Homeಮುಖಪುಟಅಗ್ನಿಪಥ ಯೋಜನೆ : ಜೂ.24 ರಂದು ರೈತ ಸಂಘಟನೆಯಿಂದ ದೇಶಾದ್ಯಂತ ಪ್ರತಿಭಟನಾ ದಿನ

ಅಗ್ನಿಪಥ ಯೋಜನೆ : ಜೂ.24 ರಂದು ರೈತ ಸಂಘಟನೆಯಿಂದ ದೇಶಾದ್ಯಂತ ಪ್ರತಿಭಟನಾ ದಿನ

- Advertisement -
- Advertisement -

ಸಶಸ್ತ್ರ ಪಡೆಗಳ ನೇಮಕಾತಿಯ ಹೊಸ ಅಗ್ನಿಪಥ ಯೋಜನೆ ವಿರುದ್ಧ ಯುವಜನತೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನೆಗೆ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಬೆಂಬಲವನ್ನು ಘೋಷಿಸಿದೆ.

ಅಗ್ನಿಪಥ ವಿರುದ್ಧದ ಪ್ರತಿಭಟನೆಯನ್ನು ಶಾಂತಿಯುತವಾಗಿಡಲು ಮನವಿ ಮಾಡಿದ ಸಂಯುಕ್ತ ಕಿಸಾನ್ ಮೋರ್ಚಾವು ಈ ಯೋಜನೆಯನ್ನು ಸೇನಾ ವಿರೋಧಿ, ರೈತ ವಿರೋಧಿ ಮತ್ತು ದೇಶ ವಿರೋಧಿ ಎಂದು ಆರೋಪಿಸಿದೆ.

“ಜೈ ಜವಾನ್ ಜೈ ಕಿಸಾನ್” ಘೋಷಣೆಯ ಸ್ಪೂರ್ತಿಯನ್ನು ನಾಶಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ, ಈ ಹೋರಾಟದಲ್ಲಿ ಸೈನಿಕರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುವುದು ರೈತ ಚಳವಳಿಯ ಕರ್ತವ್ಯವಾಗಿದೆ. ಅದರಂತೆಯೇ ಸಂಯುಕ್ತ ಕಿಸಾನ್ ಮೋರ್ಚಾ ಈ ಶುಕ್ರವಾರ (ಜೂನ್ 24) ರಂದು ದೇಶಾದ್ಯಂತ ಪ್ರತಿಭಟನಾ ದಿನವನ್ನು ಆಚರಿಸಲಿದೆ ಎಂದು ಸಂಘಟನೆ ತಿಳಿಸಿದೆ. ಈ ನಿರ್ಧಾರವನ್ನು ಕರ್ನಾಲ್ (ಹರಿಯಾಣ) ನಲ್ಲಿ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ 7 ಸದಸ್ಯರ ಸಮನ್ವಯ ಸಮಿತಿ ತೆಗೆದುಕೊಂಡಿದೆ.

ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಈ ಅಗ್ನಿಪಥ ಯೋಜನೆಯು ದೇಶದ ಭವಿಷ್ಯದ ಜೊತೆ ಆಟವಾಡುತ್ತಿದೆ ಎಂದು ಆರೋಪಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ಇದು ರಾಷ್ಟ್ರೀಯ ಭದ್ರತೆ ಮತ್ತು ನಿರುದ್ಯೋಗಿ ಯುವಕರ ಕನಸುಗಳೊಂದಿಗೆ ಮಾತ್ರವಲ್ಲದೆ ದೇಶದ ರೈತ ಕುಟುಂಬಗಳೊಂದಿಗೆ ಆಟವಾಡುತ್ತಿದೆ ಎಂದು ಹೇಳಿದೆ. ಈ ದೇಶದ ಸೈನಿಕ ಸಮವಸ್ತ್ರ ಧರಿಸಿರುವ ರೈತ. ಬಹುತೇಕ ಸೈನಿಕರು ರೈತ ಕುಟುಂಬದವರು. ಸೇನಾ ಉದ್ಯೋಗವು ಲಕ್ಷಾಂತರ ರೈತ ಕುಟುಂಬಗಳ ಗೌರವ ಮತ್ತು ಆರ್ಥಿಕ ಶಕ್ತಿಯೊಂದಿಗೆ ಸಂಬಂಧ ಹೊಂದಿದೆ. “ಒಂದು ಶ್ರೇಣಿ ಒಂದು ಪಿಂಚಣಿ” ಎಂಬ ಭರವಸೆಯೊಂದಿಗೆ ಮಾಜಿ ಸೈನಿಕರನ್ನು ಒಟ್ಟುಗೂಡಿಸಿ ವಿಜಯೋತ್ಸವದ ಅಭಿಯಾನವನ್ನು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಈಗ “ನೋ ರ್‍ಯಾಂಕ್  ನೋ ಪೆನ್ಷನ್” ಎಂಬ ಈ ಯೋಜನೆಗೆ ಚಾಲನೆ ನೀಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ತಿಳಿಸಿದೆ.

