Homeಮುಖಪುಟಅಗ್ನಿಪಥ ಯೋಜನೆ : ಜೂ.24 ರಂದು ರೈತ ಸಂಘಟನೆಯಿಂದ ದೇಶಾದ್ಯಂತ ಪ್ರತಿಭಟನಾ ದಿನ

ಅಗ್ನಿಪಥ ಯೋಜನೆ : ಜೂ.24 ರಂದು ರೈತ ಸಂಘಟನೆಯಿಂದ ದೇಶಾದ್ಯಂತ ಪ್ರತಿಭಟನಾ ದಿನ

- Advertisement -
- Advertisement -

ಸಶಸ್ತ್ರ ಪಡೆಗಳ ನೇಮಕಾತಿಯ ಹೊಸ ಅಗ್ನಿಪಥ ಯೋಜನೆ ವಿರುದ್ಧ ಯುವಜನತೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನೆಗೆ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಬೆಂಬಲವನ್ನು ಘೋಷಿಸಿದೆ.

ಅಗ್ನಿಪಥ ವಿರುದ್ಧದ ಪ್ರತಿಭಟನೆಯನ್ನು ಶಾಂತಿಯುತವಾಗಿಡಲು ಮನವಿ ಮಾಡಿದ ಸಂಯುಕ್ತ ಕಿಸಾನ್ ಮೋರ್ಚಾವು ಈ ಯೋಜನೆಯನ್ನು ಸೇನಾ ವಿರೋಧಿ, ರೈತ ವಿರೋಧಿ ಮತ್ತು ದೇಶ ವಿರೋಧಿ ಎಂದು ಆರೋಪಿಸಿದೆ.

“ಜೈ ಜವಾನ್ ಜೈ ಕಿಸಾನ್” ಘೋಷಣೆಯ ಸ್ಪೂರ್ತಿಯನ್ನು ನಾಶಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ, ಈ ಹೋರಾಟದಲ್ಲಿ ಸೈನಿಕರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುವುದು ರೈತ ಚಳವಳಿಯ ಕರ್ತವ್ಯವಾಗಿದೆ. ಅದರಂತೆಯೇ ಸಂಯುಕ್ತ ಕಿಸಾನ್ ಮೋರ್ಚಾ ಈ ಶುಕ್ರವಾರ (ಜೂನ್ 24) ರಂದು ದೇಶಾದ್ಯಂತ ಪ್ರತಿಭಟನಾ ದಿನವನ್ನು ಆಚರಿಸಲಿದೆ ಎಂದು ಸಂಘಟನೆ ತಿಳಿಸಿದೆ. ಈ ನಿರ್ಧಾರವನ್ನು ಕರ್ನಾಲ್ (ಹರಿಯಾಣ) ನಲ್ಲಿ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ 7 ಸದಸ್ಯರ ಸಮನ್ವಯ ಸಮಿತಿ ತೆಗೆದುಕೊಂಡಿದೆ.

ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಈ ಅಗ್ನಿಪಥ ಯೋಜನೆಯು ದೇಶದ ಭವಿಷ್ಯದ ಜೊತೆ ಆಟವಾಡುತ್ತಿದೆ ಎಂದು ಆರೋಪಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ಇದು ರಾಷ್ಟ್ರೀಯ ಭದ್ರತೆ ಮತ್ತು ನಿರುದ್ಯೋಗಿ ಯುವಕರ ಕನಸುಗಳೊಂದಿಗೆ ಮಾತ್ರವಲ್ಲದೆ ದೇಶದ ರೈತ ಕುಟುಂಬಗಳೊಂದಿಗೆ ಆಟವಾಡುತ್ತಿದೆ ಎಂದು ಹೇಳಿದೆ. ಈ ದೇಶದ ಸೈನಿಕ ಸಮವಸ್ತ್ರ ಧರಿಸಿರುವ ರೈತ. ಬಹುತೇಕ ಸೈನಿಕರು ರೈತ ಕುಟುಂಬದವರು. ಸೇನಾ ಉದ್ಯೋಗವು ಲಕ್ಷಾಂತರ ರೈತ ಕುಟುಂಬಗಳ ಗೌರವ ಮತ್ತು ಆರ್ಥಿಕ ಶಕ್ತಿಯೊಂದಿಗೆ ಸಂಬಂಧ ಹೊಂದಿದೆ. “ಒಂದು ಶ್ರೇಣಿ ಒಂದು ಪಿಂಚಣಿ” ಎಂಬ ಭರವಸೆಯೊಂದಿಗೆ ಮಾಜಿ ಸೈನಿಕರನ್ನು ಒಟ್ಟುಗೂಡಿಸಿ ವಿಜಯೋತ್ಸವದ ಅಭಿಯಾನವನ್ನು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಈಗ “ನೋ ರ್‍ಯಾಂಕ್  ನೋ ಪೆನ್ಷನ್” ಎಂಬ ಈ ಯೋಜನೆಗೆ ಚಾಲನೆ ನೀಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ತಿಳಿಸಿದೆ.

ಜೂನ್ 24 ಶುಕ್ರವಾರದಂದು ಯೋಜನೆಯ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನಾ ದಿನವನ್ನು ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದೆ. ಅಂದು “ಜೈ ಜವಾನ್ ಜೈ ಕಿಸಾನ್” ಘೋಷಣೆಯೊಂದಿಗೆ ಎಲ್ಲಾ ಜಿಲ್ಲೆ, ತಾಲೂಕು ಪ್ರಧಾನ ಕಚೇರಿಗಳಲ್ಲಿ ಶಾಂತಿಯುತ ಪ್ರತಿಭಟನೆಯನ್ನು ನಡೆಸಿ ನಂತರ ಭಾರತದ ರಾಷ್ಟ್ರಪತಿ, ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಗುವುದು. ಜೊತೆಗೆ ಕೇಂದ್ರ ಸರ್ಕಾರದ ಪ್ರತಿಕೃತಿಯನ್ನು ಸುಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಯೋಜನೆಯನ್ನು ವಿರೋಧಿಸುವ ಎಲ್ಲಾ ಯುವಕರು ಈ ಶಾಂತಿಯುತ ಪ್ರತಿಭಟನೆಯ ಘನತೆಯನ್ನು ಗೌರವಿಸುವ ಮೂಲಕ ಈ ಪ್ರತಿಭಟನಾ ದಿನದಲ್ಲಿ ಪಾಲ್ಗೊಳ್ಳಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಮನವಿ ಮಾಡಿದೆ. ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ದೇಶದ ಎಲ್ಲಾ ಸಮೂಹ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದೆ.


ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Farmers associations sd not interfear this matter against defense decisions..
    Farmers associations leaders will loose their publicity and ethics for standing against good rules .
    Farmers leaders decisions are not all farmers decisions.
    It’s for their own welfare..
    Anti national teams try to utilize farmers card blindly..
    Protest sd hv sm honest point of damages against farmers. not any groups…

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...