Homeಮುಖಪುಟಅಗ್ನಿಪಥ : ವರುಣ್ ಗಾಂಧಿ ಪ್ರತಿದಿನ ವೈಯಕ್ತಿಕ ಅಭಿಪ್ರಾಯ ನೀಡಲು ಇಷ್ಟಪಡುತ್ತಾರೆ ಎಂದ ಕೇಂದ್ರ ಸಚಿವ

ಅಗ್ನಿಪಥ : ವರುಣ್ ಗಾಂಧಿ ಪ್ರತಿದಿನ ವೈಯಕ್ತಿಕ ಅಭಿಪ್ರಾಯ ನೀಡಲು ಇಷ್ಟಪಡುತ್ತಾರೆ ಎಂದ ಕೇಂದ್ರ ಸಚಿವ

- Advertisement -
- Advertisement -

ಅಗ್ನಿಪಥ ಯೋಜನೆ ಘೋಷಣೆಯಾದಾಗಿನಿಂದ ಬಿಜೆಪಿ ಸರ್ಕಾರದ ವಿರುದ್ಧವೇ ಪ್ರಶ್ನೆ ಮಾಡುತ್ತಿರುವ ಬಿಜೆಪಿ ಲೋಕಸಭೆಯ ಸಂಸದ ವರುಣ್ ಗಾಂಧಿ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ “ಅವರು ಪ್ರತಿದಿನವೂ ವೈಯಕ್ತಿಕ ಅಭಿಪ್ರಾಯಗಳನ್ನು ನೀಡಲು ಇಷ್ಟಪಡುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಮಂಗಳವಾರ ತಮ್ಮ ಪಕ್ಷದ ಸಹೋದ್ಯೋಗಿ, ಸಂಸದ ವರುಣ್ ಗಾಂಧಿ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಅಗ್ನಿಪಥ್ ಬಗ್ಗೆ ಅವರು ನೀಡುವ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದಾರೆ.

ಬಿಜೆಪಿಯ ಹಲವು ಕಾನೂನುಗಳು ಮತ್ತು ಯೋಚನೆಗಳನ್ನು ಸಂಸದ ವರುಣ್‌ ಗಾಂಧಿ ಬಹಿರಂಗವಾಗಿಯೇ ವಿರೋಧಿಸಿದ್ದಾರೆ. ವಿವಾದಿತ ಕೃಷಿ ಕಾನೂನುಗಳು, ಲಖೀಂಪುರ್‌ ಖೇರಿ ಹತ್ಯಾಕಾಂಡವನ್ನು ಖಂಡಿಸಿ ಮಾತನಾಡಿದ್ದರು. ಈಗ ಅಗ್ನಿವೀರರಿಗೆ ನಾಲ್ಕು ವರ್ಷಗಳ ನಂತರ ಪಿಂಚಣಿ ನೀಡದ ಕುರಿತು ಮಾತನಾಡಿದ್ದಾರೆ.

ಇದನ್ನೂ ಓದಿ: ’ಅಗ್ನಿಪಥ್’ ಯೋಜನೆ; ’ಎಕ್ಸೆಕ್ಯುಟಿವ್’ ಆಡಳಿತ ಎಂಬುದು ಸರ್ವಾಧಿಕಾರದ ’ಪ್ರಾಕ್ಸಿ’

ಕೇಂದ್ರದ ಅಗ್ನಿಪಥ ಸೇನಾ ನೇಮಕಾತಿ ಯೋಜನೆಯಲ್ಲಿ ಆಯ್ಕೆಯಾದವರಿಗೆ ನಾಲ್ಕು ವರ್ಷಗಳ ಅಧಿಕಾರಾವಧಿ ಮುಗಿದ ನಂತರ ಪಿಂಚಣಿ ನೀಡುವುದಿಲ್ಲ ಎಂದಾದರೆ ಚುನಾಯಿತ ಪ್ರತಿನಿಧಿಗಳಿಗೆ ನಿವೃತ್ತಿಯ ನಂತರ ನೀಡಲಾಗುವ ಸವಲತ್ತುಗಳು ಏಕೆ ಬೇಕು ಎಂದು ವರುಣ್ ಗಾಂಧಿ ಕಳೆದ ವಾರ ಪ್ರಶ್ನಿಸಿದ್ದರು.