ಜೂನ್ 24 ಶುಕ್ರವಾರದಂದು ಯೋಜನೆಯ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನಾ ದಿನವನ್ನು ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದೆ. ಅಂದು “ಜೈ ಜವಾನ್ ಜೈ ಕಿಸಾನ್” ಘೋಷಣೆಯೊಂದಿಗೆ ಎಲ್ಲಾ ಜಿಲ್ಲೆ, ತಾಲೂಕು ಪ್ರಧಾನ ಕಚೇರಿಗಳಲ್ಲಿ ಶಾಂತಿಯುತ ಪ್ರತಿಭಟನೆಯನ್ನು ನಡೆಸಿ ನಂತರ ಭಾರತದ ರಾಷ್ಟ್ರಪತಿ, ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಗುವುದು. ಜೊತೆಗೆ ಕೇಂದ್ರ ಸರ್ಕಾರದ ಪ್ರತಿಕೃತಿಯನ್ನು ಸುಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಯೋಜನೆಯನ್ನು ವಿರೋಧಿಸುವ ಎಲ್ಲಾ ಯುವಕರು ಈ ಶಾಂತಿಯುತ ಪ್ರತಿಭಟನೆಯ ಘನತೆಯನ್ನು ಗೌರವಿಸುವ ಮೂಲಕ ಈ ಪ್ರತಿಭಟನಾ ದಿನದಲ್ಲಿ ಪಾಲ್ಗೊಳ್ಳಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಮನವಿ ಮಾಡಿದೆ. ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ದೇಶದ ಎಲ್ಲಾ ಸಮೂಹ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದೆ.


ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Farmers associations sd not interfear this matter against defense decisions..
    Farmers associations leaders will loose their publicity and ethics for standing against good rules .
    Farmers leaders decisions are not all farmers decisions.
    It’s for their own welfare..
    Anti national teams try to utilize farmers card blindly..
    Protest sd hv sm honest point of damages against farmers. not any groups…

LEAVE A REPLY

Please enter your comment!
Please enter your name here

- Advertisment -

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....

SIR ಅಕ್ರಮದ ವಿರುದ್ಧ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆ: ಆ.15ಕ್ಕೆ ‘ಮತದಾರರ ಹಕ್ಕು ಪ್ರತಿಪಾದನಾ ದಿನ’

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ’...

ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸಿಎಂ, ಗೃಹ ಸಚಿವರಿಗೆ ಪತ್ರ, ಅಗ್ನಿವೀರನ ಬೆನ್ನಿಗೆ ನಿಂತ ಭಾರತೀಯ ಸೇನೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಭಾರತೀಯ ಸೇನೆ ತೀವ್ರವಾಗಿ ಪರಿಗಣಿಸಿದೆ. ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿವೀರ ಯೋಧ ಶಿವಕುಮಾರ್ ತಳವಾರ...

RSS ಇತಿಹಾಸ ಜಾಲಾಡ್ತಿದೆ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರವು ಸಂಘಟನೆಯ ಸಂಪೂರ್ಣ ಇತಿಹಾಸ ಹಾಗೂ ಹಿನ್ನೆಲೆಯನ್ನು ಕೂಲಂಕಷವಾಗಿ ಅಧ್ಯಯನ ನಡೆಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್...