Homeಮುಖಪುಟಅಗ್ನಿಪಥ ಯೋಜನೆ : ಜೂ.24 ರಂದು ರೈತ ಸಂಘಟನೆಯಿಂದ ದೇಶಾದ್ಯಂತ ಪ್ರತಿಭಟನಾ ದಿನ

ಅಗ್ನಿಪಥ ಯೋಜನೆ : ಜೂ.24 ರಂದು ರೈತ ಸಂಘಟನೆಯಿಂದ ದೇಶಾದ್ಯಂತ ಪ್ರತಿಭಟನಾ ದಿನ

- Advertisement -
- Advertisement -

ಸಶಸ್ತ್ರ ಪಡೆಗಳ ನೇಮಕಾತಿಯ ಹೊಸ ಅಗ್ನಿಪಥ ಯೋಜನೆ ವಿರುದ್ಧ ಯುವಜನತೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನೆಗೆ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಬೆಂಬಲವನ್ನು ಘೋಷಿಸಿದೆ.

ಅಗ್ನಿಪಥ ವಿರುದ್ಧದ ಪ್ರತಿಭಟನೆಯನ್ನು ಶಾಂತಿಯುತವಾಗಿಡಲು ಮನವಿ ಮಾಡಿದ ಸಂಯುಕ್ತ ಕಿಸಾನ್ ಮೋರ್ಚಾವು ಈ ಯೋಜನೆಯನ್ನು ಸೇನಾ ವಿರೋಧಿ, ರೈತ ವಿರೋಧಿ ಮತ್ತು ದೇಶ ವಿರೋಧಿ ಎಂದು ಆರೋಪಿಸಿದೆ.

“ಜೈ ಜವಾನ್ ಜೈ ಕಿಸಾನ್” ಘೋಷಣೆಯ ಸ್ಪೂರ್ತಿಯನ್ನು ನಾಶಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ, ಈ ಹೋರಾಟದಲ್ಲಿ ಸೈನಿಕರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುವುದು ರೈತ ಚಳವಳಿಯ ಕರ್ತವ್ಯವಾಗಿದೆ. ಅದರಂತೆಯೇ ಸಂಯುಕ್ತ ಕಿಸಾನ್ ಮೋರ್ಚಾ ಈ ಶುಕ್ರವಾರ (ಜೂನ್ 24) ರಂದು ದೇಶಾದ್ಯಂತ ಪ್ರತಿಭಟನಾ ದಿನವನ್ನು ಆಚರಿಸಲಿದೆ ಎಂದು ಸಂಘಟನೆ ತಿಳಿಸಿದೆ. ಈ ನಿರ್ಧಾರವನ್ನು ಕರ್ನಾಲ್ (ಹರಿಯಾಣ) ನಲ್ಲಿ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ 7 ಸದಸ್ಯರ ಸಮನ್ವಯ ಸಮಿತಿ ತೆಗೆದುಕೊಂಡಿದೆ.

ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಈ ಅಗ್ನಿಪಥ ಯೋಜನೆಯು ದೇಶದ ಭವಿಷ್ಯದ ಜೊತೆ ಆಟವಾಡುತ್ತಿದೆ ಎಂದು ಆರೋಪಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ಇದು ರಾಷ್ಟ್ರೀಯ ಭದ್ರತೆ ಮತ್ತು ನಿರುದ್ಯೋಗಿ ಯುವಕರ ಕನಸುಗಳೊಂದಿಗೆ ಮಾತ್ರವಲ್ಲದೆ ದೇಶದ ರೈತ ಕುಟುಂಬಗಳೊಂದಿಗೆ ಆಟವಾಡುತ್ತಿದೆ ಎಂದು ಹೇಳಿದೆ. ಈ ದೇಶದ ಸೈನಿಕ ಸಮವಸ್ತ್ರ ಧರಿಸಿರುವ ರೈತ. ಬಹುತೇಕ ಸೈನಿಕರು ರೈತ ಕುಟುಂಬದವರು. ಸೇನಾ ಉದ್ಯೋಗವು ಲಕ್ಷಾಂತರ ರೈತ ಕುಟುಂಬಗಳ ಗೌರವ ಮತ್ತು ಆರ್ಥಿಕ ಶಕ್ತಿಯೊಂದಿಗೆ ಸಂಬಂಧ ಹೊಂದಿದೆ. “ಒಂದು ಶ್ರೇಣಿ ಒಂದು ಪಿಂಚಣಿ” ಎಂಬ ಭರವಸೆಯೊಂದಿಗೆ ಮಾಜಿ ಸೈನಿಕರನ್ನು ಒಟ್ಟುಗೂಡಿಸಿ ವಿಜಯೋತ್ಸವದ ಅಭಿಯಾನವನ್ನು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಈಗ “ನೋ ರ್‍ಯಾಂಕ್  ನೋ ಪೆನ್ಷನ್” ಎಂಬ ಈ ಯೋಜನೆಗೆ ಚಾಲನೆ ನೀಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ತಿಳಿಸಿದೆ.

ಜೂನ್ 24 ಶುಕ್ರವಾರದಂದು ಯೋಜನೆಯ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನಾ ದಿನವನ್ನು ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದೆ. ಅಂದು “ಜೈ ಜವಾನ್ ಜೈ ಕಿಸಾನ್” ಘೋಷಣೆಯೊಂದಿಗೆ ಎಲ್ಲಾ ಜಿಲ್ಲೆ, ತಾಲೂಕು ಪ್ರಧಾನ ಕಚೇರಿಗಳಲ್ಲಿ ಶಾಂತಿಯುತ ಪ್ರತಿಭಟನೆಯನ್ನು ನಡೆಸಿ ನಂತರ ಭಾರತದ ರಾಷ್ಟ್ರಪತಿ, ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಗುವುದು. ಜೊತೆಗೆ ಕೇಂದ್ರ ಸರ್ಕಾರದ ಪ್ರತಿಕೃತಿಯನ್ನು ಸುಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಯೋಜನೆಯನ್ನು ವಿರೋಧಿಸುವ ಎಲ್ಲಾ ಯುವಕರು ಈ ಶಾಂತಿಯುತ ಪ್ರತಿಭಟನೆಯ ಘನತೆಯನ್ನು ಗೌರವಿಸುವ ಮೂಲಕ ಈ ಪ್ರತಿಭಟನಾ ದಿನದಲ್ಲಿ ಪಾಲ್ಗೊಳ್ಳಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಮನವಿ ಮಾಡಿದೆ. ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ದೇಶದ ಎಲ್ಲಾ ಸಮೂಹ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದೆ.


ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Farmers associations sd not interfear this matter against defense decisions..
    Farmers associations leaders will loose their publicity and ethics for standing against good rules .
    Farmers leaders decisions are not all farmers decisions.
    It’s for their own welfare..
    Anti national teams try to utilize farmers card blindly..
    Protest sd hv sm honest point of damages against farmers. not any groups…

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...