ವರುಣ್ ಗಾಂಧಿಯವರ ಹೇಳಿಕೆಗಳ ಬಗೆಗಿನ ಪ್ರಶ್ನೆಗೆ ಉತ್ತರಿಸಿರುವ ತೋಮರ್, “ಇದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಏಕೆಂದರೆ ಅವರು ಪ್ರತಿದಿನ ವೈಯಕ್ತಿಕ ಅಭಿಪ್ರಾಯಗಳನ್ನು ನೀಡಲು ಇಷ್ಟಪಡುತ್ತಾರೆ” ಎಂದು ಹೇಳಿದ್ದಾರೆ.

 

“ಅಲ್ಪಾವಧಿ ಸೇವೆ ಸಲ್ಲಿಸಿದ ಅಗ್ನಿವೀರ್ ಅವರಿಗೆ ಪಿಂಚಣಿಗೆ ಅರ್ಹರಲ್ಲ, ಹೀಗಿರುವಾಗ ಜನಪ್ರತಿನಿಧಿಗಳಿಗೆ ಏಕೆ ಈ ‘ಅನುಕೂಲಗಳು’? ರಾಷ್ಟ್ರ ರಕ್ಷಕರಿಗೆ ಪಿಂಚಣಿ ಹಕ್ಕು ಇಲ್ಲದಿದ್ದರೆ, ನಾನು ನನ್ನ ಸ್ವಂತ ಪಿಂಚಣಿಯನ್ನು ತ್ಯಜಿಸಲು ಸಿದ್ಧನಿದ್ದೇನೆ. ನಾವು ಶಾಸಕರು/ಸಂಸದರು ನಮ್ಮ ಪಿಂಚಣಿಯನ್ನು ಬಿಟ್ಟು ಅಗ್ನಿವೀರರಿಗೆ ಪಿಂಚಣಿ ಸಿಗುವಂತೆ ಮಾಡಲು ಸಾಧ್ಯವಿಲ್ಲವೇ..?” ಎಂದು ಪ್ರಶ್ನಿಸಿದ್ದರು.

ಜೂನ್ 14 ರಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಮತ್ತು ಮೂವರು ಸೇನಾ ಮುಖ್ಯಸ್ಥರು ಕೇಂದ್ರ ಸರ್ಕಾರದ ನೂತನ ’ಅಗ್ನಿಪಥ್’ ಎಂಬ ರಕ್ಷಣಾ ನೇಮಕಾತಿಯ ಯೋಜನೆ ಘೋಷಿಸಿದ್ದಾರೆ. ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಗೆ ನಾಲ್ಕು ವರ್ಷಗಳ ಅಲ್ಪ ಅವಧಿಗೆ ಈ ವರ್ಷ ’ಅಗ್ನಿವೀರ್’ ಹೆಸರಿನ ಯೋಜನೆಯಡಿ 46,000 ಯುವ ಸೈನಿಕರನ್ನು ನೇಮಕ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. 17.5ರಿಂದ 21 ವರ್ಷದವರೆಗಿನ ಬುದ್ಧಿವಂತ, ತಂತ್ರಜ್ಞಾನ ತಿಳಿವಳಿಕೆಯುಳ್ಳ ಯುವಜನರು ಸೇನೆಗೆ ಸೇರ್ಪಡೆಯಾಗುವ ಮೂಲಕ ಭಾರತೀಯ ಸೇನೆಗೆ ತಾರುಣ್ಯ ತಂದುಕೊಡಲಿದ್ದಾರೆ ಎಂದಿದ್ದಾರೆ.

ಸದ್ಯದ ಭಾರತೀಯ ಸೈನಿಕರ ಸರಾಸರಿ ವಯಸ್ಸು 32 ವರ್ಷ ಇದ್ದು, ಅದನ್ನು 24-26 ವರ್ಷಕ್ಕೆ ಇಳಿಸುವ ಮತ್ತು ಪಿಂಚಣಿ-ಗ್ರಾಚ್ಯುಟಿ, ಸಂಬಳ ಸೇರಿದಂತೆ ಇತರ ಭತ್ಯೆಗಳನ್ನು ಕಡಿತಗೊಳಿಸುವುದು ಈ ಯೋಜನೆಯ ಗುರಿ ಎಂದು ಸರ್ಕಾರ ಹೇಳಿಕೊಂಡಿದೆ.


ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...