Homeಮುಖಪುಟಅಗ್ನಿಪಥ ಯೋಜನೆ : ಜೂ.24 ರಂದು ರೈತ ಸಂಘಟನೆಯಿಂದ ದೇಶಾದ್ಯಂತ ಪ್ರತಿಭಟನಾ ದಿನ

ಅಗ್ನಿಪಥ ಯೋಜನೆ : ಜೂ.24 ರಂದು ರೈತ ಸಂಘಟನೆಯಿಂದ ದೇಶಾದ್ಯಂತ ಪ್ರತಿಭಟನಾ ದಿನ

- Advertisement -
- Advertisement -

ಸಶಸ್ತ್ರ ಪಡೆಗಳ ನೇಮಕಾತಿಯ ಹೊಸ ಅಗ್ನಿಪಥ ಯೋಜನೆ ವಿರುದ್ಧ ಯುವಜನತೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನೆಗೆ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಬೆಂಬಲವನ್ನು ಘೋಷಿಸಿದೆ.

ಅಗ್ನಿಪಥ ವಿರುದ್ಧದ ಪ್ರತಿಭಟನೆಯನ್ನು ಶಾಂತಿಯುತವಾಗಿಡಲು ಮನವಿ ಮಾಡಿದ ಸಂಯುಕ್ತ ಕಿಸಾನ್ ಮೋರ್ಚಾವು ಈ ಯೋಜನೆಯನ್ನು ಸೇನಾ ವಿರೋಧಿ, ರೈತ ವಿರೋಧಿ ಮತ್ತು ದೇಶ ವಿರೋಧಿ ಎಂದು ಆರೋಪಿಸಿದೆ.

“ಜೈ ಜವಾನ್ ಜೈ ಕಿಸಾನ್” ಘೋಷಣೆಯ ಸ್ಪೂರ್ತಿಯನ್ನು ನಾಶಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ, ಈ ಹೋರಾಟದಲ್ಲಿ ಸೈನಿಕರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುವುದು ರೈತ ಚಳವಳಿಯ ಕರ್ತವ್ಯವಾಗಿದೆ. ಅದರಂತೆಯೇ ಸಂಯುಕ್ತ ಕಿಸಾನ್ ಮೋರ್ಚಾ ಈ ಶುಕ್ರವಾರ (ಜೂನ್ 24) ರಂದು ದೇಶಾದ್ಯಂತ ಪ್ರತಿಭಟನಾ ದಿನವನ್ನು ಆಚರಿಸಲಿದೆ ಎಂದು ಸಂಘಟನೆ ತಿಳಿಸಿದೆ. ಈ ನಿರ್ಧಾರವನ್ನು ಕರ್ನಾಲ್ (ಹರಿಯಾಣ) ನಲ್ಲಿ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ 7 ಸದಸ್ಯರ ಸಮನ್ವಯ ಸಮಿತಿ ತೆಗೆದುಕೊಂಡಿದೆ.

ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಈ ಅಗ್ನಿಪಥ ಯೋಜನೆಯು ದೇಶದ ಭವಿಷ್ಯದ ಜೊತೆ ಆಟವಾಡುತ್ತಿದೆ ಎಂದು ಆರೋಪಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ಇದು ರಾಷ್ಟ್ರೀಯ ಭದ್ರತೆ ಮತ್ತು ನಿರುದ್ಯೋಗಿ ಯುವಕರ ಕನಸುಗಳೊಂದಿಗೆ ಮಾತ್ರವಲ್ಲದೆ ದೇಶದ ರೈತ ಕುಟುಂಬಗಳೊಂದಿಗೆ ಆಟವಾಡುತ್ತಿದೆ ಎಂದು ಹೇಳಿದೆ. ಈ ದೇಶದ ಸೈನಿಕ ಸಮವಸ್ತ್ರ ಧರಿಸಿರುವ ರೈತ. ಬಹುತೇಕ ಸೈನಿಕರು ರೈತ ಕುಟುಂಬದವರು. ಸೇನಾ ಉದ್ಯೋಗವು ಲಕ್ಷಾಂತರ ರೈತ ಕುಟುಂಬಗಳ ಗೌರವ ಮತ್ತು ಆರ್ಥಿಕ ಶಕ್ತಿಯೊಂದಿಗೆ ಸಂಬಂಧ ಹೊಂದಿದೆ. “ಒಂದು ಶ್ರೇಣಿ ಒಂದು ಪಿಂಚಣಿ” ಎಂಬ ಭರವಸೆಯೊಂದಿಗೆ ಮಾಜಿ ಸೈನಿಕರನ್ನು ಒಟ್ಟುಗೂಡಿಸಿ ವಿಜಯೋತ್ಸವದ ಅಭಿಯಾನವನ್ನು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಈಗ “ನೋ ರ್‍ಯಾಂಕ್  ನೋ ಪೆನ್ಷನ್” ಎಂಬ ಈ ಯೋಜನೆಗೆ ಚಾಲನೆ ನೀಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ತಿಳಿಸಿದೆ.

ಜೂನ್ 24 ಶುಕ್ರವಾರದಂದು ಯೋಜನೆಯ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನಾ ದಿನವನ್ನು ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದೆ. ಅಂದು “ಜೈ ಜವಾನ್ ಜೈ ಕಿಸಾನ್” ಘೋಷಣೆಯೊಂದಿಗೆ ಎಲ್ಲಾ ಜಿಲ್ಲೆ, ತಾಲೂಕು ಪ್ರಧಾನ ಕಚೇರಿಗಳಲ್ಲಿ ಶಾಂತಿಯುತ ಪ್ರತಿಭಟನೆಯನ್ನು ನಡೆಸಿ ನಂತರ ಭಾರತದ ರಾಷ್ಟ್ರಪತಿ, ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಗುವುದು. ಜೊತೆಗೆ ಕೇಂದ್ರ ಸರ್ಕಾರದ ಪ್ರತಿಕೃತಿಯನ್ನು ಸುಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಯೋಜನೆಯನ್ನು ವಿರೋಧಿಸುವ ಎಲ್ಲಾ ಯುವಕರು ಈ ಶಾಂತಿಯುತ ಪ್ರತಿಭಟನೆಯ ಘನತೆಯನ್ನು ಗೌರವಿಸುವ ಮೂಲಕ ಈ ಪ್ರತಿಭಟನಾ ದಿನದಲ್ಲಿ ಪಾಲ್ಗೊಳ್ಳಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಮನವಿ ಮಾಡಿದೆ. ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ದೇಶದ ಎಲ್ಲಾ ಸಮೂಹ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದೆ.


ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Farmers associations sd not interfear this matter against defense decisions..
    Farmers associations leaders will loose their publicity and ethics for standing against good rules .
    Farmers leaders decisions are not all farmers decisions.
    It’s for their own welfare..
    Anti national teams try to utilize farmers card blindly..
    Protest sd hv sm honest point of damages against farmers. not any groups…

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...