Homeಮುಖಪುಟಅಗ್ನಿಪಥ : ವರುಣ್ ಗಾಂಧಿ ಪ್ರತಿದಿನ ವೈಯಕ್ತಿಕ ಅಭಿಪ್ರಾಯ ನೀಡಲು ಇಷ್ಟಪಡುತ್ತಾರೆ ಎಂದ ಕೇಂದ್ರ ಸಚಿವ

ಅಗ್ನಿಪಥ : ವರುಣ್ ಗಾಂಧಿ ಪ್ರತಿದಿನ ವೈಯಕ್ತಿಕ ಅಭಿಪ್ರಾಯ ನೀಡಲು ಇಷ್ಟಪಡುತ್ತಾರೆ ಎಂದ ಕೇಂದ್ರ ಸಚಿವ

- Advertisement -
- Advertisement -

ಅಗ್ನಿಪಥ ಯೋಜನೆ ಘೋಷಣೆಯಾದಾಗಿನಿಂದ ಬಿಜೆಪಿ ಸರ್ಕಾರದ ವಿರುದ್ಧವೇ ಪ್ರಶ್ನೆ ಮಾಡುತ್ತಿರುವ ಬಿಜೆಪಿ ಲೋಕಸಭೆಯ ಸಂಸದ ವರುಣ್ ಗಾಂಧಿ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ “ಅವರು ಪ್ರತಿದಿನವೂ ವೈಯಕ್ತಿಕ ಅಭಿಪ್ರಾಯಗಳನ್ನು ನೀಡಲು ಇಷ್ಟಪಡುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಮಂಗಳವಾರ ತಮ್ಮ ಪಕ್ಷದ ಸಹೋದ್ಯೋಗಿ, ಸಂಸದ ವರುಣ್ ಗಾಂಧಿ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಅಗ್ನಿಪಥ್ ಬಗ್ಗೆ ಅವರು ನೀಡುವ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದಾರೆ.

ಬಿಜೆಪಿಯ ಹಲವು ಕಾನೂನುಗಳು ಮತ್ತು ಯೋಚನೆಗಳನ್ನು ಸಂಸದ ವರುಣ್‌ ಗಾಂಧಿ ಬಹಿರಂಗವಾಗಿಯೇ ವಿರೋಧಿಸಿದ್ದಾರೆ. ವಿವಾದಿತ ಕೃಷಿ ಕಾನೂನುಗಳು, ಲಖೀಂಪುರ್‌ ಖೇರಿ ಹತ್ಯಾಕಾಂಡವನ್ನು ಖಂಡಿಸಿ ಮಾತನಾಡಿದ್ದರು. ಈಗ ಅಗ್ನಿವೀರರಿಗೆ ನಾಲ್ಕು ವರ್ಷಗಳ ನಂತರ ಪಿಂಚಣಿ ನೀಡದ ಕುರಿತು ಮಾತನಾಡಿದ್ದಾರೆ.

ಇದನ್ನೂ ಓದಿ: ’ಅಗ್ನಿಪಥ್’ ಯೋಜನೆ; ’ಎಕ್ಸೆಕ್ಯುಟಿವ್’ ಆಡಳಿತ ಎಂಬುದು ಸರ್ವಾಧಿಕಾರದ ’ಪ್ರಾಕ್ಸಿ’

ಕೇಂದ್ರದ ಅಗ್ನಿಪಥ ಸೇನಾ ನೇಮಕಾತಿ ಯೋಜನೆಯಲ್ಲಿ ಆಯ್ಕೆಯಾದವರಿಗೆ ನಾಲ್ಕು ವರ್ಷಗಳ ಅಧಿಕಾರಾವಧಿ ಮುಗಿದ ನಂತರ ಪಿಂಚಣಿ ನೀಡುವುದಿಲ್ಲ ಎಂದಾದರೆ ಚುನಾಯಿತ ಪ್ರತಿನಿಧಿಗಳಿಗೆ ನಿವೃತ್ತಿಯ ನಂತರ ನೀಡಲಾಗುವ ಸವಲತ್ತುಗಳು ಏಕೆ ಬೇಕು ಎಂದು ವರುಣ್ ಗಾಂಧಿ ಕಳೆದ ವಾರ ಪ್ರಶ್ನಿಸಿದ್ದರು.

