Homeಮುಖಪುಟಅಗ್ನಿಪಥ : ವರುಣ್ ಗಾಂಧಿ ಪ್ರತಿದಿನ ವೈಯಕ್ತಿಕ ಅಭಿಪ್ರಾಯ ನೀಡಲು ಇಷ್ಟಪಡುತ್ತಾರೆ ಎಂದ ಕೇಂದ್ರ ಸಚಿವ

ಅಗ್ನಿಪಥ : ವರುಣ್ ಗಾಂಧಿ ಪ್ರತಿದಿನ ವೈಯಕ್ತಿಕ ಅಭಿಪ್ರಾಯ ನೀಡಲು ಇಷ್ಟಪಡುತ್ತಾರೆ ಎಂದ ಕೇಂದ್ರ ಸಚಿವ

- Advertisement -
- Advertisement -

ಅಗ್ನಿಪಥ ಯೋಜನೆ ಘೋಷಣೆಯಾದಾಗಿನಿಂದ ಬಿಜೆಪಿ ಸರ್ಕಾರದ ವಿರುದ್ಧವೇ ಪ್ರಶ್ನೆ ಮಾಡುತ್ತಿರುವ ಬಿಜೆಪಿ ಲೋಕಸಭೆಯ ಸಂಸದ ವರುಣ್ ಗಾಂಧಿ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ “ಅವರು ಪ್ರತಿದಿನವೂ ವೈಯಕ್ತಿಕ ಅಭಿಪ್ರಾಯಗಳನ್ನು ನೀಡಲು ಇಷ್ಟಪಡುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಮಂಗಳವಾರ ತಮ್ಮ ಪಕ್ಷದ ಸಹೋದ್ಯೋಗಿ, ಸಂಸದ ವರುಣ್ ಗಾಂಧಿ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಅಗ್ನಿಪಥ್ ಬಗ್ಗೆ ಅವರು ನೀಡುವ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದಾರೆ.

ಬಿಜೆಪಿಯ ಹಲವು ಕಾನೂನುಗಳು ಮತ್ತು ಯೋಚನೆಗಳನ್ನು ಸಂಸದ ವರುಣ್‌ ಗಾಂಧಿ ಬಹಿರಂಗವಾಗಿಯೇ ವಿರೋಧಿಸಿದ್ದಾರೆ. ವಿವಾದಿತ ಕೃಷಿ ಕಾನೂನುಗಳು, ಲಖೀಂಪುರ್‌ ಖೇರಿ ಹತ್ಯಾಕಾಂಡವನ್ನು ಖಂಡಿಸಿ ಮಾತನಾಡಿದ್ದರು. ಈಗ ಅಗ್ನಿವೀರರಿಗೆ ನಾಲ್ಕು ವರ್ಷಗಳ ನಂತರ ಪಿಂಚಣಿ ನೀಡದ ಕುರಿತು ಮಾತನಾಡಿದ್ದಾರೆ.

ಇದನ್ನೂ ಓದಿ: ’ಅಗ್ನಿಪಥ್’ ಯೋಜನೆ; ’ಎಕ್ಸೆಕ್ಯುಟಿವ್’ ಆಡಳಿತ ಎಂಬುದು ಸರ್ವಾಧಿಕಾರದ ’ಪ್ರಾಕ್ಸಿ’

ಕೇಂದ್ರದ ಅಗ್ನಿಪಥ ಸೇನಾ ನೇಮಕಾತಿ ಯೋಜನೆಯಲ್ಲಿ ಆಯ್ಕೆಯಾದವರಿಗೆ ನಾಲ್ಕು ವರ್ಷಗಳ ಅಧಿಕಾರಾವಧಿ ಮುಗಿದ ನಂತರ ಪಿಂಚಣಿ ನೀಡುವುದಿಲ್ಲ ಎಂದಾದರೆ ಚುನಾಯಿತ ಪ್ರತಿನಿಧಿಗಳಿಗೆ ನಿವೃತ್ತಿಯ ನಂತರ ನೀಡಲಾಗುವ ಸವಲತ್ತುಗಳು ಏಕೆ ಬೇಕು ಎಂದು ವರುಣ್ ಗಾಂಧಿ ಕಳೆದ ವಾರ ಪ್ರಶ್ನಿಸಿದ್ದರು.

