Homeಕರ್ನಾಟಕಅಗ್ನಿಪಥ ಯೋಜನೆ: ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ ಕೇಂದ್ರಕ್ಕೆ ಸಿದ್ದರಾಮಯ್ಯ ಪ್ರಶ್ನೆ

ಅಗ್ನಿಪಥ ಯೋಜನೆ: ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ ಕೇಂದ್ರಕ್ಕೆ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ ಯೋಜನೆಗೆ ದೇಶದಾದ್ಯಂತ ಯುವಜನರು ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ಕಳೆದೆರಡು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ’ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ’ ಎಂದು ಪ್ರಶ್ನಿಸಿ ಒಕ್ಕೂಟ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು. ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ..? ” ಎಂದಿದ್ದಾರೆ.

“ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ..?” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌‌‌‌ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ

“ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ..? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ..?” ಎಂದು ಪ್ರಶ್ನೆಗಳ ಮಳೆ ಸುರಿದಿದ್ದಾರೆ.

“ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ..? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ ನರೇಂದ್ರ ಮೋದಿಯವರೆ”ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ‘ಅಗ್ನಿ ಪಥ್’ ಯೋಜನೆ ಸೇನೆಗೆ ಅಪಾಯಕಾರಿ: ಕೊಡಗಿನ ವೀರ ಯೋಧರ ಆತಂಕ

“ಹೊಸಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ. ಎಚ್ಚೆತ್ತುಕೊಳ್ಳಲು ಇದು ಸಕಾಲ!” ಎಂದಿದ್ದಾರೆ.

“ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ, ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು” ಎಂದು ಜನರಿಗೆ ಕರೆ ನೀಡಿದ್ದಾರೆ.

ಒಕ್ಕೂಟ ಸರ್ಕಾರ ಘೋಷಿಸಿರುವ ಅಗ್ನಿಪಥ್ ಯೋಜನೆಗೆ ರಾಷ್ಟ್ರಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಉದ್ಯೋಗಾಕಾಂಕ್ಷಿ ಯುವಜನರು ಸಿಡಿದೆದ್ದಿದ್ದು 7 ರಾಜ್ಯಗಳಲ್ಲಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ತಡೆಯಲು ಪೊಲೀಸರು ಲಾಠೀ ಚಾರ್ಜ್ ಮಾಡಿದ್ದರಿಂದ ಪ್ರತಿಭಟನೆ ಹಿಂಸಾರೂಪ ಪಡೆದಿದೆ. ಇದುವರೆಗೂ ದೇಶಾದ್ಯಂತ ಒಂದು ಸಾವು ಸಂಭವಿಸಿದ್ದು, 8 ಜನರ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.


ಇದನ್ನೂ ಓದಿ: ಅಗ್ನಿಪಥ ಯೋಜನೆ: ಯುವಕರಿಗೆ 4 ವರ್ಷಗಳಲ್ಲ, ಪೂರ್ಣಾವಧಿಯ ಉದ್ಯೋಗ ನೀಡಿ- ಕೇಜ್ರಿವಾಲ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...