Homeಮುಖಪುಟಅಗ್ನಿಪಥ ಯೋಜನೆ : ಜೂ.24 ರಂದು ರೈತ ಸಂಘಟನೆಯಿಂದ ದೇಶಾದ್ಯಂತ ಪ್ರತಿಭಟನಾ ದಿನ

ಅಗ್ನಿಪಥ ಯೋಜನೆ : ಜೂ.24 ರಂದು ರೈತ ಸಂಘಟನೆಯಿಂದ ದೇಶಾದ್ಯಂತ ಪ್ರತಿಭಟನಾ ದಿನ

- Advertisement -
- Advertisement -

ಸಶಸ್ತ್ರ ಪಡೆಗಳ ನೇಮಕಾತಿಯ ಹೊಸ ಅಗ್ನಿಪಥ ಯೋಜನೆ ವಿರುದ್ಧ ಯುವಜನತೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನೆಗೆ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಬೆಂಬಲವನ್ನು ಘೋಷಿಸಿದೆ.

ಅಗ್ನಿಪಥ ವಿರುದ್ಧದ ಪ್ರತಿಭಟನೆಯನ್ನು ಶಾಂತಿಯುತವಾಗಿಡಲು ಮನವಿ ಮಾಡಿದ ಸಂಯುಕ್ತ ಕಿಸಾನ್ ಮೋರ್ಚಾವು ಈ ಯೋಜನೆಯನ್ನು ಸೇನಾ ವಿರೋಧಿ, ರೈತ ವಿರೋಧಿ ಮತ್ತು ದೇಶ ವಿರೋಧಿ ಎಂದು ಆರೋಪಿಸಿದೆ.

“ಜೈ ಜವಾನ್ ಜೈ ಕಿಸಾನ್” ಘೋಷಣೆಯ ಸ್ಪೂರ್ತಿಯನ್ನು ನಾಶಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ, ಈ ಹೋರಾಟದಲ್ಲಿ ಸೈನಿಕರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುವುದು ರೈತ ಚಳವಳಿಯ ಕರ್ತವ್ಯವಾಗಿದೆ. ಅದರಂತೆಯೇ ಸಂಯುಕ್ತ ಕಿಸಾನ್ ಮೋರ್ಚಾ ಈ ಶುಕ್ರವಾರ (ಜೂನ್ 24) ರಂದು ದೇಶಾದ್ಯಂತ ಪ್ರತಿಭಟನಾ ದಿನವನ್ನು ಆಚರಿಸಲಿದೆ ಎಂದು ಸಂಘಟನೆ ತಿಳಿಸಿದೆ. ಈ ನಿರ್ಧಾರವನ್ನು ಕರ್ನಾಲ್ (ಹರಿಯಾಣ) ನಲ್ಲಿ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ 7 ಸದಸ್ಯರ ಸಮನ್ವಯ ಸಮಿತಿ ತೆಗೆದುಕೊಂಡಿದೆ.

ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಈ ಅಗ್ನಿಪಥ ಯೋಜನೆಯು ದೇಶದ ಭವಿಷ್ಯದ ಜೊತೆ ಆಟವಾಡುತ್ತಿದೆ ಎಂದು ಆರೋಪಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ಇದು ರಾಷ್ಟ್ರೀಯ ಭದ್ರತೆ ಮತ್ತು ನಿರುದ್ಯೋಗಿ ಯುವಕರ ಕನಸುಗಳೊಂದಿಗೆ ಮಾತ್ರವಲ್ಲದೆ ದೇಶದ ರೈತ ಕುಟುಂಬಗಳೊಂದಿಗೆ ಆಟವಾಡುತ್ತಿದೆ ಎಂದು ಹೇಳಿದೆ. ಈ ದೇಶದ ಸೈನಿಕ ಸಮವಸ್ತ್ರ ಧರಿಸಿರುವ ರೈತ. ಬಹುತೇಕ ಸೈನಿಕರು ರೈತ ಕುಟುಂಬದವರು. ಸೇನಾ ಉದ್ಯೋಗವು ಲಕ್ಷಾಂತರ ರೈತ ಕುಟುಂಬಗಳ ಗೌರವ ಮತ್ತು ಆರ್ಥಿಕ ಶಕ್ತಿಯೊಂದಿಗೆ ಸಂಬಂಧ ಹೊಂದಿದೆ. “ಒಂದು ಶ್ರೇಣಿ ಒಂದು ಪಿಂಚಣಿ” ಎಂಬ ಭರವಸೆಯೊಂದಿಗೆ ಮಾಜಿ ಸೈನಿಕರನ್ನು ಒಟ್ಟುಗೂಡಿಸಿ ವಿಜಯೋತ್ಸವದ ಅಭಿಯಾನವನ್ನು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಈಗ “ನೋ ರ್‍ಯಾಂಕ್  ನೋ ಪೆನ್ಷನ್” ಎಂಬ ಈ ಯೋಜನೆಗೆ ಚಾಲನೆ ನೀಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ತಿಳಿಸಿದೆ.

ಜೂನ್ 24 ಶುಕ್ರವಾರದಂದು ಯೋಜನೆಯ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನಾ ದಿನವನ್ನು ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದೆ. ಅಂದು “ಜೈ ಜವಾನ್ ಜೈ ಕಿಸಾನ್” ಘೋಷಣೆಯೊಂದಿಗೆ ಎಲ್ಲಾ ಜಿಲ್ಲೆ, ತಾಲೂಕು ಪ್ರಧಾನ ಕಚೇರಿಗಳಲ್ಲಿ ಶಾಂತಿಯುತ ಪ್ರತಿಭಟನೆಯನ್ನು ನಡೆಸಿ ನಂತರ ಭಾರತದ ರಾಷ್ಟ್ರಪತಿ, ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಗುವುದು. ಜೊತೆಗೆ ಕೇಂದ್ರ ಸರ್ಕಾರದ ಪ್ರತಿಕೃತಿಯನ್ನು ಸುಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಯೋಜನೆಯನ್ನು ವಿರೋಧಿಸುವ ಎಲ್ಲಾ ಯುವಕರು ಈ ಶಾಂತಿಯುತ ಪ್ರತಿಭಟನೆಯ ಘನತೆಯನ್ನು ಗೌರವಿಸುವ ಮೂಲಕ ಈ ಪ್ರತಿಭಟನಾ ದಿನದಲ್ಲಿ ಪಾಲ್ಗೊಳ್ಳಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಮನವಿ ಮಾಡಿದೆ. ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ದೇಶದ ಎಲ್ಲಾ ಸಮೂಹ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದೆ.


ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Farmers associations sd not interfear this matter against defense decisions..
    Farmers associations leaders will loose their publicity and ethics for standing against good rules .
    Farmers leaders decisions are not all farmers decisions.
    It’s for their own welfare..
    Anti national teams try to utilize farmers card blindly..
    Protest sd hv sm honest point of damages against farmers. not any groups…

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...