ವರುಣ್ ಗಾಂಧಿಯವರ ಹೇಳಿಕೆಗಳ ಬಗೆಗಿನ ಪ್ರಶ್ನೆಗೆ ಉತ್ತರಿಸಿರುವ ತೋಮರ್, “ಇದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಏಕೆಂದರೆ ಅವರು ಪ್ರತಿದಿನ ವೈಯಕ್ತಿಕ ಅಭಿಪ್ರಾಯಗಳನ್ನು ನೀಡಲು ಇಷ್ಟಪಡುತ್ತಾರೆ” ಎಂದು ಹೇಳಿದ್ದಾರೆ.

 

“ಅಲ್ಪಾವಧಿ ಸೇವೆ ಸಲ್ಲಿಸಿದ ಅಗ್ನಿವೀರ್ ಅವರಿಗೆ ಪಿಂಚಣಿಗೆ ಅರ್ಹರಲ್ಲ, ಹೀಗಿರುವಾಗ ಜನಪ್ರತಿನಿಧಿಗಳಿಗೆ ಏಕೆ ಈ ‘ಅನುಕೂಲಗಳು’? ರಾಷ್ಟ್ರ ರಕ್ಷಕರಿಗೆ ಪಿಂಚಣಿ ಹಕ್ಕು ಇಲ್ಲದಿದ್ದರೆ, ನಾನು ನನ್ನ ಸ್ವಂತ ಪಿಂಚಣಿಯನ್ನು ತ್ಯಜಿಸಲು ಸಿದ್ಧನಿದ್ದೇನೆ. ನಾವು ಶಾಸಕರು/ಸಂಸದರು ನಮ್ಮ ಪಿಂಚಣಿಯನ್ನು ಬಿಟ್ಟು ಅಗ್ನಿವೀರರಿಗೆ ಪಿಂಚಣಿ ಸಿಗುವಂತೆ ಮಾಡಲು ಸಾಧ್ಯವಿಲ್ಲವೇ..?” ಎಂದು ಪ್ರಶ್ನಿಸಿದ್ದರು.

ಜೂನ್ 14 ರಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಮತ್ತು ಮೂವರು ಸೇನಾ ಮುಖ್ಯಸ್ಥರು ಕೇಂದ್ರ ಸರ್ಕಾರದ ನೂತನ ’ಅಗ್ನಿಪಥ್’ ಎಂಬ ರಕ್ಷಣಾ ನೇಮಕಾತಿಯ ಯೋಜನೆ ಘೋಷಿಸಿದ್ದಾರೆ. ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಗೆ ನಾಲ್ಕು ವರ್ಷಗಳ ಅಲ್ಪ ಅವಧಿಗೆ ಈ ವರ್ಷ ’ಅಗ್ನಿವೀರ್’ ಹೆಸರಿನ ಯೋಜನೆಯಡಿ 46,000 ಯುವ ಸೈನಿಕರನ್ನು ನೇಮಕ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. 17.5ರಿಂದ 21 ವರ್ಷದವರೆಗಿನ ಬುದ್ಧಿವಂತ, ತಂತ್ರಜ್ಞಾನ ತಿಳಿವಳಿಕೆಯುಳ್ಳ ಯುವಜನರು ಸೇನೆಗೆ ಸೇರ್ಪಡೆಯಾಗುವ ಮೂಲಕ ಭಾರತೀಯ ಸೇನೆಗೆ ತಾರುಣ್ಯ ತಂದುಕೊಡಲಿದ್ದಾರೆ ಎಂದಿದ್ದಾರೆ.

ಸದ್ಯದ ಭಾರತೀಯ ಸೈನಿಕರ ಸರಾಸರಿ ವಯಸ್ಸು 32 ವರ್ಷ ಇದ್ದು, ಅದನ್ನು 24-26 ವರ್ಷಕ್ಕೆ ಇಳಿಸುವ ಮತ್ತು ಪಿಂಚಣಿ-ಗ್ರಾಚ್ಯುಟಿ, ಸಂಬಳ ಸೇರಿದಂತೆ ಇತರ ಭತ್ಯೆಗಳನ್ನು ಕಡಿತಗೊಳಿಸುವುದು ಈ ಯೋಜನೆಯ ಗುರಿ ಎಂದು ಸರ್ಕಾರ ಹೇಳಿಕೊಂಡಿದೆ.


ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...