ವರುಣ್ ಗಾಂಧಿಯವರ ಹೇಳಿಕೆಗಳ ಬಗೆಗಿನ ಪ್ರಶ್ನೆಗೆ ಉತ್ತರಿಸಿರುವ ತೋಮರ್, “ಇದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಏಕೆಂದರೆ ಅವರು ಪ್ರತಿದಿನ ವೈಯಕ್ತಿಕ ಅಭಿಪ್ರಾಯಗಳನ್ನು ನೀಡಲು ಇಷ್ಟಪಡುತ್ತಾರೆ” ಎಂದು ಹೇಳಿದ್ದಾರೆ.

 

“ಅಲ್ಪಾವಧಿ ಸೇವೆ ಸಲ್ಲಿಸಿದ ಅಗ್ನಿವೀರ್ ಅವರಿಗೆ ಪಿಂಚಣಿಗೆ ಅರ್ಹರಲ್ಲ, ಹೀಗಿರುವಾಗ ಜನಪ್ರತಿನಿಧಿಗಳಿಗೆ ಏಕೆ ಈ ‘ಅನುಕೂಲಗಳು’? ರಾಷ್ಟ್ರ ರಕ್ಷಕರಿಗೆ ಪಿಂಚಣಿ ಹಕ್ಕು ಇಲ್ಲದಿದ್ದರೆ, ನಾನು ನನ್ನ ಸ್ವಂತ ಪಿಂಚಣಿಯನ್ನು ತ್ಯಜಿಸಲು ಸಿದ್ಧನಿದ್ದೇನೆ. ನಾವು ಶಾಸಕರು/ಸಂಸದರು ನಮ್ಮ ಪಿಂಚಣಿಯನ್ನು ಬಿಟ್ಟು ಅಗ್ನಿವೀರರಿಗೆ ಪಿಂಚಣಿ ಸಿಗುವಂತೆ ಮಾಡಲು ಸಾಧ್ಯವಿಲ್ಲವೇ..?” ಎಂದು ಪ್ರಶ್ನಿಸಿದ್ದರು.

ಜೂನ್ 14 ರಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಮತ್ತು ಮೂವರು ಸೇನಾ ಮುಖ್ಯಸ್ಥರು ಕೇಂದ್ರ ಸರ್ಕಾರದ ನೂತನ ’ಅಗ್ನಿಪಥ್’ ಎಂಬ ರಕ್ಷಣಾ ನೇಮಕಾತಿಯ ಯೋಜನೆ ಘೋಷಿಸಿದ್ದಾರೆ. ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಗೆ ನಾಲ್ಕು ವರ್ಷಗಳ ಅಲ್ಪ ಅವಧಿಗೆ ಈ ವರ್ಷ ’ಅಗ್ನಿವೀರ್’ ಹೆಸರಿನ ಯೋಜನೆಯಡಿ 46,000 ಯುವ ಸೈನಿಕರನ್ನು ನೇಮಕ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. 17.5ರಿಂದ 21 ವರ್ಷದವರೆಗಿನ ಬುದ್ಧಿವಂತ, ತಂತ್ರಜ್ಞಾನ ತಿಳಿವಳಿಕೆಯುಳ್ಳ ಯುವಜನರು ಸೇನೆಗೆ ಸೇರ್ಪಡೆಯಾಗುವ ಮೂಲಕ ಭಾರತೀಯ ಸೇನೆಗೆ ತಾರುಣ್ಯ ತಂದುಕೊಡಲಿದ್ದಾರೆ ಎಂದಿದ್ದಾರೆ.

ಸದ್ಯದ ಭಾರತೀಯ ಸೈನಿಕರ ಸರಾಸರಿ ವಯಸ್ಸು 32 ವರ್ಷ ಇದ್ದು, ಅದನ್ನು 24-26 ವರ್ಷಕ್ಕೆ ಇಳಿಸುವ ಮತ್ತು ಪಿಂಚಣಿ-ಗ್ರಾಚ್ಯುಟಿ, ಸಂಬಳ ಸೇರಿದಂತೆ ಇತರ ಭತ್ಯೆಗಳನ್ನು ಕಡಿತಗೊಳಿಸುವುದು ಈ ಯೋಜನೆಯ ಗುರಿ ಎಂದು ಸರ್ಕಾರ ಹೇಳಿಕೊಂಡಿದೆ.


ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...