Homeಮುಖಪುಟಅಗ್ನಿಪಥ ಯೋಜನೆ : ಜೂ.24 ರಂದು ರೈತ ಸಂಘಟನೆಯಿಂದ ದೇಶಾದ್ಯಂತ ಪ್ರತಿಭಟನಾ ದಿನ

ಅಗ್ನಿಪಥ ಯೋಜನೆ : ಜೂ.24 ರಂದು ರೈತ ಸಂಘಟನೆಯಿಂದ ದೇಶಾದ್ಯಂತ ಪ್ರತಿಭಟನಾ ದಿನ

- Advertisement -
- Advertisement -

ಸಶಸ್ತ್ರ ಪಡೆಗಳ ನೇಮಕಾತಿಯ ಹೊಸ ಅಗ್ನಿಪಥ ಯೋಜನೆ ವಿರುದ್ಧ ಯುವಜನತೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನೆಗೆ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಬೆಂಬಲವನ್ನು ಘೋಷಿಸಿದೆ.

ಅಗ್ನಿಪಥ ವಿರುದ್ಧದ ಪ್ರತಿಭಟನೆಯನ್ನು ಶಾಂತಿಯುತವಾಗಿಡಲು ಮನವಿ ಮಾಡಿದ ಸಂಯುಕ್ತ ಕಿಸಾನ್ ಮೋರ್ಚಾವು ಈ ಯೋಜನೆಯನ್ನು ಸೇನಾ ವಿರೋಧಿ, ರೈತ ವಿರೋಧಿ ಮತ್ತು ದೇಶ ವಿರೋಧಿ ಎಂದು ಆರೋಪಿಸಿದೆ.

“ಜೈ ಜವಾನ್ ಜೈ ಕಿಸಾನ್” ಘೋಷಣೆಯ ಸ್ಪೂರ್ತಿಯನ್ನು ನಾಶಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ, ಈ ಹೋರಾಟದಲ್ಲಿ ಸೈನಿಕರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುವುದು ರೈತ ಚಳವಳಿಯ ಕರ್ತವ್ಯವಾಗಿದೆ. ಅದರಂತೆಯೇ ಸಂಯುಕ್ತ ಕಿಸಾನ್ ಮೋರ್ಚಾ ಈ ಶುಕ್ರವಾರ (ಜೂನ್ 24) ರಂದು ದೇಶಾದ್ಯಂತ ಪ್ರತಿಭಟನಾ ದಿನವನ್ನು ಆಚರಿಸಲಿದೆ ಎಂದು ಸಂಘಟನೆ ತಿಳಿಸಿದೆ. ಈ ನಿರ್ಧಾರವನ್ನು ಕರ್ನಾಲ್ (ಹರಿಯಾಣ) ನಲ್ಲಿ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ 7 ಸದಸ್ಯರ ಸಮನ್ವಯ ಸಮಿತಿ ತೆಗೆದುಕೊಂಡಿದೆ.

ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಈ ಅಗ್ನಿಪಥ ಯೋಜನೆಯು ದೇಶದ ಭವಿಷ್ಯದ ಜೊತೆ ಆಟವಾಡುತ್ತಿದೆ ಎಂದು ಆರೋಪಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ಇದು ರಾಷ್ಟ್ರೀಯ ಭದ್ರತೆ ಮತ್ತು ನಿರುದ್ಯೋಗಿ ಯುವಕರ ಕನಸುಗಳೊಂದಿಗೆ ಮಾತ್ರವಲ್ಲದೆ ದೇಶದ ರೈತ ಕುಟುಂಬಗಳೊಂದಿಗೆ ಆಟವಾಡುತ್ತಿದೆ ಎಂದು ಹೇಳಿದೆ. ಈ ದೇಶದ ಸೈನಿಕ ಸಮವಸ್ತ್ರ ಧರಿಸಿರುವ ರೈತ. ಬಹುತೇಕ ಸೈನಿಕರು ರೈತ ಕುಟುಂಬದವರು. ಸೇನಾ ಉದ್ಯೋಗವು ಲಕ್ಷಾಂತರ ರೈತ ಕುಟುಂಬಗಳ ಗೌರವ ಮತ್ತು ಆರ್ಥಿಕ ಶಕ್ತಿಯೊಂದಿಗೆ ಸಂಬಂಧ ಹೊಂದಿದೆ. “ಒಂದು ಶ್ರೇಣಿ ಒಂದು ಪಿಂಚಣಿ” ಎಂಬ ಭರವಸೆಯೊಂದಿಗೆ ಮಾಜಿ ಸೈನಿಕರನ್ನು ಒಟ್ಟುಗೂಡಿಸಿ ವಿಜಯೋತ್ಸವದ ಅಭಿಯಾನವನ್ನು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಈಗ “ನೋ ರ್‍ಯಾಂಕ್  ನೋ ಪೆನ್ಷನ್” ಎಂಬ ಈ ಯೋಜನೆಗೆ ಚಾಲನೆ ನೀಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ತಿಳಿಸಿದೆ.

ಜೂನ್ 24 ಶುಕ್ರವಾರದಂದು ಯೋಜನೆಯ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನಾ ದಿನವನ್ನು ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದೆ. ಅಂದು “ಜೈ ಜವಾನ್ ಜೈ ಕಿಸಾನ್” ಘೋಷಣೆಯೊಂದಿಗೆ ಎಲ್ಲಾ ಜಿಲ್ಲೆ, ತಾಲೂಕು ಪ್ರಧಾನ ಕಚೇರಿಗಳಲ್ಲಿ ಶಾಂತಿಯುತ ಪ್ರತಿಭಟನೆಯನ್ನು ನಡೆಸಿ ನಂತರ ಭಾರತದ ರಾಷ್ಟ್ರಪತಿ, ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಗುವುದು. ಜೊತೆಗೆ ಕೇಂದ್ರ ಸರ್ಕಾರದ ಪ್ರತಿಕೃತಿಯನ್ನು ಸುಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಯೋಜನೆಯನ್ನು ವಿರೋಧಿಸುವ ಎಲ್ಲಾ ಯುವಕರು ಈ ಶಾಂತಿಯುತ ಪ್ರತಿಭಟನೆಯ ಘನತೆಯನ್ನು ಗೌರವಿಸುವ ಮೂಲಕ ಈ ಪ್ರತಿಭಟನಾ ದಿನದಲ್ಲಿ ಪಾಲ್ಗೊಳ್ಳಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಮನವಿ ಮಾಡಿದೆ. ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ದೇಶದ ಎಲ್ಲಾ ಸಮೂಹ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದೆ.


ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Farmers associations sd not interfear this matter against defense decisions..
    Farmers associations leaders will loose their publicity and ethics for standing against good rules .
    Farmers leaders decisions are not all farmers decisions.
    It’s for their own welfare..
    Anti national teams try to utilize farmers card blindly..
    Protest sd hv sm honest point of damages against farmers. not any groups…

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...