ಸೇನೆ ಎಂಬ ಹೆಗ್ಗಳಿಕೆ ನಮ್ಮ ಆರ್ಮಿಗಿದೆ. ಎಲ್ಲವೂ ಚೆನ್ನಾಗಿರುವಾಗ ಅದಕ್ಕೆ ತೊಂದರೆ ಮಾಡುವ ಅವಶ್ಯಕತೆ ಇರಲಿಲ್ಲ. ಸರ್ಕಾರದ ಯೋಚನೆ ಸರಿ ಇರಬಹುದು. ಆದರೆ ಸರಿಯಾಗಿ ಆಲೋಚನೆ ಮಾಡಿದಂತಿಲ್ಲ” ಎಂದು ಅಭಿಪ್ರಾಯಪಟ್ಟರು.

“25% ಜನರನ್ನು ಉಳಿಸಿಕೊಂಡು ಉಳಿದವರನ್ನು ಕೆಲಸದಿಂದ ತೆಗೆಯಲು ಯೋಚಿಸಿದ್ದಾರೆ. ಹೀಗೆ ಮಾಡದೆ, ಸಿಆರ್‌ಪಿಎಫ್‌, ಬಿಎಸ್‌ಎಫ್‌, ಪೊಲೀಸ್‌, ಕೆಎಸ್‌ಆರ್‌ಪಿ- ಇವುಗಳಲ್ಲಿ ಸೈಡ್‌ ಸ್ಟೆಪ್‌ ಮಾಡಲು ಅವಕಾಶ ನೀಡಬಹುದು. ಇಲ್ಲವೆಂದರೆ ಪಾಪ, ಈ ಯುವಕರು ಎಲ್ಲಿಗೆ ಹೋಗಬೇಕು? ಕೊನೆಗೆ ಸೆಕ್ಯುರಿಟಿ ಆಗಬೇಕಷ್ಟೇ” ಎಂದು ತಿಳಿಸಿದರು.

“ಯುವಕರು ಪ್ರತಿಭಟನೆ ಮಾಡುತ್ತಿದ್ದಾರೆ. ಕೋವಿಡ್ ಬಿಕ್ಕಟ್ಟಿನಿಂದಾಗಿ ಎರಡು ವರ್ಷದಿಂದ ಆರ್ಮಿ ನೇಮಕಾತಿ ನಡೆದಿಲ್ಲ. ಕೆಲವರಿಗೆ ಪರೀಕ್ಷೆಗಳು ನಡೆದವು. ಆದರೆ ನೇಮಕಾತಿ ಪ್ರಕ್ರಿಯೆ ಅರ್ಧಕ್ಕೆ ನಿಂತು ಹೋಯಿತು. ಕೆಲವು ಯುವಕರು ವಯೋಮಿತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಯುವಕರು ಖಾಯಂ ಉದ್ಯೋಗದತ್ತ ನೋಡುತ್ತಿದ್ದಾರೆ. ಆದರೆ ಈ ರೀತಿಯ ಹೋರಾಟ ಅಗತ್ಯವಿಲ್ಲ. ಈ ಯುವಕರನ್ನು ರೌಡಿ ಶೀಟರ್‌ ಒಮ್ಮೆ ಗುರುತಿಸಿಬಿಟ್ಟರೆ ಮತ್ತೆಂದೂ ಯಾವುದೇ ಕೆಲಸ ಸಿಗುವುದಿಲ್ಲ. ಶಾಂತಿಯುತ ಹೋರಾಟಕ್ಕೆ ಮರಳಬೇಕು” ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿರಿ: Explainer: ಏನಿದು ಅಗ್ನಿಪಥ್ ಯೋಜನೆ? ಯಾಕಿಷ್ಟು ವಿರೋಧ?

“ಇದು ದೇಶದ ರಕ್ಷಣೆಯ ವಿಚಾರ. ಆರ್ಮಿ ಹೇಗಿರುತ್ತದೆ ಎಂಬುದು ರಾಜಕಾರಣಿಗಳಿಗೆ ಗೊತ್ತಿಲ್ಲ. ಈ ರಾಜಕಾರಣಿಗಳಾಗಲೀ, ಇವರ ತಂದೆಯವರೂ ಸೇನೆಯಲ್ಲಿ ಕೆಲಸ ಮಾಡಿರುವುದಿಲ್ಲ. ಈ ಅಗ್ನಿಪಥ್‌ ಯೋಜನೆ ಬೇಡವೆಂದು ಸೇನಾ ತಜ್ಞರೂ ಹೇಳುತ್ತಿದ್ದಾರೆ. ಇದೆಲ್ಲ ಈ ರಾಜಕಾರಣಿಗಳಿಗೆ ಅರ್ಥವಾಗುವುದಿಲ್ಲ” ಎಂದು ವಿಷಾದಿಸಿದರು.

“ಬೇರೆ ದೇಶದಲ್ಲಿಯೂ ಇದೇ ರೀತಿಯ ಯೋಜನೆಗಳಿವೆ ಎಂದು ಸಮರ್ಥಿಸುತ್ತಿದ್ದಾರೆ. ಬೇರೆ ದೇಶದಲ್ಲಿ ಮಾಡಿದರೆಂದೂ ನಾವು ಅದನ್ನೇ ಮಾಡಬೇಕಾ? ಈಗ ಇರುವ ವ್ಯವಸ್ಥೆಯೇ ಸದೃಢವಾಗಿದೆಯಲ್ಲ. ರಷ್ಯಾ- ಉಕ್ರೇನ್‌ ನಡುವೆ ಯುದ್ಧ ನಡೆಯುತ್ತಿದೆ. ರಷ್ಯಾ ಸೇನೆಯಲ್ಲಿ ಹೀಗೆಯೇ ಯುವಕರನ್ನು ಸೇರಿಸಿಕೊಳ್ಳಲಾಗಿದೆ. ಬಹುತೇಕರು ಆರು ತಿಂಗಳಲ್ಲಿ ಕೆಲಸ ಕಳೆದುಕೊಳ್ಳಲಿದ್ದಾರೆ. ಬಹುತೇಕ ಯೋಧರಿಗೆ ಈ ಕದನದ ಮೇಲೆ ಹೆಚ್ಚಿನ ಆಸಕ್ತಿ ಇಲ್ಲ” ಎಂದು ಉಲ್ಲೇಖಿಸಿದರು.

ಮಾಜಿ ಯೋಧರಾದ ಕೆ.ಜಿ.ಶಿವಂ ಮಾತನಾಡಿ, “ಸೇನೆಗೆ ಸೇರಿ ತರಬೇತಿ ಪಡೆದು ಹೊರಬಂದವರು ತಮ್ಮ ತರಬೇತಿಯನ್ನು ದುರುಪಯೋಗ ಮಾಡಿಕೊಳ್ಳಬಹುದು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...